Author: kannadanewsnow05

ಹುಬ್ಬಳ್ಳಿ : ಪಂಚಮಸಾಲಿ ಸಮುದಾಯದವರಿಗೆ 2 A ಮೀಸಲಾತಿ ನೀಡುವ ವಿಚಾರಕ್ಕೆ ಸುವರ್ಣ ಸೌಧದ ಬಳಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ವಿರೋಧಿಸಿ ರಾಜ್ಯಾದ್ಯಂತ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹುಬ್ಬಳ್ಳಿ ಹಾಗೂ ಗದಗದಲ್ಲಿ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮುದಾಯ ಹೋರಾಟಗಾರರು, ಉಣಕಲ್ ಕೆರೆಯ ಬಳಿ ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆಯಿತು. ಇನ್ನು ಗದಗದಲ್ಲಿ ಕೂಡ ಜಿಲ್ಲಾಧಿಕಾರಿ ಕಚೇರಿಯ ಸಮೀಪ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಒಬ್ಬರ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆಯಿತು.

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪ ಆರಂಭವಾಗಿದ್ದು, ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆಯಿತು. ಇದರ ಮಧ್ಯ ಬೆಳಗಾವಿಯ ಹಿರೇಬಾಗೇವಾಡಿ ಬಳಿ ಪಂಚಮಸಾಲಿ ಹೋರಾಟದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪಂಚಮಸಾಲಿ ಹೋರಾಟ ಸ್ಥಳಕ್ಕೆ ಮಾರಕಾಸ್ತ್ರ ತಂದಿದ್ದು ಪತ್ತೆಯಾಗಿದೆ. ಹೌದು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಹೋರಾಟ ನಡೆಸಲಾಗುತ್ತಿದ್ದು, ಸ್ಕೂಟರ್ ಮೇಲೆ ಇದ್ದಂತಹ ಮಾರಕಾಸ್ತ್ರಗಳನ್ನು ಕಂಡು ಪೊಲೀಸರೆ ಶಾಕ್ ಆಗಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬಂದವರು ಮಾರಕಾಸ್ತ್ರ ತಂದಿದ್ದರ ಅಥವಾ ಬೇರೆ ಯಾರಾದರೂ ತೆಗೆದುಕೊಂಡು ಹೋಗುತ್ತಿದ್ದೀರಾ ಅಂತ ಪೊಲೀಸರು ಪರಿಶೀಲನೆ ಮಾಡಿಸುತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ.

Read More

ಕೊಡಗು : ಇಂದಿನ ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ. ಪೋಷಕರಾಗಲಿ ಬೇರೆ ಯಾರೇ ಏನೇ ಅಂದರೂ ಕೂಡ ಸಾಕು ಏನಾದರೂ ಒಂದು ಅನಾಹುತ ಮಾಡಿಕೊಳ್ಳುತ್ತಾರೆ. ಇದೀಗ ಕೊಡಗಿನಲ್ಲೂ ಕೂಡ ಅಂಥದ್ದೇ ಘಟನೆ ನಡೆದಿದ್ದು, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಅಕ್ಕ ತಮ್ಮ ನಡುವೆ ಮೊಬೈಲ್ ವಿಚಾರವಾಗಿ ಗಲಾಟೆಯಾಗಿದ್ದು, ಮನನೊಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಕೊಡಗು ಜಿಲ್ಲೆಯ ಕುಶಾಲ್ ನಗರದ ಆದಿಶಂಕರಾಚಾರ್ಯ ಬಡಾವಣೆ ನಿವಾಸಿ ರಣಜಿತ್ ಸಿಂಗ್ ಅವರ ಪುತ್ರಿ ಭಾವನ (19) ಮೃತ ದುರ್ದೈವಿ ಎಂದು ತಿಳಿದುಬಂದಿದೆ. 10ನೇ ತರಗತಿ ಮುಗಿಸಿಕೊಂಡ ಭಾವನಾ ಅಪ್ಪನಿಗೆ ಸಹಾಯ ಮಾಡಲು ಫ್ಯಾನ್ಸಿ ಸ್ಟೋರ್ ಅಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಡಿ.8 ರಂದು ಅಂಗಡಿಯಲ್ಲಿದ್ದ ಭಾವನ ಹಾಗೂ ಆಕೆಯ ತಮ್ಮನಾದ ಮಹಿಪಾಲ್ ನಡುವೆ ಜಗಳವಾಗಿದೆ. ಇದರಿಂದ ಬೇಸರಗೊಂಡ ಭಾವನ ಮನೆಗೆ ಹೋಗಿರುವುದಾಗಿ ತಿಳಿಸಿ ಹೊರಟಿದ್ದಾಳೆ. ಮನೆಗೆ ಹೋಗುತ್ತೇನೆ ಎಂದು ಹೇಳಿದ ಭಾವನ ರಾತ್ರಿಯಾದರೂ ಮನೆಗೆ ಬಾರದೆ ಇದುದ್ದನ್ನು ತಿಳಿದು ತಂದೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣಸೌಧ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ತಡೆದು ಲಾಠಿಚಾರ್ಜ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸುವರ್ಣಸೌಧ ಮುತ್ತಿಗೆ ಹಾಕುವುದನ್ನು ತಡೆಯಬೇಕಾಗಿತ್ತು. ಹಾಗಾಗಿ ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ನಡೆದುಕೊಂಡ ರೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹದೇವಪ್ಪ, ವೆಂಕಟೇಶ್, ಸುಧಾಕರ್ ಅವರನ್ನ ಮೂರು ಜನ ಸಚಿವರುಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅದರಲ್ಲಿ ಸ್ಥಳೀಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಕೂಡ ಇದ್ದರು ಅವರು ಕೂಡ ಮುಖ್ಯಮಂತ್ರಿಗಳು ಈ ರೀತಿ ಹೇಳಿದ್ದಾರೆ. ಎಲ್ಲರು ಕುಳಿತುಕೊಂಡು ಚರ್ಚೆ ಮಾಡೋಣ ಬನ್ನಿ ಅಂತ ಹೇಳಿದ ಕಳಿಸಿದ್ದಾರೆ ಎಂದರು. ಆಗಲು ಕೂಡ ಇಲ್ಲ ನಾವು ಬರೋದಿಲ್ಲ ಮುಖ್ಯಮಂತ್ರಿಗಳೇ ಇಲ್ಲಿಗೆ ಬರಲಿ ಅಂತ ಹೇಳಿದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬರೋದಿಕ್ಕೆ ಸಾಧ್ಯವಿಲ್ಲ ಎಂದಾಗ ಇದಕ್ಕಿದಂತೆ ಸ್ವಾಮೀಜಿಯವರು ವಿಧಾನಸೌಧಕ್ಕೆ ಹೋಗೋಣ ಬನ್ನಿ ಎಂದು ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ರಸ್ತೆಗೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಘಟನೆಯ ಸಂಪೂರ್ಣ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡರು. ಬೆಳಗಾವಿಯ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ, ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಮಾಹಿತಿ ನೀಡಿದ್ದು, ಅವರಿಂದ ವಿಡಿಯೋ ಮತ್ತು ಹೈಕೋರ್ಟ್ ಆದೇಶದ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಹೈಕೋರ್ಟ್ ಹೋರಾಟಕ್ಕೆ ಅನುಮತಿ ನೀಡಿತ್ತು. ಆದರೆ ಪ್ರತಿಭಟನೆ ವೇಳೆ ಹೈ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ಡಿಸಿ ಮಾಹಿತಿ ನೀಡಿದ್ದಾರೆ.ಲಾಠಿಚಾರ್ಜ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದರು. ಸದನದಲ್ಲಿ ಸಿದ್ದರಾಮಯ ಈ ಕುರಿತು ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

Read More

ಕೊಡಗು : ಇತ್ತೀಚಿಗೆ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆಯ ಕಾಟ ಇತ್ತು. ಆದರೆ ಇದೀಗ ಕೊಡಗು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾದಂತಹ ಎ.ಎಸ್ ಪೊನ್ನಣ್ಣ ನಿವಾಸದ ಬಳಿ ಹುಲಿ ಓಡಾಡಿದೆ. ಇದರಿಂದ ಸಹಜವಾಗಿ ಅಲ್ಲಿನ ಸ್ಥಳೀಯ ನಿವಾಸಿಗಳಿಗೆ ಆತಂಕ ಹೆಚ್ಚಾಗಿದೆ. ಹೌದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಎ.ಎಸ್.ಪೊನ್ನಣ್ಣ ಅವರ ಮನೆಯ ಬಳಿ ಹುಲಿ ಓಡಾಟ ನಡೆಸಿದ್ದು, ಹುಲಿಯ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಮೂಡಿವೆ. ಹುಲಿ ಓಡಾಡಿರುವ ವಿಷಯ ತಿಳಿದು ತಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಕೊಡಲೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿದ್ದು, ಹುಲಿಯನ್ನು ಸೇರಿ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಕಲಬುರ್ಗಿ : ಕೇವಲ ಒಂದು ಹುಡುಗಿಗೋಸ್ಕರ ಅಪ್ರಾಪ್ತರ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಬಡಿಗೆ, ಕಲ್ಲುತೂರಾಟ ನಡೆಸಿ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿರುವ ಘಟನೆ ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಈ ಒಂದು ಗ್ಯಾಂಗ್ ವಾರ್ ನಡೆದಿದ್ದು, ಘಟನೆಯನ್ನು ಕಂಡು ಕಲ್ಬುರ್ಗಿ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆರ್.ಜಿ ನಗರ ಠಾಣೆಯ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಒಂದು ಗ್ಯಾಂಗ್ ವಾರ್ ನಡೆದಿದ್ದು, ಎರಡು ಗ್ಯಾಂಗ್ಗಳಲ್ಲಿ ಬಹುತೇಕ ವಿದ್ಯಾರ್ಥಿಗಳೇ ಇದ್ದರೂ ಎನ್ನಲಾಗಿದೆ. ಹುಡುಗಿಯ ವಿಷಯದ ಕುರಿತಂತೆ ಈ ಒಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ ಎನ್ನಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಹುಡುಗಿಯೊಬ್ಬಳಿಗೆ ಒಂದು ಗುಂಪಿನವರು ಮೆಸೇಜ್ ಕಳಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕುಡಿದ ನಶೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.…

Read More

ಬೆಳಗಾವಿ : ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ, ಇದುವರೆಗೂ ಲಿಂಗಾಯಿತ ವಿರೋಧಿ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ನಾವು ಹಾಗೆ ಅಂದುಕೊಂಡಿರಲಿಲ್ಲ. ಆದರೆ, ಈಗ ಆ ರೀತಿ ಅನಿಸುತ್ತಿದೆ. ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡು…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಎರಡು ಮಕ್ಕಳನ್ನು ತಾಯೊಬ್ಬಳು ಉಸಿರುಗಟ್ಟಿಸಿ ಕೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌಫು ಬೆಂಗಳೂರಲ್ಲಿ ಮಕ್ಕಳ ಕೊಂದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ, ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ ಎಂದು ತಿಳಿದುಬಂದಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕುಸುಮ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಪತಿಯೊಂದುಗೆ ಜಗಳ ಮಾಡಿಕೊಂಡು, ಮನನೊಂದ ಕುಸುಮ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ನೇಣು ಬಿಗಿದು ಕೊಂಡು ಇದೀಗ ತಾನು ಆತ್ಮಹತ್ಯೆಕೊಂಡು ಇಬ್ಬರು ಮಕ್ಕಳನ್ನು ಕೊಂದಿದ್ದಾಳೆ.…

Read More

ಹಾಸನ : ಬ್ಯಾಂಕ್ ನಲ್ಲಿ ಹಾಗೂ ಇತರೆ ವೈಯಕ್ತಿಕ ಕೈ ಸಾಲ ಮಾಡಿಕೊಂಡಂತಹ ದಂಪತಿಗಳು ಸಾಲ ತೀರಿಸಲಾಗದೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ. ಹೌದು ಸಾಲಭಾದೆಗೆ ಮನನೊಂದು ರೈತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂಪತಿಗಳನ್ನ ನಟೇಶ್ ಹಾಗೂ ಚಿನ್ನಮ್ಮ ಎಂದು ತಿಳಿದುಬಂದಿದೆ. ಬ್ಯಾಂಕ್ ಹಾಗೂ ಕೈ ಸಾಲವನ್ನು ನಟೇಶ್ ಹಾಗು ದಂಪತಿ ಸಾಲ ಮಾಡಿಕೊಂಡಿದ್ದರು.ಸಾಲ ತೀರಿಸಲಾಗಿದೆ ನಟೇಶ್ ಮತ್ತು ಚಿನ್ನಮ್ಮ ದಂಪತಿ ಪರದಾಡುತ್ತಿದ್ದರು. ಸಾಲದ ಹಣ ವಾಪಸ್ ಗೆ ಸಾಲ ಕೊಟ್ಟವರು ಒತ್ತಾಯಿಸುತ್ತಿದ್ದರು. ಇದರಿಂದ ಬೇಸತ್ತು ಬಾವಿಗೆ ಹಾರಿ ನಟೇಶ್ ಮತ್ತು ಚಿನ್ನಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ತಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಡರಾತ್ರಿ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More