Author: kannadanewsnow05

ಮೈಸೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಬೆನ್ನಲ್ಲೆ ಇದೀಗ ದೇಶದೇಲ್ಲೆಡೆ ಭದ್ರತೆ ವಿಚಾರವಾಗಿ ಚರ್ಚೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮೈಸೂರು ಅರಮನೆಯ ಸುತ್ತಮುತ್ತಲು ಡ್ರೋನ್ ಹಾರಾಟ ನಿಷೇಧಿಸಿ ಅರಮನೆ ಆಡಳಿತ ಮಂಡಳಿ ಈ ಕುರಿತು ಆದೇಶ ಹೊರಡಿಸಿದೆ. ಹೌದು ಭದ್ರತೆಯ ದೃಷ್ಟಿಯಿಂದ ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಿ ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅರಮನೆಯ ನಾಲ್ಕು ಪ್ರಮುಖ ದ್ವಾರದಲ್ಲಿ ಪ್ರಕಟಣೆ ಫಲಕ ಹಾಕಿದ್ದಾರೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಹಾಗೂ ಗಜಪಡೆ ತಾಲೀಮು ವೇಳೆ ಕೆಲವರು ಶೋಕಿಗಾಗಿ ಮನಸ್ಸೋ ಇಚ್ಛೆ ಡ್ರೋನ್ ಹಾರಿಸಿ ಉದ್ದಟತನ ಪ್ರದರ್ಶಿಸಿದ್ದ ಬೆನ್ನಲ್ಲೇ ಅರಮನೆ ಸೇರಿದಂತೆ ಸುತ್ತಲಿನ ಪ್ರದೇಶವನ್ನು ಹಳದಿ (ಯಲ್ಲೋ) ವಲಯ ನಿರ್ಬಂಧಿಸಿತ್ತು. ಇದೀಗ ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿರುವುದರಿಂದ ಇದೀಗ ಡ್ರೋನ್ ಹಾರಾಟದ ಮೇಲೆ ನಿಗಾ ಇಡಲಾಗಿದೆ.

Read More

ಬಾಗಲಕೋಟೆ : ಬೃಹತ್ ಬನ್ನಿ ಮರವನ್ನು ಹತ್ತುವ ಮಳಿಯಪ್ಪಜ್ಜ.. ಹ್ಯೂತ್ ಎಂದು ಕೂಗಿದ್ದಾರೆ. ಆಗ ಅಲ್ಲಿ ಸೇರಿದ ಸಾವಿರಾರು ಸಂಖ್ಯೆಯ ಭಕ್ತರು ನಿಶಬ್ದರಾಗಿದ್ದಾರೆ. ಬಳಿಕ ಮುಂಗಾರಿ – ಹಿಂಗಾರಿ ತಕ್ಕಸ್ಟ ಮಸನ ಎಂದು ಹೇಳಿದ್ದಾರೆ. ಅಂದರೆ ಪ್ರಸ್ತುತ ಸಾಲಿನಲ್ಲಿ ಚೆನ್ನಾಗಿ ಮಳೆ‌ ಬೆಳೆ ಇದೆ ಎಂದು ಅಲ್ಲಿನವರು ಅರ್ಥೈಸಿದ್ದಾರೆ. ಈ ಒಂದು ಭವಿಷ್ಯ ಹೇಳುವ ಪದ್ಧತಿ ಬಾಗಲಕೋಟೆ ಜಿಲ್ಲೆಯ ಗುಡೂರು ಗ್ರಾಮದಲ್ಲಿದೆ. ಇಲ್ಲಿನ ಹುಲ್ಲೇಶ್ವರ ದೇವಾಲಯ ಜಾತ್ರಾ ಮಹೋತ್ಸವದ ನಿಮಿತ್ತ ನಡೆಯುವ ಈ ವಿಶೇಷ ಆಚರಣೆ ಗಮನ ಸೆಳೆಯುವಂತಿದೆ.ಆಗಿ ಹುಣ್ಣಿಮೆ ದಿನದಂದು ರಾತ್ರಿ ಸಮಯದಲ್ಲಿ ದೇವಾಲಯದಲ್ಲಿ ಡೊಳ್ಳು ಭಾರಿಸುವ ಮೂಲಕ ಮಳಿಯಪ್ಪ ಅಜ್ಜ ಎಂಬುವ ಪೂಜಾರಿಗೆ ಮೈಯಲ್ಲಿ ದೇವರು ಬರುತ್ತದೆ. ಅವರೊಂದಿಗೆ ಗ್ರಾಮದ ಹೊರವಲಯದಲ್ಲಿರುವ ಬೃಹತ್ ಬನ್ನಿ ಮರಕ್ಕೆ ಪಲ್ಲಕ್ಕಿ ಮೆರವಣಿಗೆ ಹೋಗುತ್ತಾರೆ. ಮರದ ಪಕ್ಕದಲ್ಲಿಯೇ ಹಿಂದೆ ಲಿಂಗೈಕ್ಯರಾಗಿರುವ ಹಿರಿಯರ ಸಮಾಧಿಗಳು ಇವೆ. ಇಲ್ಲಿ ಪೂಜೆ – ಪುನಸ್ಕಾರ ಸಲ್ಲಿಸಲಾಗುತ್ತದೆ. ನಂತರ ಹಿಂದಿನ ಮಳಿಯಪ್ಪ ಪೂಜಾರಿಗಳ ವಂಶಸ್ಥರ ಸಮಾಧಿಯಿಂದ ಈಗಿನ ಮಳಿಯಪ್ಪ…

Read More

ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಿಶಾ ಸಮಿತಿ ಸಭೆ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಿಶಾ ಸಭೆಯ ವಿಚಾರವಾಗಿ ಆರ್ ಅಶೋಕ್ ಮಾತನಾಡಿ, 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮರೆವು ಜಾಸ್ತಿ ಆಗಿದೆ. ಏನೇನೋ ಮಾತನಾಡುತ್ತಾರೆ. ಎಸ್‌ಪಿಗೆ ಹೊಡೆಯಲು ಹೋಗುತ್ತಾರೆ. ಮನಮೋಹನ್ ಸಿಂಗ್ ಪುಣ್ಯಾತ್ಮ ಗೊಂಬೆ ತರಹ ಇದ್ದವರು. 10 ವರ್ಷದಲ್ಲಿ ಮನಮೋಹನ್ ಸಿಂಗ್ ಎಷ್ಟು ಹಣ ಕೊಟ್ಟಿದ್ದಾರೆ? ಡಾ. ಮನಮೋಹನ್ ಸಿಂಗ್ ಅವರಿಗಿಂತ ಮೋದಿ 4 ಪಟ್ಟು ಹೆಚ್ಚು ಹಣ ಕೊಟ್ಟಿದ್ದಾರೆ. ರಾಜ್ಯದ ಜನರ ಮೇಲೆ ತೆರಿಗೆ ಹಾಕಿ ಸುಲಿಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಔಟ್ ಗೋಯಿಂಗ್ ಸರ್ಕಾರ. ಕರ್ನಾಟಕದಲ್ಲಿ ಮುಂದೆ ಕಾಂಗ್ರೆಸ್ ಆಡಳಿತಕ್ಕೆ ಬರಲು ಆಗಲ್ಲ. 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡಿಕೊಡುತ್ತಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರವಾದ ಆರೋಪ ಮಾಡಿದರು. ಡಿಕೆ ಶಿವಕುಮಾರ್…

Read More

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಇತಿಹಾಸ ಸೇರಿದ್ದು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಧಿಕಾರವಾಗಿ ಬದಲಾಗಿದೆ. ಇಂದಿನಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಈ ಒಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಇದು ಗ್ರೇಟರ್, ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು ಎಂದು ವಾಗ್ದಾಳಿ ನಡೆಸಿದರು. ಗ್ರೇಟರ್ ಬೆಂಗಳೂರಿಗೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದು, ಇದು ಗ್ರೇಟರ್ ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು. ತುಘಲಕ್ ದರ್ಬಾರ್ ಅನ್ನೋದು ಇದನ್ನೇ. ಕೆಂಪೇಗೌಡರು ನಾಲ್ಕು ಗೋಪುರ ಕಟ್ಟಿ ಒಂದು ಬೆಂಗಳೂರು ಮಾಡಿದರು. ಕಾಂಗ್ರೆಸಿಗರು ಬೆಂಗಳೂರಿನ ಒಂದು ಬಾಗಿಲು ಮೂರು ಮಾಡಿದ್ದಾರೆ. ಯಾರದ್ದೋ ಆಸ್ತಿಗೆ ಬೆಲೆ ಬರಬೇಕು ಎಂದು ಮಾಡುವುದಲ್ಲ ಎಂದು ಗ್ರೇಟರ್ ಬೆಂಗಳೂರು ಕುರಿತು ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಬೆಂಗಳೂರು ಒಡೆದರೆ ಕೆಂಪೇಗೌಡರಿಗೆ ದ್ರೋಹ ಬಗೆದಂತೆ. ಬೆಂಗಳೂರು ಮೂರು ಭಾಗ ಆದರೆ…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಸಹೋದರಿ ಎಂದು ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇಡಿ ಸಮನ್ಸ್ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ವೇಳೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬೇಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿತು. ವಿನಯ್ ಕುಲಕರ್ಣಿಗೆ ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ, ಹೈಕೋರ್ಟ್ ವಿನಯ್ ಕುಲಕರ್ಣಿ ವಿರುದ್ಧ ಯಾವುದೇ ಬಲಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಈ ವೇಳೆ ಮಧ್ಯಂತರ ಆದೇಶಕ್ಕೆ ಇಡಿ ಪರ ಕೆಎಸ್‌ಜಿ ಅರವಿಂದ್ ಕಾಮತ್ ತೀವ್ರವಾದ ಆಕ್ಷೇಪ ವ್ಯಕ್ತಪಡಿಸಿದರು. ತಮ್ಮ ವಾದಕ್ಕೆ ಅವಕಾಶ ನೀಡದೆ ಮಧ್ಯಂತರ ಆದೇಶ ನೀಡಬಾರದು ಎಂದು ಇಡಿ ಸಲ್ಲಿಸಿದ ಲಿಖಿತ ಆಕ್ಷೇಪಣೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಆದರೆ ಹೈಕೋರ್ಟ್…

Read More

ಬೆಳಗಾವಿ : ಕರ್ನಲ್ ಸೋಫಿಯಾ ಖುರೆಷಿ ಪತಿಯ ಮನೆ ಮೇಲೆ ದಾಳಿ ಆಗಿದೆ ಎಂದು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ಆರೋಪಿ ಅನಿಸ್ ವುದ್ದಿನ್ ವಿರುದ್ಧ ಬೆಳಗಾವಿಯ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ ಹೌದು ನಿನ್ನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರಲ್ಲಿರುವ ಕರ್ನಲ್ ಸೋಫಿಯಾ ಖುರೆಷಿ ಪತಿಯ ಮನೆಯ ಮೇಲೆ ಆರ್‌ಎಸ್‌ಎಸ್‌ ಬೆಂಬಲಿತ ಹಿಂದೂ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಅನೀಸ್ ಉದ್ದಿನ್ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ. ಟ್ವಿಟ್ಟರ್ ಖಾತೆಯಲ್ಲಿ ಅನೀಸ್ ಉದ್ದಿನ್ ಸುಳ್ಳು ಸುದ್ದಿಯನ್ನು ಹರಡಿಸಿದ್ದ. ಯಾವುದೋ ಒಂದು ಫೋಟೋ ಬಳಸಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ. ಕೂಡಲೇ ಬೆಳಗಾವಿ ಪೊಲೀಸರು ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ. ಕೆನಡಾದಲ್ಲಿ ಕುಳಿತು ಅನಿಸ್ ಉದ್ದಿನ್ ಈ ಒಂದು ಪೋಸ್ಟ್ ಮಾಡಿದ್ದ. ಪ್ರಕರಣ ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೇದ್ ಅವರು FIR ದಾಖಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…

Read More

ಬೆಳಗಾವಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು. ಇದೀಗ ಸೋಫಿಯಾ ಖುರೇಶಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ವಿಜಯ ಶಾ ವಿರುದ್ಧ ಬೆಳಗಾವಿಯ ಸೆನ್ ಠಾಣೆಯಲ್ಲಿ ಎಸ್.ಪಿ ಭೀಮಾಶಂಕರ್ ಗುಳೇದ ಅವರ ಸೂಚನೆಯ ಮೇರೆಗೆ ಇದೀಗ ವಿಜಯ ಶಾ ವಿರುದ್ಧ ಪ್ರಕರಣ ದಾಖಲಾಗಿದೆ ಬಿಎನ್ಎಸ್ ಕಾಯ್ದೆ 353, 192ರ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಸುಪ್ರೀಂ ಛೀಮಾರಿ ಹೌದು ಸೋಫಿಯಾ ಖುರೇಶಿ ಅವರ ಕುರಿತು ವಿಜಯ ಶಾ ಕಾರ್ಯಕ್ರಮ ಒಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು, ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು…

Read More

ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡ ಹಾಡು ಹಾಡಿ ಎಂದಿದ್ದಕ್ಕೆ ಖ್ಯಾತ ಗಾಯಕ ಸೋನು ನಿಗಮ್ ಅವರು ಪಹಲ್ಗಾಮ್ ದಾಳಿಗೆ ಕನ್ನಡಿಗರನ್ನು ಹೋಲಿಕೆ ಮಾಡಿ, ಅವಹೇಳನಕಾರಿ ಹೇಳಿಕೆ ನೀಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಸೋನು ನಿಗಮ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ತನ್ನ ವಿರುದ್ಧದ FIR ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನಿಖೆಗೆ ಹಾಜರಾಗಿಲ್ಲ ಎಂದು ಸರ್ಕಾರದ SPP ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ನೀಡಿದ್ದು, ಈ ವೇಳೆ ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು. ಹಾಗಾಗಿ ವಿಚಾರಣೆಗೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೋನು ನಿಗಮ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಹೈಕೋರ್ಟ್ ನ್ಯಾಯಾಧೀಶರು ಸೋನು ನಿಗಮ್ ವೆಚ್ಚದಲ್ಲಿ ಅವರಿದ್ದ ಸ್ಥಳದಲ್ಲಿ ತನಿಖೆ ಅಥವಾ…

Read More

ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಮಂಗಳೂರಿನ ಬಜ್ಪೆಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನ ಕಳವಾರು ಗ್ರಾಮದ ಆಶ್ರಯ ಕಾಲನಿ ನಿವಾಸಿ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ಬಂಟ್ವಾಳದ ಫರಂಗಿಪೇಟೆಯ ಕುಂಪನಮಜಲು ರಸ್ತೆ ನಿವಾಸಿ ನೌಷಾದ್ (39) ದಸ್ತಗಿರಿಯಾದ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದಿಬ್ಬರಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ತನಿಖೆಯು ಮುಂದುವರೆದಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

Read More

ಬೆಂಗಳೂರು : ಆನಂದ್ ಗುರೂಜಿಗೆ ಹಣಕ್ಕೆ ಬ್ಲಾಕ್ ಮೇಲ್ ಮಾಡಿದ್ದು ಅಲ್ಲದೇ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ಆನಂದ್ ಗುರೂಜಿ ಇದೀಗ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ ಪೊಲೀಸರು ಇಬ್ಬರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. A1 ಕೃಷ್ಣಮೂರ್ತಿ ಹಾಗು A2 ದಿವ್ಯ ವಸಂತ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದ್ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ ನಿಂದ ತಡೆಯಾಜ್ಞೆ ತಂದರೂ ಸಹ ಆನಂದ್ ಗುರೂಜಿಗೆ ಬೆದರಿಕೆ ಹಾಕಲಾಗಿದೆ. ಹಣಕ್ಕಾಗಿ ಬೆದರಿಸಿ ಬ್ಲಾಕ್ಮೇಲ್ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಆನಂದ ಗುರೂಜಿಯ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಿಕ್ಕಜಾಲ ಠಾಣೆ ಪೊಲೀಸರು ಇದೀಗ ತನಿಖೆ ಮುಂದುವರಿಸಿದ್ದಾರೆ.

Read More