Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : 12 ವರ್ಷದ ಬಾಲಕನೊಬ್ಬನ ಎದೆಭಾಗಕ್ಕೆ ತೆಂಗಿನ ಗರಿ ಹಾಗೂ ಕುತ್ತಿಗೆಯಲ್ಲಿದ್ದ ಸರ ಹೊಕ್ಕಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಸುಮಾರು ಎರಡು ಗಂಟೆಗಳ ಕಾಲ ಆಪರೇಷನ್ ಮಾಡಿ ಬಾಲಕನ ಎದೆಯಲ್ಲಿದ್ದ ಗರಿ ಹಾಗೂ ಸರವನ್ನು ದೇಹದಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯರ ಈ ಒಂದು ಕಾರ್ಯಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹೌದು ಆಟವಾಡು ತ್ತಿದ್ದ 12ರ ಹರೆಯದ ಬಾಲಕನ ಮೇಲೆ ತೆಂಗಿನ ಗರಿ ಬಿದ್ದು, ಅದರ ತುಂಡು ಹಾಗೂ ಆತ ತೊಟ್ಟಿದ್ದ ಚೈನ್ ಕೂಡ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿದ ಘಟನೆ ಮಡಿಕೇರಿ ಯಲ್ಲಿ ಸಂಭವಿಸಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಗರಿ ಮತ್ತು ಸರವನ್ನು ಹೊರ ತೆಗೆಯಲಾಗಿದೆ. ಘಟನೆ ಹಿನ್ನೆಲೆ? ಅಸ್ಸಾಂ ಮೂಲದ ಬಾಲಕ ಕಮಲ್ ಹುಸೇನ್(12)ನ ಹೆತ್ತವರು ಮಡಿಕೇರಿಯ ಮನೆಯಲ್ಲಿ ಕಾರ್ಮಿಕ ರಾಗಿದ್ದರು. ಅವರು ಶನಿವಾರ ತೋಟ ದಲ್ಲಿ ಕೆಲಸ ಮಾಡುತ್ತಿದ್ದಾಗ ಬಾಲಕ ಪಕ್ಕದಲ್ಲಿ…
ಕೋಲಾರ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯಯೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಎಸಿ ಕಚೇರಿಯ ಕೇಸ್ ವರ್ಕರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೋಮಲಾ ಎನ್ನುವ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಪೌತಿ ಖಾತೆ ಮಾಡಲು 50 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ ಮುಂಗಡವಾಗಿ 20,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇಸ್ ವರ್ಕರ್ ಕೋಮಲಳನ್ನು ಇದೀಗ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕೋಲಾರ ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.
ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಯದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದು, ಈ ಒಂದು ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾ.ಎಂ.ನಾಗಪ್ರಸನ್ನ ಅವರು ಫೆಬ್ರವರಿ 20ರಂದು ವಿಚಾರಣೆ ನಿಗದಿಪಡಿಸಿದ್ದು 20ರವರೆಗೆ ಸಿಎಂ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರ ED ಸಮನ್ಸ್ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಪರವಾಗಿ ವಕೀಲ ಸಂದೇಶ್ ಚೌಟ ಅವರು ವಾದ ಆರಂಭಿಸಿದರು. ಈ ಪ್ರಕರಣದಲ್ಲಿ ಅಪರಾಧದಿಂದ ಗಳಿಸಿದ ಹಣವಿಲ್ಲ. ಅಕ್ರಮ ಹಣದ ಗಳಿಕೆ ಇದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಮುಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಪ್ರಕರಣದಲ್ಲಿ ಇಡಿ ಸರ್ಚ್ ಮತ್ತು ಸೀಜ್…
ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಯದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದು ಈ ಒಂದು ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಬೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸುತ್ತಿದ್ದಾರೆ. ED ನೀಡಿದ್ದ ಸಮನ್ಸ್ ರದ್ದು ಕೋರಿದ ಭೈರತಿ ಸುರೇಶ್ ಅರ್ಜಿ ವಿಚಾರಣೆ ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಆರಂಭವಾಗಿದೆ. ಸಚಿವ ಭೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸೀವಿ ನಾಗೇಶ್ ಅವರು ವಾದ ಮಂಡಿಸುತ್ತಿದ್ದು, ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ ಹೀಗಾಗಿ ಇಡಿ ಸಮನ್ಸ್ ಕಾನೂನು ಬಾಹಿರವಾಗಿದೆ. ಈ ವೇಳೆ ಭೈರತಿ ಸುರೇಶ್ ಯಾವ ಇಲಾಖೆ ಸಚಿವರು ಎಂದು ಈ ವೇಳೆ ಹೈಕೋರ್ಟ್ ಪ್ರಶ್ನಿಸಿದೆ. ಭೈರತಿ ಸುರೇಶ್ ನಗರಾಭಿವೃದ್ಧಿ ಇಲಾಖೆಯ ಸಚಿವರು ಎಂದು ವಕೀಲರು ಪ್ರಶ್ನೆಗೆ…
ಹಾವೇರಿ : ಹಾವೇರಿಯಲ್ಲಿ ಅಚ್ಚರಿಯ ಘಟನೆ ಒಂದು ನಡೆದಿದ್ದು ಮೃತ ವ್ಯಕ್ತಿಯನ್ನು ಆಂಬುಲೆನ್ಸ್ ನಲ್ಲಿ ಮನೆಗೆ ಕರೆದ ಯುದ್ಧ ಸಂದರ್ಭದಲ್ಲಿ ನಡುವೆ ಒಂದು ಡಾಬಾ ಬಂದಿದೆ ಈ ವೇಳೆ ಪತ್ನಿ ಡಾಬಾ ಬಂತು ಊಟ ಮಾಡುತ್ತೀಯಾ ಎಂದು ಕಣ್ಣೀರುತ್ತಾ ಕೇಳಿದಾಗ ಸತ್ತಿದ್ದ ಪತಿ ತಕ್ಷಣ ಎಂದು ಕುಳಿತಿರುವ ಘಟನೆ ಹಾವೇರಿ ಜಿಲ್ಲೆಯ ಬಳಿಕ ಬಂಕಾಪುರದಲ್ಲಿ ಈ ಘಟನೆ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಬಿಷ್ಣಪ್ಪ ಅಶೋಕ ಗುಡಿಮನಿ (45) ಸತ್ತಿದ್ದ ಎಂದು ಸ್ವಗ್ರಾಮಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿರುವುದು ಕಂಡುಬಂದಿದೆ. ಅದಕ್ಕೂ ಮುನ್ನ ಆತನನ್ನು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಖಾಸಗಿ ವೈದ್ಯರು ತಿಳಿಸಿದ್ದರು. ಈ ವೇಳೆ ಆತನ ಮೃತದೇಹವವನ್ನು ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಬದುಕಿರುವ ಅಂಶ…
ಬೆಳಗಾವಿ : ಜಮೀನು ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ಉಂಟಾಗಿ, ವ್ಯಕ್ತಿಯ ಎದೆಗೆ ಸಹೋದರನೊಬ್ಬ ಕೊಡಲಿ ಇಂದ ಹಲ್ಲೆ ಮಾಡಿದ್ದು ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಉದಗಟ್ಟಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಸಿದ್ದಪ್ಪ ಗೋಡೆರ್ ಎಂದು ತಿಳಿದುಬಂದಿದೆ. ಸಿದ್ದಪ್ಪನ ಎದೆಗೆ ಆತನ ಸಹೋದರರು ಕೊಡಲಿ ಇಂದ ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಜಮೀನು ವಿಚಾರಕ್ಕೆ ಗಲಾಟೆ ನಡೆದಿದೆ ಕೊಡಲಿಯಿಂದ ಹಲ್ಲೆ ಮಾಡಿ ದಾಯಾದಿಗಳು ಕೊಲೆಗೆ ಯತ್ನಿಸಿದ್ದಾರೆ. ಕಬ್ಬು ಬೆಳೆದಿರುವ ಜಮೀನು ಬಿಟ್ಟು ಕೊಡುವಂತೆ ಸಿದ್ದಪ್ಪಗೆ ಸಹೋದರರು ಒತ್ತಡ ಹೇರಿದ್ದಾರೆ. ಕಬ್ಬು ಕಟಾವು ಮಾಡಿ ಬಿಟ್ಟುಕೊಡುವುದಾಗಿ ಸಿದ್ದಪ್ಪ ಗೋಡೆರ್ ಹೇಳಿದ್ದಾರೆ. ಕಬ್ಬು ಬೆಳೆಗೆ ನೀರು ಹಾಯಿಸಲು ಬಂದಿದ್ದ ಸಿದ್ದಪ್ಪನ ಮೇಲೆ ಏಕಾಏಕಿ ಕೊಡಲಿಯಿಂದ ದಾಳಿ ಮಾಡಿದ್ದಾರೆ. ಸಿದ್ದಪ್ಪಗೋಡೆರ್ ಎದೆಗೆ ಕೊಡಲಿಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಸಿದ್ದಪ್ಪನ ಸಹೋದರನಿಂದ ಹಲ್ಲೆ…
ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ ಇಂದು ಏರ್ ಶೋ 2025ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಚಾಲನೆ ನೀಡಿದರು. ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ನಿನ್ನೆ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಇದೀಗ ಇಂದು ಮತ್ತೆ ಊಟದಲ್ಲಿ ಹುಳ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಹೌದು ನಿನ್ನೆ ತಾನೆ ಪೊಲೀಸರಿಗೆ ನೀಡಿದ್ದ ಬೆಳಗಿನ ಉಪಹಾರದಲ್ಲಿ ಜಿರಳೆ ಪತ್ತೆಯಾಗಿದ್ದು ಕೆಲವು ಪೊಲೀಸರು ತಿಂಡಿ ತಿನ್ನುವುದನ್ನೇ ಬಿಟ್ಟುಬಿಟ್ಟಿದ್ದರು. ಇದೀಗ ಇಂದು ಮತ್ತೆ ಊಟದಲ್ಲಿ ಹುಳ ಪತ್ತೆಯಾಗಿದ್ದು, ಪೊಲೀಸ್ ಸಿಬ್ಬಂದಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನು, ಎರಡು ವರ್ಷಗಳ ಹಿಂದೆ 2023ರಲ್ಲೂ ಇಂತಹದ್ದೇ ಘಟನೆ ನಡೆದಿತ್ತು. 2023ರ ಸೆಪ್ಟೆಂಬರ್ 26ರಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದವು. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಗೆ ಯಶವಂತಪುರ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿತ್ತು. ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ಉಪಾಹಾರದಲ್ಲಿ (ರೈಸ್…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ಅದರ ಹೆಚ್ಚಳ ಮಾಡಿ ಬಿಎಮ್ಆರ್ಸಿಎಲ್ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಸರಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿದ್ದು, ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಗುಲಾಬಿ ಹೂ ಕೊಟ್ಟು ಕ್ಷಮೆ ಕೇಳಿದ ಬಿಜೆಪಿ ನಾಯಕರು, ಈಗ ಮೋದಿ ಪರವಾಗಿ ಗುಲಾಬಿ ಹೂವು ಕ್ಷಮೆ ಕೇಳಲ್ವಾ? ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೆಟ್ರೋ ಪ್ರಯಾಣದ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ತಾತ್ಕಾಲಿಕವಾಗಿ ಇದರ ಏರಿಕೆ ನಿಲ್ಲಿಸಿದರೆ ಅದು ಕೇಂದ್ರ ಸರ್ಕಾರದ್ದು. ಮೋದಿ ಪರವಾಗಿ ಬಿಜೆಪಿಗರು ಮೆಟ್ರೋ ನಿಲ್ದಾಣದಲ್ಲಿ ಕ್ಷಮೆ ಕೇಳಲಿ. ಬೇಕಿದ್ದರೆ ನಾವೇ ಬಿಜೆಪಿ ಗಳಿಗೆ ಗುಲಾಬಿ ಖರೀದಿ ಮಾಡಿಕೊಡುತ್ತೇವೆ. ಬಸ್ ಪ್ರಯಾಣದರ ಏರಿಸಿದಾಗ ನಮ್ಮ ವಿರುದ್ಧ ಪ್ರತಿಭಟನೆ ಮಾಡಿದರು. ಈಗ ಯಾಕೆ ಕೇವಲ ಮನವಿ ಕೊಡ್ತೀರಾ? ಮೋದಿ ಪರವಾಗಿ ಗುಲಾಬಿ ಕೊಟ್ಟು ಕ್ಷಮೆ ಕೇಳಲ್ವಾ? ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ…
ಬೆಂಗಳೂರು : ಬಾಕಿ ಬಿಲ್ ಪಾವತಿ ಮಾಡದೇ ಕಳೆದ ಒಂದೂವರೆ ವರ್ಷದಿಂದ ಕಿರುಕುಳ ನೀಡುತ್ತಿದ್ದಾರೆ. ಇದರಿಂದ 400-500 ಕಿಯೋನಿಕ್ಸ್ ವಂಡರ್ಸ್ಗಳು ಬೇಸತ್ತು ಹೋಗಿದ್ದಾರೆ. ಹಾಗಾಗಿ ಇಂದು ಶಿವಾನಂದ ಸರ್ಕಲ್ ಬಳಿ ಇರುವ ಕಿಯೋನಿಕ್ಸ್ ಸಂಸ್ಥೆ ಬಳಿ ವೆಂಡರ್ಸ್ ಗಳು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಈ ಕುರಿತಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಕಿಯೋನಿಕ್ಸ್ ವೆಂಡರ್ಸ್ ಗಳದ್ದು ಯಾಕೋ ಸ್ವಲ್ಪ ಅತಿಯಾಯಿತು ಎಂದು ಕಿಡಿ ಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿ ಸರ್ಕಾರದ ಕಾಲದ ಸಿಎಜಿ ರಿಪೋರ್ಟ್ ಬಂದಿದೆ. ನಾವು ವೆಂಡರ್ಸ್ ಗಳ ಪ್ರತಿಭಟನೆಯನ್ನು ಹತ್ತಿಕ್ಕುತಿಲ್ಲ. ನಾವೇನು ಮಾಡಿದ್ದೇವೆ ಅಂತ ಅವರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ? ಎಂದು ತಿಳಿಯುತ್ತಿಲ್ಲ. ಪ್ರತಿಭಟನೆ ಮಾಡೋದೇ ಆಗಿದ್ರೆ ಬಿಜೆಪಿ ಕಚೇರಿ ಮುಂದೆ ಹೋಗಿ ಅವರು ಪ್ರತಿಭಟನೆ ಮಾಡಬೇಕು. ಅವರಿಂದಾಗಿಯೇ ತಾನೇ ಕೀಯೊನಿಕ್ಸ್ ಗೆ ಪ್ರಾಬ್ಲಮ್ ಆಗಿದ್ದು? ಕಿಯೋನಿಕ್ಸ್ ವೆಂಡರ್ಸ್ ದು ಸ್ವಲ್ಪ ಅತಿಯಾಗಿದೆ ಎಂದು ಕಿಡಿ ಕಾರಿದರು. ಪ್ರಕರಣ ಹಿನ್ನೆಲೆ? ಕಿಯೋನಿಕ್ಸ್ ರಾಜ್ಯದಲ್ಲಿ ಸುಮಾರು 48…
ಬೆಂಗಳೂರು : ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್ ಶೋ ನಡೆಯುತ್ತಿದೆ. ಏರ್ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್ ಜಾಮ್ನಿಂದ ಪರದಾಡಿದರು. ಏರ್ ಶೋ ಹಿನ್ನೆಲೆಯಲ್ಲಿ ಹೌದು ಯಲಹಂಕದ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಯಲಹಂಕದ ಸುತ್ತಮುತ್ತಲು ಟ್ರಾಫಿಕ್ ಜಾಮ್ ಉಂಟಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ. ಸುಮಾರು ಮೂರರಿಂದ ನಾಲ್ಕು ಕಿಲೋಮೀಟರ್ ವರೆಗೆ ರಸ್ತೆಯುದ್ದಕ್ಕೂ ವಾಹನಗಳು ನಿಂತಿವೆ. ಹೀಗಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೇ ಹೆಬ್ಬಾಳದ ಫ್ಲೈ ಓವರ್ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿವೆ.













