Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು. ಅವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನುಳಿದ ಮೂವರ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದೆ. ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿ ವಜಾ ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತು ಗೊಳಿಸಲಾಗಿದೆ. ಅಥಿತಿ…
ಕೋಲಾರ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಘೋರ ದುರಂತ ಒಂದು ಸಂಭವಿಸಿತ್ತು. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ, ಘಟನೆಗೆ ಸಂಬಂಧಿಸಿದಂತೆ ಮುರಾರ್ಜಿ ವಸತಿ ಶಾಲೆಯ ಅತಿಥಿ ಶಿಕ್ಷಕರನ್ನು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಲಾಗಿದೆ. ಹೌದು ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿಯರನ್ನು ಶೈಕ್ಷಣಿಕ ಪ್ರವಾಸಕ್ಕೆ ಎಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಇಲ್ಲಿನ ಸಮುದ್ರದಲ್ಲಿ ಆಟ ಆಡುತ್ತಿದ್ದ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ.ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರಾಗಿರುವ…
ಉತ್ತರಕನ್ನಡ : ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಿಸಿ ಪೊಲೀಸರು ಇದೀಗ ಕ್ರಮ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರು ಇದೀಗ ಸೂಚನೆ ನೀಡಿದ್ದಾರೆ.ಕಡಲ ತೀರಕ್ಕೆ ಹೋಗಿದ್ದ ಪ್ರವಾಸಿಗರನ್ನು ಪೊಲೀಸರು ತಡೆದಿದ್ದಾರೆ.ನಿನ್ನೆ ಸಂಜೆ ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವಳ ಶವ ಪತ್ತೆಯಾಗಿದೆ. ಮೂವರ ಮೃತ ದೇಹಕ್ಕಾಗಿ ಶೋಧ ಕಾರ್ಯ ಇದೀಗ ಮುಂದುವರೆದಿದೆ. ಘಟನೆ ಹಿನ್ನೆಲೆ? ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮುರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿನಿಯರನ್ನು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಇಲ್ಲಿನ ಸಮುದ್ರದಲ್ಲಿ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ಅಲೆಗಳ ಹೊಡೆತದಿಂದ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಲೈಫ್ ಗಾರ್ಡ್ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೇ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಶ್ರವಂತಿ ಗೋಪಾಲಪ್ಪ(15) ಎಂದು ಗುರುತಿಸಲಾಗಿದೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ ಹಾಗೂ ಲಿಪಿಕಾ ಎಂಬುವರನ್ನು ರಕ್ಷಇಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ…
ಬೆಳಗಾವಿ : ನಿನ್ನೆ ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದರು. ಈ ವೇಳೆ ಈ ಒಂದು ಹೋರಾಟದಲ್ಲಿ ಪ್ರತಿಭಟನಾಕಾರರು ಹಿಂಸಾತ್ಮಕ ಪ್ರತಿಭಟನೆ ನಡೆಸಿ ಪೊಲೀಸರ ವಾಹನಗಳ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಹೌದು ಬೆಳಗಾವಿಯಲ್ಲಿ 2ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ. ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್,…
ಗುಜರಾತ್ : ಅರ್ಚಕನೊಬ್ಬ ಕಾಳಿ ದೇವಿಯನ್ನು ಬಹಳ ನಿಷ್ಠೆಯಿಂದ ಪೂಜೆ ಮಾಡುತ್ತಿದ್ದ. ಕೊಠಡಿಯಲ್ಲಿ ಬೀಗ ಹಾಕಿಕೊಂಡು 24 ಗಂಟೆಗಳ ಕಾಲ ತೀವ್ರ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿದ್ದ. ಆದರೆ ಕಾಳಿದೇವಿ ತನಗೆ ಪ್ರತಿಕ್ಷವಾಗಿಲ್ಲವೆಂದು ಮನೆಯ ಅಂಗಳದಲ್ಲಿದ್ದ ಕಟ್ಟರ್ ಅನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ ನ ವಾರಾಣಾಸಿ ನಗರದ ಗಾಯ್ ಘಾಟ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಇವರು ಮನೆಯ ಕೋಣೆಯೊಂದರಲ್ಲಿ ಕಾಳಿ ದೇವಿಯನ್ನು ಬಹಳ ನಿಷ್ಠೆಯಿಂದ ಆರಾಧಿಸುತ್ತಿದ್ದರು.ಈ ವೇಳೆ ತಮ್ಮ ಬಾಡಿಗೆ ಮನೆಯ ಅಂಗಳದಲ್ಲಿ ಕಟ್ಟರ್ನಿಂದ ಕತ್ತು ಸೀಳುವ ಮೊದಲು ದೇವರನ್ನು ಪ್ರಾರ್ಥಿಸಿದ್ದರು. ಆ ಸಮಯದಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಪತ್ನಿಗೆ ತಾಯಿ ಕಾಳಿ ನೀನೇ ದಾರಿ ತೋರಿಸು ಎಂದು ಜೋರಾಗಿ ಕೂಗಿದ್ದರು. ಪತಿ ಹೀಗೇಕೆ ಅರಚುತ್ತಿದ್ದಾರೆ ಎಂದು ಗಾಬರಿಯಾಗಿ ಅರ್ಚಕ ಅಮಿತ್ ಶರ್ಮಾ ಅವರ ಪತ್ನಿ ಗಾಬರಿಯಾಗಿ ಹೊರಗಡೆ ಬಂದಿದ್ದಾರೆ. ಪತಿ ಕತ್ತು ಸೇರಿಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದು ನೋಡಿ ದಂಗಾಗಿದ್ದಾರೆ,…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿನ್ನೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಅವರ ಸ್ವಗ್ರಾಮವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಎಸ್ ಎಂ ಕೃಷ್ಣ ಅವರ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನುಡಿ ನಮನ ಸಲ್ಲಿಸಿದ್ದು, ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು. ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್ಮೆನ್ ರಾಜಕಾರಣಿ. ಈ ಕಾರಣಕ್ಕಾಗಿಯೇ ಅಜಾತಶತ್ರುವಾಗಿ ನಮ್ಮ ನೆನಪುಗಳಲ್ಲಿ ಶಾಶ್ವತವಾಗಿರಲಿದ್ದಾರೆ. ಜಾಗತಿಕ ಭೂಪಟದಲ್ಲಿ ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯಾಗಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣರವರ ಕೊಡುಗೆ ಅಪಾರ. ವಿಧಾನಸಭೆ,…
ರಾಯಚೂರು : ಈಗಾಗಲೇ ಬಳ್ಳಾರಿಯಲ್ಲಿ ಹಾಗೂ ಬೆಳಗಾವಿಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಅಕ್ಟೋಬರ್ ಒಂದೇ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೌದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಾಲ್ವರು ಬಾಣಂತಿಯರು ಹೆರಿಗೆ ದಾಖಲಾಗಿದ್ದರು ಈ ವೇಳೆ ಹೆರಿಗೆ ಬಳಿಕ ನಾಲ್ವರು ಬಾಣಂತಿಯರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಣಂತಿಯರನ್ನು ಚಂದ್ರಕಲಾ(26), ರೇಣುಕಮ್ಮ(32), ಮೌಸಮಿ ಮಂಡಲ್(22), ಹಾಗೂ ಚೆನ್ನಮ್ಮ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಒಟ್ಟು 300 ಬಾಣಂತಿಯರ ಹೆರಿಗೆಯಾಗಿತ್ತು. ಅವರಲ್ಲಿ 7 ಬಾಣಂತಿಯರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ವೇಳೆ . ಅ.21 ರಂದು ಚನ್ನಮ್ಮ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆಯಾಗಿತ್ತು. ಅದಾದ 9 ದಿನಗಳ ಬಳಿಕ ಸಾವನ್ನಪ್ಪಿದ್ದರು. ಅ.22 ರಂದು ಆರ್ಎಚ್ ಕ್ಯಾಂಪ್-3ರಲ್ಲಿ…
ಚಿತ್ರದುರ್ಗ : ಬಳ್ಳಾರಿಯ ಬಿಮ್ಸ್ ಹಾಗೂ ಬೆಳಗಾವಿಯಲ್ಲಿ ಬಾಣಂತಿಯ ಸಾವು ಪ್ರಕರಣ ಈಗಾಗಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು ಇದೀಗ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪ ಕೇಳಿ ಬರುತ್ತಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಗನೂರು ಹಟ್ಟಿಯ ಗ್ರಾಮದ ರೋಜಾ (25) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ವೈದ್ಯೆ ಡಾ.ರೂಪಶ್ರೀ ಎನ್ನುವವರು ರೋಜಾಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿದ್ದರು. ಹರಿಗೆ ಬಳಿಕ ರೋಜಾ ಮನೆಗೆ ತೆರಳಿದ್ದರು. ಇವಳೆ ಹೊಲಿಗೆ ಹಾಕಿದ ಭಾಗದಲ್ಲಿ ರೋಜಾ ಗೆ ತೀವ್ರ ನೋವು ಕಾಣಿಸಿಕೊಂಡಿದೆ. ಹೊಟ್ಟೆ ಭಾಗದಲ್ಲಿ ತೀವ್ರ ನೋವು ಹಾಗೂ ಸೋಂಕಿನಿಂದ ರೋಜಾ ಬಳಲುತ್ತಿದ್ದರು. ಅಲ್ಲದೇ ವಾಂತಿ ಭೇದಿಯಿಂದ ಕೂಡ ನೋವು ಅನುಭವಿಸುತ್ತಿದ್ದರು.ಹಾಗಾಗಿ ನಿನ್ನೆ ಜಿಲ್ಲಾ ಆಸ್ಪತ್ರೆಗೆ ಮತ್ತೆ ಬಂದು ದಾಖಲಾಗಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಜಾ ಗೆ ವೈದ್ಯರು ಹಾಗೂ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಡಿಸೆಂಬರ್ 19 ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಕರಣ ಸಂಬಂಧ ಈವರೆಗೂ ಕೆಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.ಅಲ್ಲದೆ, ದೂರುದಾರ ಸ್ನೇಹಮಯಿ ಕೃಷ್ಣ ವಿನಾಕಾರಣ ಅಡ್ವೋಕೇಟ್ ಜನರಲ್ ವಿರುದ್ದ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಸ್ನೇಹಮಯಿ ಕೃಷ್ಣ ಪರ ವಕೀಲ ವಾದ ಮಂಡಿಸಿ, ಮುಡಾ ಹಗರಣದ ಆರೋಪಿ ಸಿಎಂ ಆಗಿದ್ದಾರೆ. ಅವರೇ ರಾಜ್ಯದ ಮುಖ್ಯಸ್ಥರಾಗಿದ್ದು, ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲದ ಸಿಬಿಐ ಅಥವಾ ಬೇರೆ ಸ್ವತಂತ್ರ ಸಂಸ್ಥೆಗೆ ತನಿಖೆ ವಹಿಸಲು ಕೋರಿದರು. ಅಲ್ಲದೆ, ಪ್ರಕರಣದ ಎಲ್ಲ ಮಾಹಿತಿ ನ್ಯಾಯಪೀಠಕ್ಕೆ…
ಮಂಡ್ಯ : ಮಾಜಿ ಸಿಎಂ ಹಾಗೂ ಮಾಜಿ ವಿದೇಶಾಂಗ ಸಚಿವ SM ಕೃಷ್ಣ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಇದೀಗ ಕೋಡಿಶ್ರೀಗಳು ಸಹ SM ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಎಸ್.ಎಂ.ಕೃಷ್ಣ ದೂರ ದೃಷ್ಟಿಯೇ ಕಾರಣ. ವರನಟ ಡಾ. ರಾಜಕುಮಾರ್ ಅಪಹರಣ ಆದಾಗ ಎಸ್.ಎಂ.ಕೃಷ್ಣ ನನ್ನನ್ನ ಮನೆಗೆ ಕರೆಸಿದ್ದರು. ಆ ವೇಳೆ ಎಸ್.ಎಂ.ಕೃಷ್ಣ ದಂಪತಿ ಚಿಂತಾಕ್ರಾಂತರಾಗಿದ್ದರು. 107 ದಿನಗಳ ಬಳಿಕ ರಾಜ್ ಕುಮಾರ್ ಬಿಡುಗಡೆ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದೆ. ಆದ್ದರಿಂದ ಕೃಷ್ಣರೊಂದಿಗೆ ನಿಕಟ ಹಾಗೂ ಪ್ರೀತಿ ಸಂಪರ್ಕವಿತ್ತು ಎಂದು ಶ್ರೀಗಳು ಅವರ ಜತೆಗಿನ ನೆನಪನ್ನು ಮೆಲುಕು ಹಾಕಿದ್ದಾರೆ. ನಾನು ಬೆಂಗಳೂರಿನಲ್ಲಿ ಓದುವಾಗ ಕಾನೂನು ಕಾಲೇಜಿನಲ್ಲಿ ಎಸ್.ಎಂ.ಕೃಷ್ಣ ಅವರು ಪ್ರಾಧ್ಯಪಕಾರಾಗಿ ಕೆಲಸ ಮಾಡ್ತಿದ್ದರು. ಅದಾದ ಬಳಿಕ ಮೂರು ಬಾರಿ ಮಠಕ್ಕೆ ಭೇಟಿ ನೀಡಿದ್ರು.…













