Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸದ್ಯ ಕನ್ನಡ ಚಿತ್ರರಂಗದಲ್ಲಿ ಮೀಟೂ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ, ಹಲವು ಬಾರಿ ಚರ್ಚೆಗಳು ನಡೆಯುತ್ತಿದ್ದು, ಕೇರಳ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕೂಡ ಒಂದು ಸಮಿತಿ ರಚನೆ ಮಾಡುವಂತೆ ಕೆಲ ನಟ ನಟಿಯರು ಆಗ್ರಹಿಸಿದ್ದರು.ಇದರ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಕೂಡ ಚಿತ್ರರಂಗದಲ್ಲಿ ಗಂಡಸರಿಗೂ ಕೂಡ ಶೋಷಣೆ ಆಗಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಗಂಡಸರಿಗೂ ಕೂಡ ಶೋಷಣೆ ಆಗಿದೆ.ಒಂದು ವೇಳೆ ನಾನು ಹುಡುಗಿಯಾಗಿದ್ದರೆ ಗೊತ್ತಾಗಿರುವುದೇನೋ. ಇದಕ್ಕೆಲ್ಲ ಒಂದು ವೇದಿಕೆ ರೆಡಿ ಆಗಬೇಕು. ಅದು ಒಳ್ಳೆಯದು ಚಿತ್ರರಂಗದಲ್ಲಿ ಕೆಲವು ಸಣ್ಣ ಪುಟ್ಟ ಘಟನೆಗಳು ನಡೆಯುತ್ತವೆ ಎಂದರು. ನಮಗೂ ಶೋಷಣೆ ಆಗಿದೆ. ಕೆಲವರಿಗೆ ಚಿತ್ರರಂಗದಲ್ಲಿ ಸಣ್ಣಪುಟ್ಟ ಶೋಷಣೆ ಆಗಿದೆ. ಎಲ್ಲಾ ಸಿನೆಮಾ ಇಂಡಸ್ಟ್ರಿಯಲ್ಲೂ ಅದು ಇದ್ದಿದ್ದೆ. ಇದಕ್ಕೆ ಒಂದು ವೇದಿಕೆ ರೆಡಿ ಆಗಬೇಕು. ಇಂತಹ ವಿಷಯ ಬಂದಾಗ ಧ್ವನಿ ಎತ್ತಲು ದಾರಿಗಳು ಇರುವುದಿಲ್ಲ. ದಾರಿಗಳೇ ಇಲ್ಲದೆ ಇದ್ದಾಗ…
ವಿಜಯನಗರ : ಇತ್ತೀಚಿಗೆ ಬೀದಿ ನಾಯಿಗಳ ಕಾಟ ಹಾಗೂ ಹುಚ್ಚು ನಾಯಿಗಳ ದಾಳಿಯಿಂದ ತಮ್ಮ ಮಕ್ಕಳನ್ನು ರಕ್ಷಿಸುವುದೇ ಪೋಷಕರಿಗೆ ದೊಡ್ಡ ತಲೆ ನೋವಾಗಿದೆ. ಇದೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿ ಕಚ್ಚಿ ಗಾಯಗೋಳಿಸಿರುವ ಘಟನೆ ನಡೆದಿದೆ. ಹೌದು ಹೊಸಪೇಟೆಯಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಹೊಸಪೇಟೆಯ ಧರ್ಮಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಏಕಾಏಕಿ ದಾಳಿ ಮಾಡಿದ್ದರಿಂದ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು, ಅದರಲ್ಲಿ 3 ವರ್ಷದ ಜನನಿ ಎಂಬ ಮಗುವಿಗೆ ಮುಖ, ಗಂಟಲಿಗೆ ಕಚ್ಚಿ ನಾಯಿ ಗಾಯಗೊಳಿಸಿದೆ.
ಬೆಂಗಳೂರು : ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ ಎಂಬ ಅಭಿಪ್ರಾಯ ಇದೆ. ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಆತನ ಪರ ವಕೀಲರು ಪತ್ರ ಬರೆದಿದ್ದು, ಯಾವುದೇ ರೀತಿಯಾದಂತಹ ಕಿರಿಕ್ ಮಾಡಿಕೊಳ್ಳಬೇಡಿ.ಪದೇಪದೇ ಕಿರಿಕ್ ಮಾಡಿಕೊಂಡರೆ ಜಾಮೀನಿಗೆ ತೊಂದರೆ ಆಗುತ್ತದೆ ಎಂದು ಜೈಲಿನಲ್ಲಿರುವ ನಟ ದರ್ಶನ್ಗೆ ವಕೀಲರು ಪತ್ರ ಬರೆದು ನೀತಿಪಾಠ ಹೇಳಿದ್ದಾರೆ. ಹೌದು ದರ್ಶನ್ ಇತ್ತೀಚಿಗೆ ಜೈಲು ಸೇರಿದರೂ ಒಂದಾದಮೇಲೆ ಒಂದರಂತೆ ವಿವಾದಗಳನ್ನು ಮಾಡಿಕೊಳ್ಳುತ್ತಲೇ ಇದ್ದಾರೆ. ಅವರು ಕೇಂದ್ರ ಕಾರಾಗೃಹದಲ್ಲಿ…
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಂದಿನ ತಿಂಗಳಿಂದ ಅಂಗನವಾಡಿಗಳಲ್ಲಿ ‘ಗಟ್ಟಿಬೆಲ್ಲ’ ವಿತರಣೆ ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ…
ಬೆಂಗಳೂರು : ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಆಡಿಯೋ ವೈರಲ್ ಆದ ಬೆನ್ನಲ್ಲೇ ಮುನಿರತ್ನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಜಡ್ಜ್ ಮುಂದೆ ಹಾಜರು ಪಡಿಸಿದ್ದಾಗ, ತಮಗೆ ಹೃದಯ ಸಂಬಂಧಿ, ಹರ್ನಿಯಾ, ಡಯಾಬಿಟಿಸ್ ಸಮಸ್ಯೆ ಇದೆ ಎಂದು ಹೇಳಿದ್ದರು. ಅದರಂತೆಯೇ ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ಮುನಿರತ್ನಗೆ ಅನಾರೋಗ್ಯವಿದೆ ಎಂದು ವೈದ್ಯರು ರಿಪೋರ್ಟ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು ಇಂದು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ನಾಳೆ…
ಬೆಂಗಳೂರು : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ, ರೌಡಿಶೀಟರ್ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿಯ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಬನಶಂಕರಿಯ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ವಿಕ್ರಂ (21) ಈತನ ಮೇಲೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ವಸಿಂ (28) ಈತನಿಂದ ಈ ಕೃತ್ಯ ನಡೆದಿದೆ. ಕೆಲವು ವರ್ಷಗಳ ಹಿಂದೆ ಆರೋಪಿ ವಸಿಂ ಮೇಲೆ ವಿಕ್ರಂ ಹಲ್ಲೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಇದೇ ದ್ವೇಷದಿಂದ ಸ್ನೇಹಿತನ ಜೊತೆಗೆ ನಿಂತಿದ್ದಾಗ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ಗಾಯಳು ವಿಕ್ರಂನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ.ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಲಬುರ್ಗಿ : ನನ್ನನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಕ್ಕೆ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ಆದರೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಕಲಬುರ್ಗಿ ತಾಲೂಕಿನ ಕವಲಗ (ಕೆ) ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಅವರು ತಿಳಿಸಿದರು. ಕೆಲ ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೆ ಶತ್ರುಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆಂದು ಪುಕರು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು ಎಂದು ವಾಗ್ದಾಳಿ ನಡೆಸಿದರು. ನಾನು ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಹೇಗಾದರೂ ಮಾಡಿ ನನ್ನನ್ನು ಸಿಲುಕಿಸಬೇಕೆಂದು ಪ್ಲಾನ್ ಮಾಡಿದ್ದಾರೆ. ನನ್ನನ್ನು ಅಧಿಕಾರದಿಂದ ತೆಗೆಯಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ.…
ಕೋಲಾರ : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಲ್ಲೆಡೆ ಮೆರವಣಿಗೆ ನಡೆಯುತ್ತಿದ್ದು, ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದ್ದು, ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ಕೋಲಾರ ನಗರದ ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸಯ್ಯದ್ ಸೈಫ್, ಹುಸೇನ್ ಕಾಶಿಪ್, ಖಾಲಿಲ್ ಅಹ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಯದ್ ವಸಿಂ ಪಾಷಾ ಹಾಗೂ ತಾಹಿರ್ ಗುಂಪಿನಿಂದ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಕೋಲಾರ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈದ್ ಪ್ರಯುಕ್ತ ಟ್ರಾಫಿಕ್ ಜಾಮ್ ಅಲ್ಲದೆ ಕೋಲಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ವಾಹನ…
ಶಿವಮೊಗ್ಗ : ಬಿ.ವೈ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆಗೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದು, ಯಾರು ಏನೇ ಹೇಳಿದರು ಬಿಜೆಪಿ ರಾಜ್ಯಾಧ್ಯಕ್ಷ ನಾನೇ ಎಂದು ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು. ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಯಾರು ಏನೇ ಮಾತನಾಡಿದರೂ ವಿಜಯೇಂದ್ರನೇ ರಾಜ್ಯಾಧ್ಯಕ್ಷ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪಕ್ಷದ ಹೈಕಮಾಂಡ್, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಜೆಪಿ ನಡ್ದ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಗಲಭೆ ನಡೆದಿದೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳನ್ನು ಸುಟ್ಟುಹಾಕಿದ್ದಾರೆ. ಪಾಂಡವಪುರದಲ್ಲಿನ…
ಬೆಂಗಳೂರು : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ದಾಳಿ ನಡೆಸಿ ಗಲಭೆ ಸೃಷ್ಟಿಸಿರುವ ಈ ಘಟನೆ ಹಿಂದೆ ನಿಷೇಧಿತ ಸಂಘಟನೆಗಳು ಹಾಗೂ ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂಶಯವಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಭೇದಿಸುವುದು ಕಷ್ಟವಾದ ಕಾರಣ ಎನ್ಐಎ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದು ಸರಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ ಎಂದರು. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್, ಈಗ…