Author: kannadanewsnow05

ಉತ್ತರಪ್ರದೇಶ : ನಾವು ಗ್ಯಾಸ್ ಹಾಗೂ ಗೀಸರ್ ಸ್ಫೋಟವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಉತ್ತರಪ್ರದೇಶದಲ್ಲಿ ಟಾಯ್ಲೆಟ್ ಸೀಟ್ ಸ್ಪೋಟ ವಾಗಿ ಶೌಚಾಲಯಕ್ಕೆ ತೆರಳಿದ್ದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಕೊಟ್ಟಾಲಿ ಪ್ರದೇಶದಲ್ಲಿ ನಡೆದಿದೆ. ಹೌದು ಶೌಚಾಲಯದ ವೆಸ್ಟರ್ನ್ ಟಾಯ್ಲೆಟ್ ಸೀಟ್ ಸ್ಫೋಟಗೊಂಡು 20 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ. ಮನೆಯ ಮಾಲೀಕ ಸುನಿಲ್ ಪ್ರಧಾನ್ ಅವರ 20 ವರ್ಷದ ಮಗ ಆಶು ನಗರ್ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೌಚಾಲಯದಲ್ಲಿದ್ದರು. ಮಲವಿಸರ್ಜನೆಯ ನಂತರ ಫ್ಲಶ್ ಮಾಡಿದರು. ಈ ವೇಳೆ ವೆಸ್ಟರ್ನ್ ಟಾಯ್ಲೆಟ್ ಸೀಟ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತು. ಈ ಸ್ಫೋಟದಿಂದ ಆಶು ಅವರ ಮುಖ, ಕೈಗಳು, ಕಾಲುಗಳು ಮತ್ತು ಖಾಸಗಿ ಭಾಗಗಳು ಸುಟ್ಟುಹೋಗಿವೆ.ಸ್ಫೋಟದ ಶಬ್ದ ಕೇಳಿ ಕುಟುಂಬ ಸದಸ್ಯರು ಶೌಚಾಲಯಕ್ಕೆ ಧಾವಿಸಿದರು. ಆಶು ಅವರನ್ನು ಬೆಂಕಿಯಿಂದ ರಕ್ಷಿಸಿ, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಗ್ರೇಟರ್ ನೋಯ್ಡಾದ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಶು…

Read More

ಹೈದ್ರಾಬಾದ್ : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ಹೈದ್ರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಹೌದು ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಯಡಿಯೂರಪ್ಪ ಆಡಳಿತದಲ್ಲಿ ಈ ಒಂದು ಅಕ್ರಮ ಗಣಿಗಾರಿಕೆ ನಡೆದಿತ್ತು. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ಇದಾಗಿದ್ದು,…

Read More

ನವದೆಹಲಿ : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಹೌದು ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಪ್ರಕರಣ ಹಿನ್ನೆಲೆ? 2009 ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಸಿಬಿಐ 2011 ರಲ್ಲಿ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತು, ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ…

Read More

ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ ಪ್ರಜೆಗಳಿಗೆ ಭಾರತ ಬಿಟ್ಟು ತೊಲಗಿ ಎಂದು ಆದೇಶ ನೀಡಲಾಗಿತ್ತು. ಇದೆ ವಿಚಾರಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಮೂವರು ಪಾಕಿಸ್ತಾನಿ ಮಕ್ಕಳಿಂದ ಇದೀಗ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪಾಕಿಸ್ತಾನಿ ತಂದೆಮೈಸೂರು ತಾಯಿಗೆ ಮೂವರು ಮಕ್ಕಳು ಜನಿಸಿದ್ದಾರೆ. ಬೀಬಿ ಯಮೀನಾ, ಮೊಹಮ್ಮದ್ ಮುದಸ್ಸಿರ್ ಹಾಗು ಮೊಹಮ್ಮದ್ ಯೂಸುಫ್ ಎಂಬ ಮಕ್ಕಳ ಪರವಾಗಿ ತಾಯಿ ರಾಂಷಾ ಜಹಾನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಕ್ಕಳ ಪರವಾಗಿ ತಾಯಿ ಮೈಸೂರಿನ ರಾಂಷಾ ಜಹಾನ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ಕುರಿತಂತೆ ಕೇಂದ್ರಕ್ಕೆ ನೋಟಿಸ್ ಮತ್ತು ವಿಚಾರಣೆ ಮೇ 8 ರಂದು ಹೈಕೋರ್ಟ್ ನಿಗದಿಪಡಿಸಿತು. ಪಾಕಿಸ್ತಾನದ ಮೊಹಮ್ಮದ್ ಫಾರೂಕ್ ಎಂಬಾತನೊಂದಿಗೆ ರಾಂಷ ಜಹಾನ್ ಮದುವೆಯಾಗಿದ್ದಾರೆ. 2015 ಸೆಪ್ಟೆಂಬರ್ 9 ರಲ್ಲಿ ಪಾಕಿಸ್ತಾನದ ಪಿಶಿನ್ ಎಂಬಲ್ಲಿ ಷರಿಯತ್ ನಂತೆ ವಿವಾಹವಾಗಿದ್ದಾರೆ. ಪಾಕಿಸ್ತಾನದ ಮಕ್ಕಳಿಗೆ ಪಾಕಿಸ್ತಾನಿ ಪೌರತ್ವ ನೀಡಲಾಗಿದ್ದು, ಆದರೆ ತಾಯಿ ರಾಂಷಾ ಜಹಾನ್ ಪಾಕಿಸ್ತಾನಿ ಪೌರತ್ವವನ್ನು ಪಡೆದಿರಲಿಲ್ಲ. 2025…

Read More

ಜಾರ್ಖಂಡ್ : ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿದಂತೆ ಒಟ್ಟು 26 ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಹಲ್ಗಾಮ್ ದಾಳಿಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೊದಲೇ ತಿಳಿದಿತ್ತು ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. ಜಾರ್ಖಂಡ್ ನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಉಗ್ರರ ದಾಳಿಯ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು. ಮೋದಿ ಪ್ರವಾಸದ ವೇಳೆ ಉಗ್ರರ ದಾಳಿಯ ಬಗ್ಗೆ ಎಚ್ಚರಿಕೆ ಕೊಡಲಾಗಿತ್ತು. ಮೂರು ದಿನದ ಮೊದಲೇ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು. ಏಪ್ರಿಲ್ 19 ರಂದು ಮೋದಿ ಪ್ರವಾಸ ರದ್ದು ಮಾಡಿದ್ದರು ಬಳಿಕ 22ರಂದು ಪಹಲ್ಗಾಮ್ ನಲ್ಲಿ ಉಗ್ರರಿಂದ ದಾಳಿ ನಡೆದಿದೆ. ಪಹಲ್ಗಾಮ್ ಗುಂಡಿನ ದಾಳಿಯಲ್ಲಿ 26 ಅಮಾಯಕ ರನ್ನು ಉಗ್ರರು ಕೊಂದರು. ದಾಳಿಯ ಬಗ್ಗೆ ಮೋದಿಗೆ ಮೊದಲೇ ಗೊತ್ತಿದ್ದರೂ ಭದ್ರತೆ ಯಾಕೆ ಹೆಚ್ಚಿಸಿಲ್ಲ? ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ಒಂದು ದಾಳಿ…

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು. ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು…

Read More

ಬೆಂಗಳೂರು : ಕಲಬುರ್ಗಿಯ ಮಹದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸ್ಟೈಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ವೇಳೆ 81.21 ಕೋಟಿ ರೂ. ದುರುಪಯೋಗಪಡಿಸಿಕೊಂಡಿದ್ದು ಸಾಬೀತಾಗಿದೆ. ಹೌದು ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕಲಬುರಗಿಯ 7 ಕಡೆ ದಾಳಿ ನಡೆಸಿದ್ದರು. ಹೆಚ್​ಕೆಇ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್ಗುಂಡಿ, ಎಮ್​ಆರ್​ಎಮ್​ಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಎಸ್ ಎಂ ಪಟೇಲ್, ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಇದೀಗ ಕಲಬುರ್ಗಿಯ HKE ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗು ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ, ಎಸ್ ಎಂ ಪಾಟೀಲ್, ಸುಭಾಷ್ ಜಗನ್ನಾಥ್ ಅವರು 282 ಪಿಜಿ ವಿದ್ಯಾರ್ಥಿಗಳ 81.21 ಕೋಟಿ ರೂ. ಹಣವನ್ನು ದುರುಪಯೋಗ ಪಡಿಸಕೊಂಡಿರುವುದು ಇಡಿ ತನಿಖೆ ವೇಳೆ ತಿಳಿದುಬಂದಿದೆ. ಕಳೆದ 2018 ರಿಂದ 2024 ರ ವರೆಗೆ ಹೈದರಾಬಾದ್ ಶಿಕ್ಷಣ ಸಂಸ್ಥೆಯ ಎರಡು ಅವಧಿಗೆ ಅಧ್ಯಕ್ಷರಾಗಿದ್ದ ಭೀಮಾಶಂಕರ್ ಬಿಲಗುಂದಿ…

Read More

ಶಿವಮೊಗ್ಗ : ಇತ್ತೀಚ್ಚಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕೇಶವಪುರ ಬಡಾವಣೆಯ ಅರುಣ್ (23) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ, ಸಂಜಯ್(20) ಎಂಬಾತ ಗಾಯಗೊಂಡಿದ್ದಾನೆ. ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ, ಅರುಣ್ ಎಂಬಾತನಿಗೆ ಲಾಂಗ್​ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ವಿಷಯ ತಿಳಿಯುತ್ತಿದ್ದಂತೆ, ಹೊಸಮನೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್…

Read More

ಗದಗ : ಇತ್ತೀಚಿಗೆ ಕೋಡಿ ಮಠದ ಶ್ರೀಗಳು ರಾಜ್ಯ ರಾಜಕಾರಣದ ಬಗ್ಗೆ ಸ್ಪೋಟಕವಾದ ಭವಿಷ್ಯ ನುಡಿದಿದ್ದರು. ಮುಂದಿನ ಸಂಕ್ರಾಂತಿಯವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ನೊಣವಿನಕೆರೆ ಶ್ರೀಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಅವರಿಂದಲೇ ಲಕ್ಷ್ಮೀಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪಿಸುವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯರ ಸ್ವಾಮೀಜಿ ಹೇಳಿದರು. ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೇಳಿದ್ದನ್ನೇ ಮತ್ತೊಮ್ಮೆ ಹೇಳಿರುವೆ. ಲಿಂ. ವೀರಗಂಗಾಧರ ಜಗದ್ಗುರು ಮೇಲೆ ಅಪಾರ ಭಕ್ತಿ ನಂಬಿಕೆ ಹೊಂದಿರುವ ಶಿವಕುಮಾ‌ರ್ ಅವರು ನನೆಗುದಿಗೆ ಬಿದ್ದಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಬೇಕಾದ ಕೋಟ್ಯಂತರ ರೂಪಾಯಿ ಅನುದಾನ ಕಲ್ಪಿಸಿದ್ದಾರೆ. ಆದಷ್ಟು ಬೇಗ ಶಿವಕುಮಾರ ಮುಖ್ಯಮಂತ್ರಿ ಆಗುವರು ಎಂದು ಅವರು ಹೇಳಿದರು. ಈ…

Read More

ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ್ಧು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಷಮಿಸು ಕರ್ನಾಟಕ ಎಂದು ಪೋಸ್ಟ್ ಹಾಕಿದ್ದಾರೆ ಕೊನೆಗೂ ಕನ್ನಡಿಗರಿಗೆ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಹೌದು ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದರು ಈ ವಿಚಾರವಾಗಿ ಸೋನು ನಿಗಮ್ ಇದೀಗ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಸೋನು ನಿಗಮ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ ಎಂದು ಬರೆದುಕೊಂಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಲ್ಲಿ ಇಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ಸಭೆ ನಡೆಸಿತ್ತು. ಈ ಒಂದು ಸಭೆಯಲ್ಲಿ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ಬ್ಯಾನ್ ಮಾಡಿ ನಿರ್ಧರಿಸಲಾಗಿತ್ತು. ಕರ್ನಾಟಕದ ಯಾವುದೇ ಕಾರ್ಯಕ್ರಮಗಳಿಗೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ. ಹಾಗೂ ಅವರ ಜೊತೆಗೆ ಯಾರು ಯಾವುದೇ ಚಟುವಟಿಕೆ…

Read More