Author: kannadanewsnow05

ವಿಜಯಪುರ : ಮುಖ್ಯಮಂತ್ರಿಗಳು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ. ಆದ್ರೆ ಯುದ್ಧವೇ ಪರಿಹಾರವಲ್ಲ ಅನ್ನುವ ಅರ್ಥದಲ್ಲಿ ಹೇಳಿದ್ದಾರೆ. ಅವರ ಬಳಿಯೂ ನ್ಯೂಕ್ಲಿಯರ್‌ ಇದೆ, ಅಣುಬಾಂಬ್ ದಾಳಿಯ ಬೆದರಿಕೆ ಹಾಕ್ತಿದ್ದಾರೆ. ಹಾಗಾಗಿ ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಯುದ್ಧ ಮಾಡಲಿ ಎಂದು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಎಂ.ಬಿ ಸಮರ್ಥಿಸಿಕೊಂಡರು. ಇಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ, ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವಿದ್ದೇವೆ, ಎಲ್ಲ ರಾಜಕೀಯ ಪಕ್ಷಗಳೂ ಇವೆ. ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು. ಶತ್ರು ರಾಷ್ಟ್ರದ ವಿರುದ್ಧ ಯುದ್ಧ ಆಗಲೇಬೇಕು, ಪಾಕ್‌ಗೆ ತಕ್ಕ ಶಾಸ್ತಿ ಮಾಡಬೇಕು. ಹಾಗಾಗಿ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ಆಗಬೇಕು. ಮೋದಿ ಜೊತೆಗೆ ಎಲ್ಲ ರಾಜಕೀಯ ಪಕ್ಷಗಳೂ ಇವೆ ಎಂದು ಭರವಸೆ ನೀಡಿದರು.

Read More

ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ 26 ಜನ ಅಮಾಯಕರು ಬಲಿಯಾಗಿದ್ದಾರೆ. 26 ಜನರು ಬಲಿಯಾಗಿದ್ದಕ್ಕೆ ಇಡೀ ದೇಶವೆ ಉಗ್ರರ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಜನ ದುಃಖದಲ್ಲಿದ್ದಾರೆ. ಆದರೆ ರಾಷ್ಟೀಯ ಪಕ್ಷಗಳು ಎನಿಸಿಕೊಂಡಿರುವ ಬಿಜೆಪಿ ಹಾಗು ಕಾಂಗ್ರೆಸ್ ಮಾತ್ರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿವೆ. ಹೌದು ಪಹಲ್ಗಾಮ್ ದಾಳಿ ಬಗ್ಗೆ ರಾಜಕೀಯಕ್ಕೆ ಕೆಸರೆರಚಾಟ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ತಲೆ ಇಲ್ಲದ ಫೋಟೋವನ್ನು ಕಾಂಗ್ರೆಸ್ ಬಿಟ್ಟಿದೆ. ಹೊಣೆ ಹೊರುವ ಸಂದರ್ಭದಲ್ಲಿ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿಯಿಂದಲೂ ಉತ್ತರ ನೀಡಿದ್ದು ಕಾಂಗ್ರೆಸ್ ನಾಯಕರು ಫೋಟೋ ಇರುವ ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ ಪಾಕಿಸ್ತಾನ ಏಜೆಂಟ್ ಗಳೆಂಬ ಫೋಟೋವನ್ನು ಬಿಜೆಪಿ ರಿಲೀಸ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಫೋಟೋಗಳು ಇವೆ ಕಾಂಗ್ರೆಸ್ ಕಾ ಹಾತ್ ಪಾಕ್ ಕೆ ಸಾತ್ ಎಂದು ಟ್ವೀಟ್ ಮಾಡಲಾಗಿದೆ.ಜನರು…

Read More

ಬೆಂಗಳೂರು : ಬೆಳಗಾವಿಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ಪೂರ್ಣ ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು‌. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗುತ್ತಿರುವ ಕುರಿತು‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.ನನಗೆ ಸಂಪೂರ್ಣವಾದಂತ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು? ಯಾತಕ್ಕೆ ಕೋಪಗೊಂಡರು ಎಂಬುದು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ ಎಂದರು. ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು…

Read More

ಯಾದಗಿರಿ : ಬಾಕಿ ಬಿಲ್ ಬಿಡುಗಡೆಗಾಗಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಹೌದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಯಾದಗಿರಿ ಜಿಲ್ಲೆಯ ಪಿಡಬ್ಲ್ಯೂಡಿ ಅಧಿಕಾರಿಗಳ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಲಂಚ ಪಡೆದಿರುವ ಬಗ್ಗೆ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪಿಡಬ್ಲ್ಯೂಡಿ ಅಧಿಕಾರಿಗಳ ವಸೂಲಿ ದಂಧೆಯ ಕರಾಳ ಮುಖ ಇದೀಗ ಬಯಲಾಗಿದೆ. ಬಾಕಿ ಹೆಣ ಬಿಡುಗಡೆಗಾಗಿ ಫೈಲ್ ಗೆ ಸಹಿ ಮಾಡಲು ಹಂಚಿಕೆ ಬೇಡಿಕೆ ಇಟ್ಟಿದ್ದಾರೆ ಐದಾರು ಅಧಿಕಾರಿಗಳು ಹಣ ವಸೂಲಿಗೆ ಎಳೆದಿದ್ದಾರೆ ಲಂಚ ಕೊಟ್ಟರೆ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ವ್ಯಕ್ತಿಯಿಂದ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಬ್ಲಡ್ಲರ್‌ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಆರೋಪಿಗಳನ್ನು ಸೈಯದ್ ಹಾಗೂ ದಾಹುದ್ ಪರ್ವೆಜ್ ತಿಳಿದು ಬಂದಿದೆ. ನೈಜೀರಿಯಾ ವ್ಯಕ್ತಿಯಿಂದ ಆರೋಪಿಗಳು ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದರು. ಎಂದು ಹೇಳಲಾಗುತ್ತಿದೆ. ಬಂಧಿತ ಆರೋಪಿಗಳ ಬಳಿ ಇದ್ದ 225 ಗ್ರಾಂ MDMA ಕ್ರಿಸ್ಟಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಪರ ವಿರೋಧ ವಿಚಾರವಾಗಿ ಬಹಳ ಚರ್ಚೆಯಾಗುತ್ತಿದೆ. ಜಾತಿ ಗಣತಿಯನ್ನು ವರದಿ ಪ್ರಶ್ನಿಸಿ ಕೆಲವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ವಿಚಾರಣೆ ಬಳಿಕ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿತು. ಈ ಸಂಬಂಧ ಏನಿದ್ದರೂ ಪ್ರತ್ಯೇಕ ಮಧ್ಯಂತರ ಅರ್ಜಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿದೆ. ಬೀದರ್‌ನ ಶಿವರಾಜ ಕಣಶೆಟ್ಟಿ, ಕೆ.ಸಿ. ಶಿವರಾಂ, ಬೆಂಗಳೂರಿನ ಬುಜೇಂದ್ರ, ನಟ ಮುಖ್ಯಮಂತ್ರಿ ಚಂದ್ರು ಹಾಗೂ ಬೆಂಗಳೂರಿನ ‘ಸಮಾಜ ಸಂಪರ್ಕ ವೇದಿಕೆ’ ಅಧ್ಯಕ್ಷ ಜಿ.ಎನ್‌.ಶ್ರೀಕಂಠಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯ ಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಾದ ಪ್ರತಿವಾದ ಬಳಿಕ ನ್ಯಾಯಪೀಠ ಎರಡು ಕಡೆಯ ವಕೀಲರ ವಿವರಣೆಯನ್ನು ಲೆಕ್ಕಿಸದೆ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿತು. ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ‘ರಾಜಕೀಯ ಮತ್ತು ಸಾಮಾಜಿಕ…

Read More

ಕಾಸರಗೋಡು : ಪಹಲ್ಗಾಮ್ ದಾಳಿಯ ವೇಳೆ ಉಗ್ರರಿಗೆ ತಲ್ವಾರ್ ತೋರಿಸಿದ್ರೆ ಸಾಕಿತ್ತು. ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಕಥೆ ಬೇರೆಯಾಗುತ್ತಿತ್ತು. ಇನ್ಮುಂದೆ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ವರ್ಕಾಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲೂ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ. ಪೌಡರ್ ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. ಆರು ಇಂಚಿನ ಚೂರಿ ಇಟ್ಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಓಡಾಡಿದರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ. ಮುಸ್ಲಿಮರು ಹೊಡಿತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು. ಈಗ ಹಿಂದೂ ತಿರುಗಿ ಬಿದ್ದಿದ್ದಾನೆ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಆದರೆ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇಂದು ನಿಮ್ಮ ಕನ್ನಡ ನ್ಯೂಸ್ ನೌ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಆದರೆ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಅನಾರೋಗ್ಯಕ್ಕೆ ಒಳಗಾಗಿಲ್ಲ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಹೊರ ರಾಜ್ಯದ ಪ್ರವಾಸದಲ್ಲಿ ಇರುವಂತ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಇಂದು ಬೆಂಗಳೂರಿಗೆ ಮರಳಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

Read More

ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಬಹಳ ದೊಡ್ಡದು ಎಂದು ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಭದ್ರತೆಗೆ ಮಾಡಿದ್ದಷ್ಟು ತ್ಯಾಗ ಯಾರು ಮಾಡಿಲ್ಲ. ಆ ಬಗ್ಗೆ ನಾವು ಬೇರೆಯವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾವೇನು ಪಹಲ್ಗಾಮ್ ದುರ್ಘಟನೆಯ ಬಗ್ಗೆ ಮೃದು ಧೋರಣೆ ತೋರಿಲ್ಲ ಎಂದು ಅವರು ತಿಳಿಸಿದರು. ನಮ್ಮ ನಾಯಕರು ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಹೇಳಿದ್ದಾರೆ. ಇದು ದೇಶದ ಭದ್ರತೆಯ ವಿಚಾರ ಎಚ್ಚರಿಕೆಯಿಂದ ಮಾತನಾಡಬೇಕು. ಈ ವಿಚಾರದಲ್ಲಿ ಪಕ್ಷಾತೀತವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

Read More

ಚಾಮರಾಜನಗರ : ಸಂಬಂಧಿ ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ ಕಾಲಿಗೆ ಪೆಟ್ಟಾಗಿದೆ. ಈ ವೇಳೆ ಮಗುವಿಗೆ ಏನಾಗಿದೆಯೋ ಏನೋ ಎಂಬ ಭೀತಿಯಲ್ಲಿ 12 ವರ್ಷದ ಬಾಲಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ತಿಳಿದುಬಂದಿದ್ದು, ಬಾಲಕ ಪ್ರಜ್ವಲ್ ಲೊಕ್ಕನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಶೀಲಾ ರವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿದ್ದು, ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗುವಿಗೆ ಏನಾದರೂ ಆಗಿದೆಯೇ ಎಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆ ತಿಳಿದು ಅಕ್ಕಪಕ್ಕದ ಮನೆಯವರು ತಕ್ಷಣ ಪ್ರಜ್ವಲ್‌ ನನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ…

Read More