Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನದ ಮಹಿಳಾ ಅಧಿಕಾರಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಅತ್ಯಂತ ಕೆಟ್ಟ ಪದಗಳಿಂದ ಬೈದು ನಿಂದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿ ಜ್ಯೋತಿ ಅವರು ಶಾಸಕ ಪುತ್ರ ಬಸವೇಶ್ ವಿರುದ್ಧ ದೂರು ನೀಡಿದ್ದಾರೆ. ಹೌದು ಶಾಸಕನ ಪುತ್ರನಿಂದ ಮಹಿಳಾ ಅಧಿಕಾರಿಗೆ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಬಸವೇಶ್ ವಿರುದ್ಧ ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ್ದಾರೆ. ಶಿವಮೊಗ್ಗದ ಎಸ್ಪಿ ಕಚೇರಿಗೆ ಬಂದು ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ್ದಾರೆ. ನಿಂದನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗೆ ದೂರು ಸಲ್ಲಿಸಿದ್ದಾರೆ.ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಜ್ಯೋತಿ ಅವರು ಅಕ್ರಮ ಮರಳು ದಂಧೆ ತಡೆಯಲು ನಿನ್ನೆ ಕಾರ್ಯಾಚರಣೆ ನಡೆಸಲು ತೆರಳಿದ್ದ ವೇಳೆ ಫೋನ್ ಮಾಡಿ ಬಸವೇಶ್ ನಿಂದನೆ ಮಾಡಿದ್ದ. ಘಟನೆ ಹಿನ್ನೆಲೆ?…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿಗೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳು ನಡೆಯುತ್ತಿವೆ. ಇಂದು ಕೂಡ ಭಾವ ಮತ್ತು ಬಾಮೈದನ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಕೋಪಗೊಂಡ ಭಾವ ಬಾಮೈದನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತಮಿಳುನಾಡಿನ ಸೇಲಂ ಮೂಲದ ವೆಂಕಟೇಶ್ ಎಂದು ತಿಳಿದುಬಂದಿದ್ದು, ಇನ್ನು ಹತ್ಯೆಗೈದ ಭಾವನನ್ನು ರಾಮ ಎಂದು ಗುರುತಿಸಲಾಗಿದೆ.ಮೃತ ವೆಂಕಟೇಶ್ ಹಾಗೂ ಬಾವ ರಾಮ ಎಂಬಾತ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ರೋಲ್ಡ್ ಗೋಲ್ಡ್ ಚೈನ್ ಮಾರಾಟ ಮಾಡುತ್ತಿದ್ದರು. ಆದ್ರೆ ಇತ್ತೀಚೆಗೆ ಇಬ್ಬರ ನಡುವೆ ಚಿಕ್ಕ ಪುಟ್ಟ ಗಲಾಟೆಗಳಾಗುತ್ತಿತ್ತು, ಆದರೆ ಸೋಮವಾರ ಮತ್ತೆ ಬಾವ ಹಾಗೂ ಬಾಮೈದನ ನಡುವೆ ಕಿರಿಕ್ ಉಂಟಾಗಿದ್ದು, ಸಿಟ್ಟಿನಲ್ಲಿ ಆರೋಪಿ ರಾಮ ಕೈಗೆ ಸಿಕ್ಕ ಚಾಕುವಿನಲ್ಲಿ ಬಾಮೈದ ವೆಂಕಟೇಶ್ ಗೆ ಇರಿದು ಪರಾರಿ ಆಗಿದ್ದಾನೆ.ತಕ್ಷಣ ಅಲ್ಲಿಯ ಸಮೀಪ ಇದ್ದ ಆಂಬುಲೆನ್ಸ್ ನಲ್ಲಿ ಬ್ಯಾಂಡೇಜ್ ಹಾಕಿ ಏನು ಆಗಲ್ಲ ಎಂದು ಕಳಿಸಿದ್ದಾರೆ.…
ಚಿಕ್ಕಬಳ್ಳಾಪುರ : ಕೋವಿಡ್ ವೇಳೆ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಚೈನ್ನೈ ಮೂಲದ ಮೈಕ್ರೋ ಫೈನಾನ್ಸ್ ಗೆ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಗಂಭೀರವಾದ ಆರೋಪ ಮಾಡಿದರು. ಸುಧಾಕರ್ ಅವರು ಚೆನ್ನೈ ಮೂಲದ ಮೈಕ್ರೋ ಫೈನಾನ್ಸ್ ಗೆ ಹಣ ವರ್ಗಾವಣೆ ಮಾಡಿದ್ದಾರೆ. ಸುಧಾಕರ್ ಗೆ ಚಾಲೆಂಜ್ ಮಾಡುತ್ತೇನೆ. ನಾನಾ ನೀನಾ ನೋಡೇ ಬಿಡೋಣ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಶಾಪವಿದ್ದಂತೆ ಎಂದು ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಡಾ.ಕೆ ಸುಧಾಕರ್ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸಿದ್ದಾರೆ. ಸಂಸದ ಕೆ.ಸುಧಾಕರ್ ಚಾರಿತ್ರ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಗೊತ್ತಾಗಲಿ. ಸುಧಾಕರ್ ರದ್ದು ಹೀನ ಮನಸು, ಅವರು ಸ್ವಂತ ಶಕ್ತಿಯಿಂದ ಸಂಸದರಾಗಿಲ್ಲ. ಮೋದಿ ವರ್ಚಸ್ಸಿನಿಂದ ಮಾತ್ರ ಕೆ.ಸುಧಾಕರ್ ಸಂಸದರಾಗಿದ್ದಾರೆ. ಸುಧಾಕರ್ ಈಗಲಾದರೂ ತನ್ನ ತಪ್ಪು, ದರ್ಬಾರ್, ದಬ್ಬಾಳಿಕೆ ತಿದ್ದಿಕೊಳ್ಳಲಿ ಎಂದು ಅವರು ಆಕ್ರೋಶ ಹೊರಹಾಕಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಯ್ಕೆ ಪ್ರಕ್ರಿಯೆ ಸಮರ್ಪಕವಾಗಿಯೇ ಆಗಿದೆ.…
ಬೆಂಗಳೂರು : ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಅಂತಿಮ ವರದಿ ಸಲ್ಲಿಸಲು ಇದೀಗ ಲೋಕಾಯುಕ್ತ ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಪ್ರಕರಣದ ಕುರಿತು ವಿಚಾರಣೆ ವೇಳೆ ಹೈಕೋರ್ಟಿಗೆ ಸಲ್ಲಿಸಿದ ತನಿಖಾ ವರದಿ ಮರಳಿಸುವಂತೆ ಲೋಕಾಯುಕ್ತ ಪರ ವಕೀಲ ವೆಂಕಟೇಶ ಅರಬಟ್ಟಿ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು. ಹೈಕೋರ್ಟ್ ಗೆ ಸಲ್ಲಿಸಿದ ತನಿಖಾ ವರದಿ ಮರಳಿಸುವಂತೆ ಮನವಿ ಮಾಡಲಾಗಿದ್ದು, ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದ್ದಾರೆ.ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಿಗೆ ಸಲ್ಲಿಸಲಾಗಿತ್ತು. ಈ ವೇಳೆ ತನಿಖಾ ವರದಿ ಯಾರ ಕೈಗೆ ನೀಡಬೇಕೆಂದು ಈ ವೇಳೆ ಹೈಕೋರ್ಟ್ ಪ್ರಶ್ನಿಸಿದೆ. ಹಾಜರಿರುವ ಲೋಕಾಯುಕ್ತ ಇನ್ಸ್ಪೆಕ್ಟರ್ ಗೆ ಮರಳಿಸುವಂತೆ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದರು. ಈ ವೇಳೆ ಭೋಜನ ವಿರಾಮದ ವೇಳೆ ಕಚೇರಿಗೆ ಬಂದು ಪಡೆದುಕೊಳ್ಳಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಸೂಚನೆ ನೀಡಿದರು. ಈ ವೇಳೆ ಕ್ಯಾಪ್ ಹಾಕಿ ಬಂದಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಗೆ ನ್ಯಾಯಾಧೀಶರು…
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಕಳೆದ ವರ್ಷ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪ್ರಕರಣ ವಜಾ ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2024 ಜೂನ್ 24 ರಂದು ಹೈಕೋರ್ಟ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು. ಈ ಒಂದು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ನಟಿ ಸಂಜನಾ ಗಲ್ರಾಣಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಜಾಮೀನಿನ ಮೇಲೆ ನಟಿ ಸಂಜನಾ ಜೈಲಿನಿಂದ ಹೊರಗಡೆ ಬಂದಿದ್ದರು. ಹೀಗಾಗಿ ನಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಿದ್ದಂತೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ…
ಹಾಸನ : ಮನೆ ನಿರ್ಮಾಣಕ್ಕೆ 9 ಲಕ್ಷ ಮಾಡಿದ್ದ ಕುಟುಂಬವೊಂದು ಸಾಲ ಮರುಪಾವತಿ ಮಾಡದಿದ್ದಕ್ಕೆ ಫೈನಾನ್ಸ್ ಸಿಬ್ಬಂದಿಗಳು ಗೃಹ ಪ್ರವೇಶಕ್ಕೂ ಮುನ್ನವೆ ಹೊಸ ಮನೆಗೆ ಬೀಗ ಹಾಕಿರುವ ಅಮಾನವೀಯ ಘಟನೆ ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದಲ್ಲಿ ಮಂಜೇಗೌಡ ಎನ್ನುವವರು ಆಧಾರ್ ಹೌಸಿಂಗ್ ಫೈನಾನ್ಸ್ ನಿಂದ ಸಾಲ ಪಡೆದಿದ್ದರು. ಶಾಲಾ ಮರುಪಾವತಿ ಮಾಡದಿದ್ದಕ್ಕೆ ಫೈನಾನ್ಸ್ ಸಿಬ್ಬಂದಿಗಳು ಗೃಹಪ್ರವೇಶಕ್ಕೂ ಮುನ್ನವೆ ಬೀಗ ಹಾಕಿದ್ದಾರೆ. ಕಳೆದ ಆರು ತಿಂಗಳ ಹಿಂದೆಯೇ ಮನೆಗೆ ಬೀಗ ಹಾಕಿರುವ ಆರೋಪ ಇದೀಗ ಕೇಳಿ ಬರುತ್ತಿದೆ. ಸದ್ಯ ಮನೆ ಇಲ್ಲದೆ ಕುಟುಂಬಸ್ಥರು ದನದ ಕೊಟ್ಟಿಗೆಯಲ್ಲಿ ಜೀವಿಸುತ್ತಿದ್ದಾರೆ. ಗೃಹ ಪ್ರವೇಶಕ್ಕೂ ಮುನ್ನವೇ ಮನೆಗೆ ಬೀಗ ಹಾಕಿ ಸಿಬ್ಬಂದಿ ದೌರ್ಜನ್ಯ ಎಸಗಿದ್ದಾರೆ. ಮನೆ ನಿರ್ಮಾಣದ ವೇಳೆ ಮಗನಿಗೆ ಅಪಘಾತವಾಗಿ ಕುಟುಂಬಸ್ಥರಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಹೀಗಾಗಿ ಸಾಲ ಕಟ್ಟಲಾಗದೆ ಕುಟುಂಬ ತೀವ್ರ ತೊಂದರೆ ಅನುಭವಿಸಿತ್ತು. ಕರುಣೆತೋರದೆ ಫೈನಾನ್ಸ್ ಸಿಬ್ಬಂದಿ ಇದೀಗ ಮನೆಗೆ ಬೀಗ…
ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿಗೆ ವಂಚಸಿದ ಐವರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಿಯಾದತ್ ಉಲ್ಲಾ, ಪ್ರತೀಕ್, ಉಮೇಶ್, ಸುಕ್ರೀತ್ ಹಾಗೂ ಜಾಕೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇನ್ನುಳಿದ ಇಬ್ಬರ ಬಂಧನಕ್ಕೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಈ ಐವರು ಉದ್ಯಮಿಯೊಬ್ಬರಿಗೆ 37 ಲಕ್ಷ ರೂಪಾಯಿ ವಂಚನೆ ಎಸಗಿರುವ ಕುರಿತು ದೂರು ದಾಖಲಾಗಿತ್ತು. ಅಮೂಲ್ಯ ಲೋಹ ಅಮೆರಿಕದ ಕಂಪನಿಗೆ ಮಾರಾಟ ಮಾಡಲಾಗಿದೆ. ಇದಕ್ಕೆ ಅಮೆರಿಕಾದಿಂದ ಒಟ್ಟು 15 ಲಕ್ಷ ಕೋಟಿ ಫೈಲ್ ಬಾಕಿ ಇದೆ ಅದಕ್ಕೆ ತೆರಿಗೆ ಹಣವನ್ನು ಕಟ್ಟಿ ಬಿಡಿಸಬೇಕಿದೆ ಎಂದು ಆರೋಪಿಗಳು ಉದ್ಯಮಿಗೆ ತಿಳಿಸಿದ್ದಾರೆ. ಇದಕ್ಕೆ ಸಹಾಯ ಮಾಡಿ 5% ನೀಡುವುದಾಗಿ ಈ ಒಂದು ಖರೀಮರ ಗ್ಯಾಂಗ್ ಉದ್ಯಮಿಗೆ ನಂಬಿಸಿತ್ತು. ಆರ್ಬಿಐ ಕೇಂದ್ರ ಸರ್ಕಾರ ಲ್ಯಾಬ್ ರಿಪೋರ್ಟ್ ಸಹ ಮಾಡಿಸಿಕೊಂಡಿದ್ದರು.ಇದೀಗ ಈ ಒಂದು ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಐವರನ್ನು ಅರೆಸ್ಟ್ ಮಾಡಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು, ದೇವಸ್ಥಾನ ಒಂದರ ಮುಂಭಾಗದಲ್ಲೆ ವ್ಯಕ್ತಿ ಒಬ್ಬರ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದ ವ್ಯಕ್ತಿಯನ್ನು ಅದೇ ಗ್ರಾಮದ ಕೃಷ್ಣೆಗೌಡ (46) ಎಂದು ತಿಳಿದುಬಂದಿದೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಬೆಳ್ಳಂ ಬೆಳಗ್ಗೆ ಚಾಕುವಿನಿಂದ ಇರಿದು ಕೃಷ್ಣೆಗೌಡನ ಕತ್ತು ಸೀಳಿದ್ದು, ಗ್ರಾಮದ ಮದನಹಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲೆ ಈ ಒಂದು ಕೃತ್ಯ ನಡೆದಿದೆ. ಆದರೆ ಹತ್ಯೆಗೆ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಹತ್ಯೆಗೈದ ಬಳಿಕ ಹಂತಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಕೆಎಂ ದೊಡ್ಡಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ. ಇನ್ನು ಮುಂದಾದರು ಖಡಕ್ ಆಗಿ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುಂಡ ಮುಸ್ಲಿಮರು ನಿನ್ನೆ ಆಕ್ರಮಣ ಮಾಡಿದ್ದಾರೆ. ಪೊಲೀಸರನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಟಿಪ್ಪು ಸಂತತಿಯವರು ಮಾಡಿರುವ ಗಲಾಟೆ ಇದು. ಸಿಎಂ ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು. ಪೊಲೀಸರು ಸರ್ಕಾರದ ಹಣತೆ ನಡೆಯುವುದನ್ನು ಬಿಡಬೇಕು. ಪುಂಡ ಮುಸ್ಲಿಮರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಕ್ಕೆ ಈ ರೀತಿ ಗಲಾಟೆ ಆಗಿದೆ. ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಮರಿಗೆ ಯಾಕೆ ರೋಷ ಬರುತ್ತದೆ? ಕೇಜ್ರಿವಾಲ್ ಸೋತರೆ ಅವರ ಮನೆಯಲ್ಲಿ ಏಕೆ ಸೂತಕ ಬರುತ್ತದೆ? ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು…
ಮೈಸೂರು : ರೈಲು ಚಲಿಸುತ್ತಿರುವಾಗಲೇ ಪ್ರಯಾಣಿಕರಿಗೆ ಚಾಕು ತೋರಿಸಿ ಐವರು ದರೋಡೆಕೋರರು ದರೋಡೆ ಮಾಡಿರುವ ಘಟನೆ ಮೈಸೂರು ಬೆಂಗಳೂರು ರೈಲಿನಲ್ಲಿ ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿದೆ. ಮೈಸೂರಿನಲ್ಲಿ ರೈಲು ಹತ್ತಿದ ಐವರು ದರೋಡೆಕೋರರಿಂದ ಈ ಒಂದು ಕೃತ್ಯ ನಡೆದಿದ್ದು, ಪ್ರಯಾಣಿಕರಿಗೆ ಚಾಕು ತೋರಿಸಿ ಹಣ ಮೊಬೈಲ್ ಗಳನ್ನು ದರೋಡೆ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೂಡಲೇ ಪೊಲೀಸರು ಚನ್ನಪಟ್ಟಣ ಬಳಿ ರೈಲು ಹತ್ತಿದ್ದಾರೆ. ಪೊಲೀಸರು ಬಂದ ಮಾಹಿತಿ ತಿಳಿದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕೂಡಲೇ ಚಲಿಸುತ್ತಿದ್ದ ರೈಲಿನಿಂದಲೇ ದರೋಡೆಕೋರರು ಜಿಗಿದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಮೈಸೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












