Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ರಾಯಚೂರು : ರಾಯಚೂರಲ್ಲಿ ಘೋರ ಘಟನೆ ಒಂದು ನಡೆದಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ಹಿರೆಬೂದೂರಿನಿಂದ ರಾಯಚೂರಿಗೆ ಡಸ್ಟರ್ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿ ಯಾರೂ ಇಲ್ಲದ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದೆ. ಮಾರ್ಗಮಧ್ಯೆ ಗಬ್ಬೂರಿನಲ್ಲಿ ಎಳೆನೀರು ಕುಡಿಯಲು ಕಾರಿನಿಂದ ಇಳಿದಿದ್ದರು. ಈ ವೇಳೆ ನೋಡನೋಡುತ್ತಲೇ ಇಂಜಿನ್ನಿಂದ ದಟ್ಟ ಹೊಗೆ ಆವರಿಸಿ, ಬಳಿಕ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಿಂದಾಗಿ ಹೆದ್ದಾರಿಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಏಂ17ಘಿ 5057ನಂಬರ್ನ ಡಸ್ಟರ್ ಕಾರು ಬೆಂಕಿಗಾಹುತಿಯಾಗಿದೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯರಿಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಕಾರು ಡಿಕ್ಕಿಯಾಗಿ ತಿಮ್ಮಕ್ಕ (60) ಹಾಗು ಯಶೋದ (33) ಇದೀಗ ಸಾವನ್ನಪ್ಪಿದ್ದಾರೆ. ತಿಮ್ಮಕ್ಕ ಮತ್ತು ಯಶೋದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಂತಹ ಇಟಿಯೋಸ್ ಕಾರು ಇಬ್ಬರಿಗೆ ಗುದ್ದಿದೆ.ಮಹಿಳೆಯರಿಗೆ ಡಿಕ್ಕಿ ಹೊಡೆದು ಕಾರು ಪಕ್ಕದಲ್ಲಿಧ ಮನೆಯ ಕಾಂಪೌಂಡ್ ಗುದ್ದಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಮುಂಬೈ : ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕಾಮುಕನೊಬ್ಬ ತನ್ನ ಪ್ರೇಯಸಿಯ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಅಲ್ಲದೆ ಆಕೆಯ ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಹೌದು ಈ ಒಂದು ಘೋರ ಘಟನೆ ಮುಂಬೈನಲ್ಲಿ ನಡೆದಿದ್ದು, ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಮೇಘವಾಡಿ ಪೊಲೀಸರು 24 ವರ್ಷದ ಯುವಕ ಮತ್ತು ಆತನ ಗೆಳತಿಯನ್ನು ಬಂಧಿಸಿದ್ದಾರೆ. ಮತ್ತು ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಗಂಭೀರ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಆ ವ್ಯಕ್ತಿ ತನ್ನ ಗೆಳತಿಯ ಕೇವಲ 10 ವರ್ಷದ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಕ್ರೌರ್ಯದ ಮಿತಿಯನ್ನು ಮೀರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ಅಪ್ರಾಪ್ತ ಬಾಲಕಿಯ ಖಾಸಗಿ ಭಾಗಗಳಿಗೆ…
ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವುದಕ್ಕೆ ಇದೀಗ ಮತ್ತೊಂದು ಘಟನೆ ಸಾಕ್ಷಿಯಾಗಿದೆ.ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರದಲ್ಲಿ ಇಂದು ಹಾಡಹಗಲೇ ಗಾಂಜಾ ಮತ್ತಲ್ಲಿ ಇದಂತಹ ಐದರಿಂದ ಆರು ಜನರ ಪುಂಡರು ಯುವತಿಗೆ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ನಶೆ ಏರಿಸಿಕೊಂಡು ಯುವಕರು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಂಗಡಿಗೆ ಹೋಗುತ್ತಿದ್ದ ಯುವತಿಯನ್ನು ಅಡಗಟ್ಟಿ ಹಲ್ಲೆ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಒಂದು ಕೃತ್ಯ ನಡೆದಿದೆ. ಗಾಂಜಾ ಮತ್ತು ಎಣ್ಣೆ ನಶೆಯಲ್ಲಿದ್ದ ಐದರಿಂದ ಆರು ಪುಂಡರ ಗ್ಯಾಂಗ್ ನಿಂದ ಈ ಕೃತ್ಯ ಎಸಲಾಗಿದೆ. ನಡು ರಸ್ತೆಯಲ್ಲಿಯೇ ಯುವತಿಯ ಮೈ ಮತ್ತು ಕೈಯನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಿಗಿದ್ದಾರೆ. ಪ್ರತಿರೋಧ ವ್ಯಕ್ತಪಡಿಸಿದ ಯುವತಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಇವಳೇ ಯುವತಿ ಪುಂಡರಿಗೂ ಕೂಡ…
ಬೆಂಗಳೂರು : ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಜೂ.3 ರಂದು ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್, ಇಂದು ಅರ್ಜಿ ವಿಚಾರಣೆ ನಡೆಸಿ, ಅಮೈಕಸ್ ಕ್ಯೂರಿಯನ್ನಾಗಿ ಹಿರಿಯ ವಕೀಲರಾದ ಸುಶೀಲಾ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ. ವಿಚಾರಣೆ ವೇಳೆ ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಪರ ವಕೀಲರು ಹಾಜರಾಗಿದ್ದರು. ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಕೆ ಮಾಡಿತು. ಇನ್ನು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಸಬೇಕೇ ಅಥವಾ ಬೇಡವೇ…
ಬೆಂಗಳೂರು : ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆ ಒಂದರಲ್ಲಿ 13 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಇದು ಅತ್ಯಂತ ಆತಂಕಕಾರಿ ವಿಷಯವಾಗಿದ್ದು ಈ ವಿಚಾರವಾಗಿ, ರಾಜಾರಾಂ ಎನ್ನುವವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ತನಿಖೆಯಲ್ಲಿ ಸ್ಫೋಟಕವಾದ ಅಂಶ ಬಯಲಾಗಿದ್ದು 10 ನುರಿತ ವೈದ್ಯರ ತಂಡ ಯುವಕರ ಹಠಾತ್ ಸಾವಿನ ಬಗ್ಗೆ ತನಿಖೆ ನಡೆಸಿದೆ. 18 ರಿಂದ 45 ವರ್ಷದೊಳಗಡೆ ಹೃದಯಾಘಾತದಿಂದ ಸಾವನ್ನಪ್ಪಿದ 250 ಮಂದಿಯ ಸಾವಿನ ವರದಿಯನ್ನು ತನಿಖೆಗೊಳಪಡಿಸಿ, ನಾಲ್ಕು ತಿಂಗಳುಗಳ ಕಾಲ ಅಧ್ಯಯನ ನಡೆಸಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎನ್ನುವ ವರದಿ ಸಿದ್ಧಪಡಿಸಿದೆ. ಹೃದಯಾಘಾತಕ್ಕೆ ಯುವಕರು ಬಲಿಯಾಗಲು ಕೋವಿಡ್ ಲಸಿಕೆ ಕಾರಣ ಅಲ್ಲ ಎನ್ನುವುದು ಸಂಶೋಧಕರ ವರದಿಯಲ್ಲಿ ಬಯಲಾಗಿದೆ. ಸದ್ಯ ವೈದ್ಯರು ಸರ್ಕಾರಕ್ಕೆ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಕೋವಿಡ್ ಲಸಿಕೆ ಕಾರಣ ಅಲ್ಲ, ಬದಲಾಗಿ ವಿವಿಧ ರೀತಿಯ ಕಾರಣಗಳಿವೆ ಎನ್ನುವುದನ್ನು ಪತ್ತೆ ಹಚ್ಚಿದ್ದಾರೆ. ಮೃತಪಟ್ಟವರ ಪ್ರತಿಯೊಂದು ಮೆಡಿಕಲ್ ರಿಪೋರ್ಟ್ ಅನ್ನು…
ಗದಗ : ಶಾಲೆಯಲ್ಲಿ ಸೀಲಿಂಗ್ ಗಾರೆ ಬಿದ್ದು ಇಬ್ಬರು ಮಕ್ಕಳು ಓರ್ವ ಶಿಕ್ಷಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಎಂಬ ಗ್ರಾಮದಲ್ಲಿ ನಡೆದಿದೆ. ಚಿಲಝರಿ ಗ್ರಾಮದ ಹಿರಿಯ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಎಂ.ಡಿ ಒಂಟಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಪ್ರಾರ್ಥನೆಯ ಬಳಿಕೆ ಕೊಠಡಿಗೆ ಬಂದಾಗ ಸೀಲಿಂಗ್ ಗಾರೆ ಏಕಾಏಕಿ ಕಳಚಿ ಬಿದ್ದಿದೆ. ಇಬ್ಬರು ವಿದ್ಯಾರ್ಥಿಗಳ ತಲೆ ಮತ್ತು ಶಿಕ್ಷಕನ ಭುಜಕ್ಕೆ ಗಾಂಭೀರವಾದ ಗಾಯಗಳಾಗಿವೆ. ಸರ್ಕಾರಿ ಶಾಲಾ ಕೊಠಡಿಯಲ್ಲಿ ಇದ್ದ ಹಲವು ಪೀಠೋಪಕರಣಗಳಿಗೂ ಹಾನಿಯಾಗಿದೆ. ತಕ್ಷಣ ಗಾಯಗೊಂಡ ಮಕ್ಕಳು ಹಾಗೂ ಶಿಕ್ಷಕನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 25 ವರ್ಷಗಳ ಹಿಂದೆ ಈ ಒಂದು ಸರ್ಕಾರಿ ಶಾಲೆ ನಿರ್ಮಾಣವಾಗಿತ್ತು ಚಾಲಕಟ್ಟಡ ಶಿಥಿಲಾವಸ್ತೆ ತಲುಪಿದ ಬಗ್ಗೆ ಆರು ತಿಂಗಳ ಹಿಂದೆಯೇ ಮಾಹಿತಿ ಇದ್ದರೂ ಶಿಕ್ಷಣ ಇಲಾಖೆ ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಸಾಂಬಾರ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಆಗಿ, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ತಲಘಟ್ಟಪುರದಲ್ಲಿ ತಡರಾತ್ರಿ ಈ ಒಂದು ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿ ನೇಪಾಳ ಮೂಲದ ಬಹದ್ದೂರ್ ಎಂದು ತಿಳಿದುಬಂದಿದೆ. ಬಹದ್ದೂರ್ ಸ್ನೇಹಿತ ಮಹೇಂದ್ರ ಸಾಂಬಾರ್ ಮಾಡುವ ವಿಚಾರವಾಗಿ ಕೊಲೆಗೈದಿದ್ದಾನೆ. ನಿನ್ನೆ ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಬಹದ್ದೂರ್ ಮೇಲೆ ಹಲ್ಲೆಗದು ಮಹೇಂದ್ರ ಕೊಂದಿದ್ದಾನೆ. ಸೆಕ್ಯೂರಿಟಿ ಕಾರ್ಡ್ ಆಗಿ ಬಹದ್ದೂರ್ ಕೆಲಸ ಮಾಡುತ್ತಿದ್ದ. ಕೆಲವು ವರ್ಷಗಳಿಂದ ಬಹದ್ದೂರ್ ಬೆಂಗಳೂರಿನಲ್ಲಿಯೇ ವಾಸವಿದ್ದ. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು
ಚಾಮರಾಜನಗರ : ಪ್ರಿಯತಮೆ ಸೋನಾಕ್ಷಿ ಕೊಂದು ನದಿ ದಡದಲ್ಲಿ ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಮಾದೇಶನ ಮನೆಯ ಮೇಲೆ ಸೋನಾಕ್ಷಿ ಕುಟುಂಬಬಸ್ಥರು ದಾಳಿ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೊಳೆಯಲ್ಲಿ ಆರೋಪಿ ಮಾದೇಶನ ಮನೆಗೆ ಬೆಂಕಿ ಹಾಕಿದ್ದಾರೆ ಮನೆಯ ಮೇಲೆ ದಾಳಿ ನಡೆಸಿ ಸೋನಾಕ್ಷಿ ಕುಟುಂಬಸ್ಥರು ಮಾದೇಶನ ಮನೆಗೆ ಬೆಂಕಿ ಹಚ್ಚಿದ್ದಾರೆ. ಕಳೆದ ಐದು ದಿನದ ಹಿಂದೆ ಸೋನಾಕ್ಷಿ ತಲೆಗೆ ಹೊಡೆದು ಮಾದೇಶ ಕೊಲೆ ಮಾಡಿದ್ದ. ಹಳೆ ಹಂಪಾಪುರ ಬಳಿ ಸುವರ್ಣಾವತಿ ನದಿ ದಡದಲ್ಲಿ ಆಕೆಯ ಶವ ಹೂತಿದ್ದ. ಎರಡು ಅಡಿ ಹಳ್ಳ ನೋಡಿ ಸೋನಾಕ್ಷಿ ಶವ ಹೂತಿದ್ದ. ಬಳಿಕ ನಾಯಿಗಳು ಶವ ಎಳೆದು ಹೊರಗಡೆ ತಂದಾಗ ಸೋನಾಕ್ಷಿಯ ಕೊಲೆ ಬೆಳಕಿಗೆ ಬಂದಿತ್ತು ಶವ ಪತ್ತೆಯ ಬಗ್ಗೆ ದನ ಮೇಯಿಸುವವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿ ಮಾದೇಶನನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಕೊಳ್ಳೇಗಾಲ ಟೌನ್ ಠಾಣೆ ಪೋಲಿಸರ ವಶದಲ್ಲಿ ಆರೋಪಿ ಮಾದೇಶ ಇದ್ದಾನೆ. ಪತಿ ಮತ್ತು…
ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪದ ಕುರಿತು ಶಾಸಕ ಬಿ ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರತಿಕ್ರಿಯೆ ನೀಡಿದ್ದು, ಈ ಒಂದು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಬಿ ಆರ್ ಪಾಟೀಲ್ ಅವರ ಬಾಯಿಮುಚ್ಚಿಸುವ ಪ್ರಯತ್ನ ಮಾಡಬಹುದು ಎಂದು ಗಂಭೀರವಾಗಿ ಆರೋಪಿಸಿದರು. ಇನ್ನು ಈ ಒಂದು ಘಟನೆ ಸಂಬಂಧ ಶಾಸಕ ರಾಜು ಕಾಗೆ ಸಹ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯಪಡಬೇಕಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ, ಶಾಸಕ ರಾಜು ಕಾಗೆ ಮಾತ್ರ ಅಲ್ಲ ಅಂತಹ ಹತ್ತಾರು ಜನರು ಇದ್ದಾರೆ. ಒಬ್ಬೊಬ್ಬರಾಗಿ ಬಾಯಿ ಬಿಡುತ್ತಾರೆ ನೀವೇ ನೋಡ್ತಾ ಇರಿ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಲಂಚ ಆರೋಪ ಮಾಡಿದ್ದಾರೆ ಸಿಎಂ ಮುಂದೆ ವಾಸ್ತವಿಕ ಸ್ಥಿತಿ ಹೇಳುತ್ತೇನೆ ಎಂದಿದ್ದಾರೆ. ಬಿ ಆರ್ ಪಾಟೀಲ್ ಬಾಯಿಮುಚ್ಚಿಸುವ…













