Author: kannadanewsnow05

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ. ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ. ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದಿನದ 24 ಗಂಟೆಗಳ ಕಾಲ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಬೈಕ್ ನಲ್ಲಿ ಇಬ್ಬರು ರೈತರು ಜಮೀನಿಗೆ ತೆರಳುತ್ತಿದ್ದಾಗ ಜೋತು ಬಿದ್ದಂತಹ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.. ಹೌದು ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣಹೊಂದಿದ್ದು ಚಾಮರಾಜನಗರ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಐನಾಪುರ ಗ್ರಾಮದ ನಾಗೇಂದ್ರ ಮತ್ತು ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿರುವ ರೈತರು ಎಂದು ತಿಳಿದುಬಂದಿದೆ.ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ ಹೊಂದಿದ್ದಾರೆ. ಬೈಕ್ ನಲ್ಲಿ ಇಬ್ಬರು ಜಮೀನಿಗೆ ತೆರಳುವಾಗ ಈ ಒಂದು ದುರಂತ ನಡೆದಿದೆ. ಚೆಸ್ಕಾಂ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚೆಸ್ಕಾಂ ಅಧಿಕಾರಿಗಳ ವಿರುದ್ಧ ಐನಾಪುರ ಗ್ರಾಮಸ್ಥರು ಆಕ್ರೋಶ ಹೊರಹಕಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡುವವರಿದ್ದರು. ಆದರೆ ಇದೀಗ ಅವರ ಭೇಟಿ ಮುಂದೂಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಒಟ್ಟು ಎಂಟು ಜನರು ಸಾವನಪ್ಪಿದ್ದಾರೆ. ಈ ಒಂದು ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಹವಾಮಾನ ವೈಪರಿತ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಾಣಿಸಲಿದ್ದಾರೆ. ರಸ್ತೆ ಮಾರ್ಗವಾಗಿ ಬರುತ್ತಿರುವುದರಿಂದ ಸಿಎಂ ಬೆಂಗಳೂರು ತಲುಪುವುದು ವಿಳಂಬವಾಗಿದೆ. ಹೀಗಾಗಿ ಬಾಬುಸಾಬ್ ಪಾಳ್ಯ ಭೇಟಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Read More

ತುಮಕೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಅದರಲ್ಲೂ ಯುವಕರಲ್ಲಿ ಕೂಡ ಈ ಒಂದು ಹೃದಯಘಾತ ಸಂಭವಿಸುತ್ತಿದ್ದು, ಆತಂಕಕ್ಕೆ ಎಡೆಮಾಡಿದೆ. ಇದೀಗ ತುಮಕೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಹೌದು ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಕಾಂತರಾಜುಗೆ ಹೃದಯಘಾತವಾಗಿದೆ. ತಕ್ಷಣ ಅವರನ್ನು ಹುಳಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕಾಂತರಾಜ್ ಸಾವನ್ನಪ್ಪಿದ್ದಾರೆ. ಕಾಂತರಾಜ್ ತಿಪಟೂರು ನಗರ ಠಾಣೆಯಲ್ಲಿ ಅಷ್ಟೆ ಅಲ್ಲದೆ ಹಲವು ಪೊಲೀಸ್ ಠಾಣೆಗಳಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್​ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ​​ ಬಗ್ಗೆ ಚಿಂತನೆ ನಡೆಸುತ್ತಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇನ್ನೂ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಿ ಎಂದು ಜನರಿಗೆ ಸೂಚಿಸಲಾಗಿದೆ. ಈ ಮಧ್ಯೆ ಬೆಂಗಳೂರಿನ ಜನತೆಗೆ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗಿದೆ. ಈ ಕುರಿತಂತೆ ಬಿಬಿಎಂಪಿ ಆರೋಗ್ಯ ವಿಭಾಗ ಮಾರ್ಗಸೂಚಿ ಹೊರಡಿಸಿದೆ. ಮಳೆ ಅವಾಂತರದ ಡ್ಯಾಮೇಜ್ ಕಂಟ್ರೋಲ್ ಗೆ ಪಾಲಿಕೆ ಮುಂದಾಗಿದೆ ಈ ಮೂಲಕ ಬೆಂಗಳೂರಿನ ಜನತೆ ವಿಶ್ವಾಸ ಗಳಿಸಲು ತಯಾರಿ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಮಳೆಯ ಬಳಿಕ ರೋಗಗಳ ಆತಂಕ ಶುರುವಾಗಿದೆ. ಸಾಂಕ್ರಾಮಿಕ ರೋಗ ತಡೆಗೆ ನಿಗಾ ಇಡಲು ಬಿಬಿಎಂಪಿ ಇದೀಗ ಸಿದ್ಧತೆ ಮಾಡಿಕೊಂಡಿದೆ. ಮಳೆ ಬಿದ್ದ ಜಾಗದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ. ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ತಗ್ಗಿದ ಬಳಿಕ ಸಾಂಕ್ರಾಮಿಕ ರೋಗ ಹರಡುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಪರಿಶೀಲನೆಗೆ ಬಿಬಿಎಂಪಿ ಪ್ಲಾನ್…

Read More

ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೆನ್ನೆ ರಾತ್ರಿ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಮಹದೇವಪುರ, ಬೊಮ್ಮನಹಳ್ಳಿ ಬಿಟಿಎಂ ಲೇಔಟ್, ಬಾಪೂಜಿ ನಗರದಲ್ಲಿ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ತುಂತುರು ಮಳೆ ಹಾಗೂ ಇಬ್ಬನಿ ಜಾಸ್ತಿಯಾಗಿದ್ದರ ಪರಿಣಾಮ ಸರಣಿ ಅಪಘಾತವಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದ್ದು, 7 ಕಾರುಗಳ ಮಧ್ಯೆ ಅಪಘಾತ ನಡೆದಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿ ನಡೆದಿದೆ. ಹೌದು ಯಲಹಂಕ ತೆರಳುವ ಮುಖ್ಯ ರಸ್ತೆಯಲ್ಲಿ ವಾಹನಗಳ ನಡುವೆ ಅಪಘಾತ ನಡೆದಿದ್ದು,7 ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಆದರೆ ಯಾವುದೇ ಹೆಚ್ಚು ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ರಾತ್ರಿ ಸುರಿದ ಮಳೆಯಿಂದ ಕೂಡ ಹಲವಡೆ ಅವಾಂತರ ಸೃಷ್ಟಿಯಾಗಿದೆ.

Read More

ಕೊಪ್ಪಳ : ಈಗಾಗಲೇ ಆಕೆಗೆ ಎರಡು ಹೆಣ್ಣು ಮಕ್ಕಳು ಇದ್ದವು. ಇದೀಗ ಮೂರನೇ ಮಗು ಕೂಡ ಹೆಣ್ಣಾಗಿದ್ದರಿಂದ ಪತಿಯು ಹೆಣ್ಣು ಹೆತ್ತಿದಿಯ ಎಂದು ನಿಂದಿಸಿದ್ದಾನೆ. ಇದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲ್ಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ. ಚಳ್ಳಾರಿಯ ಗಣೇಶ ಗುಮಗೇರಿ ಹಾಗೂ ಹನುಮವ್ವ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈಗಾಗಲೇ ಹನುಮವ್ವಗೆ ಎರಡು ಹೆಣ್ಣು ಮಕ್ಕಳು ಇದ್ದವು. ಕಳೆದ ಕೆಲವು ತಿಂಗಳ ಹಿಂದೆ ಮೂರನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಾರಿಯೂ ಕೂಡ ಹೆಣ್ಣು ಮಗು ಆಗಿದ್ದರಿಂದ ಗಣೇಶ್ ಹಾಗೂ ಹನುಮವ್ವ ನಡುವೆ ಆದಾಗ ಗಲಾಟೆ ಆಗುತ್ತಿತ್ತು ಇದರಿಂದ ಮನನೊಂದು ಹನುಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂರನೇ ಮಗು ಹೆಣ್ಣಾದ ನಂತರ ಅಳಿಯ ಗಣೇಶ ನನ್ನ ಮಗಳಿಗೆ ವಿಪರೀತವಾಗಿ ಕಾಟ ಕೊಟ್ಟಿದ್ದಾನೆ. ಮದ್ಯ ವ್ಯಸನಿಯೂ ಆಗಿದ್ದರಿಂದ ಹೊಡೆದು ಮೂರು ಹೆಣ್ಣು ಹೆತ್ತಿದ್ದೀಯಾ ಎಂದು ನಿಂದಿಸಿದ್ದರಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹನುಮವ್ವ ಅವರ ತಂದೆ ಬಸಪ್ಪ…

Read More

ಕೊಪ್ಪಳ : ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಬುಧವಾರ ಈಜಲು ಹೋದಾಗ ಕಾಲು ಜಾರಿ ಬಿದ್ದ ಇಸ್ರೇಲ್‌ ಪ್ರಜೆಯನ್ನು ಸಹ ಪ್ರವಾಸಿಗರು ರಕ್ಷಿಸಿದ್ದಾರೆ. ಸಾವಿನ ದವಡೆಯಿಂದ ಪಾರಾದ ಇಸ್ರೇಲ್‌ ದೇಶದ ಜೇರುಸೆಲಂನ ಲೇವಿಅಮಿಟ್ ತನ್ನ ಸ್ನೇಹಿತರ ಜೊತೆಗೆ ಹಂಪಿ ಹಾಗೂ ಆನೆಗೊಂದಿ ಭಾಗದಲ್ಲಿ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣದಲ್ಲಿ ಸುತ್ತಾಡಿದ ಬಳಿಕ ಆರಂಭದಲ್ಲಿ ಕೆರೆಯ ದಡದಲ್ಲಿ ಸ್ವಲ್ಪ ನೀರಿದ್ದ ಜಾಗದಲ್ಲಿ ಸ್ನಾನ ಮಾಡುತ್ತಿದ್ದರು. ಪ್ರವಾಸಿ ತಾಣದಲ್ಲಿ ಸುತ್ತಾಡಿದ ಬಳಿಕ ಆರಂಭದಲ್ಲಿ ಕೆರೆಯ ದಡದಲ್ಲಿ ಸ್ವಲ್ಪ ನೀರಿದ್ದ ಜಾಗದಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ಕೆರೆಯ ಆಳಕ್ಕೆ ಹೋಗಿದ್ದಾರೆ. ನೀರಿನಲ್ಲಿ ಮುಳುಗಿ ಏಳುತ್ತಿರುವುದನ್ನು ಗಮನಿಸಿದ ಸಹ ಪ್ರವಾಸಿಗರು ರಕ್ಷಣೆ ಮಾಡಿದರು.

Read More