Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ತೇವಾಂಶದ ಕೊರತೆಯಾಗಿರುವದರಿಂದ ಹಾಗೂ ಒಣಬೇರು ಕೊಳೆ ರೋಗ ಹಾಗೂ ಮಚ್ಚೆರೋಗ ಕಂಡು ಬಂದಿರುವದರಿಂದ ತೊಗರಿ ಬೆಳೆ ಒಣಗಲಾರಂಭಿಸಿದ್ದು ರೈತರು ಮುಂಜಾಗರೂಕತೆ ಕ್ರಮಗಳನ್ನು ಅನುಸರಿಸಬೇಕೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರೈತರಲ್ಲಿ ಮನವಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ವಾಡಿಕೆ ಮಳೆ 17.4 ಮಿ.ಮಿ ಆಗಿದ್ದು 5.6 ಮಿ.ಮಿ ಕಡಿಮೆ ಮಳೆಯಾಗಿರುತ್ತದೆ. ಇದರಿಂದ ಕಡಿಮೆ ಆಳ ಮತ್ತು ಮಧ್ಯಮ ಆಳದ ಭೂಮಿಯಲ್ಲಿ ತೇವಾಂಶದ ಕೊರತೆ ಕಂಡು ಬಂದಿರುತ್ತದೆ. ಬಿತ್ತನೆಯಾದ ತೊಗರಿ ಬೆಳೆಯಲ್ಲಿ ತೇವಾಂಶದ ಬಾಧೆಗೆ ಮ್ಯಾಕ್ರೋಫೋಮಿನಾ ಫೆಜಿಯೊಲ್ಕೆ ಶೀಲಿಂದ್ರದಿಂದ ಬರುವ ಒಣ ಬೇರು ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಂಡಿರುತ್ತದೆ. ಅದರೊಂದಿಗೆ ಫೈಟೊಪ್ಲೋರಾ ಮಚ್ಚೆ ರೋಗವು ಅಲ್ಲಲ್ಲಿ ಉಲ್ಬಣಿಸಿರುವುದು ಕಂಡು ಬಂದಿರುವುದರಿಂದ ತೊಗರಿ ಒಣಗಲಾರಂಬಿಸಿರುತ್ತದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ. ಈ ಸಂಬಂಧದಲ್ಲಿ ಕೃಷಿ ಇಲಾಖೆ ನೀಡಿರುವ…
ಬೀದರ್ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೀರ್ಗಾ (ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಔರಾದ್ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ದಿಕ್ಕಿಯ ರಭಸಕ್ಕೆ ವಿದ್ಯಾರ್ಥಿಯು 10 ಅಡಿ ಹಾರಿ ಬಿದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಖಂಡಿಸಿ ಗ್ರಾಮಸ್ಥರು ದಿಢೀರ್ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಯೋಜನೆಗಳನ್ನು ನಿಲ್ಲಿಸಿದರೆ ಅಭಿವೃದ್ಧಿಗಾಗಿ ಅನುದಾನಕ್ಕಾಗಿ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಕವಿಯಪ್ಪ ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಸಕ ಗವಿಯಪ್ಪ ಗೆ ಶೋಕಾಸ್ ನೋಟಿಸ್ ನೀಡುತ್ತೇನೆ. ಕಾಂಗ್ರೆಸ್ಸಿನ ಯಾವುದೇ ಶಾಸಕರು ಗ್ಯಾರೆಂಟಿ ಯೋಜನೆ ಕುರಿತು ಮಾತನಾಡಬಾರದು ಎಂದು ತಾಕೀತು ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತಂತೆ ಅಪಸ್ವರ ಎತ್ತಿರುವ ಕಾಂಗ್ರೆಸ್ ಶಾಸಕ ಗವಿಯಪ್ಪಗೆ ಶೋಕಾಸ್ ನೋಟಿಸ್ ಕೊಡುತ್ತೇನೆ. ಕಾಂಗ್ರೆಸ್ಸಿನ ಯಾವ ಶಾಸಕರು ಗ್ಯಾರಂಟಿ ಯೋಜನೆ ಕುರಿತು ಮಾತನಾಡಬಾರದು. ಅದೆಷ್ಟೇ ಖರ್ಚಾಗಲಿ ಗ್ಯಾರಂಟಿ ಯೋಜನೆಗಳನ್ನು ನಾವು ಜನರಿಗಾಗಿ ಜಾರಿಗೊಳಿಸಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು : ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದಿದ್ದೀರಿ ಎಂದು ಸಂಭ್ರಮ ಪಡುತ್ತಿದ್ದೀರಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ರೈತರಿಗೆ ತೊಂದರೆ ಕೊಟ್ಟರೆ ರಸ್ತೆಯಲ್ಲಿ ಓಡಾಡದಂತೆ ಹೋರಾಟ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕುರಿತು ಶಾಸಕ ಗವಿಯಪ್ಪ ಅಪಸ್ವರದ ವಿಚಾರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ನಾಟಕ ಮಾಡುತ್ತಿದ್ದಾರೆ. ಕೊಟ್ಟಿರುವ ಭರವಸೆ ಈಡೇರಿಸಲು ಆಗುತ್ತಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಇವರ ಯೋಗ್ಯತೆಗೆ ಸರ್ಕಾರ ಬಂದಾಗಿನಿಂದ ಹೊಸ ಯೋಜನೆ ಕೊಟ್ಟಿಲ್ಲ. ಮೂರೂ ಕ್ಷೇತ್ರಗಳ ಉಪಚುನಾವಣೆ ಗೆದ್ದಿದ್ದಾರೆ ಸಂತಸ ಪಡಲಿ, ಸಂಭ್ರಮ ಮಾಡಲಿ. ಸಂಭ್ರಮದಲ್ಲಿ ರೈತರಿಗೆ ತೊಂದರೆ ಕೊಟ್ಟರೆ ಬೀದಿಗೆ ಇಳಿಯುತ್ತೇವೆ. ಎಂದು ಎಚ್ಚರಿಕೆ ನೀಡಿದರು. ಸಿಎಂ ಹಾಗೂ ಸಚಿವರು ಬೀದಿಯಲ್ಲಿ ಓಡಾಡಲು ಸಾಧ್ಯವಾಗುವುದಿಲ್ಲ ಆ ರೀತಿ ನಾವು ಹೋರಾಟ ರೂಪಿಸುತ್ತೇವೆ ಬಡವರಿಗೆ ಮೀಸಲಿಟ್ಟ ಸೈಟ್ಗಳನ್ನು…
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರಿಗಾಗಿ ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಅದೇ ರೀತಿಯಾಗಿ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಚಿವ ಸಂಪುಟದ ಪುನರ್ ರಚನೆ…
ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದರು. ಈ ಒಂದು ಆರೋಪದ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ಗಂಗರಾಜುಗೆ ನೋಟಿಸಿ ನೀಡಿದ್ದಾರೆ. ಹೌದು ಮುಡಾದಲ್ಲಿ ಸೈಟ್ ಹಂಚಿಕೆ ವಿಚಾರವಾಗಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ಆರೋಪಿಸಿದ್ದರು. ಹಾಗಾಗಿ ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ನೋಟಿಸ್ ನೀಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿಂದೆ ಅಕ್ಟೋಬರ್ 28 ರಂದು ಇಡಿ ಕಚೇರಿಗೆ ಗಂಗರಾಜು ವಿಚಾರಣೆಗೆ ತೆರಳಿದ್ದರು.ಇಂದು ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಸುಳಿವು ನೀಡಿದ್ದಾರೆ. ಪರೋಕ್ಷವಾಗಿ ಸಚಿವ ಸಂಪುಟದ ಪುನರ್ ರಚನೆ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಾಗೆ ಯಾರೂ ಕೂಡ ತಮ್ಮ ಹುದ್ದೆಯನ್ನು ತ್ಯಾಗ ಮಾಡುವುದಿಲ್ಲ. ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ. ಎರಡು ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ಹೇಳಿದ್ದೇವೆ. ಪರೋಕ್ಷವಾಗಿ ಸಂಪುಟ ಪುನಾರಚನೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸುಳಿವು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ…
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ, 5 ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬಗ್ಗೆ ಶಾಸಕ ಗವಿಯಪ್ಪ ಅಪಸ್ವರ ಎತ್ತುತ್ತಿರುವ ವಿಚಾರವಾಗಿ, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಚಿತ್ರದುರ್ಗದ ರೇಣುಕಾಶ್ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ದರ್ಶನ್ ಅವರು ಬೆನ್ನುನೋವಿನ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದು ವಿಚಾರಣೆ ನಡೆಸಿದ ನ್ಯಾ.ಎಸ್ ವಿಶ್ವಜಿತ್ ಅವರಿದ್ದ ಹೈಕೋರ್ಟ್ ಪೀಠವು ಜಾಮೀನು ಅರ್ಜಿ ವಿಚಾರಣೆ ಸಂಜೆ 4 ಗಂಟೆಗೆ ಮುಂದೂಡಿದರು. ವಿಚಾರಣೆ ವೇಳೆ ಹೈ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದರು. ಈ ವೇಳೆ ರೇಣುಕಾ ಸ್ವಾಮಿಯನ್ನು ಅಪಹರಿಸಿದ ದಿನದಿಂದ, ಕೊಲೆಯಾದ ಬಳಿಕ ಆರೋಪಿಗಳು ಶವ ಸ್ಥಳಾಂತರಿಸಿದರ ಬಗ್ಗೆ ಹಾಗೂ ದರ್ಶನ್ ಪಾತ್ರ ಇದರಲ್ಲಿ ಇಲ್ಲ ಎನ್ನುವುದರ ಕುರಿತಂತೆ ಸಿವಿ ನಾಗೇಶ್ ಅವರು ನ್ಯಾಯಾಧೀಶರಿಗೆ ಎಲ್ಲ ವಿಚಾರವನ್ನು ಮನವರಿಕೆ ಮಾಡಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆ ಸಂಜೆ 4 ಗಂಟೆಗೆ ಮುಂದೂಡಿದರು. ದರ್ಶನ್ ಪಾತ್ರ ಸಾಬೀತುಪಡಿಸುವ ಮತ್ತಷ್ಟು…
ಬೆಂಗಳೂರು : ಬೆಂಗಳೂರಲ್ಲಿ ಇಂದು ಮತ್ತೊಂದು ಭೀಕರವಾದಂತಹ ಕೊಲೆ ನಡೆದಿದ್ದು, ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾನಗರ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಯುವತಿಯ ಕೊಲೆಗೆ ಇದುವರೆಗೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಇಂದಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














