Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿಯೊಂದನ್ನು ನೀಡಿದ್ದು ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಎಸ್ ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್ ಮಾಸದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜ್ಯೇಷ್ಠತಾ…
ಬೆಂಗಳೂರು : ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಕೆಲಸ ಕೊಡಿಸುವುದಾಗಿ ಹೇಳಿ ಖದೀಮರು ಉದ್ಯೋಗಾಕಾಂಕ್ಷಿಗಳ ಬಳಿ ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ನಡೆದಿದ್ದು, ಈ ಕುರಿತಂತೆ ವಂಚನೆಗೆ ಒಳಗಾದಂತ ಅಭ್ಯರ್ಥಿಗಳು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಟಿಸಿ ಹುದ್ದೆ ಕೊಡಿಸುವುದಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದನ್ನೇ ನಂಬಿದ್ದ ವಿಜಯಪುರದ ಹುಸನಪ್ಪ ಮಾಡ್ಯಾಳ್, ಶಿವಕುಮಾರ್, ಅಶೋಕ್ ಹಾಗೂ ಇತರರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬಳಿಕ ಬೆಂಗಳೂರು, ವಿಜಯಪುರ ಸೇರಿ ಹಲವು ಕಡೆ ಕರೆಸಿ ಖದೀಮರು ಒಬ್ಬೊಬರಿಂದ ಹಂತಹಂತವಾಗಿ 20 ರಿಂದ 25 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ. ಹಣ ಪಡೆದುಕೊಂಡು ಆನ್ಲೈನ್ ಮೂಲಕ ನಕಲಿ ಟ್ರೈನಿಂಗ್ ಆರ್ಡರ್ ಕಾಫಿ ಕೂಡ ಕೊಟ್ಟಿದ್ದರು. ನಂತರ ಮುಂಬೈ ಹಾಗೂ ಕಾನ್ಪುರದಲ್ಲಿ ಫೇಕ್ ಟ್ರೈನಿಂಗ್ ಕೂಡ ಕೊಡಿಸಿದ್ದರು. ಟ್ರೈನಿಂಗ್ ಮುಗಿದ ಕೆಲ ದಿನಗಳ ನಂತರ ಡ್ಯೂಟಿಗೆ ಜಾಯಿನ್ ಆಗಲು ಹೇಳಿದ್ದಾರೆ. ಕೆಲಸ ಸಿಕ್ಕೇ ಬಿಡ್ತು ಎಂಬ ಖುಷಿಯಲ್ಲಿದ್ದರಿಗೆ ತಿಂಗಳು ಉರುಳಿದ್ರು ನೇಮಕಾತಿ ಪತ್ರ ಬರಲಿಲ್ಲ.…
ಶಿವಮೊಗ್ಗ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೈವೇ ಪೆಟ್ರೋಲ್ ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಕರ್ತವ್ಯ ನಿರ್ವಹಿಸುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪರಶುರಾಮ್ (43) ಎಂದು ತಿಳಿದುಬಂದಿದೆ. ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ.2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಬಾಗಲಕೋಟೆ : ಬಿಜೆಪಿ ಸರ್ಕಾರದಲ್ಲಿ ನಾನು ಕೈಗಾರಿಕಾ ಸಚಿವನಾಗಿದ್ದ ಸಮಯದಲ್ಲಿ 2ಎ ಮೀಸಲಾತಿ ಸಮಾಜಕ್ಕೆ ಒದಗಿಸಿಕೊಟ್ಟರೆ ಸಹೋದರಿ, ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಬೆಳಗಾವಿಯಿಂದ ಕುಂದಾ ತಂದು, ಬಂಗಾರದ ಕಿರೀಟ ಹಾಕುವುದಾಗಿ ಹೇಳಿಕೆ ನೀಡಿದ್ದೀರಿ. ಇಂದು ನೀವು ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಒದಗಿಸಿ ಕೊಟ್ಟರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ವಾಗ್ದಾನ ಮಾಡಿದರು. ಇಂದು ಬೆಳಗಾವಿ ಸುವರ್ಣಸೌಧ ಮುಂದೆ ಪಂಚಮಸಾಲಿಗರ ಮೇಲೆ ಪೊಲೀಸರು ಲಾಠಿ ಜಾರ್ಜ್ ಮಾಡಿದ್ದನ್ನು ಖಂಡಿಸಿ ಬಾಗಲಕೋಟೆ ಶಿರೂರ ಅಗಸಿ ಬಳಿ ಪಂಚಮಸಾಲಿ ಸಮಾಜದಿಂದ ನಡೆದ ರಸ್ತೆ ತಡೆ, ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಸಮಾಜದ ಋಣ ತೀರಿಸಿದಂತೆ ಆಗುತ್ತದೆ ಎಂದು ತಿರುಗೇಟು ನೀಡಿದರು. ಬಹಳ ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ರೆಮಕೊ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 14.12.2024 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರೋಡ 7ನೇ ಅಡ್ಡರಸ್ತೆ, ಶ್ಯಾಮಣ್ಣ ಗಾರ್ಡನ, ಮಂಜುನಾಥ ನಗರ, ಪೈಪಲೈನ್, ಸಂತೋಷ ಟೆಂಟ, ಅನಂತ ರಾಮಯ್ಯ ಕಂಪೋಂಡ್, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, 6ನೆ ಮತ್ತು 4ನೆ ಮೈಸೂರು ರೋಡ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11ಕೆ.ವಿ ‘ಸಿ’ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 14.12.2024 (ಶನಿವಾರ) ಮತ್ತು ದಿನಾಂಕ: 15.12.2024 (ಭಾನುವಾರ) ರಂದು ಬೆಳಗ್ಗೆ 05:00 ರಿಂದ ಮಧ್ಯಾಹ್ನ 09:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಬೆನ್ಸನ್ ಟೌನ್, ಶಿವಾಜಿನಗರ, ವಸಂತ ನಗರ, ಎಸ್.ಜಿ.ರಸ್ತೆ, ಟಾಸ್ಕರ್ ಟೌನ್, ಪಿ.ಜಿ.ಹಳ್ಳಿ, ಚಂದ್ರಯ್ಯ & ಕ್ವೀನ್ಸ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ…
ಯಾದಗಿರಿ : ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಸಂಗೀತ ಹಾಗೂ ನಿಂಗಪ್ಪ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸಂಗೀತಾ ಸಹವಾಸ ಬಿಡುವಂತೆ ನಿಂಗಪ್ಪಗೆ ಸಂಗೀತಾ ಕುಟುಂಬಸ್ಥರು ತಾಕಿತು ಮಾಡಿದ್ದರು.ಆನಂತರ ಸಂಗೀತಾಳೊಂದಿಗೆ ನಿಂಗಪ್ಪ ಅಂತರ ಕಾಯ್ದುಕೊಂಡಿದ್ದ. ಆದರೆ ನಿಂಗಪ್ಪನೊಂದಿಗೆ ಸಂಗೀತ ಓಡಿ ಹೋಗಿದ್ದಳು. ಒಂದು ತಿಂಗಳ ಹಿಂದೆ ಓಡಿ ಹೋಗಿ ಇಬ್ಬರು ಗುಜರಾತ್ ನಲ್ಲಿ ವಾಸವಿದ್ದರು. ಬಳಿಕ ನ್ಯಾಯ ಪಂಚಾಯಿತಿ ಮಾಡಿದ ನಂತರ ಆಕೆಯನ್ನು ಮನೆಗೆ ಕಳುಹಿಸಲಾಗಿತ್ತು. ನಂತರ ಕೂಲಿ ಕೆಲಸಕ್ಕಾಗಿ ಯುವಕ ನಿಂಗಪ್ಪ ಚಿತ್ತಾಪುರಕ್ಕೆ ತೆರಳಿದ್ದಾನೆ. ಈ ವೇಳೆ ಸಂಗೀತ ನಿಂಗಪ್ಪನಿಗೆ ಕರೆ ಮಾಡಿ ಮತ್ತೆ ಪರಾರಿಯಾಗಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಸಂಗೀತ ಕುಟುಂಬಸ್ಥರು ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ನಿಂಗಪ್ಪನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾದಗಿರಿ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕಲಬುರ್ಗಿ ನಗರದ ಹೊರವಲಯದ ಬೀದರ್ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಬಳಿ ನಡೆದಿದೆ. ನಿನ್ನೆ ಈ ಒಂದು ಅಪಘಾತ ನಡೆದಿದ್ದು, ಮೃತರನ್ನು ಮಹಮದ್ ಶೇಕಿಬ್ ಜಿಲ್ಹಾನಿ (32), ಶೇರಿನ್ ಶೆಕಿಬ್ (28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.ಕಾರು ಹುಮನಾಬಾದ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿತ್ತು, ಕಲಬುರಗಿಯಿಂದ ಹುಮನಾದ್ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಕುರಿತಂತೆ ಸಂಚಾರಿ ಪೊಲೀಸ್ ಠಾಣೆ ಎರಡರಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಕೃಷಿ ಹೊಂಡವೊಂದರಲ್ಲಿ ಸೋಡಿಯಂ ಮೆಟಲ್ ಬಳಸಿಕೊಂಡು, ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡ್ರೋನ್ ಪ್ರತಾಪ್ ಹಾಗೂ ಕೃಷಿ ಹೊಂಡ ಜಮೀನು ಮಾಲಿಕನ ವಿರುದ್ಧ ಇದೀಗ ಮಿಡಿಗೇಶಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದು, ಡ್ರೋನ್ ಪ್ರತಾಪ ರನ್ನು ಘಟನಾ ಸ್ಥಳಕ್ಕೆ ಪೊಲೀಸರು ಇದೀಗ ಕರೆ ತರಲಿದ್ದಾರೆ. ಮಧುಗಿರಿ ತಾಲೂಕಿನ ಜನಕಲೋಟಿ ಗೆ ಪೊಲೀಸರು ಪ್ರತಾಪ್ ಅವರನ್ನು ಕರೆ ತರಲಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಇಟ್ಟಕಲೋಟಿ ಗ್ರಾಮದ ಸ್ಫೋಟದ ಸ್ಥಳಕ್ಕೆ ಡ್ರೋನ್ ಪ್ರತಾಪ್ ಕರೆ ತಂದು ಮಹಜರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಪ್ರತಾಪ್ ಸೋಡಿಯಂ ಎಸೆದು ಸ್ಪೋತಿಸಿದ್ದ. ಶ್ರೀರಾಯರ ಬೃಂದಾವನ ಫಾರ್ಮ್ಸ್ ನಲ್ಲಿರುವ ಕೃಷಿಹೊಂಡದಲ್ಲಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದ, ಇದೀಗ ಪ್ರತಾಪ್ ಭೂಮಿ ಮಾಲಿಕ ಜಿತೇಂದ್ರ ಕುಮಾರ್ ಜೈನ ವಿರುದ್ಧ ಇದೀಗ FIR ದಾಖಲಾಗಿದೆ. ಪ್ರಕರಣ ಹಿನ್ನೆಲೆ ಮಧುಗಿರಿ ತಾಲೂಕಿನ ಜನಕಲೋಟಿ…
ಬೆಂಗಳೂರು : ಗಂಡನನ್ನು ಬಿಟ್ಟು ತನ್ನ ಜೊತೆ ಇರಲು ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆಯನ್ನು ಕೊಂದು ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರ ಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮೊವುಹಾ ಮಂಡಲ್ (26) ಎಂದು ತಿಳಿದುಬಂದಿದೆ. ಇನ್ನೂ ಮಹಿಳೆಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಿಥುನ್ ಮಂಡಲ್ (40) ಎನ್ನಲಾಗಿದೆ. ಗಂಡನನ್ನ ತೊರೆದು ತನ್ನೊಂದಿಗೆ ಬರದಿದ್ದಕ್ಕೆ ಸಿಟ್ಟಿನಿಂದ ಕೊಲೆ ಮಾಡಿದ್ದಾನೆ. ಬಳಿಕ ಬಂಧನ ಭೀತಿಯಿಂದ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಐಟಿಪಿಎಲ್ ಬಳಿ ಮೊಹುವಾ ವಾಸವಾಗಿದ್ದಳು. ಆರು ತಿಂಗಳ ಹಿಂದೆ ಪರಿಚಿತರಾಗಿದ್ದ ಮೊವುಹಾ ಮಂಡಲ್ಗೆ ತನ್ನನ್ನ ಪ್ರೀತಿಸುವಂತೆ ಮಿಥುನ್ ಕೇಳಿಕೊಂಡಿದ್ದ. ತನಗೆ ಮದುವೆಯಾಗಿದೆ ಎಂದು ಹೇಳಿದರೂ ಗಂಡನನ್ನ ತೊರೆದು ತನ್ನ ಜೊತೆಯಿರುವಂತೆ ಒತ್ತಡ ಹೇರಿದ್ದ. ಈತನ ಒತ್ತಡಕ್ಕೆ ಮಣಿಯದೆ ಆತನೊಂದಿಗೆ ಗಲಾಟೆ ಮಾಡಿಕೊಂಡಿದ್ದಳು. ಮಿಥುನ್ ಇದರಿಂದ ತಲೆಕೆಡಿಸಿಕೊಂಡು ಕೆಲಸಕ್ಕೆ ಹೋಗುತ್ತಿರಲಿಲ್ಲ. ಖರ್ಚಿಗಾಗಿ ಸ್ನೇಹಿತರಿಂದ ಕೈಸಾಲ ಪಡೆದಿದ್ದ. ಗಂಡನನ್ನು ಬಿಟ್ಟು ತನ್ನ ಜೊತೆ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿ ಕಳ್ಳರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ರಾಂಪುರ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಗ್ಯಾಸ್ ಕಟರ್ ಬಳಸಿ ಗ್ರಾಮೀಣ ಬ್ಯಾಂಕ್ ನಲ್ಲಿ ಖದಿಮರು ದರೋಡೆಗೆ ಯತ್ನಿಸಿದ್ದಾರೆ. ರಾಂಪುರ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಈ ಒಂದು ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ಕುರಿತಂತೆ 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಮೊದಲ ಬಾರಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ್ದು, ಎರಡನೇ ಬಾರಿ ಬ್ಯಾಂಕ್ ಕಳ್ಳತನ ಮಾಡುವ ಸಂದರ್ಭದಲ್ಲಿ ಈ ಮೂವರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ.














