Subscribe to Updates
Get the latest creative news from FooBar about art, design and business.
Author: kannadanewsnow05
ಆಂಧ್ರಪ್ರದೇಶ : ಇಂದು ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಜೋಡಿಹಕ್ಕಿಗಳು ಅತ್ಯಂತ ಸಂತಸದಿಂದ ಕಳೆಯುವ ಕ್ಷಣವಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಘೋರವದ ದುರಂತ ನಡೆದಿದ್ದು, ಯುವತಿಗೆ ಬೇರೆಯವರೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಭಗ್ನ ಪ್ರೇಮಿಯೊಬ್ಬ ಯುವತಿಯ ಮುಖಕ್ಕೆ ಆಸಿಡ್ ಎರಚಿ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಪ್ರೇಮಿಗಳ ದಿನವೇ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಯುವತಿಯ ಮೇಲೆ ಆರೋಪಿ ಗಣೇಶ ಎನ್ನುವ ಯುವಕ ಆಸಿಡ್ ದಾಳಿ ಮಾಡಿದ್ದಾನೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಯುವಕ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಗಣೇಶ್ ಹಾಗೂ ಯುವತಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಆದರೆ ಇತ್ತೀಚಿಗೆ ಯುವತಿಗೆ ಬೆರೆಯವರೊಂದಿಗೆ ಮದುವೆ ಫಿಕ್ಸ್ ಆಗಿತ್ತು ಏಪ್ರಿಲ್ 29 ರಂದು ಯುವತಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು ಆದರೆ ಆರೋಪಿ…
ಬೆಂಗಳೂರು : ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಪಿಎಂ ನರೇಂದ್ರಸ್ವಾಮಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್. ಆಂಜನೇಯರೆಡ್ಡಿ ಬುಧವಾರ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಅರ್ಜಿ ಸಲ್ಲಿಕೆಯಾಗಿತ್ತು. ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಿಎಂ ನರೇಂದ್ರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ…
ನವದೆಹಲಿ : ದಲಿತ ಸಮುದಾಯದ ಸಿಎಂ ಸ್ಥಾನ ಕೇಳಿದರೆ ತಪ್ಪೇನು? ದಲಿತ ಸಿಎಂ ಕೂಗಿದರೆ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ. ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನವನ್ನು ಕೇಳಬಹುದು. ‘ದಲಿತ ಸಮಾವೇಶ’ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ನವದೆಹಲಿಯಲ್ಲಿ ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶ ಮಾಡುವ ಕುರಿತಾಗಿ ಮಾತನಾಡಿದ ಅವರು, ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲಾ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೊ ಆ ಸಮಾವೇಶ ಮಾಡಬೇಕು ಎಂದು ತಿಳಿಸಿದರು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರಿಗೆ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ.…
ನವದೆಹಲಿ : ಒಂದು ಕಡೆ ಸಿಎಂ ಸಿದ್ದರಾಮಯ್ಯನವರೇ ಮುಂದಿನ 10 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ಪಿಸಿಸಿ ಸ್ಥಾನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಎಐಸಿಸಿ ಅಧ್ಯಕ್ಷರು ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಒನ್ ಮ್ಯಾನ್ ಒನ್ ಪೋಸ್ಟಿಗೆ ಬದ್ಧನಾಗಿರುತ್ತೇನೆ. ಸಿಎಂ ಘೋಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದಿದ್ದರು. ಹೈಕಮಾಂಡ್ ಹೇಳಿದೆ ಅನ್ನೋ ಭಾವನೆ ಕಾರ್ಯಕರ್ತರಲ್ಲಿ ಇದೆ. ಅಧ್ಯಕ್ಷರ ಬದಲಾವಣೆ ಮಾಡಿ ಎಂದು ನಾನೇನು ಹೇಳುತ್ತಿಲ್ಲ. ಗೊಂದಲ ಬಗೆಹರಿಸಿ ಅನ್ನುವುದೇ ನಮ್ಮ ಬಯಕೆಯಾಗಿದೆ.…
ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿರಂತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಎಂಬಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ. ತಂದೆ ತಾಯಿ ಕಳೆದುಕೊಂಡ ಪುತ್ರ ರೂಲ್ಸ್ ಮಾಡಿ ನ್ಯಾಯಕ್ಕಾಗಿ ಆಳಲು ತೋಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ತಂದೆ ತಾಯಿ ಬಲಿಯಾಗಿದ್ದು, ತಂದೆ ತಾಯಿಯನ್ನ ಕಳೆದುಕೊಂಡು ಯುವಕ ಬಸವರಾಜ್ ಸದ್ಯ ಅನಾಥನಾಗಿದ್ದಾನೆ. ರಾಯಚೂರಿನಲ್ಲಿ ನಡೆದ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಸವರಾಜ್ ತಾಯಿ ಈರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದು ಇನ್ನೂ ಅದೇ ನೋವಲ್ಲಿ ತಂದೆ ಪರಪ್ಪ ಕೂಡ ಸಾವನ್ನಪ್ಪಿದ್ದಾರೆ. ಈ ಕುರಿತು ಯುವಕ ಬಸವರಾಜ್ ರಿಲ್ಸ್ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಬಸವರಾಜ ನಮ್ಮ ಮನೆ ಹರಾಜಿನಲ್ಲಿ ಇದೆ ನ್ಯಾಯ ಕೊಡಿಸಿ ಎಂದು ಅಳಲು ತೋಡಿಕೊಂಡಿದ್ದಾನೆ ವಿಡಿಯೋ ರೀಟ್ಸಪ್ ಮಾಡಿ ಯುವಕ ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ. ಮೃತ…
ನವದೆಹಲಿ : ರಾಜ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಹಾಗೂ ಸಚಿವ ಕೆ ಎನ್ ರಾಜಣ್ಣ ಒಟ್ಟಿಗೆ ಉಪಹಾರ ಸೇವಿಸಿದರು. ಬಳಿಕ ಹೈಕಮಾಂಡ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಲು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದು, ಮನವಿಗೆ ಸ್ಪಂದಿಸಿದ ಅವರು ಅನುದಾನ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದೇನೆ. ಅಲ್ಲದೆ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮಾಡಿದ್ದೇನೆ.ತೆರವಾಗಲಿರುವ ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು. ಇನ್ನು ನಮ್ಮ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ದೆಹಲಿಗೆ ಭೇಟಿ ನೀಡಿದ್ದೇನೆ.…
ಬೆಂಗಳೂರು : ಒಂದು ಕಡೆ ಕಾಂಗ್ರೆಸ್ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಕುರಿತು ಸುಳಿವು ನೀಡಿದ್ದಾರೆ. ಇದೆ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಜನ ನನಗೆ ಇದೀಗ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ನಾನು ಯಾವುದೇ ಆಕಾಂಕ್ಷಿ ಅಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಚಾರ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಜನರು ನನಗೆ ಸದ್ಯಕ್ಕೆ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ರೆಸ್ಟ್ ನಲ್ಲಿದ್ದೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು. ಮೆಟ್ರೋ ಟಿಕೆಟ್ ದರ ಏರಿಕೆ…
ಮೈಸೂರು : ಮೈಸೂರಿನಲ್ಲಿ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಪಿ ಕಾರಿನ ಮೇಲೆ ಕಲ್ಲು ಎಸೆದಿದ್ದ ನಾಲ್ವರನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಹೀಗಾಗಿ ಈ ಒಂದು ಪ್ರಕರಣದಲ್ಲಿ ಬಂದಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಹೌದು ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಡಿಸಿಪಿ ಜಾಹ್ನವಿ ಕಾರಿಗೆ ಕಲ್ಲೆಸೆದ ನಾಲ್ವರು ಆರೋಪಿಗಗಳು ಇದೀಗ ಅರೆಸ್ಟ್ ಆಗಿದ್ದಾರೆ. ಘಟನೆ ಕುರಿತು ಸಿಸಿಟಿವಿ ಹಾಗೂ ಮೊಬೈಲ್ ವಿಡಿಯೋ ಅನ್ನು ಆಧರಿಸಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇನ್ನಷ್ಟು ಆರೋಪಿಗಳು ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಒಂದು ಗಲಾಟೆಗೆ ಕಾರಣನಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ಪ್ರಚೋದನಕಾರಿ ಭಾಷಣ ಮಾಡಿದ್ದ ಇದರಿಂದಲೇ ಈ ಒಂದು ಗಲಾಟೆ ನಡೆದಿದ್ದು ಸದ್ಯ ಮುಸ್ಲಿಂ ಮುಖಂಡ ಮುಸ್ತಾಕ್ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಬಂಧಿತರನ್ನು 14 ದಿನಗಳ ನ್ಯಾಯಾಂಗ…
ಬೆಂಗಳೂರು : ಈಗಾಗಲೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ಬೆನ್ನೆಲೆ ಬೆಂಗಳೂರಿನ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಬೆಲೆ ಏರಿಕೆಯಿಂದ ಕಂಗೆಟ್ಟಿರೋ ಜನರಿಗೆ ಇದೀಗ ಮತ್ತೊಂದು ಶಾಕ್ ಬಿಸಿ ತಟ್ಟಲಿದೆ. ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳಕ್ಕೆ ಬೆಸ್ಕಾಂ ಇದೀಗ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ವಿದ್ಯುತ್ ದರ ಏರಿಕೆ ಪಕ್ಕ ಎನ್ನಲಾಗುತ್ತಿದೆ ವಿದುದ್ದರ ಏರಿಕೆಗೆ ಬೆಸ್ಕಾಂನಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಫೆಬ್ರವರಿ 17ರಂದು ಸಾರ್ವಜನಿಕರ ಆಕ್ಷೇಪಣೆ ಸ್ವೀಕಾರ ಮಾಡಲಿದ್ದು ನಂತರದಲ್ಲಿ ಪರಿಶೀಲಿಸಿ ದರ ಏರಿಕೆಗೆ ನಿರ್ಧಾರ ಮಾಡಲಿದೆ ಈಗಾಗಲೇ ದರ ಹೆಚ್ಚಳಕ್ಕೆ ಬೆಸ್ಕಾಂನಿಂದ ಪ್ರಸ್ತಾಪ ಸಲ್ಲಿಸಿದ್ದು ಮುಂದಿನ ಮೂರು ವರ್ಷಗಳಿಗೆ ಅನ್ವಯ ಆಗುವಂತೆ ಪ್ರಸ್ತಾಪಿಸಲಿಕ್ಕೆ ಆಗಿದೆ ಇನ್ನು ಬೆಸ್ಕಾಂ ಪ್ರಸ್ತಾವನೆಗೆ ಕೈಗಾರಿಕೋದ್ಯಮಿಗಳು ಕಿಡಿ ಕಾರುತ್ತಿದ್ದಾರೆ. ರೆವೆನ್ಯೂ ಹೆಚ್ಚಳ ಮಾಡುವ ಉದ್ದೇಶ ಇದರಲ್ಲಿ ಇದೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕೈಗಾರಿಕೋದ್ಯಮಿಗಳು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…
ಮಂಗಳೂರು : ಕೇರಳದ ಕೊಳಚೆ ತ್ಯಾಜ್ಯವನ್ನು ಮಂಗಳೂರಿನಲ್ಲಿ ಡಂಪ್ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮಂಗಳೂರಿನ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿದ್ದು ಕೇರಳದ ಎರಡು ತ್ಯಾಜ್ಯ ಟ್ಯಾಂಕರ್ ಗಳಿಗೆ 10000 ದಂಡ ವಿಧಿಸಿದ್ದು ಅಲ್ಲದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಕೂಡ ದಾಖಲಿಸಿದ್ದಾರೆ. ಕೇರಳ ಭಾಗದಿಂದ ತಲಪಾಡಿ ಗೇಟ್ ಮೂಲಕ ತ್ಯಾಜ್ಯ ವಾಹನಗಳು ಆಗಮಿಸುತ್ತಿದ್ದು, ತಲಪಾಡಿ ಮತ್ತಿತರ ಗಡಿ ಭಾಗಗಳ ಮೂಲಕ ತ್ಯಾಜ್ಯಗಳನ್ನು ತುಂಬಿಕೊಂಡು ವಾಹನಗಳು ಎಂಟ್ರಿ ಪಡೆಯುತ್ತಿವೆ ಕೇರಳದ ತ್ಯಾಜ್ಯ ನಿರ್ವಹತು ತಂದಿದ್ದ ಸಿವಿಲ್ ಟ್ಯಾಂಕರ್ ಗಳು. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕೊಳಚೆ ತ್ಯಾಜ್ಯ ಸ್ಥಳಾಂತರ ನಡೆಯುತ್ತಿದೆ.ಕೊಳಚೆ ತ್ಯಾಜ್ಯ ತಂದು ಖಾಸಗಿ ಟ್ಯಾಂಕರ್ ಗಳು ಸುರಿಯುತ್ತಿವೆ. ಕೇರಳದಿಂದ ತ್ಯಾಜ್ಯ ತಂದು ಸುರಿಯುವ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಕೇರಳದ ಕೊಳಚೆ ತ್ಯಾಜ್ಯ ತಂದು ಮ್ಯಾನ್ ಹೋಲ್ ಮತ್ತು ನದಿಗಳು ಚರಂಡಿ ಕಾಲುವೆಗೆ ತ್ಯಾಜ್ಯದ ನೀರು ಸುರಿದು ಹೋಗುತ್ತಿದ್ದಾರೆ.…