Author: kannadanewsnow05

ಬೆಂಗಳೂರು : ಬೆಂಗಳೂರಿನ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಜೊತೆಗೆ ಕಂಡಕ್ಟರ್ ಗಳು ಆಗಾಗ ಕಿರಿಕಿರಿ ಮಾಡಿಕೊಳ್ಳುತ್ತಿದ್ದರು. ಇದಕ್ಕೆ ಕಾರಣ ಏನೆಂದರೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಅದಕ್ಕೀಗ ಬಿಎಂಟಿಸಿ ಬ್ರೇಕ್ ಹಾಕಿದ್ದು, ಆಧಾರ್ ಕಾರ್ಡ್ ಯಾವ ಭಾಷೆಯಲ್ಲಿದ್ದರೂ ಪರವಾಗಿಲ್ಲ, ವಿಳಾಸ ಕರ್ನಾಟಕದಾಗಿದ್ದರೆ ಸಾಕು ಎಂದು ಆದೇಶ ಹೊರಡಿಸಿದೆ. ಹೌದು ಇಷ್ಟು ದಿನಗಳ ಕಾಲ ಬಿಎಂಟಿಸಿಯಲ್ಲಿ ಸಂಚರಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಇದೊಂದು ತಲೆನೋವು ಆಗಿ ಪ್ರಣಮಿಸಿತ್ತು. ಕಂಡಕ್ಟರ್ಗಳ ಜೊತೆಗೆ ಮಹಿಳಾ ಪ್ರಯಾಣಿಕರು ಕಿರಿಕ್ ಮಾಡಿಕೊಳ್ಳುತ್ತಿದ್ದರು. ಆದರೂ ಕಂಡಕ್ಟರ್ಗಳು ಆಧಾರ್ ಕಾರ್ಡ್ ನಲ್ಲಿ ಇಂಗ್ಲಿಷ್ ನಲ್ಲಿ ಅಡ್ರೆಸ್ ಇದೆ ಟಿಕೆಟ್ ನೀಡಲ್ಲ ಎಂದು ಮಹಿಳೆಯರೊಂದಿಗೆ ವಾಗ್ವಾದಕ್ಕೆ ಇಳಿಯುತ್ತಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವ ಭಾಷೆಯಲ್ಲಿದ್ದರೂ ಸರಿ ಟಿಕೆಟ್ ನೀಡಿ ಎಂದು ಆದೇಶ ಹೊರಡಿಸಿದೆ. ದೇಶದ…

Read More

ಧಾರವಾಡ : ಕಳೆದ ಡಿಸೆಂಬರ್ 8ರಂದು ನಡೆದ ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೂಡ ಅಕ್ರಮ ನಡೆದಿದೆ ಎನ್ನುವ ಆರೋಪ ಇದೀಗ ಕೇಳಿ ಬರುತ್ತಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಪರೀಕ್ಷೆಗೊ ಮುನ್ನ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿರುವ ಫೋಟೋ ಇದೀಗ ವೈರಲ್ ಆಗಿದ್ದು, ಕೆಪಿಎಸ್ಸಿಯಿಂದ ಈಗ ಮತ್ತೊಂದು ಮಹಾ ಎಡವಟ್ಟು ಆಗಿದೆ ಎನ್ನಲಾಗಿದೆ. ಹೌದು ಕಳೆದ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ವಿಫಲವಾಯ್ತಾ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸುಮಾರು 40 ಪುಟಗಳಷ್ಟು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆತನ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ. ಹೌದು ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್‌ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಕೋಟಿ ಹಣ…

Read More

ಮಂಡ್ಯ : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ಸಾವನಪ್ಪಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವರ ಹುಟ್ಟೂರಾದ ಸೋಮನಹಳ್ಳಿಗೆ ತಂದು, ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎಸ್ಎಮ್ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಅವರು ತಾತನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು. ಈ ಒಂದು ಅಂತ್ಯಕ್ರಿಯೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಗೆ ಸುಮಾರು 15 ಜನ ಸ್ವಾಮೀಜಿಗಳು ವೇದ ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ, ಒಕ್ಕಲಿಗ ಸಂಪ್ರದಾಯದಂತೆ ಎಸ್ ಎಂ ಕೃಷ್ಣ ಅವರ ಚಿತೆಗೆ ಅವರ ಪ್ರೀತಿಯ ಮೊಮ್ಮಗ ಆದಂತಹ ಅಮರ್ತ್ಯ ಅವರು ಅಗ್ನಿಸ್ಪರ್ಶಿಸುವ ಮೂಲಕ ತಾತನ ಚಿತೆಗೆ ಅಗ್ನಿಸ್ಪರ್ಶಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್…

Read More

ಬೆಂಗಳೂರು : ಕಳೆದ ಹಲವು ದಿನಗಳ ಹಿಂದೆ ತಮಿಳುನಾಡಿನಲ್ಲಿ ಉಂಟಾಗಿದ್ದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ಬಿರಿತ್ತು. ಬಳಿಕ ಆ ಒಂದು ಚಂಡಮಾರುತದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಹಲವರು ಅವಂತರ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೌದು ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ…

Read More

ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮಾಜಿ ಸಿಎಂ SMK ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ SMKಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು. ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು…

Read More

ಹುಬ್ಬಳ್ಳಿ : ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 29 ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ಡಿಸೆಂಬರ್ 7 ರಿಂದ 10, 2024 ರವರೆಗೆ ಒಡಿಶಾದ ಪುರಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶಾದ್ಯಂತದ ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು. ನೈಋತ್ಯ ರೈಲ್ವೆ ತಂಡವು ಒಟ್ಟು ಏಳು ಸ್ಪರ್ಧಿಗಳನ್ನು ಒಳಗೊಂಡಿತ್ತು, ಅದರಲ್ಲಿ ನಾಲ್ವರು – ವೆಂಕಪ್ಪ ಕೆ, ಮೇಘಾ ಗುಗಾಡ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋರ್ಜಿ ಅವರನ್ನೊಳಗೊಂಡ ತಂಡ 60 ಕಿ.ಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ವೈಯಕ್ತಿಕ ಸಾಧನೆಗಳು: 1. ಬಾಗಲಕೋಟೆಯಲ್ಲಿ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿರುವ ವೆಂಕಪ್ಪ ಕೆ. 60 ಕಿ.ಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 2. ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿರುವ, ಕಾವೇರಿ ಮುರಾನಾಳ್: •…

Read More

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು,ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ…

Read More

ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಚಲನಚಿತ್ರ ನಟ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಕೂಡ ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಂದ ಕಲಿಯೋದು ತುಂಬಾ ಇದೆ. ಇಂದಿನ ಯುವ ರಾಜಕಾರಣಿಗಳಿಗೆ ಅವರ ರಾಜಕೀಯ ಜೀವನ ಮಾರ್ಗದರ್ಶನವಾಗಿದೆ.ನಮ್ಮ ದೇಶ ಇಂದು ಒಳ್ಳೆ ನಾಯಕನನ್ನು ನಾವು ಕಳೆದುಕೊಂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಗುರುತಿಸುತ್ತಾರೆಂದರೆ ಅದೆಲ್ಲ ಕ್ರೆಡಿಟ್ ಎಸ್. ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಅಭಿಷೇಕ್ ಅಂಬರೀಶ್ ಅವರು ಸಂತಾಪ ಸೂಚಿಸಿದರು.. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ…

Read More

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವು ಇದೀಗ ಅವರ ಹುಟ್ಟುವದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಇವಳೇ ದಾರಿ ಉದ್ದಕ್ಕೂ ಸಹಸ್ರಾರು ಜನರು ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟ ಅವರ ಪಾರ್ಥಿವ ಶರೀರವು, ಬಿಡದಿ ರಾಮನಗರ ಚನ್ನಪಟ್ಟಣದ ಮೂಲಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಈ ವೇಳೆ ಸೋಮನಹಳ್ಳಿಯ ಗ್ರಾಮದ ಎಲ್ಲಾ ಜನರು ಎಸ್ಎಮ್ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಭಾನುಪ್ರಕಾಶ್ ಅವರು ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಲಿದೆ. ಸ್ಥಳದಲ್ಲಿ ಸಚಿವ ಚೆಲುವರಾಯಸ್ವಾಮಿ ಅಂತ್ಯಕ್ರಿಯೆ ಸಕಲ ಸಿದ್ಧತೆ ಪರಿಶೀಲನೆ ಮಾಡಿದರು.

Read More