Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಕ್ಫ್ ವಿರುದ್ಧವಾಗಿ ಈಗಾಗಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಬೀದರ್ ನಿಂದ ಹೋರಾಟವನ್ನು ಆರಂಭಿಸಿದ್ದು, ಇದೇ ವಿಚಾರವಾಗಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ ಹೋರಾಡೋಣ. ಎಂದು ಬೆಂಗಳೂರಿನಲ್ಲಿ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದರು.
ಬೆಂಗಳೂರು : ಇಂದು ಭಾರತೀಯ ಸಂವಿಧಾನದ 75ನೇ ವರ್ಷದ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದಾದ್ಯಂತ ಇಂದು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಒಂದು ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಅಸ್ತ್ರದ ಮೂಲಕ ತಮಗೆ ಎದುರಾಗುವ ಎಲ್ಲಾ ಪ್ರತಿರೋಧಗಳನ್ನು ಎದುರಿಸಿ ಮುನ್ನಡೆಯಲಿದೆ ಎಂದು ತಿಳಿಸಿದ್ದಾರೆ. ಟ್ವಿಟ್ ನಲ್ಲಿ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ. ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ.ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ…
ಹೊಸಪೇಟೆ : ಇತ್ತೀಚಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಅವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದೆರಡನ್ನು ತೆಗೆದು ಹಾಕಿದರೆ ಅನುದಾನಕ್ಕೆ ಅನುಕೂಲವಾಗಲಿದೆ ಎಂದು ಗ್ಯಾರಂಟಿ ತೆರವಿಗೆ ಅವರು ಆಗ್ರಹಿಸಿದ್ದಾರೆ. ಹೊಸಪೇಟೆಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ಯಾರಂಟಿ ರದ್ದಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಆಗ್ರಹಿಸಿದ್ದು, ಗ್ಯಾರಂಟಿ ಯೋಜನೆಯಲ್ಲಿ ಒಂದು ಎರಡು ಯೋಜನೆ ರದ್ದು ಮಾಡಿದರೆ ಅನುಕೂಲವಾಗುತ್ತದೆ. ಯೋಜನೆ ರದ್ದು ಮಾಡುವುದರಿಂದ ಅನುದಾನಕ್ಕೆ ಅನುಕೂಲವಾಗಲಿದೆ. ಜಿಲ್ಲೆಯ ಜನರಿಗೆ ಆಶ್ರಯ ಮನೆಗಳು ಬರುತ್ತಿಲ್ಲ. ಗ್ಯಾರಂಟಿ ತೆಗೆಯಿರಿ ಎಂದು ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳುತ್ತೇನೆ ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದರು. ಗ್ಯಾರಂಟಿ ಗಳಿಂದ ಸ್ವಲ್ಪ ಆಶ್ರಯ ಮನೆಗಳನ್ನು ಕೊಳ್ಳುವುದು ಕಷ್ಟ ಆಗುತ್ತಿದೆ. ಇವಾಗ ಅದೇ ಹಿನ್ನೆಲೆ ನಾವು ಮುಖ್ಯಮಂತ್ರಿಗಳಿಗೆ ಕೇಳ್ತಾ ಇದ್ದೇವೆ. ಎರಡು-ಮೂರು ಈ ಗ್ಯಾರಂಟಿ ಯೋಜನೆಗಳನ್ನ ತೆಗೆದು ಬಿಟ್ಟು ಮನೆಗಳನ್ನು ಕೊಡಿರಿ ಎಂದು…
ಚಿಕ್ಕಮಗಳೂರು : ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ. ಕರಿಬಸವಯ್ಯ ಅವರ ಪತ್ನಿ ಲಲೀತಮ್ಮ ಎಂಬವರ ಕೊಲೆ ನ.21 ರಂದು ಆಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ. ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಅಭ್ಯಾಸ ಇತ್ತಂತೆ. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ. ಅದಕ್ಕೆ ಬೆಂಗಳೂರಿನಲ್ಲಿ ಯಾರು ಒಪ್ಪದ ಕಾರಣ…
ಬೆಂಗಳೂರು : ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತಲೆ ಇವೆ. ಇದೀಗ ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿ ಒಬ್ಬ ಅತ್ಯಾಚಾರ ಎಸಗಿದ್ದು, ಇಡೀ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದೆ. ಹೌದು ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘೋರ ಘಟನೆ ನಡೆದಿದೆ. ಸ್ಕ್ರಾಪ್ ಅಂಗಡಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬಾಲಕಿಗೆ ಚಾಕೊಲೇಟ್ ಹಾಗೂ ಐಸ್ ಕ್ರೀಮ್ ಕೊಡಿಸಿ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ನಿನ್ನೆ ಗೋದಾಮಿಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಿಗಿದ್ದಾನೆ.ಈ ವಿಚಾರ ಗೊತ್ತಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ…
ಹಾಸನ : ಹಾಸನ ನಗರಸಭೆಗೆ ನಡೆದ ಚುನಾವಣಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು ಸಿಕ್ಕಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ. ಹಾಸನದ ನಗರ ಸಭೆ ಉಪಚುನಾವಣೆಯಲ್ಲಿ ನಡೆದ 8 ಸ್ಥಾನಗಳ ಪೈಕಿ 7ರಲ್ಲಿ ಕಾಂಗ್ರೆಸ್ ಗೆದ್ದಿದ್ದು 1ರಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ನಿಂದ ಗೆದ್ದು ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ನಗರಸಭೆ 7 ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಒಬ್ಬ ಸದಸ್ಯ ರಾಜೀನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು. ನವೆಂಬರ್ 23ರಂದು ತೆರವಾಗಿದ್ದ 8 ವಾರ್ಡ್ ಗಳಿಗೆ ಉಪಚುನಾವಣೆ ನಡೆದಿತ್ತು. 7 ವಾರ್ಡ್ ಗಳಲ್ಲಿ ಇದೀಗ ಕಾಂಗ್ರೆಸ್ ಹಾಗೂ 1 ವಾರ್ಡ್ನಲ್ಲಿ ಪಕ್ಷೇತರ ಗೆಲುವು ಸಾಧಿಸಿದೆ. ಗೆಲುವಿನ ಬಳಿಕ ಶಾಸಕ ಶಿವಲಿಂಗೇಗೌಡರಿಂದ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಶಿವಲಿಂಗೇಗೌಡ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ ಕಾರಣ ತಿಳಿಸದಿದ್ದರೆ ಅವರ ಜಾಮೀನು ರದ್ದಾಗಲಿದೆ. ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಕಳೆದರೂ ಕೂಡ ನಟ ದರ್ಶನ್ ಅವರು ಬೆನ್ನು ನೋವಿನ ಸರ್ಜಾರಿಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈ ಕೋರ್ಟ್ನಲ್ಲಿ ನಡೆಯುವ ವಿಚಾರಣೆ ಬಹಳ ಮಹತ್ವ ಪಡೆದುಕೊಂಡಿದೆ. ಅಲ್ಲದೆ ಇತ್ತೀಚಿಗೆ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರೊಂದಿಗೆ ಇತರೆ ಆರೋಪಿಗಳು ಫೋಟೋ ತೆಗೆಸಿಕೊಂಡಿರುವ ಕುರಿತು ಮಹತ್ವದ ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಆರೋಪಿಗಳ ಮೊಬೈಲ್ ಗಳನ್ನು ಪೊಲೀಸರು ಎಫ್ ಎಸ್…
ಬೆಂಗಳೂರು : ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಶಾಲಾ ಶಿಕ್ಷಕನೊಬ್ಬನನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಬಂಧಿತ ಶಿಕ್ಷಕನನ್ನು ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕು ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಗಂಭೀರವಾದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಎಫ್ಐಆರ್ ಕೂಡ ಇದೀಗ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಯೋಗದ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಶಿಕ್ಷಕ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕೆಲವರು ಮಾಟಮಂತ್ರ ವಶೀಕರಣಗಳನ್ನು ನಂಬುವುದಿಲ್ಲ ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ ಆದರೆ ಇನ್ನು ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ, ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದು ಮನೆಯ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ದರೆ ಇದೆಲ್ಲಾ ಮಾಟದ ಸಂಕೇತ ನಿಮ್ಮ ಮನೆ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದರೂ ಇಟ್ಟುಹೋದರೆ ಖಂಡಿತವಾಗಿಯೂ ನಿಮ್ಮ ಮನೆಯವರಿಗೆ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಅರ್ಥ, ನಮ್ಮ ಜೀವನದಲ್ಲಿ ಮಾಟ ಮಂತ್ರ ಆಗಿದೆ ಎಂಬುದಕ್ಕೆ ಯಾವ ಲಕ್ಷಣಗಳು ಮುಖ್ಯವೆಂದು ಇಲ್ಲಿ ತಿಳಿಯೋಣ ಬನ್ನಿ. ಮನೆಯವರೊಂದಿಗೆ ಆಗಾಗ ಜಗಳ ಆಗುತ್ತಿದ್ದರೆ ಇದು ಮಾಟದಸೂಚನೆ ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು, ಕೆಟ್ಟ ಕನಸುಗಳುಬೀಳುವುದು ಸಾಮಾನ್ಯವಾಗಿರುತ್ತದೆ, ವ್ಯವಹಾರದಲ್ಲಿ ಬದಲಾವಣೆ ದಿಢೀರಾಗಿ ನಷ್ಟವಾಗುವುದು ಹೆಚ್ಚಾಗಿ ಅನಾರೋಗ್ಯದ ಸಮಸ್ಯೆ ಕಾಣುತ್ತದೆ. ಒಂದೇ ರೀತಿ ಪದೇಪದೇ ಯೋಚನೆಯನ್ನು ನಾವು ಮಾಡುತ್ತೇವೆ ಯೋಚಿಸದೆ ಯಾವುದೇ…
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಗೆದ್ದುಬೀಗಿದೆ. ಅದರಲ್ಲೂ ಚೆನ್ನಪಟ್ಟಣ ಮತ್ತು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರರು ಸ್ಪರ್ಧಿಸಿದ್ದರು. ಆದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದೀಗ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಲಾಬಿ ನಡೆಸಲು ಸತೀಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದಾರೆ. ಉಪಚುನಾವಣೆ ಗೆಲುವಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಇದೀಗ ಕಣ್ಣು ನೆಟ್ಟಿದ್ದಾರೆ. ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಸಂಡೂರು, ಶಿಗ್ಗಾವಿಯಲ್ಲಿ ಎಸ್ ಟಿ ಮತಗಳು ನಿರ್ಣಾಯಕವಾಗಿದ್ದವು. ಹಾಗಾಗಿ ಎಸ್.ಟಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ದೆಹಲಿಗೆ…














