Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದ ಬಿಸ್ನಲ್ಲಿ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮುರುಡೇಶ್ವರ ಪೊಲೀಸರು ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸೇರಿದಂತೆ ಆರು ಜನರ ವಿರುದ್ಧ ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ವಸತಿ ಶಾಲೆಯ ಶಿಕ್ಷಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪೊಲೀಸರಿಂದ ಇದೀಗ ಸುಮೊಟೋ ಕೇಸ್ ದಾಖಲಾಗಿದೆ.ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕಿ ಶಕಲಾ (40) ಶಿಕ್ಷಕರಾದ ಆರು ಸುನಿಲ್ (33) ಎಸ್ ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿಎನ್ ಶಾರದಮ್ಮ (37) ಹಾಗೂ ಕೆ ನರೇಶ್ (30) ಎನ್ನುವವರ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಹಲವು ಶಿಕ್ಷಕ, ಸಿಬ್ಬಂದಿಗಳನ್ನು ವಜಾ ಕೂಡ ಮಾಡಲಾಗಿದೆ.
ಬೆಂಗಳೂರು : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚಿನಲ್ಲಿ ವಿದ್ಯಾರ್ಥಿನಿಯರು ಮುದ್ರ ಪಾಲಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಯರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಸಂತಾಪ ಸೂಚಿಸಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ…
ಚಾಮರಾಜನಗರ : ನಿನ್ನೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕ ಎಸ್ ಜಯಣ್ಣ ಅವರು ಕೂಡ ಹೃದಯಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್ ಜಯಣ್ಣನಿನ್ನೆ ನಿಧನರಾಗಿದ್ದಾರೆ.ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ಜಯಣ್ಣ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಆಪ್ತ ಹಾಗೂ ಗೆಳೆಯನನ್ನು ನೋಡಿ ಸಿಎಂ ಸಿದ್ದರಾಮಯ್ಯ ಭಾವುಕರಾದರು.
BREAKING : ಸೋಮನಹಳ್ಳಿಯತ್ತ SM ಕೃಷ್ಣ ಪಾರ್ಥಿವ ಶರೀರ : ಅಂತ್ಯಕ್ರಿಯೆ ಸ್ಥಳಕ್ಕೆ ಡಿಸಿಎಂ ಡಿಕೆಶಿ ಅಳಿಯ, ಪುತ್ರ ಭೇಟಿ
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹೃದಯಾಘಾತದಿಂದ ಸಾವನಪ್ಪಿದ್ದು, ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಈ ಹಿನ್ನೆಲೆಯಲ್ಲಿ ಇದೀಗ ಅವರ ಪಾರ್ಥಿವ ಶರೀರ ಚನ್ನಪಟ್ಟಣದಿಂದ ತೆರಳಿ ಮದ್ದೂರಿಗೆ ಆಗಮಿಸಲಿದ್ದು, ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಮಧ್ಯ ಅಂತ್ಯಕ್ರಿಯ ಸ್ಥಳದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಅಂತ್ಯಕ್ರಿಯ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ಹಾಗೂ ಪುತ್ರ ಭೇಟಿ ನೀಡಿದ್ದಾರೆ. ಅಳಿಯ ಅಮರ್ತ್ಯ ಹಾಗೂ ಆಕಾಶ್ ಕೆಂಪೇಗೌಡ ಭೇಟಿ ನೀಡಿದ್ದಾರೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಇರುವಂತಹ ಸ್ಥಳಕ್ಕೆ ಇಬ್ಬರು ಆಗಮಿಸಿದ್ದಾರೆ. ಅಂತ್ಯಕ್ರಿಯೆ ಸಕಲ ಸಿದ್ಧತೆಗಳನ್ನು ಎಲ್ಲವನ್ನೂ ಕೂಡ ಪರಿಶೀಲನೆ ಮಾಡಿದ್ದಾರೆ.
ಉತ್ತರಕನ್ನಡ : ನಿನ್ನೆ ಮುರುಡೇಶ್ವರ ಬೀಚ್ನಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ 7 ಜನ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು.ಈ ವೇಳೆ ಕೂಡಲೇ ಬೀಚ್ ಬಳಿ ಇದ್ದ ಲೈಫ್ ಗಾಡ್ಸ್ ಸಿಬ್ಬಂದಿಗಳು ಮೂವರನ್ನು ರಕ್ಷಿಸಿದ್ದು ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಳು. ನಿನ್ನೆಯಿಂದ ಉಳಿದ ಮೂವರು ವಿದ್ಯಾರ್ಥಿನಿಯರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿತ್ತು, ಇದೀಗ ಉಳಿದ ಮೂವರ ವಿದ್ಯಾರ್ಥಿನಿಯರ ಶವ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಹೌದು ಬೋಟ್ ಮೂಲಕ ಕೊಚ್ಚಿ ಹೋಗಿದ್ದ ಉಳಿದ ಮೂವರ ವಿದ್ಯಾರ್ಥಿನಿಯರ ಶವಗಳನ್ನು ಕರಾವಳಿ ಕಾವಲು ಪಡೆ ಹೊರತೆಗೆದಿದೆ. ನೆನ್ನೆ ವಿದ್ಯಾರ್ಥಿನಿ ಶ್ರಾವಂತಿಯ ಶವ ಮಾತ್ರ ಪತ್ತೆಯಾಗಿತ್ತು.ಇದೀಗ ದೀಕ್ಷಾ (15) ಲಾವಣ್ಯ (15) ಮತ್ತು ವಂದನ (15)ಮೃತ ದೇಹಗಳನ್ನು ಇದೀಗ ಕರಾವಳಿ ಕಾವಲು ಪಡೆ ಹೊರ ತೆಗೆದಿದೆ. ನಿನ್ನೆ ಮುರುಡೇಶ್ವರ ಬೀಚ್ ನಲ್ಲಿ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಮೂರು ವಿದ್ಯಾರ್ಥಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದರು.ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಡೇಶ್ವರ ಬೀಚ್ನಲ್ಲಿ ಈ ಒಂದು ಘಟನೆ ನಡೆದಿತ್ತು.…
ರಾಯಚೂರು : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಎನ್ನದೆ ಎಲ್ಲರ ಮೇಲು ನಾಯಿಗಳು ದಾಳಿ ಮಾಡುತ್ತಿವೆ. ಇದೀಗ ರಾಯಚೂರಿನಲ್ಲಿ ಬೀದಿ ನಾಯಿಗಳು ದಾಳಿ ಮಾಡಿದಾಗ ಅವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಯುವತಿ ಒಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ. ರಾಯಚೂರಿನ ಬಡ್ಡಿಪೇಟೆಯಲ್ಲಿ ಈ ಒಂದು ಘಟನೆ ನಡೆದಿದ್ದು ಕೋಮಾ ಸ್ಥಿತಿ ತಲುಪಿದೆ ಯುವತಿಯನ್ನು ಮಹಾದೇವಿ (20) ಎಂದು ತಿಳಿದುಬಂದಿದೆ.ಇಂದು ದೇವಾಲಯಕ್ಕೆ ಹೋಗುವ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಳ್ಳಾರಿಯಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರೆಫರ್ ಮಾಡಿದ್ದಾರೆ. ಆದರೆ ತೀವ್ರ ಬಡತನವಿರುವ ಕಾರಣ ಪುನಃ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆತರಲಾಯಿತು ಎಂದು ಪಾಲಕರು ತಿಳಿಸಿದ್ದಾರೆ. ತನ್ನದಲ್ಲದ ತಪ್ಪಿಗೆ ಬೀದಿ ನಾಯಿಗಳ ದಾಳಿಗೆ ಚಿಂತಾಜನಕ ಸ್ಥಿತಿಗೆ ತಲುಪಿದ್ದು,…
ಮಡಿಕೇರಿ : ಸಾಮಾನ್ಯವಾಗಿ ವಾಹನ ಇರಲಿ ಬೈಕ್ ಇರಲಿ ಮೊಬೈಲ್ ಬಳಸುವುದು ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ ಆದರೆ ಇದೀಗ ಕೊಡಗಿನಲ್ಲಿ ಪ್ರಯಾಣಿಕರನ್ನು ಹೊತ್ತಂತಹ ಕೆಎಸ್ಆರ್ಟಿಸಿ ಚಾಲಕ ಒಬ್ಬ ಬಸ್ ಚಾಲನೆ ಮಾಡುತ್ತಲೇ ಮೊಬೈಲ್ ಬಳಸಿರುವ ವಿಡಿಯೋ ವೈರಲ್ ಆಗಿದ್ದು, ಸದ್ಯ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದಂತ ಚಾಲಕನನ್ನು ವೇಣುಗೋಪಾಲ್ ಎಂದು ತಿಳಿದುಬಂದಿದೆ. ಈತ ಪುತ್ತೂರು ಡಿಪೋ ಬಸ್ ಚಾಲಕ ಮೊಬೈಲ್ ಬಳಸುತ್ತಾ ಚಾಲನೆ ಮಾಡಿದ್ದಾರೆ. ಚಾಲಕ ವೇಣುಗೋಪಾಲ್ ಬಸ್ ಚಾಲನೆ ಮಾಡುತ್ತ ಮೊಬೈಲ್ ಬಳಕೆ ಮಾಡುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಸ್ ಮಡಿಕೇರಿಯಿಂದ ಬಿರುನಾಣಿಗೆ ಹೋಗುತ್ತಿತ್ತು. ಚಾಲಕ ಮೊಬೈಲ್ ಬಳಕೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊಬೈಲ್ ಬಳಕೆ ಮಾಡುತ್ತಿರುವುದನ್ನು ನಿರ್ವಾಹಕ ರೂಪೇಶ್ ವಿಡಿಯೋ ಮಾಡಿದ್ದಾನೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ವೇಣುಗೋಪಾಲ್ ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ…
ಮಂಡ್ಯ : ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಹುಟ್ಟೂರು ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದ್ದು, ಜನ ಸಾಗರದ ನಡುವೆ ಈಗ ಎಸ್ ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದತ್ತ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರ ಕೊಂಡೋಯ್ಯಲಾಗುತ್ತಿದೆ. ಈಗಾಗಲೇ ಬೆಂಗಳೂರಿನಿಂದ ಹೊರಟು ರಾಮನಗರ, ಚನ್ನಪಟ್ಟಣದಲ್ಲಿ ಜನರು ಅಂತಿಮ ದರ್ಶನ ಪಡೆದರು. ಕೆಲವೇ ಕ್ಷಣಗಳಲ್ಲಿ ಮದ್ದೂರಿಗೆ ಪಾರ್ಥಿವ ಶರೀರ ಆಗಮನವಾಗಲಿದೆ. ದಾರಿ ಉದ್ದಕ್ಕೂ ಎಸ್ಎಮ್ ಕೃಷ್ಣ ಅವರ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿ ಕಂಬನಿ ಮಿಡಿದರು. ಮಧ್ಯಾಹ್ನದ ಹೊತ್ತಿಗೆ ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ತಲುಪುತ್ತದೆ. ಬಳಿಕ ಒಕ್ಕಲಿಗ ಸಂಪ್ರದಾಯದಂತೆ ಎಲ್ಲ ವಿಧಿ ವಿಧಾನಗಳ ಪ್ರಕಾರ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನವು ಇಡೀ ಕರುನಾಡಿನ ಜನತೆಗೆ ತುಂಬಲಾರದಂತಹ ನಷ್ಟವಾಗಿದೆ. ಇದೀಗ ಅವರ ಪಾರ್ಥಿವ ಶರೀರವು ಬೆಂಗಳೂರಿನ ಸದಾಶಿವನಗರ್ ದಿಂದ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತೆರಳುತ್ತಿದ್ದು, ಇಂದು ಅಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ಎಸ್ಎಂ ಕೃಷ್ಣ ಅವರ ಅಗಲಿಕೆಗೆ ನಟಿ ರಮ್ಯಾ ಅವರು ಭಾವುಕ ಪೋಸ್ಟ್ ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿಕೊಂಡಿದ್ದು,ʻʻಒಬ್ಬ Statesman ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು… ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳು… ಎಂದು ಬರೆದುಕೊಂಡಿದ್ದಾರೆ. ಕೊನೆಯಲ್ಲಿ ನೀವು ಈಗ ನಿಮ್ಮ ಬೆಸ್ಟ್ಫ್ರೆಂಡ್ ಜೊತೆಗೆ ಇದ್ದೀರಾ ಎಂದು ಬರೆದು ಹಾರ್ಟ್ ಎಮೊಜಿ ಹಾಕಿದ್ದಾರೆ. ಎಸ್ಎಮ್ ಕೃಷ್ಣ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಟಿ…
ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಇಬ್ಬರು ಬಾಲಕಿಯರು ಆಟವಾಡುತ್ತಲೆ ಕಾಲು ಜಾರಿ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅಮ್ಮಡಿ ಬಳಿಯ ಕಾಫಿ ಎಸ್ಟೇಟ್ನಲ್ಲಿ ನಡೆದಿದೆ. ಹೌದು ಮಧ್ಯಪ್ರದೇಶದ ನಜೀರಾಬಾದ್ನ ಸುನಿತಾ ಬಾಯಿ ಮತ್ತು ಅರ್ಜುನ್ ಸಿಂಗ್ ಅವರ ಮಕ್ಕಳಾದ ಸೀಮಾ(6) ಮತ್ತು ರಾಧಿಕಾ(2) ಮೃತಪಟ್ಟ ಮಕ್ಕಳು ಎಂದು ತಿಳಿದುಬಂದಿದೆ. ಮಧ್ಯಪ್ರದೇಶದಿಂದ ಬಂದು ಕೊಪ್ಪದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸೀಮಾ ದಂಪತಿ ತೋಟದ ಮನೆಯಲ್ಲಿದ್ದರು. ನಿನ್ನೆ ಮಕ್ಕಳನ್ನು ಮನೆಯಲ್ಲೇ ಬಿಟ್ಟು ತಾಯಿ ಸೀಮಾ ತೋಟದ ಕೆಲಸಕ್ಕೆ ತೆರಳಿದ್ದರು. ಸಂಜೆ 7 ಗಂಟೆ ವೇಳೆ ಮನೆಗೆ ಹಿಂದಿರುಗಿದಾಗ ಮಕ್ಕಳು ಕಾಣೆಯಾಗಿದ್ದರು. ಬಳಿಕ ಇತರ ಕಾರ್ಮಿಕರ ಜೊತೆಗೂಡಿ ಹುಡುಕಾಡಿದಾಗ 8 ಗಂಟೆ ವೇಳೆ ಬಾವಿಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












