Author: kannadanewsnow05

ಮಂಗಳೂರು : ಒಂದು ಕಡೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ, ಚಪ್ಪಲಿ ಎಸೆದ ಪ್ರಕರಣ ಇಡೀ ರಾಜ್ಯದಲ್ಲಿ ಕೋಮು ಗಲಭೆಗೆ ಸಾಕ್ಷಿಯಾಗಿದ್ದರೆ, ಇದೀಗ ಮಂಗಳೂರಿನಲ್ಲಿ ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಹಿಂದೂಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ ಕಾಟಿಪಳ್ಳ 3ನೇ ಬ್ಲಾಕ್​​ನಲ್ಲಿರುವ ಅನ್ಯ ಕೋಮಿನ ಪ್ರಾರ್ಥನಾ ಮಂದಿರದ ಸಮೀಪ ಕಲ್ಲು ತೂರಾಟ ನಡೆಸಿದ್ದ ಪ್ರಕರಣ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ ವೇಳೆಗೆ ಹಬ್ಬದ ಪ್ರಯುಕ್ತ ಪ್ರಾರ್ಥನಾ ಮಂದಿರಕ್ಕೆ ದೀಪಾಲಂಕಾರ ಮಾಡಿ, ಒಳಗಡೆ ಕಾರ್ಯಕರ್ತರೆಲ್ಲ ಕೆಲಸ ಮಾಡಿಕೊಂಡಿದ್ದ ಸಮಯದಲ್ಲಿ ರಾತ್ರಿ 9-50 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆಸಲಾಗಿದೆ.ಎರಡು ಬೈಕ್‌ಗಳಲ್ಲಿ ಜನತಾ ಕಾಲೋನಿಯ ಸ್ಮಶಾನದ ಕಡೆಯಿಂದ ಬಂದು ಮಂದಿರದ ಹಿಂಭಾಗದ ರಸ್ತೆಯ ಕಡೆಯಿಂದ ಕಲ್ಲು ಬಿಸಾಡಿದ್ದಾರೆ. ಈ ಕುರಿತಂತೆ ಕೆ.ಹೆಚ್. ಅಬ್ದುಲ್ ರಹಿಮಾನ್ ಎಂಬವರು ಪೊಲೀಸರಿಗೆ…

Read More

ಕಲಬುರಗಿ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲುತೂರಾಟ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾಗಮಂಗಲ ಶಾಂತವಾಗಿದೆ. ಘಟನೆಯಲ್ಲಿ ಯಾರಿಗೆ ನಷ್ಟವಾಗಿದೆ ಅವರಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಪೊಲೀಸರ ವೈಫಲ್ಯ ಇದೆ ಅಂದಿದ್ದಕ್ಕೆ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾಗಮಂಗಲ ಶಾಂತವಾಗಿದೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಅಂಗಡಿಗಳು ಬೇಕರಿಗಳು ಸೇರಿದಂತೆ ಎಲ್ಲೆಲ್ಲಿ ಏನೇನು ನಷ್ಟ ಆಗಿದೆ ಅದಕ್ಕೆ ಪರಿಹಾರ ಕೊಡತಕ್ಕಂತ ಕೆಲಸ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Read More

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಬಿಜೆಪಿ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ ಎಂದು ಗಂಭೀರವಾದ ಆರೋಪ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪ ಅವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ…

Read More

ಚಿತ್ರದುರ್ಗ : ನಾಗಮಂಗಲ ಗಲಭೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಚಿತ್ರದುರ್ಗದಲ್ಲಿ ಈದ್ ಮಿಲಾದ್ ಸಂದರ್ಭದಲ್ಲಿ ಕೆಲವು ಮುಸ್ಲಿಮರು ಪ್ಯಾಲೆಸ್ತೆನ್ ಪರ ಘೋಷಣೆ ಹೋಗಿರುವ ಘಟನೆ ನಡೆದಿದೆ. ಹೌದು ಈದ್ ಮಿಲಾದ ಮೆರವಣಿಗೆ ವೇಳೆ ಪ್ಯಾಲೇಸ್ತೇನ್ ಪರ ಘೋಷಣೆ ಕೂಗಿದ್ದು, ಚಿತ್ರದುರ್ಗ ನಗರದ ಗಾಂಧೀಜಿ ವೃತ್ತದ ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೇನ್ ಪರ ಘೋಷಣೆ ಕೂಗಲಾಯಿತು. ಪ್ಯಾಲೆಸ್ತೇನ್ ಜಿಂದಾಬಾದ್ ಎಂದು ಘೋಷಣೆ ಕೆಲವರು ಕೂಗಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಹುಬ್ಬಳ್ಳಿ : ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸರ್ಕಾರಿ ಅಧಿಕಾರಿಯೋರ್ವರು ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಹುಬ್ಬಳ್ಳಿ ಪೊಲೀಸರು ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಎಂಬ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ. ಕಳೆದ ಮಂಗಳವಾರ ASI ನಾಭಿರಾಜ್ ಕರ್ತವ್ಯಕ್ಕೆ ಹೋಗುವಾಗ ಈ ವೇಳೆ ಕಾಮಗಾರಿಯ ರಾಡ್ ಬಿದ್ದು ತಲೆಗೆ ಗಂಭೀರವಾದಂತ ಗಾಯವಾಗಿತ್ತು. ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ. ಝಂಡು ಕನ್​ಸ್ಟ್ರಕ್ಷನ್​ ಸೂಪರ್ ವೈಸರ್​ ಹರ್ಷ ಹೊಸಗಾಣಿಗೇರ, ಲೈಸನಿಂಗ್ ಇಂಜಿನಿಯರ್ ಜಿತೇಂದ್ರ ಪಾಲ್, ಇಂಜನಿಯರ್ ಭೂಪೇಂದರ್, ನೌಕರರಾದ ಮಹಮ್ಮದ್ ಮಿಯಾ, ಅಸ್ಲಂ, ಮೊಹಮ್ಮದ್ ಹಾಜಿ, ಸಬೀಬ್, ರಿಜಾವುಲ್, ಶಮೀಮ್ ಅಲಿಯಾಸ್ ಪಿಂಟು ಶೇಕ್, ಮೊಹಮ್ಮದ್ ಆರೀಫ್ ಹಾಗೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿ ಫಿಲ್ಟರ್ ಒಬ್ಬ ಯುವಕನನ್ನು ಬೆತ್ತಲೆಗೊಳಿಸಿ ನಗ್ನವಾಗಿ ರಸ್ತೆ ಮೇಲೆ ಓಡುವಂತೆ ಹಲ್ಲೆ ನಡೆಸಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ರಾಜಗೋಪಾಲನಗರದ ರೌಡಿಶೀಟರ್ ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಪ್ರಾಣ ಉಳಿಸಿಕೊಳ್ಳಲು ಬೆತ್ತಲೆಯಾಗಿ ಓಡಿದ ಯುವಕ ರಾಜಗೋಪಾಲನಗರದ ಯುವಕ ಅರ್ಜುನ್ ಎನ್ನುವ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬಟ್ಟೆಯನ್ನು ಬಿಚ್ಚಿಸಿ ನಗ್ನಗೊಳಿಸಿ ಓಡುವಂತೆ ಹೇಳಿದ್ದ ರೌಡಿ ಪವನ್ ಯುವಕನನ್ನು ಬೆತ್ತಲೆ ಮಾಡಿ ರೌಡಿ ಯಿಂದ ಹಲ್ಲೆ ನಡೆಸಿದ್ದಾನೆ. ನಡು ರಸ್ತೆಯಲ್ಲಿ ಯುವಕನನ್ನು ಬೆತ್ತಲೆ ಮಾಡಿ ರೌಡಿಯಿಂದ ಹಲ್ಲೆ ನಡೆಸಲಾಗಿದೆ.ಬಟ್ಟೆ ಬಿಚ್ಚಿಸಿ ನಗ್ನವಾಗಿ ಓಡುವಂತೆ ರೌಡಿ ಪವನ್ ಹೇಳಿದ್ದ ಎನ್ನಲಾಗಿದ್ದು, ಬೇರೊಂದು ಕೇಸ್ ತನಿಖೆ ವೇಳೆ ಈ ವಿಡಿಯೋ ಬಹಿರಂಗವಾಗಿದೆ. ಪ್ರಕರಣದ ಕುರಿತು ಡಿಸಿಪಿ ಗಿರೀಶ್ ಅವರು ಪ್ರತಿಕ್ರಿಯೆ ನೀಡಿದ್ದು, ಹಲ್ಲೆಗೆ ಒಳಗಾದಂತಹ ಯುವಕನನ್ನು ಅರ್ಜುನ್ ಎಂದು ಹೇಳಲಾಗುತ್ತಿದೆ. ಬೇರೆ ಕೇಸ್ ನಲ್ಲಿ ರೌಡಿ ಶೀಟರ್ ಪವನ್ ನನ್ನು ವಿಚಾರಣೆಗೆ ಒಳಪಡಿಸಿದಾಗ…

Read More

ಬೊಮ್ಮನಹಳ್ಳಿ : ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ  ರಮ್ಯಾ,  ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಸಾರ್ವಜನಿಕರಿಂದ ಹೆಚ್ಚು ಸಕ್ರಿಯವಾಗಿ ರಸ್ತೆ…

Read More

ಚಿಕ್ಕಬಳ್ಳಾಪುರ : ಪತ್ನಿ ಕಪ್ಪಗಿದ್ದಾಳೆ ಎಂದು ನಿಂದಿಸಿದ್ದು ಅಲ್ಲದೆ, ತವರು ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಗಾಂಧಿನಗರದಲ್ಲಿ ನಡೆದಿದೆ. ಬಿಂದುಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು. ಗಾಂಧಿನಗರದ ನಿವಾಸಿ ಟೈಲರ್ ವೃತ್ತಿಯ ಕೆ.ಬಿ.ದೇವರಾಜು ಅವರಿಗೆ ಬಿಂದುಶ್ರೀ ಏಕೈಕ ಪುತ್ರಿ. ಇವರನ್ನು ಆವಲಹಳ್ಳಿ ಸಮೀಪದ ಹಿರಂಡಹಳ್ಳಿ ಗ್ರಾಮದ ಮುನಿರಾಜು ಎಂಬವರ ಮಗ ಎಚ್.ಎಂ.ರಾಘವೇಂದ್ರ ಅವರಿಗೆ ಕೊಟ್ಟು 2024ರ ಫೆಬ್ರವರಿ 21ರಂದು ಕೈವಾರದಲ್ಲಿ ಮದುವೆ ಮಾಡಲಾಗಿತ್ತು. ಇದೀಗ ಬಿಂದುಶ್ರೀ ಪತಿ ರಾಘವೇಂದ್ರ, ಮಾವ ಎನ್ ಮುನಿರಾಜು, ಅತ್ತೆ ಲತಾ ಹಾಗೂ ನರಸಿಂಹಯ್ಯ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಬಿಂದುಶ್ರೀಯನ್ನು ಅವಮಾನಿಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. 20 ಲಕ್ಷರೂಪಾಯಿ ಕೊಡುವಂತೆ ಕಿರುಕುಳ ನೀಡಿದ್ದಾರೆ.ಕಿರುಕುಳ ತಾಳದೆ ಬಿಂದುಶ್ರೀ ತವರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆರು ತಿಂಗಳ ಹಿಂದೆ ರಾಘವೇಂದ್ರ ಜೊತೆಗೆ ಬಿಂದುಶ್ರೀ ಮದುವೆಯಾಗಿತ್ತು. ಮಗಳ ಸಾವಿನ ಸುದ್ದಿ ಕೇಳಿ…

Read More

ಬೆಂಗಳೂರು : ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಬಂಧನದ ವಿಚಾರವಾಗಿ ಇದೀಗ ಗುತ್ತಿಗೆದಾರ ಚಲುವರಾಜು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ನಾಳೆ ಇನ್ನೂ ಎರಡು ಆಡಿಯೋ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಹೌದು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಚಲುವರಾಜು, ಮುನಿರತ್ನ ಅವರ ಕುರಿತು ಇನ್ನು ಎರಡು ಆಡಿಯೋ ಇವೆ. ನಾಳೆ ಎರಡು ಆಡಿಯೋಗಳನ್ನು ರಿಲೀಸ್ ಮಾಡುತ್ತೇನೆ ಹನುಮಂತರಾಯಪ್ಪ ಜೊತೆ ಮಾತನಾಡಿದ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋ ಬಿಡುಗಡೆ ಮಾಡುತ್ತೇನೆ ನಾಳೆ ಎರಡು ಆಡಿಯೋಗಳನ್ನು ರಿಲಿಸ್ ಮಾಡುತ್ತೇನೆ ಎಂದು ಚೆಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಮುನಿರತ್ನರನ್ನು ಗುತ್ತಿಗೆದಾರ ಚೆಲುವರಾಜನಿಗೆ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೆ ಗುತ್ತಿಗೆದಾರ ಚೆಲುವರಾಜು ಮತ್ತೆರಡು ಹೊಸ ಆಡಿಯೋಗಳನ್ನು ಬಿಡುಗಡೆ ಮಾಡುತ್ತೇನೆ…

Read More

ವಿಜಯಪುರ : ಭಾರತೀಯರು ಎನ್ನುವುದು ನಮ್ಮೆಲ್ಲರ ಮೂಲ ಹಾಗಾಗಿ ನಾವೆಲ್ಲ ಒಂದೇ ಮರದ ಟೊಂಗೆಗಳು ಇದ್ದ ಹಾಗೆ ಎಂದು ವಿಜಯಪುರದಲ್ಲಿ ವ್ರತ್ತಮಠದ ಮುರುಘೇಂದ್ರ ಸ್ವಾಮೀಜಿಗಳು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಣೆಹಳ್ಳಿ ಶ್ರೀಗಳ ಹೇಳಿಕೆಗೆ ಯತ್ನಾಳ ವಿರೋಧಿಸಿರುವ ವಿಚಾರವಾಗಿ ಎಲ್ಲರೂ ಒಂದೇ. ದೇಶವನ್ನು ಬೇರ್ಪಡಿಸುವ ಕೆಲಸ ಆಗಬಾರದು ಅಬ್ದುಲ್ ಕಲಾಂ ದೇಶದ ರಾಷ್ಟ್ರಪತಿ ಆಗಿದ್ದರು. ಈಗ ದ್ರೌಪದಿ ಮುರ್ಮು ಅವರು ದೇಶದ ರಾಷ್ಟ್ರಪತಿ ಆಗಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ ಜಾತಿ ಆಧಾರದಲ್ಲಿ ಯಾಕೆ ಅಳೆಯಬೇಕು? ಎಂದು ಯತ್ನಾಳ್ ಗೆ ತಿರುಗೇಟು ನೀಡಿದರು. ಮಾನವೀಯತೆ ಮನುಷ್ಯತ್ವವನ್ನು ಮುಂದುವರಿಸಿಕೊಂಡು ಹೋಗಬೇಕು ಭಾರತೀಯರಾಗಿ ಮಾನವೀಯತೆಯನ್ನು ಮೆರೆಯಬೇಕು. ಎಲ್ಲರ ರಕ್ತ ಒಂದೇ ಹೀಗಾಗಿ ಅದನ್ನು ಬೇರ್ಪಡಿಸುವ ಕೆಲಸ ಮಾಡುವುದು ಬೇಡ. ಕಂದಕ ಸೃಷ್ಟಿ ಮಾಡುವ ಬದಲು ಕೂಡಿಸುವ ಕೆಲಸ ಮಾಡಬೇಕು. ಬಸನಗೌಡ ಯತ್ನಾಳ್ ನಮ್ಮವರೇ ನಮ್ಮ ನಾಯಕರೇ. ಮುಸ್ಲಿಂ ಮೌಲ್ವಿಗಳು ಕೂಡ ನಮ್ಮ ಮಠಗಳಿಗೆ ಬರುತ್ತಾರೆ. ರಾಜಕಾರಣಿಗಳು ಎಲ್ಲೆಡೆ ಹೋಗುತ್ತಾರೆ. ಭಾರತೀಯರು ಅನ್ನೋದು ನಮ್ಮ…

Read More