Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ : ಮತ್ತೆ 14 ದಿನ ಜೈಲು ಪಾಲಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್!
ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಕೋರ್ಟ್ ಗೆ ಹಾಜರಾಗಬೇಕು ಎಂದು ರಜತ ಹಾಗೂ ವಿನಯ್ ಗೌಡಗೆ ಕೋರ್ಟ್ ಷರತ್ತು ನೀಡಿ ಇದೇ ಪ್ರಕರಣದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗದೆ ರಜತ್ ನಿರ್ಲಕ್ಷ ತೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ರಜತ್ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು 14 ದಿನಗಳ ಕಾಲ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ…
ಕಲಬುರ್ಗಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೆ ಗಂಭೀರವಾದ ಆರೋಪ ಮಾಡಿದ್ದು, ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅದನ್ನು ಕೆಡವಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು. ಇಂದು ಕಲಬುರ್ಗಿಯಲ್ಲಿ ಯೋಚನೆ ಮಾಡಿದ ಉದ್ಯೋಗ ಮೇಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮ ನಿಮ್ಮ ನಡುವೆ ಏನೇ ಮನಸ್ತಾಪವಿದ್ದರು ಕೂಡ ಒಗ್ಗಟ್ಟಾಗಿ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ವೇದಿಕೆ ಮೇಲಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಖರ್ಗೆ ಕಿವಿ ಮಾತು ಹೇಳಿದ್ದಾರೆ. ಹುಷಾರಾಗಿರಬೇಕು ಮೋದಿ ಕರ್ನಾಟಕ ಸರ್ಕಾರ ಬೀಳಿಸುವ ಪ್ಲಾನ್ ಮಾಡಿದ್ದಾರೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರಗಳಿವೆ ಯಾವ ರೀತಿಯಾಗಿ ಕೆಡುವ ಬೇಕು ತೆಗೆದು ಹಾಕಬೇಕು ಅಧಿಕಾರ ಕೈಯಲ್ಲಿ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಅದೇ ಪ್ರಯತ್ನ ನಮ್ಮ ಕರ್ನಾಟಕದಲ್ಲಿ ನಡೆದಿದೆ.…
ಬೆಂಗಳೂರು : ಸದ್ಯ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಬಿಡುಗಡೆ ಕುರಿತು ವಿಕಟಿನ ಪರಿಸ್ಥಿತಿ ಎದುರಾಗಿದೆ ಏಕೆಂದರೆ ಈ ಕುರಿತು ನಾಳೆ ವಿಶೇಷ ಸಂಪುಟ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಜಾತಿಗಣತಿ ವರದಿ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ ಇದರ ಬೆನ್ನಲ್ಲೇ ಜಾತಿಗಣತಿ ವರದಿ ಬಿಡುಗಡೆ ಮಾಡದೇ ಹೋದರೆ ಬೀದಿ ಬೀದಿಗಳಲ್ಲಿ ದಂಗೆ ಏಳುತ್ತೇವೆ ಎಂದು ಶೋಷಿತ ಒಕ್ಕೂಟದ ಸಂಚಾಲಕ ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾರದೇ ಹಾಗೂ ಯಾವುದೇ ಒತ್ತಾಯಕ್ಕೆ ಮಣಿಯದೆ ರಾಜ್ಯ ಸರ್ಕಾರ ಜಾತಿಗಣತಿ ವರದಿ ಜಾರಿ ಮಾಡಬೇಕು. ಜಾತಿ ಗಣತಿ ವರದಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಅಕಸ್ಮಾತ್ ವರದಿ ವಾಪಾಸ್ ತಗೊಂಡ್ರೆ ರಾಜ್ಯಾದ್ಯಂತ ಬೀದಿ ಬೀದಿಯಲ್ಲಿ ದಂಗೆ ಏಳುತ್ತೇವೆ ಎಂದು ಶೋಷಿತ ಒಕ್ಕೂಟದ ಸಂಚಾಲಕ ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ವರದಿ ವಾಪಸ್ ತಗೊಂಡ್ರೆ ಬೀದಿ ಬೀದಿಯಲ್ಲಿ ದಂಗೆ ಏಳುತ್ತೇವೆ. ವರದಿ ಬಿಡುಗಡೆ ಮಾಡಬಾರದು ಅಂದರೆ ಅವರ ಜಾಗೀರಾ? ನಾವು ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕುತ್ತಿಗೆ ಹಿಚುಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಪೊಲೀಸರು ಗುಂಡೇಟಿಗೆ ಬಲಿಯಾದಂತಹ ಆರೋಪಿ ಫೋಟೋವನ್ನು ರಿಲೀಸ್ ಮಾಡಿದ್ದಾರೆ. ಹೌದು ಎನ್ಕೌಂಟರ್ಗೆ ಬಲಿಯಾದ ರಿತೇಶ್ ಕುಮಾರ್ (35) ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಹಂತಕನ ಶವ ಅನಾಥವಾಗಿ ಬಿದ್ದಿದೆ. ಕುಟುಂಬಸ್ಥರ ಪತ್ತೆಗೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯು ಭಾವಚಿತ್ರ ಸಹಿತ ಪ್ರಕಟಣೆ ಹೊರಡಿಸಿದೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟು ಗುರುತು ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ. ಘಟನೆ ಹಿನ್ನೆಲೆ? ಕೆಲ ದಿನಗಳ ಹಿಂದಷ್ಟೆ 5 ವರ್ಷದ ಬಾಲಕಿ ಮೇಲೆ…
ಹಾವೇರಿ : ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು. ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಪ್ರತ್ಯೇಕ ಜಾತಿಗಣತಿ ಕಾರ್ಯ ನಡೆಯಲಿದೆ ಎಂದು ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು. ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಜಾತಿ ಗಣತಿಯು ಶಂಕರ ಬಿದರಿ ನೇತೃತ್ವದಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಒಕ್ಕಲಿಕ ಸಮಾಜವನ್ನು ವಿಭಜಿಸಿದ್ದು ಸರಿಯಲ್ಲ. ರಾಜಕೀಯ ಲಾಭ ಕೆಲ ಸಮುದಾಯಗಳ ಓಲೈಕೆಗೆ ವರದಿ ಜಾರಿಗೆ ಯತ್ನಿಸಲಾಗಿದೆ. ಜಾತಿಗಣತಿ ವರದಿಯನ್ನು ಮರು ಪರಿಶೀಲನೆ ಮಾಡಿ ಜಾರಿಗೊಳಿಸಬೇಕು. ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಬಿಜೆಪಿಯವರು ಹಿಂದೂಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ರಂಭಾಪುರ ಶ್ರೀ ಹೇಳಿಕೆ ನೀಡಿದರು. ಸರ್ಕಾರ ಪತನ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾದ್ರೆ ಸರ್ಕಾರ ಪತನವಾಗಲಿದೆ ಎಂದು ಹಾವೇರಿಯಲ್ಲಿ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.ಜಾತಿ ಗಣತಿ ಜಾರಿಯಾದ್ರೆ ಸರ್ಕಾರ ಪತನವಾಗುತ್ತೆ ಅಂತ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ. ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು. ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್…
ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಹಿಂದುಳಿದಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ. ಭಾರತ ನ್ಯಾಯ ವರದಿ (ಐಜೆಆರ್) 2025 ರಲ್ಲಿ ಕರ್ನಾಟಕ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ, ಕಳೆದ ವರ್ಷ ಹೊಂದಿದ್ದ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ. ಕಳೆದ ವರ್ಷ ಐದನೇ ಸ್ಥಾನ ಪಡೆದ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್…
ಈ ಅದೃಷ್ಟ ಅನ್ನೋದು ಒಂದು ರೀತಿ ಜಾಕ್ ಪಾಟ್ ಇದ್ದಂತೆ. ಯಾರು ಯಾವಾಗ ಬೇಕಾದರೂ ಶ್ರೀಮಂತರಾಗಬಹುದು, ಯಾವಾಗ ಬೇಕಾದರೂ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರಬಹುದು. ಇದೀಗ ಈ ಒಂದು ಅದೃಷ್ಟದ ಘಟನೆ ನಡೆದಿದ್ದು ಚಿಲಿಯಲ್ಲಿ, ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು. ಹೀಗಾಗಿ…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ (ED) ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ED ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಕರಣದ ವಿಚಾರಣೆಯನ್ನು ಈ ವೇಳೆ ನ್ಯಾಯಾಲಯ ಏಪ್ರಿಲ್ 25ಕ್ಕೆ ಮುಂದೂಡಿತು. ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು. ಬರೋಬ್ಬರಿ 661 ಕೋಟಿ ರೂ. ಮುಟ್ಟುಗೊಲು ಇಡೀ ಪ್ರಕರಣದ ಹಿಂದಿನ ಹಿನ್ನೆಲೆ 2014ರಲ್ಲಿ ಡಾ. ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನಲ್ಲಿ ದೊರಕಿದ್ದು, ಈ ದೂರಿನ ಆಧಾರದ ಮೇಲೆ 2021ರಲ್ಲಿ ED ತನಿಖೆಯನ್ನು ಪ್ರಾರಂಭಿಸಿತು. ದೂರಿನಲ್ಲಿ, ಕ್ರಿಮಿನಲ್ ಪಿತೂರಿ ಮೂಲಕ ಎಜಿಎಲ್ನ 2,000 ಕೋಟಿ ರೂ.…
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಶಿಕ್ಷಣ ಮಟ್ಟ ಸುಧಾರಿಸಲು ಶಿಕ್ಷಕರನ್ನು ನೇಮಕ ಮಾಡುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಸಂಪುಟ ಉಪ ಸಮಿತಿ ನಿಗವಹಿಸುತ್ತದೆ. ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಶರಪ್ರಕಾಶ್ ಪಾಟೀಲ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಒಂದು ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರು ಚಾಲನೆ ನೀಡುತ್ತಾರೆ. ಇದು ನಮ್ಮ ಯುವನಿಧಿ ಕಾರ್ಯಕ್ರಮದ ಒಂದು ಭಾಗ ಕೂಡ. ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಬೇಕು ಕೆಲಸ ಆಗಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ…













