Author: kannadanewsnow05

ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎತ್ತಿನ ಬಂಡಿಗೆ ಬೈಕ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಭೀಕರ ಅಪಘಾತ ಸಂಭವಿಸಿದೆ  ಶಶಿಕುಮಾರ್ (25) ಆಕಾಶ್ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು, ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಇನ್ನು ಶಶಿಕುಮಾರ್ ಹನುಮನಟ್ಟಿ ಹೋಟೆಲ್ ಅಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ರಾಜ್ಯದಲ್ಲಿ ಇತ್ತೀಚಿಗೆ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಚಾಕ್ಲೆಟ್ ಆಸೆ ತೋರಿಸಿ 11 ವರ್ಷದ ಬಾಳಿಕೆಯ ಮೇಲೆ ಅತ್ಯಾಚಾರ ಎಸಗಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಶಾಲೆಗೆ ಹೋಗಿದ್ದ ಬಾಲಕಿಯನ್ನು ಊಟದ ಬಿಡುವಿನ ವೇಳೆ ಚಾಕೊಲೇಟ್​ ಕೊಡಿಸುವುದಾಗಿ ಚಂದ್ರಶೇಖರ್ ಎಂಬ ವ್ಯಕ್ತಿ ಆಮಿಷವೊಡ್ಡಿ, ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.ಘಟನೆ ನಡೆದ ಬಳಿಕ ಸ್ಥಳೀಯರು ಕೊಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಚಂದ್ರಶೇಖರರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ತಿಳಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಬಳಿಕ ಪಲ್ಟಿಯಾಗಿ ಬಸ್ ನಲ್ಲಿದ್ದ 17 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು KSRTC ಬಸ್ ಪಲ್ಟಿಯಾಗಿ 17 ಜನರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಈ ಒಂದು ಘಟನೆ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಕೂಡಲೇ ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಪ್ರಕರಣಗಳು ಕಂಡುಬರುತ್ತಿವೆ. ಇದೀಗ ಕೋಲಾರದಲ್ಲಿ ವೃದ್ದೆಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಹೌದು ಬೀದಿ ನಾಯಿಗಳ ದಾಳಿಯಿಂದ ವೃದ್ಧೆ ಲಕ್ಷಮ್ಮಗೆ ಗಂಭೀರವಾಗಿ ಗಾಯಗಳಾಗಿವೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಹಾಲಕ್ಷ್ಮಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ವೃದ್ದೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸಪುರ ಪುರಸಭೆ ನಿರ್ಲಕ್ಷಕ್ಕೆ ಇದೀಗ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

Read More

ಬೆಳಗಾವಿ : ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಇಬ್ಬರು ಬಿಜೆಪಿ ಸದಸ್ಯರು ಸದಸ್ಯತ್ವ ರದ್ದುಗೊಳಿಸಲಾಗಿದೆ.ಬಿಜೆಪಿ ಶಾಸಕ‌ ಅಭಯ ಪಾಟೀಲ್ ಆಪ್ತ ಸದಸ್ಯರ ಸದಸ್ಯತ್ವ ರದ್ದು ಮಾಡಲಾಗಿದೆ. ಸದಸ್ಯತ್ವ ರದ್ದು ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ. ಹೌದು ಇಬ್ಬರು ಬಿಜೆಪಿ ಸದಸ್ಯತ್ವವನ್ನು ರದ್ದು ಪಡಿಸಿದ್ದು, ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಾರ್ಡ್‌ ನಂಬರ್‌ 41 ರ ಸದಸ್ಯ ಮಂಗೇಶ್ ಪವಾರ್, ವಾರ್ಡ್ ನಂಬರ್‌ 23ರ ಸದಸ್ಯ ಜಯಂತ್ ಜಾಧವ ಸದಸ್ಯತ್ವ ರದ್ದಾಗಿದೆ. ಲೋಕೋಪಯೋಗಿ ಇಲಾಖೆಯ ತಿನಿಸುಕಟ್ಟೆಯಲ್ಲಿ ಪತ್ನಿಯರ ಹೆಸರಿನಲ್ಲಿ ಬಿಜೆಪಿ ಸದಸ್ಯರು ಮಳಿಗೆ ಪಡೆದಿದ್ದರು. ಪತ್ನಿ ನೀತಾ ಹೆಸರಿನಲ್ಲಿ ಮಂಗೇಶ್ ಪವಾರ, ಪತ್ನಿ ಸೋನಾಲಿ ಹೆಸರಿನಲ್ಲಿ ಜಯಂತ್ ಜಾಧವ ಮಳಿಗೆ ಪಡೆದಿದ್ದರು. ತಮ್ಮ ಪ್ರಭಾವ ಬೀರಿ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂದು ಸುಜೀತ್ ಮುಳಗುಂದ ದೂರು ನೀಡಿದ್ದರು. ಈ ದೂರು ಆಧರಿಸಿ ಸುದೀರ್ಘ ವಿಚಾರಣೆ ನಡೆಸಿ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು…

Read More

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಮತ್ತು ದೇಹ ಒಂದನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ನಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆತಕ್ಷಣ ಬೆಂಕಿಯ ಕೆನಾಲಿಗೆ ಇಡಿ ಆಂಬುಲೆನ್ಸ್ ಆವರಿಸಿದ್ದು ಅದೃಷ್ಟವಶಾತ್ ಅಂಬುಲೆನ್ಸ್ ಚಾಲಕ ಸೇರಿ ನಾಲ್ವರು ಬಚಾವ್ ಆಗಿರುವ ಘಟನೆ ನಡೆದಿದೆ. ಹೌದು ಮೃತದೇಹ ಸಾಗಿಸುತ್ತಿರುವಾಗ ಚಲಿಸುತ್ತಿರುವಾಗಲೇ ಅಂಬುಲೆನ್ಸ್ ಒಂದು ಘಟನೆ ರಾಯಚೂರು ನಗರದ ಆಶಾಪುರ ಮಾರ್ಗದಲ್ಲಿ ಈ ಒಂದು ಘಟನೆ ಸಂಭವಿಸಿದೆ. ರಾಯಚೂರು ನಿಂದ ಆಶಾಪುರಕ್ಕೆ ಆಂಬುಲೆನ್ಸ್ ತೆರಳುತ್ತಿತ್ತು. ಅಂಹುಲೆನ್ಸ್ ನಲ್ಲಿದ್ದ ಚಾಲಕ ಸೇರಿ ನಾಲ್ವರು ಅದೃಷ್ಟವಶಾತ್ ಪಾರಾಗಿದ್ದಾರೆ. ಆಂಬುಲೆನ್ಸ್ ನ ಇಂಜಿನ್ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.

Read More

ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕಲ್ಬುರ್ಗಿಯ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೀರನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಚಿಂಚೋಳಿ ತಾಲೂಕಿನ ಶಾಲೆ ಬೀರನಹಳ್ಳಿ ಗ್ರಾಮದ ರವಿಕುಮಾರ್ (26) ಎಂದು ತಿಳಿದುಬಂದಿದೆ.ಕೂಲಿ ಕೆಲಸ ಮಾಡುತ್ತಿದ್ದ ರವಿಕುಮಾರ್, ಭಾನುವಾರ ಗ್ರಾಮದಲ್ಲಿ ಲಾರಿಯಿಂದ ಪರ್ಸಿ ಇಳಿಸುವಾಗ ಮಧುಸೂದನ್ ಎಂಬವರು ಹಲ್ಲೆ ಮಾಡಿದ್ದರಿಂದ ತೀವ್ರವಾಗಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಮೃತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಪ್ರಕರಣ ದಾಖಲಿಸಿಕೊಂಡ ಪೊಲೀಸತು ಇದೀಗ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Read More

ಬೆಂಗಳೂರು : ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್​​​​​​ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಿವೈ  ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್​​ ಅವರಿಗೆ ಹೈಕಮಾಂಡ್​ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು ತಿಂಗಳ ಹಿಂದೆಯೂ ನೋಟಿಸ್ ನೀಡಲಾಗಿತ್ತು. ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೇಳಲಾಗಿದೆ. ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.

Read More

ಶಿವಮೊಗ್ಗ : ನಕ್ಸಲ್ ಮುಂಡಗಾರು ಲತಾ ಮತ್ತು ವನಜಾಕ್ಷಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಈಗಿನಲಿಯಲ್ಲಿ ಇಂದು ಪೊಲೀಸರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಗೀತಾಮಣಿ ಅವರು ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಹೌದು ಮುಂಡಗಾರು ಲತಾ ವನಜಾಕ್ಷಿಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ. ಇಂದು ಇಬ್ಬರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಮುಂಡಗರು ಲತಾ ಮತ್ತು ವನಜಾಕ್ಷಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಇಂದು ಪೊಲೀಸರು ಇಬ್ಬರನ್ನು ಹಾಜರುಪಡಿಸಿದ್ದರು.ಈ ವೇಳೆ ಇಬ್ಬರನ್ನು 3 ದಿನಗಳ ಕಾಲ ಪೊಲೀಸ್…

Read More

ಕೊಪ್ಪಳ : ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ವಾಲ್ಮೀಕಿ ಜಾತ್ರೆ ಕಾರ್ಯಕ್ರಮದಲ್ಲಿ ಸಚಿವ ಎಚ್ ಸಿ ಮಹದೇವಪ್ಪ ರಾಮನಿಂದ ವಾಲ್ಮೀಕಿಯೊ ಅಥವಾ ವಾಲ್ಮೀಕಿಯಿಂದ ರಾಮನೋ ಎನ್ನುವುದರ ಕುರಿತು ಚರ್ಚಿಸಬೇಕಿದೆ. ಅಯೋಧ್ಯೆ ರಾಮನೇ ಬೇರೆ ವಾಲ್ಮೀಕಿ ರಾಮನೇ ಬೇರೆ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ರಾಮ ಒಬ್ಬನೇ ಆದರೆ ರಾಮನನ್ನು ಸೃಷ್ಟಿಸಿದ್ದು ವಾಲ್ಮೀಕಿ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ರಾಮನೇ ಬೇರೆ ಅಯೋಧ್ಯೆ ರಾಮನೆ ಬೇರೆ ಎಂದು ಸಚಿವ ಎಚ್.ಸಿ ಮಹಾದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ರಾಮ ಒಬ್ಬನೇ ಆದರೆ ರಾಮನನ್ನು ಸೃಷ್ಟಿ ಮಾಡಿದ್ದು ವಾಲ್ಮೀಕಿ. ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಕಿಡಿ ಕಾರಿದರು. ಬಿಜೆಪಿ ನಾಯಕರು ಅಭಿವೃದ್ಧಿಯ ಬಗ್ಗೆ ಎಲ್ಲೂ ಮಾತನಾಡಲ್ಲ. ನಾವು ಸಹ ರಾಮನ ಭಕ್ತರಿದ್ದೇವೆ.…

Read More