Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮೇಲಿಂದ ಮೇಲೆ ರೋಡ್ ರೇಸ್ ಪ್ರಕರಣಗಳ ಸಂಖ್ಯೆ ಹೆಚ್ಚು ತಲೆ ಇವೆ ಇದೀಗ ಬೆಂಗಳೂರಿನ ಎಂಟನೇ ಮೈಲಿಯಲ್ಲಿ  ಪವರ್ ಟೆಕ್ ವಿಚಾರವಾಗಿ ವಿದ್ಯಾರ್ಥಿಗಳ ಚಲಿಸುತ್ತಿದ್ದ ಕಾರು ಹಾಗೂ ಒಂದು ಕುಟುಂಬ ಚಲಿಸುತ್ತಿದ್ದ ಕಾರಿನವರ ಮಧ್ಯ ಹೊಡೆದಾಟ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್ ಪ್ರಕರಣ ನಡೆದಿದ್ದು,  ಓವರ್ಟೇಕ್ ವಿಷಯದಲ್ಲಿ ಎರಡು ಕಾರಿನ ಮಧ್ಯ ಬಡಿದಾಟ ನಡೆದಿದೆ. 8ನೇ ಮೈಲಿಯ ನವಯುಗ ಟೋಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕಾರು ಪ್ರಾಯಾಣಿಕರ ಗಲಾಟೆ ದೃಶ್ಯ ಇದೀಗ ಮೊಬೈಲ್ನಲ್ಲಿ ಸೆರೆಯಾಗಿದೆ. ಒಂದು ಕಾರಿನಲ್ಲಿ ಕೇರಳದ ಕಾಲೇಜು ವಿದ್ಯಾರ್ಥಿಗಳು ಇದ್ದರು. I-20 ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಇದ್ದರು ಇನ್ನು ಇನ್ನೊಂದು ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಕುಟುಂಬ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಮತ್ತೊಂದು ಕಾರಿನಲ್ಲಿ ಇದ್ದ ಕುಟುಂಬ ಗಲಾಟೆ ಮಾಡಿದೆ. ವಿದ್ಯಾರ್ಥಿಗಳ ಕಾರನ್ನು ಬೆನ್ನಟ್ಟಿ ಟೋಲ್ ಬಳಿಗೆ ಹೊಡೆದಾಟ ನಡೆದಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ನ ಬಾತ್ರೂಮ್ ನಲ್ಲಿ ಇಟ್ಟಿಗೆ ಒಂದಕ್ಕೆ ನೇಣು ಬಿಗಿದುಕೊಂಡು ಕಾರ್ಪೆಂಟರ್ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೋರಮಂಗಲದ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕಾರ್ಪೆಂಟರ್ ಅನ್ನು ಉಡುಪಿ ಜಿಲ್ಲೆಯ ಮುಲ್ಕಿಯ ಜಯರಾಮ್ (40) ಎಂದು ತಿಳಿದುಬಂದಿದೆ. ಇತ್ತೀಚಿಗೆ ಜಯರಾಮ್ ಅವರ ಚಿಕ್ಕಮ್ಮ ವಯೋ ಸಹಜ ಕಾಯಿಲೆಯಿಂದ ಮರತ ಪಟ್ಟಿದ್ದರು ಇದರಿಂದ ಮನನೊಂದ ಜಯರಾಮ ಮದ್ಯ ವ್ಯಸನಿಯಾಗಿದ್ದರು. ಬಳಿಕ ಜಯರಾಮ್ ಸಹೋದರ ವಾಸುದೇವ್, ಮಧ್ಯದ ಚಟ ಬಿಡಿಸಿ ಉಡುಪಿಯಿಂದ ಬೆಂಗಳೂರಿಗೆ ಕೆಲಸಕ್ಕೆ ಕರೆದುಕೊಂಡು ಬಂದಿದ್ದರು. ಬೆಂಗಳೂರಿನ ಕೋರಮಂಗಲದ ಖಾಸಗಿ ಹೋಟೆಲ್ನಲ್ಲಿ ಜಯರಾಮ್ ಸಹೋದರ ವಾಸುದೇವ ಸೇರಿದಂತೆ ಇತರೆ ಇಬ್ಬರು ತಂಗಿದ್ದರು. ರಾತ್ರಿ ಊಟ ಮಾಡಿದ ಬಳಿಕ ಎಲ್ಲರೂ ಮಲಗಿದ್ದಾಗ ಜಯರಾಮ್ ಬಾತ್ರೂಮ್ ಗೆ ಹೋಗಿ ಕೆಟಕಿಗೆ ನೀನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮುಂಜಾನೆ ಸಹೋದರ ವಾಸುದೇವ್‌, ಬಾತ್‌ರೂಮ್‌ ಬಾಗಿಲು ಒಡಿದರೂ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು…

Read More

ಉತ್ತರಪ್ರದೇಶ : ಕೆಲವೊಂದು ಬಾರಿ ನಾವು ನೋಡದಿರುವಂತಹ ಸ್ಥಳಗಳಿಗೆ ತೆರಳಲು ಸಹಜವಾಗಿ ಗೂಗಲ್ ಮ್ಯಾಪ್ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಗೂಗಲ್ ಮ್ಯಾಪ್ ನಂಬಿ ಅದೆಷ್ಟೋ ಅವಘಡಗಳು ಸಂಬಂಧಿಸಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಇದೆ ಒಂದು ಗೂಗಲ್ ಮ್ಯಾಪ್ ನಂಬಿ ಮದುವೆಗೆ ಎಂದು ಹೊರಟಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಖಲ್ಪುರ್‌-ದಾತ್‌ಗಂಜ್‌ ಪ್ರದೇಶದಲ್ಲಿ ನಡೆದಿದೆ. ಹೌದು ಉತ್ತರ ಪ್ರದೇಶದ ಬರೇಲಿಯಲ್ಲಿ ಗೂಗಲ್‌ ಮ್ಯಾಪ್ಸ್‌ನಲ್ಲಿನ ಎಡವಟ್ಟಿನ ಕಾರಣದಿಂದ ಭಾರೀ ದುರಂತ ಸಂಭವಿಸಿದೆ. ಮದುವೆ ಮನೆಗೆ ರೀಚ್‌ ಆಗಲು ವ್ಯಕ್ತಿಗಳು ಗೂಗಲ್‌ ಮ್ಯಾಪ್ಸ್‌ ನೆಚ್ಚಿಕೊಂಡಿದ್ದರು. ಆದರೆ, ಗೂಗಲ್‌ ಮ್ಯಾಪ್‌ ಕಾಮಗಾರಿ ನಡೆಯುತ್ತಿದ್ದ ಬ್ರಿಜ್‌ಅನ್ನು ದಾರಿಯಾಗಿ ತೋರಿಸಿತ್ತು. ಇದರಿಂದಾಗಿ ಈ ಮಾರ್ಗದಲ್ಲಿ ಸಾಗಿದ ಕಾರು, ನದಿಗೆ ಉರುಳಿ ಬಿದ್ದು ಮೂವರು ಸಾವು ಕಂಡಿರುವ ಘಟನೆ ನಡೆದಿದೆ. ಬೆಳಗ್ಗೆ 10 ಗಂಟೆಯ ವೇಳೆಗೆ ಖಲ್ಪುರ್‌-ದಾತ್‌ಗಂಜ್‌ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದ ಸೇತುವೆಯ ಮಾಹಿತಿ ತಿಳಿಯದೇ ವಾಗವಾಗಿ ಚಲಿಸಿದೆ. ಈ ವೇಳೆ ಕಾರು ರಾಮ್‌ಗಂಗಾ ನದಿಗೆ ಉರುಳಿ ಬಿದ್ದಿದ್ದು ಪ್ರಯಾಣ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂ ಮಾಲೀಕ ದೇವರಾಜು ಒಳಗೊಂಡಂತೆ ಅನೇಕರನ್ನು ವಿಚಾರಣೆಗೆ ಒಳಪಡಿಸಿದೆ. ಈ ನೆಲೆಯಲ್ಲಿ ಇಂದು ಹೈಕೋರ್ಟ್ ಗೆ ಲೋಕಾಯುಕ್ತ ಅಧಿಕಾರಿಗಳುತನಿಖಾ ವರದಿಯನ್ನು ಸಲ್ಲಿಸಲಿದ್ದರೆ. ಇದೆ ವೇಳೆ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಅರ್ಜಿ ಸಲ್ಲಿಸಲಾಗಿದ್ದು, ನಾಳೆ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗುತ್ತದೆ.ಲೋಕಾಯುಕ್ತ ಪೊಲೀಸರು ಮಧ್ಯಂತರ ಪ್ರಗತಿಯ ತನಿಖಾ ವರದಿ ಸಲ್ಲಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಲೋಕಯುಕ್ತ ಅಧಿಕಾರಿಗಳು ಇದೀಗ ತನಿಖೆ ನಡೆಸಿದ್ದಾರೆ. ಸಿಎಂ ಪತ್ನಿ ಪಾರ್ವತಿ ಅವರು ಪಡೆದಿರುವ 14 ಸೈಟ್ಗಳ ಬಗ್ಗೆ ಕೂಡ ತನಿಖೆ ನಡೆಸಿದ್ದಾರೆ. ತನಿಖೆ ಸಂಬಂಧ ಇದುವರೆಗೆ ಸಿದ್ದರಾಮಯ್ಯ ಅವರನ್ನು ಕೂಡ ವಿಚಾರಣೆgs ಒಳಪಡಿಸಿದ್ದಾರೆ. ಹಾಗಾಗಿ ಮಧ್ಯಂತರ ತನಿಖಾ ಪ್ರಗತಿಯ ವರದಿಯನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇತ್ತೀಚಿಗೆ ವಿವಾದಗಳಿಂದಲೇ ಸುದ್ದಿ ಯಾಗುತ್ತಿರುವುದು ಹೆಚ್ಚಾಗುತ್ತಿದೆ. ಈ ನಡುವೆ ಸಹಾಯವಾಣಿ 080-23460460ಗೆ ಕರೆ ಮಾಡಿದರೆ ಯಾವುದೇ ಸಂಪರ್ಕಸಾಧಿಸಲು ಸಾಧ್ಯವಾಗುತಿಲ್ಲ ಎನ್ನುವ ಆರೋಪವನ್ನು ಅನೇಕ ಮಂದಿ ಹೇಳುತ್ತಿದ್ದಾರೆ. ಇದಲ್ಲದೆ ಕ್ಯೂ ನಂಬರ್‌ ಒಂದಕ್ಕೆ ಕರೆ ಬಂದ ಕೂಡಲೇ ಕಾಲ್‌ ಡ್ರಾಪ್‌ ಆಗುತ್ತಿದ್ದು, ಇದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೈತಿಕತೆಯನ್ನು ಪ್ರಶ್ನೆ ಮಾಡುವಂತಿದೆ. ಇನ್ನೂ KEA ಅಧಿಕೃತ ವೆಬ್‌ಸೈಟ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ, ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ, ಸಾರ್ವಜನಿಕ ಸಂಪರ್ಕಾಧಿಕಾರಿ , ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ನಂಬರ್‌ಗಳು ಕೂಡ ಒಂದೇ ನಂಬರ್‌ ಅನ್ನು ಉಲ್ಲೇಖ ಮಾಡಿದ್ದು, ಬೇರೆ ನಂಬರ್‌ಗಳನ್ನು ಯಾಕೆ ನೀಡಿಲ್ಲ ಎನ್ನುವುದು ಈಗ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ KEA ಜನಪರವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಈಗ ಅನುಮಾನ ಮೂಡಿಸಿದೆ.

Read More

ಮೈಸೂರು : ಮುಡಾ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಲೋಕಾಯುಕ್ತ ಡಿವೈಎಸ್​ಪಿ ಎಸ್. ಕೆ ಮಾಲತೇಶ್ ಅವರು ಲೋಕಾಯುಕ್ತ ಸರ್ಚ್ ವಾರೆಂಟ್ ಜಾರಿಯಾದ ಕೂಡಲೇ, ಮುಡಾಗೆ ಬಂದು ಸುಮಾರು 144 ದಾಖಲೆಗಳ ಇರುವಂತಹ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್​ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಅಲ್ಲದೆ ಡಿ ವೈ ಎಸ್ ಪಿ ಎಸ್ ಕೆ ಮಾಲತೇಶ್ ಅವರು ಮೈಸೂರು ಪ್ರಾಧಿಕಾರಕ್ಕೆ ಬಂದಿದ್ದರು. ಒಟ್ಟು 144 ಕಡತಗಳನ್ನ ತೆಗೆದುಕೊಂಡು ಹೋಗಿದ್ದರು ಎಂದು ಲೋಕಾಯುಕ್ತವೇ ತನ್ನ ರಿಪೋರ್ಟ್‌ನಲ್ಲಿ ಉಲ್ಲೇಖಿಸಿತ್ತು. ಮುಡಾದಲ್ಲಿನ ದಾಖಲೆ ಜಪ್ತಿಗೆ ಲೋಕಾಯುಕ್ತ ಸರ್ಚ್ ವಾರೆಂಟ್ ಸಿದ್ಧಪಡಿಸಿಕೊಂಡಿತ್ತು. ಜೂನ್ 28ರ ಸಂಜೆ ಸರ್ಚ್…

Read More

ಬೆಂಗಳೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಹೌದು ಶಾಲಾ ಬಾಲಕನ ಬೆಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೂದಲೇಳೆ ಅಂತರದಲ್ಲಿ ಶ್ವಾನ ದಾಳಿಯಿಂದ ಬಾಲಕ ಪಾರಾಗಿದ್ದಾನೆ. ನಾಯಿಗಳ ದಾಳಿಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುವಾಗ ಬಾಲಕನ ಮೇಲೆ ನಾಯಿ ದಾಳಿ ಮಾಡಿದೆ. ಏಕಾಎಕಿ ಎರಡು ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ಮಾಡಿವೆ. ಕೂಡಲೇ ಬಾಲಕ 2 ನಾಯಿಗಳನ್ನು ಶಾಲಾ ಬಾಲಕ ಬೆದರಿಸಿ ಓಡಿಸಿದ್ದಾನೆ.

Read More

ಬೆಂಗಳೂರು : ಕಳೆದ ನವೆಂಬರ್ 17ರಂದು ನೆಲಮಂಗಲದ ಗೊಲ್ಲರಹಟ್ಟಿಯ ಬಳಿ ಮಹಿಳೆ ಕರಿಯಮ್ಮನನ್ನು ಬಲಿ ಪಡದಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ನೆಲಮಂಗಲದಲ್ಲಿ ಕೊನೆಗೂ ಚಿರತೆ ಬೋನಿಗೆ ಬಿದ್ದಿದೆ. ಮಹಿಳೆಯನ್ನು ಬಲಿ ಪಡೆದು ಭೀತಿ ಹುಟ್ಟಿಸಿದ ಚಿರತೆಯನ್ನು ಇದೀಗ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಇದೀಗ ಚಿರತೆ ಸೆರೆಯಾಗಿದೆ. ಗೊಲ್ಲರಹಟ್ಟಿಯ ಕರಿಯಮ್ಮಳನ್ನು ಚಿರತೆ ಬಳಿ ಪಡೆದಿತ್ತು. ನವೆಂಬರ್ 17ಕ್ಕೆ ಮಹಿಳೆ ಬಲಿಯಾಗಿದ್ದಳು. ನೆಲಮಂಗಲದ ಸುತ್ತಮುತ್ತಲು ಈ ಒಂದು ಚಿರತೆ ಭಯ ನಿರ್ಮಾಣ ಮಾಡಿತ್ತು. ಕಳೆದ ಹಲವು ದಿನಗಳಿಂದ ಜಾಗದಲ್ಲಿ ಎಸಿಎಫ್ ಮೊಕ್ಕಂ ಹೂಡಿತ್ತು. ಸುಮಾರು 40 ಜನ ಸಿಬ್ಬಂದಿ ಜೊತೆ ಸೆರೆ ಹಿಡಿಯಲು ಕಾದು ಕುಳಿತಿದ್ದರು. ಇದೀಗ ಎಸಿಎಫ್ ನಿಜಾಮುದ್ದೀನ್ ಚಿರತೆ ಹಿಡಿಯಲು ಯಶಸ್ವಿಯಾಗಿದ್ದಾರೆ. ಆದರೂ ಈ ಪ್ರದೇಶದಲ್ಲಿ ಹಲವಾರು ಚರಿತೆಗಳ ಹಾವಳಿ ಇದೆ ಎನ್ನಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರ ದುರಂತ ಒಂದು ಸಂಭವಿಸಿದ್ದು, ಬಿಬಿಎಂಪಿ ಪಾರ್ಕ್ ನಲ್ಲಿ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ನವರಂಗ ಪಾರ್ಕ್ ಬಳಿ ಒಂದು ಘಟನೆ ನಡೆದಿದೆ. ಪಾರ್ಕ್ ನಲ್ಲಿ ಮಲಗಿದ್ದ ವೇಳೆ ಮರ ಬಿದ್ದು ಲಕ್ಷ್ಮಣ್ (31) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಮೃತ ಲಕ್ಷ್ಮಣ ಸಹೋದರ ಮೂರ್ತಿ ಈ ಒಂದು ಹೇಳಿಕೆ ನೀಡಿದ್ದಾರೆ. ನಿನ್ನೆ ಸಂಜೆ ಮನೆಯಲ್ಲಿ ಊಟ ಮಾಡಿ ಪಾರ್ಕ್ ಗೆ ಹೋಗಿದ್ದರು.ಪಾರ್ಕ್ ನಲ್ಲಿ ಮಲಗಿದ್ದ ವೇಳೆ ಲಕ್ಷ್ಮಣ್ ಮೇಲೆ ಮರ ಬಿದ್ದಿದೆ. ಆಗ ಸ್ಥಳೀಯರು ಕೂಡಲೇ ಲಕ್ಷ್ಮಣನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾವು ಆಸ್ಪತ್ರೆಗೆ ಹೋದಾಗ ಸಹೋದರ ಲಕ್ಷ್ಮಣ ಮೃತಪಟ್ಟಿದ್ದ. ಮತ್ತು ಲಕ್ಷ್ಮಣ್ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ಎಂದು ಬೆಂಗಳೂರಿನಲ್ಲಿ ಮೃತ ಲಕ್ಷ್ಮಣ್ ಸಹೋದರ ಮೂರ್ತಿ ಆಗ್ರಹಿಸಿದ್ದಾರೆ. ಇದೀಗ ಸ್ಥಳೀಯರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಬೆಳಗಾವಿ : ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರಿನಲ್ಲಿ ಚಲಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಹೊರವಲಯದ ಸುವರ್ಣ ವಿಧಾನಸೌಧದ ಬಳಿ ಈ ಒಂದು ಘಟನೆ ನಡೆದಿದೆ. ಮಧ್ಯರಾತ್ರಿ ಬೆಳಗಾವಿಯಿಂದ ಕಾರಿನಲ್ಲಿ ಹುಬ್ಬಳ್ಳಿಗೆ 3 ಜನರು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿ ಗಿರೀಶ್ ಕುಲಕರ್ಣಿ (24) ಸಾವನ್ನಪ್ಪಿದ್ದಾರೆ. ಪ್ರಥಮ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಇನ್ನೊರ್ವ ಗಿರೀಶ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.ಟ್ರ್ಯಾಕ್ಟರ್ ನಲ್ಲಿ ಓವರ್ ಲೋಡ್ ಕಬ್ಬು ತುಂಬಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ ಅಪಘಾತದ ಕುರಿತಂತೆ ಹಿರಿಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More