Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಯಾದಗಿರಿ : ಯಾದಗಿರಿಯಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಟವಾಡುತ್ತ ತೆರೆದ ಬಾವಿಯಲ್ಲಿ ಬಿದ್ದು 6 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಯಾದಗಿರಿ ನಗರದಲ್ಲಿ ನಡೆದಿದೆ. ಯಾದಗಿರಿ ನಗರದ ಕೋಲಿವಾಡ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು ರಾಜು (6) ಎನ್ನುವ ಬಾಲಕ ಸಾವನಪ್ಪಿದ್ದಾನೆ. ಸದ್ಯ ಬಾಲಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮತ್ತೊಂದು ಬಾರಿ ಅನಾಹುತ ಒಂದು ತಪ್ಪಿದೆ. ಇಂಧನ ಖಾಲಿಯಾದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಜೂನ್ 19ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಂಧನ ಖಾಲಿಯಾಗಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ಭಾರಿ ಅನಾಹುತ ಒಂದು ತಪ್ಪಿದೆ. ಗುವಾಹಟಿಯಿಂದ ಇಂಡಿಗೋ ವಿಮಾನ ಚೈನ್ನೈ ಗೆ ತೆರಳುತ್ತಿತ್ತು. 180 ಪ್ರಯಾಣಿಕರನ್ನು ಹೊತ್ತು ಇಂಡಿಗೋ ವಿಮಾನ ಚೈನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗಿದ್ದನ್ನು ತಿಳಿದು MAYDAYಎಂದು ಕೂಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ನಂತರ ಇಂಧನ ತುಂಬಿಸಿಕೊಂಡು…

Read More

ಮೈಸೂರು : ವ್ಯಕ್ತಿಯೊಬ್ಬರಿಗೆ ಇ ಸ್ವತ್ತು ಮಾಡಿ ಕೊಡಲು ಕಂದಾಯ ಅಧಿಕಾರಿ ಹಾಗೂ ಬಿಲ್ ಕಲೆಕ್ಟರ್ ಇಬ್ಬರು ಸೇರಿ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ 25,000 ಈ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25,000 ಲಂಚ ಸ್ವೀಕರಿಸುವಾಗ ರೆಡ್ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ವಲಯ ಕಚೇರಿಯ ಬಿಲ್ ಕಲೆಕ್ಟರ್ ರಜಾಕ್ ಹಾಗೂ ಕಂದಾಯ ಅಧಿಕಾರಿ ನಂದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸ್ ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಇ ಸ್ವತ್ತು ಮಾಡಿಕೊಡಲು 25,000 ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಸದ್ಯ…

Read More

ತುಮಕೂರು : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಯುವಜನತೆಗೆ ಈ ಒಂದು ಹೃದಯಾಘಾತ ಎನ್ನುವುದು ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ಇದೀಗ ಇಂದು ತುಮಕೂರಿನಲ್ಲಿ ಸಚಿವ ಕೆಎನ್ ರಾಜಣ್ಣ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ಮಹಿಳೆಯೋಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ಮಹಿಳೆಗೆ ಹೃದಯಘಾತವಾಗಿದ್ದು, ಹೃದಯಾಘಾತದಿಂದ ಸೀಗೇಹಳ್ಳಿ ನಿವಾಸಿ ಸುನಂದಮ್ಮ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ನಿವಾಸಿಯಾಗಿರುವ ಸುನಂದಮ್ಮ ಅವರು ಅಭಿನಂದನಾ ಸಮಾರಂಭ ಮುಗಿಸಿ ಬಸ್ ನಲ್ಲಿ ತೆರಳುವಾಗ ಈ ಒಂದು ಘಟನೆ ನಡೆದಿದೆ. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಈ ಒಂದು ಅಭಿನಂದನಾ ಕಾರ್ಯಕ್ರಮ ನಡೆದಿತ್ತು.

Read More

ಹಾಸನ : ಪ್ರಪಂಚದ ಆಗು-ಹೋಗುಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿಯುವುದರಲ್ಲಿ ಕೋಡಿಶ್ರೀಗಳು ಯಾವಾಗಲು ಮುಂದು ಇದೀಗ ಮತ್ತೆ ಸ್ಪೋಟಕ ಭವಿಷ್ಯ ನುಡಿದಿದ್ದು, ಸಿಎಂ ಸಿದ್ದರಾಮಯ್ಯ ಬಗ್ಗೆ ಭವಿಷ್ಯ ಹೇಳಿದ ಸ್ವಾಮೀಜಿಗಳು ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ಸಂಸದ ವಿ ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಭವಿಷ್ಯ ನುಡಿದಿದ್ದು, ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ ಎಂದು ಹೇಳಿದ್ದಾರೆ. ಅದರ ಜೊತೆಗೆ ರಾಜಕೀಯದಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ. ಸೋಳೆಯಾ ಮಗನುಟ್ಟಿ, ಆಳುವನು ಮುನಿಪುರವ. ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಗೂಡಾರ್ಥವಾಗಿ ಹೇಳಿದ್ದು, ಇದರ ಅರ್ಥ ಮುಂದಿನ ದಿನಗಳಲ್ಲಿ ಹೇಳುವುದಾಗಿ ಕುತೂಹಲ ಹುಟ್ಟಿಸಿದ್ದಾರೆ. ಸಿಎಂ ಬಗ್ಗೆ ಭವಿಷ್ಯ ನುಡಿದ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಭವಿಷ್ಯ ಹೇಳಿದ ಸ್ವಾಮೀಜಿಗಳು ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಬಾರಿ ಮಳೆ ಹೆಚ್ಚಾಗುವುದರಿಂದ ಜಲಸ್ಫೋಟ…

Read More

ಚಾಮರಾಜನಗರ : ನಿನ್ನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ಹೂತು ಹಾಕಿದ್ದ ಶವದ ಮುಂಗೈ ಹೊರಬಂದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಳೆ ಹಂಪಾಪುರ ಬಳಿ ಹೂತಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಮಕ್ಕಳ ತಾಯಿಯನ್ನು ಪ್ರಿಯಕರ ಮಾದೇಶ ಕೊಂದುಹಾಕಿ ಹೂತು ಹಾಕಿದ್ದ ಎನ್ನಲಾಗಿದೆ. ಹೌದು ಪ್ರಿಯಕರ ಮಾದೇಶ ಮಹಿಳೆಯನ್ನು ಕೊಂದು 2 ಅಡಿ ಮಣ್ಣಲ್ಲಿ ಹೂತಿದ್ದ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಳೆ ಹಂಪಾಪುರ ಗ್ರಾಮದಲ್ಲಿ ಮೊಳೆ ನಿವಾಸಿ ಸೋನಾಕ್ಷಿ ತಲೆಗೆ ಹೊಡೆದು ಪ್ರಿಯಕರ ಮಾದೇಶ ಕೊಂದಿದ್ದ. ಪ್ರೇಯಸಿ ಸೋನಾಕ್ಷಿ ಕೊಂದು ಪ್ರಿಯಕರ ಮಾದೇಶ ಶವವನ್ನು 2 ಅಡಿ ಗುಂಡಿ ತೋಡಿ ಹೂತಿದ್ದ ಎನ್ನಲಾದೆ. ಎರಡು ಮಕ್ಕಳನ್ನು ಬಿಟ್ಟು ಸೋನಾಕ್ಷಿ ಮಾದೇಶನ ಜೊತೆಗೆ ಬಂದಿದ್ದಳು. ಕೆಲ ದಿನಗಳ ಕಾಲ ಮಾದೇಶನ ಜೊತೆಗೆ ನಂತರ ಮಾದೇಶನಿಗೆ ಕೈಕೊಟ್ಟು ಮತ್ತೊಬ್ಬನ ಜೊತೆಗೆ ಓಡಿಹೋಗಿದ್ದಳು. ಬಳಿಕ ಮೈಸೂರು ಜಿಲ್ಲೆಯ ಟಿ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ದಾಖಲಿಸಿದ ಮಾನನಷ್ಟ ಮೊಕದ್ದಮೆಯನ್ನು ಕೋರ್ಟ್ ಇದೀಗ ವಜಾಗೊಳಿಸಿದೆ. ಬೆಂಗಳೂರಿನ 42ನೇ ACJM ಕೋರ್ಟ್ ನ ಜಡ್ಜ್ ಕೆ.ಎನ್ ಶಿವಕುಮಾರ್ ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಡಾ ಪ್ರಕರಣ ದಾಖಲಿಸಿದ ಬಳಿಕಟ್ಟಿದೆ ಅಬ್ರಹಾಮ ವಿರುದ್ಧ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅಬ್ರಹಾಂ ದೂರು ದಾಖಲಿಸಿದ್ದರು.ಇದೀಗ ಇಂದು ವಿಚಾರಣೆ ನಡೆಸಿದ ಜಡ್ಜ್ ಕೆ.ಎನ್ ಶಿವಕುಮಾರ್ ಅವರು CM ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಿ ಆದೇಶಿಸಿದರು.

Read More

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಇನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಪ್ರಕರಣದ ಕುರಿತು ತನಿಖಾಧಿಕಾರಿಗಳು ಎಲ್ಲಾ ಹೇಳಿಕೆಗಳನ್ನು ದಾಖಲಿಸಿದ್ದು, ನ್ಯಾಯಾಲಯ ವಿಚಾರಣೆಯನ್ನು ಜೂನ್ 28ಕ್ಕೆ ಮುಂದೂಡಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖಾಧಿಕಾರಿಗಳ ಹೇಳಿಕೆ ದಾಖಲು ಆಗಿದ್ದು, ಇಡೀ ದಿನ ದಾಖಲೆಗಳ ಸಹಿತ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇದುವರೆಗೂ ಎಲ್ಲಾ ಪ್ರಮುಖ ಸಾಕ್ಷಿಗಳ ಹೇಳಿಕೆಯನ್ನು ರಾಜಕೀಯ ದಾಖಲಿಸಿದೆ. ಎಸ್.ಪಿ.ಪಿ ಜಗದೀಶ್, ಅಶೋಕ್ ನಾಯಕರಿಂದ ಸಾಕ್ಷಿಗಳ ವಿಚಾರಣೆ ನಡೆಯುತ್ತಿದ್ದು, ತನಿಖಾಧಿಕಾರಿಯ ಪಾಟಿ ಸವಾಲಿಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ಹಾಗಾಗಿ ಇದೀಗ ವಿಚಾರಣೆಯನ್ನು ಜೂನ್ 28ಕ್ಕೆ ನ್ಯಾಯಾಲಯ ಮುಂದೂಡಿದೆ.

Read More

ರಾಯಚೂರು : ಮಾಜಿ ಶಾಸಕರ ಜೇಬಲ್ಲಿದ್ದಂತಹ 70,000 ಹಣದ ಕಂತೆ ಖತರ್ನಾಕ್ ಕಳ್ಳನೊಬ್ಬ ಕದ್ದಿದ್ದಾನೆ. ಸಚಿವ ಎನ್.ಎಸ್ ಬೊಸರಾಜು ಅವರ ಹುಟ್ಟುಹಬ್ಬದ ಹಿನ್ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕೈಚಳಕ ತೋರಿಸಿದ್ದಾನೆ. ಸಚಿವ ಎನ್ಎಸ್ ಬೋಸರಾಜು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ರಾಯಚೂರು ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಈ ಒಂದು ಕಾರ್ಯಕ್ರಮ ನಡೆದಿದ್ದು ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕರಾಗಿರುವ ಡಿ ಎಸ್ ಹುಲಗೇರಿಯವರ ಜೇಬು ಕತ್ತರಿಸಿ ಕಳ್ಳನೊಬ್ಬ 70,000 ಹಣದ ಕಂತೆಯನ್ನು ಎಗರಿಸಿದ್ದಾನೆ. ತಕ್ಷಣ ಎಚ್ಚೆತ್ತು ಜೇಬುಗಳ್ಳನಿಗೆ ಧರ್ಮದೇಟು ನೀಡಿದ್ದಾರೆ. ಕಪಾಳ ಮೋಕ್ಷ ಮಾಡಿ ಹಣವನ್ನು ವಾಪಸ್ ಕಿತ್ತುಕೊಂಡಿದ್ದಾರೆ.

Read More

ವಿಜಯಪುರ : ವಿಜಯಪುರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಹಾಡಹಗಲೇ ಬ್ಲೇಡ್ ನಿಂದ ಕತ್ತಿಗೆ ಹೊಡೆದು ಆಟೋ ಚಾಲಕನ ಹತ್ಯೆಗೆ ಯತ್ನಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಅಂಬರೀಶ ಕೂಡಗಿ ಹಲ್ಲೆಗೆ ಒಳಗಾದ ಆಟೋ ಚಾಲಕ ಎಂದು ತಿಳಿದುಬಂದಿದೆ. ಅಂಬರೀಷ್ ಆಟೋ ಏರಿದ್ದ ಅಪರಿಚಿತ ವ್ಯಕ್ತಿ ಒಬ್ಬ ಅಂಬರೀಶ್ ಹತ್ಯೆಗೆ ಯತ್ನಿಸಿದ್ದಾನೆ. ಆಟೋ ಚಾಲನೆ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬ್ಲೇಡ್ ಯಿಂದ ಕತ್ತಿಗೆ ಹೊಡೆದು ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿ ಯಾಗಿರುವ ಘಟನೆ ವರದಿಯಾಗಿದೆ. ಕೂಡಲೆ ಗಾಯಾಳು ಅಂಬರೀಶ್ ನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More