Author: kannadanewsnow05

ಉತ್ತರಪ್ರದೇಶ : ಉತ್ತರ ಪ್ರದೇಶದ ಕುಟುಂಬ ಕಲ್ಯಾಣ ಕಚೇರಿಗೆ ಇದೀಗ ಬೆದರಿಕೆ ಸಂದೇಶವೊಂದು ಬಂದಿದೆ. ಅನಾಮಧೇಯ ಹೆಸರಿನಲ್ಲಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇಂದು ಮಧ್ಯಾಹ್ನ 1:30ಕ್ಕೆ ಕಚೇರಿಗೆ ಇ-ಮೇಲ್ ಸಂದೇಶ ಬಂದಿದೆ. ಕಚೇರಿಗೆ ಬೆದರಿಕೆ ಇ-ಮೇಲ್ ಸಂದೇಶ ನೋಡುತ್ತಿದ್ದಂತೆ ಸಿಬ್ಬಂದಿಗಳು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಲಖನೌನ ಜಗತ್ ನಾರಾಯಣ ರಸ್ತೆಯಲ್ಲಿರುವ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬಾಂಬ್ ಪತ್ತೆ ಸಂದೇಶ ಹಿನ್ನೆಲೆ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗು ಶ್ವಾನದಳ ಪರಿಶೀಲನೆ ನಡೆಸುತ್ತಿದೆ.

Read More

ದಕ್ಷಿಣಕನ್ನಡ : ರಾಜ್ಯದಲ್ಲಿ ಈಗಾಗಲೇ ಮುಂಗಾರು ಪೂರ್ವ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಮಲೆನಾಡು ಕರಾವಳಿ ಭಾಗ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ವೇಳೆ ಹಲವು ಕಡೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು ಮಹಾಮಳೆಗೆ ಅನೇಕರು ಬರಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಹೌದು ಮಳೆ ನಡೆಯು ದಕ್ಷಿಣ ಕನ್ನಡದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಐವರು ಪ್ರವಾಸಿಗರನ್ನು ಇದೀಗ ರಕ್ಷಣೆ ಮಾಡಲಾಗಿದೆ. ಮೂಡುಬಿದಿರೆಯ ಪುತ್ತಿಗೆ ಎರಗುಂಡಿ ಫಾಲ್ಸ್ ಬಳಿ ಈ ಒಂದು ಘಟನೆ ನಡೆದಿದೆ. ದುಮ್ಮಿಕ್ಕಿ ಹರಿಯುತ್ತಿರೋ ಫಾಲ್ಸ್ ಬಳಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಜಲಪಾತದ ಮೇಲ್ಭಾಗದಲ್ಲಿ ಪ್ರವಾಸಿಗರು ಹುಚ್ಚು ಸಾಹಸ ನಡೆಸಿದ್ದಾರೆ. ಈ ವೇಳೆ ಜಲಪಾತದ ಮಧ್ಯದಲ್ಲಿ ಸಿಲುಕಿದ್ದ ಐವರು ಪ್ರವಾಸಿಗರನ್ನು ಸ್ಥಳೀಯರು ಹಗ್ಗ ಕಟ್ಟಿ ರಕ್ಷಣೆ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್‌ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ…

Read More

ಬೆಂಗಳೂರು : UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು KEA ತನ್ನ ವೆಬ್‌ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅಂಕ ದಾಖಲಿಸಿದವರಿಗೆ ಮೇ 29ರ ನಂತರ #SpotRank ನೀಡಲಾಗುವುದು. ಹಾಗಾಗಿ UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ. http://cetonline.karnataka.gov.in/ugcetmarksentr%E2%80%A6 https://twitter.com/KEA_karnataka/status/1926867515415613901?t=3caQdEp8-jVjOeYzwHjybw&s=19

Read More

ಬೆಂಗಳೂರು : ರಾಜಕೀಯ ಇದೀಗ ಕೊರೊನಾ ರೂಪಾಂತರೀಯ ಹೊಸ ತಳಿ ಎಂಟ್ರಿ ಕೊಟ್ಟಿದ್ದು ಈಗಾಗಲೇ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇದೀಗ ಶಾಲಾ ಮಕ್ಕಳಿಗೆ ಕೂಡ ಆರೋಗ್ಯ ಇಲಾಖೆ ಇಂದು ಸಂಜೆ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಆರೋಗ್ಯ ಇಲಾಖೆ ಇಂದು ಸಂಜೆ ಗೈಡ್ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಪ್ರಕಟಿಸುವ ಮಾರ್ಗಸೂಚಿಯಲ್ಲಿ ಪ್ರಮುಖವಾಗಿ, ಮಾಸ್ಕ್ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಸೂಚನೆ ನೀಡಲಾಗುತ್ತದೆ. ಶಿಕ್ಷಕರು ಹಾಗೂ ಸಿಬ್ಬಂದಿಗಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುತ್ತದೆ. ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಜ್ವರದ ಲಕ್ಷಣ ಕಂಡು ಬಂದರೆ ಮಕ್ಕಳಿಗೆ ರಜೆ ನೀಡುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಹಾಗಾಗಿ ಇಂದು ಶಾಲಾ ಮಕ್ಕಳಿಗೆ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಮಾಸ್ಕ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಗೈಡ್ ಲೈನ್ಸ್ ನಲ್ಲಿ ಸೂಚನೆ…

Read More

ಬೆಂಗಳೂರು : ಇದೀಗ ರಾಜ್ಯಕ್ಕೆ ಕೋರೊನಾ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನಲ್ಲಿ ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರಿನ ಮಹದೇವಪುರ ವಲಯ ಕೊರೋನಾದ ಹಾಟ್ ಸ್ಪಾಟ್ ಎಂದು ಹೇಳಲಾಗಿದ್ದು ಏಕೆಂದರೆ ಅಲ್ಲಿಯೇ ಅತಿ ಹೆಚ್ಚು ಕೇಸ್ ಗಳು ಪಾಸಿಟಿವ್ ವರದಿ ಬಂದಿವೆ. ಬೆಂಗಳೂರಿನಲ್ಲಿ 71ಕ್ಕೆ ಏರಿಕೆಯಾದ ಕೊರೊನ ಸೋಂಕಿತರ ಸಂಖ್ಯೆ ಮಹಾದೇವಪುರ ವಲಯ ಕೊರೋನ ಹಾಟ್ ಸ್ಪಾಟ್ ಆಗಿದ್ದು ಮಹದೇವಪುರ ಬೆಂಗಳೂರು ದಕ್ಷಿಣದಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೀಗ ಬೆಂಗಳೂರಿನಲ್ಲಿ ಕರೋನ ಆರ್ಭಟ ಮುಂದುವರೆದಿದೆ. ಯಾವ್ಯಾವ ವಲಯದಲ್ಲಿ ಎಷ್ಟು ಕೇಸ್? ಬೊಮ್ಮನಹಳ್ಳಿಯಲ್ಲಿ 7, ಬೆಂಗಳೂರು ಕೇಂದ್ರ 5, ಯಲಹಂಕ 4, ದಾಸರಹಳ್ಳಿಯಲ್ಲಿ 1 ಆರ್ ಆರ್ ನಗರ 1, ಮಾದೇವಪುರದಲ್ಲಿ 16, ಬೆಂಗಳೂರು ದಕ್ಷಿಣ 14, ಬೆಂಗಳೂರು ಪೂರ್ವ 13, ಬೆಂಗಳೂರು ಪಶ್ಚಿಮ 10 ಪ್ರಕರಣಗಳು ಬೆಳಗೆಗೆ ಬಂದಿವೆ.

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಮಳೆಗಾಲದ ವೇಳೆ ರಾಜ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಇನ್ನು ಆರ್‌.ಸಿ.ಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸದರು. ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಡೀಕರಣ ಮಾಡಿ ನೀಡಬೇಕು. ಇನ್ನು ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ…

Read More

ಮಂಡ್ಯ : ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಸಂಚಾರಿ ಠಾಣೆಯ ಮೂವರು ASI ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು ಇಂದು ಮಂಡ್ಯದಲ್ಲಿ ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇದೀಗ ಈ ಕೇಸ್ ಗೆ ಸಂಬಂಧಿಸಿದಂತೆ ಸಂಚಾರಿ ಠಾಣೆಯ ಮೂರು ASI ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಎಎಸ್ಐಗಳಾದ ಜಯರಾಮ್ ನಾಗರಾಜ್ ಮತ್ತು ಗುರುದೇವ್ ಅಮಾನತುಗೊಳಿಸಲಾಗಿದೆ  ಎಂದು ಮಂಡ್ಯ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡೆ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ? ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು…

Read More

ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಲು ಜಾರಿಬಿದ್ದು ಕಾಳಿ ನದಿಗೆ ಬಿದ್ದು ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸುಂಕೇರಿ ಗ್ರಾಮದಲ್ಲಿ ನಡೆದಿದೆ. ಕಾಳಿ ನದಿಯಲ್ಲಿ ನಾಪತ್ತೆಯಾದ ಯುವಕನನ್ನು ಸಂತೋಷ್ (35) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸಂತೋಷ್ ಸುಂಕೇರಿ ಸೇತುವೆಯ ಬಳಿ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದ ಇದೀಗ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಹಾಗು ಸ್ಥಳೀಯರು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ರಬ್ಬರ್ ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾಗಲು ಮಗಳು ಮನೆ ಬಿಟ್ಟು ಹೋಗಿದಕ್ಕೆ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಬೂದನೂರು ಗ್ರಾಮದ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಾದೇವಸ್ವಾಮಿ ಮತ್ತು ಮಂಜುಳಾ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು. ಹಿರಿಯ ಮಗಳು ಅರ್ಪಿತಾ ಮೈಸೂರಿನಲ್ಲಿ ಕಾನೂನು ಪದವಿ ಓದುತ್ತಿದ್ದರೆ, ಎರಡನೇ ಮಗಳು ಹರ್ಷಿತಾ ಬಿಸಿಎ ಓದುತ್ತಿದ್ದಳು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಾದೇವಸ್ವಾಮಿ ತಮ್ಮ ಸ್ವಗ್ರಾಮ ಬಿಟ್ಟು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ ವಾಸವಿದ್ದರು. ಅಲ್ಲಿಯೇ ಸ್ವಂತ ಮನೆ ಕೂಡ ಖರೀದಿ ಮಾಡಿದ್ದರು. ನಾಲ್ಕು ಜನರ ಈ ಪುಟಾಣಿ ಸಂಸಾರದಲ್ಲಿ ಒಮ್ಮೆಲೆ ಬಿರುಗಾಳಿ ಎದ್ದಿದ್ದು, ಹಿರಿಯ ಮಗಳು ಅರ್ಪಿತಾ ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿ ಆತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಾಳೆ. ಇದರಿಂದ ಮರ್ಯಾದೆಗೆ ಹೆದರಿದ ತಂದೆ ಮಹಾದೇವಸ್ವಾಮಿ ಈ ಮದುವೆ ಬೇಡ ಎಂದು ನಿರಾಕರಿಸಿದ್ದಾರೆ.…

Read More