Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗಣ್ಯರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಾಡಲು ಇದೀಗ ಪೊಲೀಸ್ ಮಹಾ ನಿರ್ದೇಶಕ ಡಾ. ಎಂಎ ಸಲೀಂ ಕರ್ನಾಟಕ ಪೋಲಿಸರಿಗೆ ಮಾಹತ್ವದ ಆದೇಶ ಹೊರಡಿಸಿದ್ದಾರೆ. ವಿವಿಐಪಿಗಳ ಸಂಚಾರದ ಸಂದರ್ಭದಲ್ಲಿ ಸೈರನ್ಗಳ ಬಳಕೆಯನ್ನು ಕಡಿಮೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಹೌದು ಈ ವಿಚಾರವಾಗಿ ಸಲೀಂ ಸುತ್ತೋಲೆ ಹೊರಡಿಸಿದ್ದು, ವಿವಿಐಪಿಗಳ ಸಂಚಾರದ ವೇಳೆ ಅತಿಯಾದ ಸೈರನ್ ಬಳಕೆಯಿಂದ ಅನೇಕ ಸವಾಲುಗಳು ಎದುರಾಗುತ್ತಿವೆ. ಅನಗತ್ಯವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯರು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಕುರಿತು ಅಗತ್ಯವಿಲ್ಲದವರಿಗೆ ಕೂಡ ಮಾಹಿತಿ ರವಾನೆಯಾಗುತ್ತದೆ. ಇದರಿಂದ ವಿಐಪಿಗಳಿಗೆ ಮತ್ತು ಅವರ ಭದ್ರತೆಗೆ ತೊಂದರೆ ಉಂಟಾಗುವ ಅಪಾಯ ಕೂಡ ಇದೆ ಎಂದು ಅವರು ಉಲ್ಲೇಖಿಸಿದ್ದಾರೆ. ಆ್ಯಬುಬುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ದಳ ವಾಹನಗಳ ಸಂಚಾರದಂಥ ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಸೈರನ್ ಬಳಸಬೇಕು. ಈ ಆದೇಶವನ್ನು ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಘಟಕ ಅಧಿಕಾರಿಗಳು ಪಾಲಿಸಬೇಕು ಎಂದು ಸಲಿಂ ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೆ,…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಪ್ರಮುಖ ಆರೋಪಿ ಜಗ್ಗ ಅರ್ಜಿ ಸಲ್ಲಿಸಿದ್ದಾನೆ. ಇಂದು ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜುಲೈ 24ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇಂದು ಸಹ ಕೊಲೆಗೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬೆಂಗಳೂರಿನ 29ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪೊಲೀಸರ ಮೇಲೆ ಆರೋಪಿ ಕಿರಣ್ ಪರ ವಕೀಲರು ಆರೋಪ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ವರದಿಯ ಬಗ್ಗೆ ಆರೋಪಿಯ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ್ದಾರೆ. ವೈದ್ಯರು ಯಾವುದೇ ಗಾಯ ಇಲ್ಲ ಎಂದು ಬರೆದಿದ್ದಾರೆ. ಆದರೆ ಹೊಡೆದಿರುವುದಕ್ಕೆ ಕಾಲಿನಲ್ಲಿ ಒಳ ಪೆಟ್ಟಾಗಿದೆ. ನಮಗೆ ಮೆಡಿಕಲ್ ವರದಿ ಪ್ರತಿ ಕೊಡಿ ಅಂದರೂ ಕೊಡುತ್ತಿಲ್ಲ. ವಿಕ್ಟೋರಿಯಾ…
ಮೈಸೂರು : ಮೈಸೂರಲ್ಲಿ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿ ಕೆಎಸ್ಆರ್ಟಿಸಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ನಂಜನಗೂಡು ತಾಲೂಕಿನ ಕಲ್ಮಹಳ್ಳಿ ಗೇಟ್ ಬಳಿ ಒಂದು ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಲ್ಮಹಳ್ಳಿ ಎಂಬಲ್ಲಿ ನಂಜನಗೂಡು ಹಾಗು ಟಿ.ನರಸೀಪುರ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ತಿರುವು ವೇಳೆ ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ.ತಕ್ಷಣ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಅಪಘಾತದ ಕುರಿತು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇಂದು ಸಹ ಕೊಲೆಗೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬೆಂಗಳೂರಿನ 29ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪೊಲೀಸರ ಮೇಲೆ ಆರೋಪಿ ಕಿರಣ್ ಪರ ವಕೀಲರು ಆರೋಪ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ವರದಿಯ ಬಗ್ಗೆ ಆರೋಪಿಯ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ್ದಾರೆ. ವೈದ್ಯರು ಯಾವುದೇ ಗಾಯ ಇಲ್ಲ ಎಂದು ಬರೆದಿದ್ದಾರೆ. ಆದರೆ ಹೊಡೆದಿರುವುದಕ್ಕೆ ಕಾಲಿನಲ್ಲಿ ಒಳ ಪೆಟ್ಟಾಗಿದೆ. ನಮಗೆ ಮೆಡಿಕಲ್ ವರದಿ ಪ್ರತಿ ಕೊಡಿ ಅಂದರೂ ಕೊಡುತ್ತಿಲ್ಲ. ವಿಕ್ಟೋರಿಯಾ ವೈದ್ಯರು ಶಾಮೀಲಾಗಿ ವರದಿ ಕೊಟ್ಟಿದ್ದಾರೆ. ವರದಿಯ ಪ್ರತಿ ಸಹ ಕೊಡುತ್ತಿಲ್ಲ ಎಂದು ಕಿರಣ್ ಪರ ವಕೀಲರು ಪೊಲೀಸರ ಮೇಲೆ ಆರೋಪಿಸಿದರು. ಯಾವ ಆಸ್ಪತ್ರೆ, ಯಾವ ಡಾಕ್ಟರ್ ಬೇಕೆಂದು ಮೆಮೋ ಹಾಕಿ. ನಿಮಗೆ ಬೇಕಾದ ಆಸ್ಪತ್ರೆಗೆ ನಾವು ರೆಫರ್ ಮಾಡುತ್ತೇವೆ.…
ನವದೆಹಲಿ : ಆದಾಯ ತೆರಿಗೆ ನ್ಯಾಯಮಗಳಿಂದ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, 2017-18ರಲ್ಲಿ ಪಡೆದಿದ್ದ ದೇಣಿಗೆ ಹಣಕ್ಕೆ ತೆರಿಗೆ ಕಟ್ಟುವಂತೆ ಸೂಚನೆ ನೀಡಲಾಗಿದೆ. ಐಟಿ ಇಲಾಖೆಯ ಆದೇಶ ಪ್ರಶ್ನಿಸಿ ಐಟಿ ಟ್ರಿಬ್ಯುನಲ್ ಗೆ ಕಾಂಗ್ರೆಸ್ ಪಕ್ಷ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪಡೆದಿರುವ ದೇಣಿಗೆಗೆ 199 ಕೋಟಿ ತೆರಿಗೆ ಕಟ್ಟಲು ಆದೇಶ ಹೊರಡಿಸಿದೆ. ಆದಾಯ ತೆರಿಗೆ ಇಲಾಖೆ ಆದೇಶವನ್ನು ನ್ಯಾಯ ಮಂಡಳಿ ಎತ್ತಿ ಹಿಡಿದಿದೆ. ಹೌದು ದೇಣಿಗೆ ಹಣಕ್ಕೆ 199.5 ಕೋಟಿ ತೆರಿಗೆ ಬೇಡಿಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಆದಾಯ ತೆರಿಗೆ ನ್ಯಾಯಮಂಡಳಿ ತಿರಸ್ಕರಿಸಿದ್ದರಿಂದ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದೆ. ನಗದು ದೇಣಿಗೆ ಮಿತಿಗಳನ್ನು ಉಲ್ಲಂಘಿಸಲಾಗಿದೆ ಎಂದು ನ್ಯಾಯಮಂಡಳಿ ಉಲ್ಲೇಖಿಸಿದೆ. ಐಟಿ ವಿನಾಯಿತಿ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಗೆ ಭಾರೀ ಶಾಕ್ ಎದುರಾಗಿದೆ. 2018-19ರ ವರ್ಷದಲ್ಲಿ ₹199.15 ಕೋಟಿ ಆದಾಯಕ್ಕೆ ಆದಾಯ ತೆರಿಗೆ ವಿನಾಯಿತಿ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ವಜಾಗೊಳಿಸಿದೆ.ಆದಾಯ ತೆರಿಗೆ ಕಾಯ್ದೆಯ…
ಮಂಗಳೂರು : ದೇಶಾದ್ಯಂತ ಸಿರಿವಂತ ಉದ್ಯಮಿಗಳನ್ನು ವಂಚನೆಯ ಜಾಲದಲ್ಲಿ ಸಿಲುಕಿಸಿ ಅವರಿಂದ ಕೋಟ್ಯಂತರ ಹಣ ಲಪಟಾಯಿಸುತ್ತಿದ್ದ ಆರೋಪಿ ರೋಶನ್ ಸಲ್ಡಾನ್ ವಿರುದ್ಧ ಬಿಹಾರ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದೀಗ ರೋಶನ್ ಸಲ್ಡಾನ್ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಒಟ್ಟು ಐವರು ಉದ್ಯಮಿಗಳು ರೋಶನ್ ಸಲ್ಡಾನ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ತನಗೆ 1 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪಿಸಿ ರೋಶನ್ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿ ಮಹಾರಾಷ್ಟ್ರದ ಉದ್ಯಮಿಯೊಬ್ಬರು 5 ಕೋಟಿ ರೂ. ಮತ್ತು ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಹಣವನ್ನು ಬ್ಯಾಂಕ್ ಮೂಲಕ ಆರೋಪಿಯ ಖಾತೆಗೆ ವರ್ಗಾಯಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಂಧ್ರಮೂಲದ ಉದ್ಯಮಿಗೆ 4 ಕೋಟಿ ವಂಚಿಸಿರುವ ಬಗ್ಗೆ ಆರೋಪಿ ವಿರುದ್ಧ ಚಿತ್ರದುರ್ಗ…
ಕೊಪ್ಪಳ : ರಾಬಕೋವಿ ಹಾಲು ಒಕ್ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಮೇಲುಗೈ ಸಾಧಿಸಿದ್ದು, ರಾಘವೇಂದ್ರ ಹಿಟ್ನಾಳರನ್ನು ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ. ರಾಬಕೋವಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆ ಜಿದ್ದಾಜಿದ್ದಿ ನಡೆದಿತ್ತು. ರಾಘವೇಂದ್ರ ಹಿಟ್ನಾಳ್ ಮತ್ತು ಭೀಮಾ ನಾಯಕ್ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಶತಾಯಗತಾಯ ರಾಬಕೋವಿ ಅಧ್ಯಕ್ಷರಾಗಲು ರಾಘವೇಂದ್ರ ಹಿಟ್ನಾಳ್ ತೀರ್ಮಾನಿಸಿದರು. ಒಕ್ಕೂಟಕ್ಕೆ ಸತತವಾಗಿ ಭೀಮಾ ನಾಯ್ಕ್ ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಭೀಮಾ ನಾಯಕ ವಿರುದ್ಧ ರಾಘವೇಂದ್ರ ಹಿಟ್ನಾಳ್ ಅಖಾಡಕ್ಕೆ ಇಳಿದಿದ್ದರು. ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಸಹ ಸಿಎಂ ಸಿದ್ದರಾಮಯ್ಯ ಆಪ್ತ ಎನ್ನಲಾಗಿದೆ. ಕಳೆದ ವಾರವಷ್ಟೇ ನಡೆದಿದ್ದ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡಲಾಗಿತ್ತು. ರಾಘವೇಂದ್ರ ಹಿಟ್ನಾಳ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಭಿಮಾ ನಾಯಕ್ ಪ್ರಚಾರ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಭೀಮನಾಯಕ್ ವಿರುದ್ಧ ಸೇಡು ತೀರಿಸಿಕೊಳ್ಳಲು ಅಧ್ಯಕ್ಷ…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಮಚ್ಚಿನಿಂದ ಅತ್ತೆ ಮತ್ತು ಪತ್ನಿಯನ್ನು ಕೊಲ್ಲಲು ಪತಿ ಮುತ್ತಪ್ಪ ಗಣಾಚಾರಿ ಯತ್ನಿಸಿದ್ದಾನೆ. ಮುತ್ತಪ್ಪ ಪತ್ನಿ ಐಶ್ವರ್ಯ ಹಾಗೂ ಅತ್ತೆ ಅನುಸೂಯ ಮೇಲೆ ಮುತ್ತಪ್ಪ ಗಣಾಚಾರಿ ಹಲ್ಲೆ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ ಪಡೆದಿದ್ದಾರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದು, ಐಶ್ವರ್ಯ ಮತ್ತು ಅನುಸೂಯಾಗೆ ಸದ್ಯ ಧಾರವಾಡದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರಲ್ಲಿ ರೌಡಿ ಶೀಟರ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ತಾವೇ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿಗಳು ಶರಣಾಗಿದ್ದಾರೆ.ಈ ಬೆನ್ನಲ್ಲೇ ಬಿಗ್ ಟ್ವಿಸ್ಟ್ ಎನ್ನುವಂತೆ ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಷ್ಟು ಸ್ಪೋಟಕ ವಿಚಾರ ಬಯಲಾಗಿದ್ದು, ಶಿವ ಹತ್ಯೆಗೂ ಮುನ್ನ ಬಾರ್ ನಲ್ಲಿ ಫುಲ್ ಎಣ್ಣೆ ಪಾರ್ಟಿ ಮಾಡಿದ್ದರು ಹಂತಕರು ಎಣ್ಣೆಯ ಮತ್ತಲ್ಲೆ ಕೊಲೆಗೆ ಸ್ಕೆಚ್ ಹಾಕಿದ್ದರು. ಬಾರ್ ಒಂದರಲ್ಲಿ ಬಿಕ್ಲು ಶಿವನ ಉಸಿರು ನಿಲ್ಲಿಸಲು ಪ್ಲಾನ್ ಮಾಡಿದ್ದರು.ಬಿಕ್ಲು ಶಿವನ ಗುರುತೆ…
ಬೆಂಗಳೂರು : ಧರ್ಮಸ್ಥಳದಲ್ಲಿ ನಿಗೂಢವಾಗಿ ನಡೆದಿರುವ ಕೊಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ಹೊರಡಿಸಿತು ಇದೀಗ ಇದೆ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು ಸದ್ಯದಲ್ಲೇ ಧರ್ಮಸ್ಥಳಕ್ಕೆ ಎಸ್ಐಟಿ ಭೇಟಿ ನೀಡಲಿದ್ದು ಈ ಒಂದು ತನಿಕಾ ತಂಡದಿಂದ ಯಾವುದೇ ಅಧಿಕಾರಿ ಹೊರಗೆ ಉಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತದೇಹ ವಿಲೇವಾರಿ ಪ್ರಕರಣ ಸಂಬಂಧ ತನಿಖೆಗೆ ಧರ್ಮಸ್ಥಳಕ್ಕೆ ಹೋಗಲು ಎಸ್ಐಟಿ ತಂಡಕ್ಕೆ ಸೂಚನೆ ನೀಡಿದ್ದೇವೆ. ಸದ್ಯದಲ್ಲೇ ಧರ್ಮಸ್ಥಳಕ್ಕೆ ಹೋಗಿ ಎಸ್ಐಟಿ ತನಿಖೆ ಶುರು ಮಾಡಲಿದೆ. ಎಸ್ಐಟಿ ತಂಡದಿಂದ ಯಾವ ಅಧಿಕಾರಿಯೂ ಹೊರಗುಳಿಯಲ್ಲ. ಹೊರಗೆ ಉಳಿಯೋದಾದ್ರೆ ನಮಗೆ ತಿಳಿಸಲಿ. ಆ ನಂತರ ಅದರ ಬಗ್ಗೆ ನಿರ್ಧಾರ ಮಾಡ್ತೇವೆ ಎಂದರು. ಎಸ್ಐಟಿ ತನಿಖೆಗೆ ಬಿಜೆಪಿಯವರಿಂದ ಯಾಕೆ ಆಕ್ಷೇಪ?. ಈಗಿನಿಂದ್ಲೇ ಏನೇನೋ ಫ್ರೇಮ್ ಮಾಡ್ತಿದ್ದಾರೆ. ರಾಜಕೀಯ ಉದ್ದೇಶವಿದೆ ಅಂತ ಯಾಕೆ ಹೇಳ್ತಾರೆ. ಎಸ್ಐಟಿ ತನಿಖೆಗೆ ಯಾಕೆ ಅವರ ವಿರೋಧ.…