Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಅರ್ಜುನ್ ವಿಚಾರಣೆ ನಡೆಸಿದ ನ್ಯಾಯಾಧೀಶರು ಗ್ರಾಮೀಣ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ವಜಾ ಆಗಿದೆ ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ಕೈಗೊತ್ತಿಕೊಂಡ ನ್ಯಾಯಾಧೀಶರು ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್…
ಕಲಬುರ್ಗಿ : ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಮಹಿಳೆಗೆ ನಿನ್ನ ಪತಿಯನ್ನು ಬಿಟ್ಟು ಬರುವಂತೆ ತಿಳಿಸಿದ್ದಾನೆ. ಇದಕ್ಕೆ ಒಪ್ಪದ ಆಕೆಗೆ ನಿರಂತರವಾಗಿ ಕಿರುಕುಳ ನೀಡಿದ್ದಾನೆ ಇದಕ್ಕೆ ಮನನೊಂದು ಮಹಿಳೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ನಗರದ ರಾಮತೀರ್ಥ ಬಡಾವಣೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಬಾಲೂರ ಮೂಲದ ವೈಷ್ಣವಿ ಮಾರುತಿ (24) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.ವೈಷವಿ ಕಲಬುರಗಿ ನಗರದ ರಾಮತೀರ್ಥ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎನ್ನಲಾಗುತ್ತಿದೆ. ಇನ್ನು ಕಿರುಕುಳ ನೀಡಿದ ಕಮಲನಗರದ ವಿಷ್ಣು ಅಂಕುಶ ವಗ್ದರೆ ವಿರುದ್ಧ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಷ್ಣವಿ ಬೀದರ್ ನಲ್ಲಿ ವಾಸಿಸುತ್ತಿದ್ದಾಗ ಅವರ ಮನೆಯಲ್ಲಿ ಸಂಬಂಧಿಕರ ಮಗಳೊಬ್ಬರು ಓದುತ್ತಿದ್ದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಷ್ಣು ವೈಷ್ಣವಿಗೆ ಪರಿಚಯವಾಗಿದ್ದಾನೆ.ಈ ವೇಳೆ ಸಂಬಂಧಿಕರ ಮಗಳ ನಡತೆ ಸರಿ ಇಲ್ಲ ಈ ಕುರಿತು ಪೋಷಕರಿಗೆ ತಿಳಿಸುತ್ತೇನೆ ಎಂದು ವೈಷ್ಣವಿಗೆ ಬೆದರಿಕೆ ಹಾಕಿದ್ದಾನೆ. ವೈಷ್ಣವಿ…
ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಇಂದು ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೂಡ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಕಗ್ಗಂಟಾಗಿ ಪರಿಣಮಿಸಿದ್ದು, ಇದುವರೆಗೂ ಬಿಜೆಪಿಯಾಗಲಿ, NDA ಮೈತ್ರಿ ಕೂಟದ ಜೆಡಿಎಸ್ ಆಗಲಿ ಹಾಗೂ ಕಾಂಗ್ರೆಸ್ ಕೂಡ ಅಭ್ಯರ್ಥಿಯನ್ನು ಘೋಷಿಸಿಲ್ಲ. ಇನ್ನೊಂದು ಕಡೆ ಸಿಪಿ ಯೋಗೇಶ್ವರ್ ಅವರು ನಾನು ಸ್ಪರ್ಧಿಸಿದರೆ ಬಿಜೆಪಿಯಿಂದ ಮಾತ್ರ ಸ್ಪರ್ಧಿಸುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸುವುದು ನನ್ನ ಆಸೆಯಾಗಿದೆ. ಆದರೆ ಕುಮಾರಸ್ವಾಮಿಯವರು ಅವರ ಮಗನಿಗೆ ಟಿಕೆಟ್ ಕೊಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಹಾಗಾಗಿ ನಾನು ಸ್ವತಂತ್ರವಾಗಿ ಸ್ಪರ್ಧಿಸಿದರು ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್…
ಬೆಂಗಳೂರು : ಸಿ. ಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಭೇಟಿ ಕುರಿತು ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಕುಮಾರಸ್ವಾಮಿಗೆ ರಾಜಕಾರಣ ಗೊತ್ತು. ವೈಯಕ್ತಿಕ ರಾಜಕಾರಣ ಒಂದು, ಪಾರ್ಟಿ ರಾಜಕಾರಣನೇ ಒಂದು. ನಂಗೂ ಬೇಕಾದಷ್ಟು ಮಾಹಿತಿ ಇದೆ ಕೆಲವರಿಗೆ ಸಲಹೆ ಕೊಡಬಹುದು, ಅವರಲ್ಲಿ ಗೊಂದಲ ಇರೋದು ಗೊತ್ತಿಲ್ಲ. ಅದು ಜೆಡಿಎಸ್ ಕ್ಷೇತ್ರ, ಬಿಜೆಪಿಗೆ ಕೊಟ್ರೆ ಅವರ ಅಸ್ತಿತ್ವ ಇರಲ್ಲ ಎಂದು ತಿರುಗೇಟು ನೀಡಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಅವರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಭೇಟಿಯ ಕುರಿತು ಧ್ವಜರೋಹಣ ಮಾಡೋ ಸಂದರ್ಭದಲ್ಲಿ ಅವರಿಗೆ ಕೊಡೋ ಗೌರವ ಕೊಡಲಾಗಿದೆ. ಅಷ್ಟು ಬಿಟ್ರೆ ಬೇರೆನೂ ಇಲ್ಲ ಚನ್ನಪಟ್ಟಣದಿಂದ ಕಾಂಗ್ರೆಸ್ ಪಾಳಯದಲ್ಲಿ ನಂದೇ ಮುಖ, ಕ್ಷೇತ್ರದಲ್ಲಿ ಜೆಡಿಎಸ್ ವೀಕ್ ಅಂತ ತಿಳಿದರೆ ನನ್ನಷ್ಟು ಮೂರ್ಖ ಯಾರೂ ಇಲ್ಲ. ಆದರೆ ಕುಮಾರಸ್ವಾಮಿ ಇಷ್ಟು ವೀಕ್ ಅಂತಾ ಭಾವಿಸಿರಲಿಲ್ಲ. ಎಲ್ಲರ ಹತ್ತಿರ ಮಾತನಾಡಿ ಕೈ ಕಟ್ಟಿ, ಬಿಜೆಪಿ ಅವರನ್ನು ರಿಕ್ವೆಸ್ಟ್…
ಬೆಂಗಳೂರು : ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದ್ದು, ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಇನ್ನೂ ಯಾವ ಪಕ್ಷದಿಂದಲೂ ಅಭ್ಯರ್ಥಿ ಘೋಷಣೆಯಾಗಿಲ್ಲ. ಇದರ ಮಧ್ಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮಾಜಿ ಸಂಸದ ಡಿಕೆ ಸುರೇಶ್ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ನಿಜ ನಮ್ಮ ಕಾರ್ಯಕರ್ತರು ಹೇಳ್ತಾ ಇದ್ದಾರೆ. ಪಾರ್ಟಿ ಹೈ ಕಮಾಂಡ್ ಏನು ಹೇಳ್ತಾರೆ ಅದೇ ಫೈನಲ್. ಲೋಕಸಭೆ ಫಲಿತಾಂಶದ ಶಾಕ್ನಿಂದ ಇನ್ನೂ ಹೊರಬಂದಿಲ್ಲ. ಸುರೇಶ್ ಅವರ ಸೋಲು ನಮಗೆ ಆಘಾತ ತಂದಿದೆ ಎಂದರು. ಇನ್ನು ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿ, ಬಹುತೇಕ ಎಲ್ಲಾ ಅಂತಿಮ ಮಾಡಿದ್ದೇವೆ. ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ, ಅವರು ನೋಡಿಕೊಳ್ತಾರೆ. ನಮ್ಮ ಪ್ರಸ್ತಾವನೆಯನ್ನು ದೆಹಲಿಗೆ ಕಳುಹಿಸುತ್ತೇವೆ. ದೆಹಲಿ…
ಬೆಂಗಳೂರು : ಮೂರೂ ಕ್ಷೇತ್ರಗಳ ಉಪಚುನಾವಣೆ ನಮಗೆ ಬಹಳ ಮಹತ್ವದ್ದಾಗಿದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲಲು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪ್ರತಿಯೊಬ್ಬರೂ ವಹಿಸಿಕೊಂಡ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕಾವೇರಿ ನಿವಾಸದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ವಿರುದ್ಧ ಹಲವು ಚರ್ಚೆಗಳನ್ನು ಚರ್ಚಿಸಿರುವ ಸಿಎಂ ಸಿದ್ದರಾಮಯ್ಯ ಮೂರೂ ಕ್ಷೇತ್ರಗಳು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಸಂಪೂರ್ಣ ಶ್ರಮ ಹಾಕಿ ವಿಧಾನಸಭೆ ಚುನಾವಣೆ ಉಪಚುನಾವಣೆ ನಿರ್ವಹಿಸಬೇಕು. ವಿಪಕ್ಷದವರ ಚಾಲೆಂಜ್ ಗಳಿಗೆ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯಿಂದ ಹಿಡಿದು ಎಲ್ಲರೂ ಹೇಳಿದರು. ಉಪಚುನಾವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ ಮಧ್ಯಾಹ್ನ ಸಂಜೆ ರಾತ್ರಿ ಹೇಳುತ್ತಾರೆ. ಇದಕ್ಕೆ ಸರಿಯಾಗಿ ಕೌಂಟರ್ ಕೊಡಬೇಕು. ಉಪಚುನಾವಣೆ ಮುಗಿಯುವವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಹಾಗಾಗಿ ಎಚ್ಚರವಾಗಿರಬೇಕು ಎಂದು…
ಬೀದರ್ : ಜಾತಿ ಗಣತಿ ವರದಿ ಜಾರಿ ಮಾಡುವ ಕುರಿತು ಒಂದು ಕಡೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗ, ಇದರ ಮಧ್ಯ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವ ಕಾಲ ಬಹಳ ದೂರವಿಲ್ಲ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದೇವರು ತಿಳಿಸಿದ್ದಾರೆ. ಇಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಂತಹ ಕಲ್ಯಾಣ ಪರ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವಲಿಂಗ ಪಟ್ಟದೇವರು, ಬಸವಣ್ಣನವರ ಕಾಲದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮಕ್ಕೆ ವಿರೋಧ ಮಾಡುವವರು ಇದ್ದೇ ಇದ್ದಾರೆ. ವಿರೋಧದ ಮಧ್ಯೆಯೂ 21ನೇ ಶತಮಾನದವರೆಗೆ ಜಾಗೃತ ಮಾಡುತ್ತಾ ಬಂದಿದ್ದು ಲಿಂಗಾಯತ ಸ್ವತಂತ್ರ ಧರ್ಮ ಮುದ್ರೆ ಪಡೆದೇ ತೀರೋಣ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಬಸವಣ್ಣನವರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗಬಾರದು ಅಂತ ಅನೇಕ ಶಕ್ತಿಗಳು ವಿರೋಧ ಮಾಡುತ್ತಿವೆ. ಆದ್ರೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವ ಕಾಲ ಬಂದೇ ಬರುತ್ತೆ.12ನೇ ಶತಮಾನದಲ್ಲೇ ಅನುಭವ ಮಂಟಪದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮುದ್ರೆ ಬಿದ್ದಿದೆ. ಇನ್ನು ಸರ್ಕಾರದಲ್ಲಿ ಸ್ವತಂತ್ರ ಧರ್ಮದ…
ಬೆಂಗಳೂರು : ಈಗಾಗಲೆ ಬಿಗ್ ಬಾಸ್ 11ರ ಶೋನಿಂದ ಹೊರಹಾಕಲ್ಪಟ್ಟ ಲಾಯರ್ ಜಗದೀಶ್ ಅವರಿಗೆ ಕರ್ನಾಟಕದ ಕ್ರಶ್ ಎಂದೇ ಅಭಿಮಾನಿಗಳು ಬಿರುದು ಕೊಟ್ಟಿದ್ದರು. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಮೊದಲನೇ ವಾರದಲ್ಲಿ ಅವಕಾಶ ಸಿಕ್ಕರೆ ನಾನು ರಾಜ್ಯದ ಸಿಎಂ ಆಗುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ಬಿಗ್ ಬಾಸ್ ನಲ್ಲಿ ಕೆಲವು ಅವಾಚ್ಯ ಪದಗಳನ್ನು ಬಳಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಶೋನಿಂದ ಹೊರ ಹಾಕಲಾಗಿದೆ. ನಾನು ಕೂಡ ಸಿಎಂ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದ ಅವರು ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಹೈಕಮಾಂಡ್ ಯಾರು ಗೊತ್ತಿಲ್ಲ ಅಕಸ್ಮಾತ್ ಕಾಂಗ್ರೆಸ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಜನರ ಸೇವೆ ಮಾಡೋಕೆ ಯಾವ ಕೆಲಸ ಕೊಟ್ಟರೂ ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕರೆದು ಟಿಕೆಟ್ ಕೊಟ್ಟರೆ ನನ್ನ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ ತಿಂಗಳು ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮನೆ ಎದುರು ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಗಲಾಟೆ ಮಾಡುತ್ತಿದ್ದಾಗ ಯಾರೇ ಗಲಾಟೆ ಮಾಡಿದ್ರು ಅವರ ಅರ್ಜಿ ಕಿತ್ತಾಕ್ತೇನೆ ಎಂದು ಗದರಿದ್ದಾರೆ. ಹೌದು ರಾಜ್ಯದಲ್ಲಿ ಚನ್ನಪಟ್ಟಣ ಉಪಚುನಾವಣೆಯ ಕಾವು ಹೆಚ್ಚಾಗಿದ್ದು, ಅದರ ಬೆನ್ನಲ್ಲೇ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸದ ಮುಂದೆಯೇ ಟಿಕೆಟ್ಗಾಗಿ ಜಟಾಪಟಿ ನಡೆದಿದೆ. ಆರ್. ಶಂಕರ್, ಖಾದ್ರಿ, ಶಿವಲೀಲಾ ಕುಲಕರ್ಣಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಮುಂದೆ ವಾದ ಮಾಡಿದ್ದರು. ಇದರಿಂದ ಕುಪಿತಗೊಂಡ ಡಿಕೆ ಶಿವಕುಮಾರ್ ಜಗಳ ಆಡೋಕೆ ನಮ್ಮ ಮನೆಗೆ ಬಂದಿದ್ದೀರಾ ನಡೀರಿ ಮನೆಗೆ. ಯಾರೇ ಮಾತಾಡಿದ್ರು ಅವರ…
ಹಾವೇರಿ : ರಾಜ್ಯದಲ್ಲಿ ಮುಂದಿನ ತಿಂಗಳು ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಿಸಲಾಗುತ್ತೆ ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು. ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾಳೆ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಲಿದೆ.ಅಭ್ಯರ್ಥಿ ಆಯ್ಕೆ ಸಂಬಂಧ ಸಿಇಸಿ ಮೀಟಿಂಗ್ ನಡೆಯುತ್ತಿದೆ ಎಂದು ತಿಳಿಸಿದರು. ಅಜ್ಜಂಪೀರ ಖಾದ್ರಿ ಹಾಗೂ ಯಾಸೀರಖಾನ್ ಪಠಾಣ್ ಇಬ್ಬರನ್ನೂ ಕೂರಿಸಿ ಚರ್ಚೆ ಮಾಡುತ್ತೇವೆ. ಅವರಲ್ಲಿ ಒಬ್ಬರಿಗೆ ಟಿಕೆಟ್ ಕೊಡುತ್ತೇವೆ. ಇಲ್ಲದಿದ್ದರೆ ಅವರು ಸೂಚಿಸಿದವರಿಗೆ ನೀಡುತ್ತೇವೆ. ಹೈಕಮಾಂಡ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು ಹಾಗೂ ಶಾಸಕರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಇಂದು ರಾತ್ರಿ ಅಥವಾ ನಾಳೆ…