Subscribe to Updates
Get the latest creative news from FooBar about art, design and business.
Author: kannadanewsnow05
ಹೈದ್ರಾಬಾದ್ : ಹೈದರಾಬಾದ್ ನ ಜಿಡಿಮೆಟ್ಲ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜೆಡಿಮೆಟ್ಲು ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಬ್ಯಾಗ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಸುತ್ತಮುತ್ತಲಿನ ನಿವಾಸಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಗ್ನಿ ಅವಘಡದಿಂದ ಕೋಟ್ಯಾಂತರ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕದಳ ದೌಡಾಯಿಸಿದ್ದು, ಸಿಬ್ಬಂದಿಯಿಂದ ಈಗ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಸುಮಾರು 10 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ತಂತಿಗಳ ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ. ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಈ ಒಂದು ಘಟನೆಗೆ ಕಾರಣ ಎನ್ನಲಾಗಿದೆ. ಮಾಹಿತಿ ನೀಡಿದರು ಕೂಡ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ವಿರುದ್ಧ ಜಿಡಿಮೆಟ್ಲ ಪ್ರದೇಶದ ನಿವಾಸಿಗಳು ಆರೋಪಿಸುತ್ತಿದ್ದಾರೆ.
ಬೆಂಗಳೂರು : ಅರಣ್ಯ ಹಕ್ಕು ಕಾಯ್ದೆ ಅಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳುಸಲ್ಲಿಸಿರುವ ಎಲ್ಲರೀತಿಯ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಂದ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಿ. 6,363 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಉಳಿದಂತೆ 558 ಅರ್ಜಿಗಳು ವಿಲೇವಾರಿ ಮಾಡಬೇಕಿದೆ. ಪಾರಂಪರಿಕ ಅರಣ್ಯವಾಸಿಗಳಿಂದ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಿ, 531 ಹಕ್ಕುಪತ್ರ ವಿತರಿಸಲಾಗಿದೆ. 104 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಉಳಿದ 1,095 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸಮುದಾಯದಹಕ್ಕುಪತ್ರಕ್ಕಾಗಿ 260 ಅರ್ಜಿ ಸಲ್ಲಿಕೆಯಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಅದಕ್ಕೆ…
ಬೆಂಗಳೂರು : ನಗರದಲ್ಲಿನ ಸಾರ್ವಜನಿಕ ಉದ್ಯಾನಗಳ ಸ್ವಚ್ಛತೆ ಕಾಯ್ದುಕೊಳ್ಳಲು ಹಲವು ಮಾರ್ಗ ಸೂಚಿ ರಚಿಸಿರುವ ಹೈಕೋರ್ಟ್, ಉದ್ಯಾನಗಳಲ್ಲಿ ನಾಯಿಗಳ ಮಲವಿಸರ್ಜನೆಗೆ ಕಾರಣವಾಗು ವವರಿಗೆ ಹೆಚ್ಚಿನ ದಂಡ ವಿಧಿಸಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ. ಹೌದು ನಗರದ ಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿಗಳಿಂದ ಉಂಟಾಗುತ್ತಿರುವ ಉಪದ್ರವ ಹಾಗೂ ನಾಯಿಗಳ ಮಲ ವಿಸರ್ಜನೆಗೆ ಕಡಿವಾಣ ಹಾಕಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸರ್ಕಾರೇತರ ಸಂಘ ‘ಮೆಸೆರ್ಸ್ಂಪ್ಯಾಷನ್ ಅನ್ಸಿಮಿಟೆಡ್ ಪ್ಲಸ್ ಅಕ್ಷನ್’ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಾರ್ಗಸೂಚಿ ರಚಿಸಿದೆ. ಬೇಜವಾಬ್ದಾರಿಯುತವಾಗಿ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡುತ್ತಿರು ವುದರಿಂದ ಸಾರ್ವಜನಿಕ ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ತೋಟ ಗಾರಿಕೆ ಇಲಾಖೆ, ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇರೀತಿ ಉಪದ್ರವ ಉಂಟಾಗದಂತೆ ನಿಷೇಧಿಸುವ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವ ಇಚ್ಛಾಶಕ್ತಿ…
ತುಮಕೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಅಷ್ಟಕ್ಕೂ ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ “ಅಲ್ಲಾ” ಸಹಾಯಕ್ಕೆ ಬರಲಿಲ್ಲ ಆದ್ದರಿಂದ ಜೀವ ಹೋಗಿದೆ ಅಷ್ಟೇ, ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ ಎಂದು ಪೋಸ್ಟ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಎಂ.ಜಿ.ರಸ್ತೆ, ಚರ್ಚರಸ್ತೆ, ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತೂರ್ಬಾ ರಸ್ತೆ, ವಾಲ್ಪನ್ ರಸ್ತೆ, ಡಿಕನ್ಸನ್ ರಸ್ತೆ, ಆಶೋಕ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರನಿಟಿ ಸರ್ಕಲ್, ಹಲಸೂರು ರಸ್ತೆ, ಮರ್ಫಿ ಪಟ್ಟಣ, ಹಲಸೂರು ಗೀತಾಂಜಲಿ ಲೇಔಟ್, ಎಚ್ಎಎಲ್ 3ನೇ ಹಂತ, ಹೊಸ ತಿಪ್ಪಸಂದ್ರ ಮುಖ್ಯ ರಸ್ತೆಯಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಏರ್ ರ್ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯ ರಸ್ತೆ, ಎಚ್ಎಎಲ್ 2ನೇ ಹಂತ, ಕಾಲ್ಪನ್ ಟವರ್ಸ್, ಎನ್ಎಎಲ್ ಕಾಂಪೌಂಡ್, ಕೋಡಿಹಳ್ಳಿ,…
ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ. ಈ ಆರೂಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಹಾಗಾಗಿ ಇಂದು ಗಂಗರಾಜು ಅವರು ಬೆಂಗಳೂರಿನ ಇಡೀ ಕಚೇರಿಗೆ ಹಾಜರಾಗಲಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಆರ್ಟಿಐ ಕಾರ್ಯಕರ್ತ ಗಂಗರಾಜುಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ಎಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಗಂಗರಾಜು ದಾಖಲೆಯನ್ನು ನೀಡಿ ಬಂದಿದ್ದರು. ಅಕ್ಟೋಬರ್ 28ರಂದು ಗಂಗರಾಜು ಇಡಿ ಅಧಿಕಾರಿಗಳಿಗೆ ದಾಖಲೆ ನೀಡಿದ್ದರು. ಸರ್ಚ್ ವಾರೆಂಟ್ ಬಗ್ಗೆ ಆರ್ಟಿಐ ನಲ್ಲಿ ಗಂಗರಾಜು ಮಾಹಿತಿ ಕೇಳಿದ್ದಾರೆ. ಲೋಕಾಯುಕ್ತ ಡಿ ವೈ ಎಸ್ ಪಿ ಮಾಲ್ತೇಶ್ ವಿರುದ್ಧ ಗಂಗರಾಜು ಆರೋಪ ಮಾಡಿದ್ದರು. 8 ಕೋಟಿ ಲಂಚ ಸ್ವೀಕರಿಸಿ ಮಾಹಿತಿಯನ್ನು ಸೋರಿಕೆ…
ಬೆಂಗಳೂರು : ನಿನ್ನೆ ಬೆಂಗಳೂರಿನ ಇಂದಿರಾನಗರದ ಅಪಾರ್ಟ್ಮೆಂಟ್ ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ಕೇರಳ ಮೂಲದ ಯುವಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಒಂದು ದಿನ ಆರೋಪಿ ಶವದ ಜೊತೆಗೆ ಕಳೆದಿದ್ದಾನೆ. ಅಲ್ಲದೆ ಶವವನ್ನು ಆರೋಪಿ ಪೀಸ್ ಪೀಸ್ ಮಾಡುವ ಪ್ಲಾನ್ ಹಾಕಿಕೊಂಡಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಇಂದಿರಾನಗರದ ಅಪಾರ್ಟ್ಮೆಂಟ್ನಲ್ಲಿ ಅಸ್ಸಾಂ ಮೂಲದ ಮಾಯ ಗೊಗಾಯ್ ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ದುಷ್ಕರ್ಮಿಯು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹತ್ಯೆಗೊಳಗಾದ ಯುವತಿ ಹೆಚ್ಎಸ್ಎಆರ್ ಲೇಔಟ್ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೇರಳ ಮೂಲಕ ಯುವಕ ಆರವ್ ಅರ್ನಿ ನೊಂದಿಗೆ ಪರಿಚಯವಾಗಿ ನಂತರ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಯುವತಿ ಮಾಯಾ ಗೊಗೋಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಿಸಿಟಿವಿ ದೃಶ್ಯ ದೊರೆತಿದ್ದು, ನವೆಂಬರ್ 23 ರಂದು ಮಧ್ಯಾಹ್ನ ಸರ್ವಿಸ್ ಅಪಾರ್ಟ್ ಮೆಂಟ್ಗೆ ಮಾಯಾ ಆಗಮಿಸಿದ್ದಾಳೆ. ಅಪಾರ್ಟ್ ಮೆಂಟ್ಗೆ ಮಾಯಾ…
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಶಿವಾಜಿ ನಗರದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ದಂಪತಿ ಹಾಗೂ ಚಾಲಕ ಸಾವನಪ್ಪಿದ್ದಾರೆ. ಲಿಯಾಕತ್ (48) ಅಸ್ಮ (38) ನೂರ್ (46) ಎನ್ನುವವರು ಸಾವನಪ್ಪಿದ್ದಾರೆ. ರಾಮನಗರ ತಾಲೂಕಿನ ಸಂಗಮದೊಡ್ಡಿ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ಕಡೆಗೆ ಕಾರು ಹೊರಟಿತು ಡಿವೈಡರ್ ಬಳಿ ಸೂಚನಾ ಫಲಕ ಇಲ್ಲದ್ದರಿಂದ ಈ ಒಂದು ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ ಬೆಂಗಳೂರಿನಿಂದ ಮೈಸೂರಿಗೆ ತೆರಡುವಾಗ ವೇಗವಾಗಿ ಹೊರಟಿದ್ದ ಕಾರು ರಸ್ತೆ ಬದಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಳಿಕ ಕೆಎಸ್ಆರ್ಟಿಸಿ ಬಸ್ಗೆ ಕಾರು ಹುಡುಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ, ಕಾರು ಚಾಲಕ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದ…
ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ದಿನೇ ದಿನೇ ಬಾಣಂತಿಯರ ಸಾವುಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಹೊಸಪೇಟೆ ಮೂಲದ ಮುಸ್ಕಾನ್ (22) ಎನ್ನುವ ಬಾಣಂತಿಯ ಸಾವಾಗಿದೆ. ಹಾಗಾಗಿ ಇದೀಗ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ ಬಾಣಂತಿ ಮುಸ್ಕಾನ್ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನವೆಂಬರ್ 10 ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡಿದ್ದರು. ಸಿಸೇರಿಯನ್ ಬಳಿಕ ಮುಸ್ಕಾನ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನವಂಬರ್ 11 ರಂದು ಬಾಣಂತಿ ಮುಸ್ಕಾನ್ ಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಮ್ಸ್ ಆಸ್ಪತ್ರೆಯಲ್ಲಿ ಇದ್ದು ಮುಸ್ಕಾನ್ ಒಂದು ದಿನ ಚಿಕಿತ್ಸೆ ಪಡೆದಿದ್ದಾರೆ. ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಗಾಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಮುಸ್ಕಾನ್ ನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರಿಸಿದ್ದಾರೆ. 15 ದಿನ ನಿರಂತರ ಚಿಕಿತ್ಸೆ ಪಡೆದರೂ ಖಾಸಗಿ ಆಸ್ಪತ್ರೆಯಲ್ಲಿ ಮುಸ್ಕಾನ್ ಸಾವನ್ನಪ್ಪಿದ್ದಾಳೆ.
ಬೆಂಗಳೂರು : ವಕ್ಫ್ ವಿರುದ್ಧವಾಗಿ ಈಗಾಗಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಬೀದರ್ ನಿಂದ ಪ್ರತಿಭಟನೆ ನಡೆಸಿದ್ದು, ಇದೇ ವಿಚಾರವಾಗಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಕಿಸಾನ್ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಹೌದು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿಗೆ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ…













