Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗಾಗಲೇ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ಇದೀಗ ಎರಡನೇ ಕೇಸಿನಲ್ಲೂ ಕೂಡ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ. ಹೌದು ಇಂದು ಬೆಂಗಳೂರು 82ನೇ ಸಿಸಿಎಚ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ವಿಚರಣೆ ನಡೆಯಿತು. ಸದ್ಯ ಎರಡನೇ ಕೇಸಿನಲ್ಲಿ ಕೂಡ ನ್ಯಾಯಾಲಯ ಮುನಿರತ್ನ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮೊದಲ…
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ವಿಚಾರವಾಗಿ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತಾಗಿ, ಬೆಂಗಳೂರಿನಲ್ಲಿ ಆದಿಚುಂಚನಗಿರಿಯ ಮಹಾಸಂಸ್ಥಾನದ ಪೀಠಾಧ್ಯಕ್ಷರಾದಂತಹ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಆಡಿಯೋದಲ್ಲಿ ಮುನಿರತ್ನ ಧ್ವನಿ ನಿಜವಾಗಿದ್ದರೆ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉರಿ ಗೌಡ ನಂಜೇಗೌಡ ವಿಚಾರವಾಗಿ ಕರೆದು ಮುನಿರತ್ನಗೆ ಬುದ್ಧಿ ಹೇಳಿದ್ದೆ. ಆಗ ಮಾಜಿ ಸಚಿವ ಮುನಿರತ್ನ ಸ್ಟಾಪ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಮುದ್ರಣದಲ್ಲಿ ನಿಜ ಆಯ್ತು ಅಂದರೆ. ಮಾತನಾಡಿರೋವರನ್ನು ಕ್ಷಮಿಸಲು ಆಗುವುದಿಲ್ಲ. ಯಾರೇ ಮಾತಾಡಿದರೂ ನಾಗರಿಕ ಸಮಾಜ ಒಪ್ಪುವುದು ಖಂಡನೀಯ ಎಂದರು. ಆಧುನಿಕತೆ ಬೆಳೆದಿದೆ ಅಂತ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ಕೇವಲ ಒಕ್ಕಲಿಗ ದಲಿತರಿಗೆ ಮಾತಾಡಿದ್ದಾರೆ ಅನ್ನೋದು ಎಷ್ಟು ಮುಖ್ಯವೋ, ಅದೇ ರೀತಿ ಸಮಾಜದಲ್ಲಿನ ಎಲ್ಲಾ ಸಮುದಾಯಗಳು ಕೂಡ ಅಷ್ಟೇ ಮುಖ್ಯವಾಗಿವೆ. ಪ್ರತಿಯೊಂದು ಸಮುದಾಯವನ್ನು ನಮ್ಮ ಸಂವಿಧಾನ ಒಪ್ಪಿಕೊಂಡಿದೆ. ನಮ್ಮ ದೇಶದ ಅಸ್ಮಿತೆ ತಾಯಂದಿರು,…
ಬೆಂಗಳೂರು : ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಶಾಸಕ ಮುನಿರತ್ನ ಜೈಲುಪಾಲಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ನಾಳೆ ಮುನಿರತ್ನ ವಿರುದ್ಧ ಧರಣಿ ಹಮ್ಮಿಕೊಳ್ಳಲಾಗಿದೆ. ಹೌದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕ್ಷೇತ್ರ ಯಶವಂತಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಭಾಗಿಯಾಗಲಿದ್ದಾರೆ.ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಗಣೇಶ ಮೈದಾನದವರೆಗೆ ರ್ಯಾಲಿ ನಡೆಯಲಿದೆ. ಮೆರವಣಿಗೆಯಲ್ಲಿ ಎಸ್.ಟಿ ಸೋಮಶೇಖರ್ ಪಾಲ್ಗೊಳ್ಳುತ್ತಿದ್ದಾರೆ.ಕಾಂಗ್ರೆಸ್ ಮುಖಂಡರ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 14 ದಿನ ನ್ಯಾಯಾಂಗ ಬಂಧನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ಇಂದು ಬೆಂಗಳೂರಿನ 84ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧಿಶರು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್, ಜೈಲಿನಲ್ಲಿ ರೌಡಿಶೀಟರ್ ಗಳೊಂದಿಗೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲಾಗಿತ್ತು. ಇದರ ಬೆನ್ನಲ್ಲೇ ದರ್ಶನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅದಾದ ಬಳಿಕ ಇದೀಗ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಹೌದು ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇಂದು ಕೊಲೆ ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ದರ್ಶನ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ…
ಕಲಬುರ್ಗಿ : ಮಿನಿ ವಿಧಾನಸೌಧಗಳನ್ನು ಇನ್ನು ಮುಂದೆ ಪ್ರಜಾಸೌಧಗಳು ಎಂದು ಹೆಸರು ಬದಲಾವಣೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಿನಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತುಂಗಭದ್ರ ಡ್ಯಾಮ್ ನ ಕ್ರಸ್ಟ್ ಗೇಟ್ ಅಳವಡಿಸಿ ನೀರು ಉಳಿಸಿದ್ದೇವೆ. ಕೇವಲ ಐದು ದಿನಗಳಲ್ಲಿ ಕ್ರಸ್ಟ್ ಗೇಟ್ ಅಳವಡಿಸಿ ನೀರು ಸಂಗ್ರಹಣೆ ಮಾಡಲಾಗಿದೆ.ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟ್ ದುರಸ್ತಿಗಾಗಿ 108 ಜನ ದುಡಿದಿದ್ದಾರೆ.ಗಂಗಾ ಪೂಜೆ ಜೊತೆಗೆ 108 ಜನರಿಗೂ ಸನ್ಮಾನ ಇಟ್ಟುಕೊಂಡಿದ್ದೇವೆ. ಸೆಪ್ಟೆಂಬರ್ 22ರಂದು ತುಂಗಭದ್ರಾ ಜಲಾಶಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಬಸವಕಲ್ಯಾಣದ ಅನುಭವ ಮಂಟಪದಿಂದ ಅಂಜನಾದ್ರಿ ಬೆಟ್ಟದ ವರೆಗೆ ಎಲ್ಲಾ ಪ್ರವಾಸಿ ತಾಣಗಳ ಪುನರುಜ್ಜೀವನ, ಪುನಶ್ಚೇತನ ಮಾಡಲಾಗುತ್ತದೆ. ಎಲ್ಲ ಸ್ಮಾರಕಗಳ ರಕ್ಷಣೆಗೆ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ ಎಂದು ಕಲಬುರ್ಗಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ತಿಳಿಸಿದರು.ಕಲ್ಬುರ್ಗಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿ, ಬಳಿಕ ಮಿನಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 5,000 ಕೋಟಿ ಅನುದಾನ ಕೊಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದರು. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕೇಂದ್ರ ಸರ್ಕಾರ ಯಾವುದೇ ಅನುದಾನವನ್ನು ಕೊಟ್ಟಿಲ್ಲ.ಕೃಷಿ ಇಲಾಖೆಗೆ 100 ಕೋಟಿ ರೂಪಾಯಿ ಅನುದಾನ ಮೀಸಲು ಇಟ್ಟಿದ್ದೇವೆ. ಬಜೆಟ್ ಅಲ್ಲಿ ಘೋಷಿಸಿದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎಂದು ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಚಿವರು ಈ ಭಾಗದ ಶಾಸಕರು ಸಂಪುಟ ಸಭೆಗೆ ಒತ್ತಾಯಿಸಿದರು.ಹೀಗಾಗಿ ಕಲಬುರಗಿಯಲ್ಲಿಯೇ ಸಂಪುಟ ಸಭೆ ಮಾಡೋಣ ಎಂದಿದ್ದೆ. ಯುಪಿಎ ಸರ್ಕಾರ…
ತುಮಕೂರು : ಡೀಸೆಲ್ ಟ್ಯಾಂಕರ್ ಹಾಗೂ ಲಾರಿಯ ಮಧ್ಯ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 33 ರ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಿಬ್ಬಂದಿಗಳು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ.ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೊಡ್ಡಮಾವತ್ತೂರು ಟೋಲ್ಗೆ ಗುದ್ದಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದ್ದು, ಟೋಲ್ ಸಂಪೂರ್ಣ ಜಖಂ ಆಗಿದೆ. ಡೀಸೆಲ್ ಟ್ಯಾಂಕರ್ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು, ಹುಲಿಯೂರುದುರ್ಗ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಧಾವಿಸಿದ್ದಾರೆ.ಡಿಸೆಲ್ ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು, ಬಕೆಟ್, ಬಿಂದಿಗೆಗಳಲ್ಲಿ ಡೀಸೆಲ್ ತುಂಬಿಕೊಂಡು ಹೋಗಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯ ಮಂಟೂರು ರಸ್ತೆಯ ಬಳಿ ಇರುವ ಹಿಂದೂ ಸ್ಮಶಾನ ಭೂಮಿಯ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿರುವ ವಿಚಾರವಾಗಿ ನಿನ್ನೆ ಪ್ರಮೋದ್ ಮುತಾಲಿಕ್ ಪ್ರಸಾದ ಭಯ ವಿರುದ್ಧ ಕಿಡಿ ಕಾರಿದ್ದರು. ಮುತಾಲಿಕ್ ಆರೋಪಕ್ಕೆ ಇದೀಗ ಶಾಸಕ ಪ್ರಸಾದ ಬಯ್ಯ ತಿರುಗೇಟು ನೀಡಿದ್ದು ಬೆಂಕಿ ಹಚ್ಚುವುದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಮುತಾಲಿಕ್ ತಾಕತ್ತು ನಾನು ನೋಡಿದ್ದೇನೆ. ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ. ಅವನು ಅಂತಾರಾಷ್ಟ್ರೀಯ ನಾಯಕನೇನು ಅಲ್ಲ.ಪ್ರಮೋದ್ ಮುತಾಲಿಕ್ ನನ್ನನ್ನು ಆರಿಸಿ ತಂದಿಲ್ಲ. ಜನ ನನ್ನನ್ನು ಆರಿಸಿ ತಂದಿದ್ದಾರೆ. ಅವರಿಗಾಗಿ ನಾನು ಕೆಲಸ ಮಾಡುತ್ತಾ ಇದ್ದೇನೆ ಅದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಹರಿಹಾಯ್ದರು. ಬಿಜೆಪಿಯ ಒಂದು ಗುಂಪು ಇಂದಿರಾ ಕ್ಯಾಂಟೀನ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರ ಯಾರದೋ ಭೂಮಿ ಕಬಳಿಸಿ ಇಂದಿರಾ ಕ್ಯಾಂಟೀನ್ ಮಾಡುತ್ತಿಲ್ಲ. ಸ್ಥಳೀಯ ಜನರಿಗೆ ಅನುಕೂಲ ಆಗಲಿ…
ಬೆಂಗಳೂರು : ಸಾಮಾನ್ಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವವರು ನದಿಗೋ ಅಥವಾ ಬೆಟ್ಟದಿಂದ ಜಿಗಿದು, ಇಲ್ಲವೇ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿಗೆ ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿ ಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇಂದು ಕೂಡ ಅಂಥದ್ದೇ ಘಟನೆ ನಡೆದಿದ್ದು, ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಒಬ್ಬ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದಂತಹ ಮಹಿಳಾ ಸೆಕ್ಯೂರಿಟಿ ಗಾರ್ಡ್ ನ ಸಮಯಪ್ರಜ್ಞೆಯಿಂದ ಆತನ ಜೀವ ಉಳಿದಿದೆ. ಬಿಹಾರ್ ಮೂಲದ ಸಿದ್ದಾರ್ಥ್ (35) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತ ಸೆಕ್ಯೂರಿಟಿ ಗಾರ್ಡ್ ರಶ್ಮಿ ಮೆಟ್ರೋ ಸ್ಟೇಷನ್ ನಲ್ಲಿದ್ದ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ (ETS) ಆಫ್ ಮಾಡಿದ್ದಾರೆ. ಪ್ಲಾಟ್ ಫಾರ್ಮನಲ್ಲಿ ಕೆಂಪು ಬಣ್ಣದ ಬಾಕ್ಸ್ ನಲ್ಲಿ ಇರುವ ಇ ಟಿ ಎಸ್ ಬಾಕ್ಸ್ ಬಟನ್ ಆಫ್ ಮಾಡಿದ್ದಾರೆ. ಇದನ್ನು ಆಫ್ ಮಾಡಿದರೆ ಮೆಟ್ರೋ ರೈಲಿನ ಪವರ್ ಸಂಪೂರ್ಣ ಆಫ್…
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆಗುವ ರೀತಿಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ, ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಪೋಸ್ಟ್ ಹಾಕಿದ್ದರು. ಈ ಒಂದು ಪೋಸ್ಟ್ ಗೆ ಸಂಬಂಧಿಸಿದಂತೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಕಳೆದ 2023 ರ ಅಕ್ಟೊಬರ್ 26 ರಂದು IPC ಸೆಕ್ಷನ್ 1860(U/s-504,505(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು…