Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ದಾವಣಗೆರೆ : ದಾವಣಗೆರೆಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನೊಬ್ಬ ತನ್ನ ಪತ್ನಿಯ ಮಲತಾಯಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೆ ಇಂದು ಪತ್ನಿಯನ್ನು ಬಿಟ್ಟು ಅತ್ತೆಯ ಜೊತೆಗೆ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹೌದು 55 ವರ್ಷದ ಮಹಿಳೆಯ ಜೊತೆಗೆ ಯುವಕ ಪರಾರಿಯಾಗಿದ್ದಾನೆ. ಆಂಟಿಯ ಮೇಲೆ 25 ವರ್ಷದ ಯುವಕನಿಗೆ ಪ್ರೀತಿ ಹುಟ್ಟಿದ್ದು, ಇದೊಂದು ಸಿನಿಮಾ ಸ್ಟೋರಿಯನ್ನೇ ಈ ಒಂದು ಕಥೆ ಮೀರಿಸುವಂತಿದೆ. ಮಲತಾಯಿ ಶಾಂತ ಜೊತೆಗೆ ಯುವಕ ಗಣೇಶ್ ಎಸ್ಕೇಪ್ ಆಗಿದ್ದಾನೆ. ದಾವಣಗೆರೆ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಇದೊಂದು ಘಟನೆ ನಡೆದಿದೆ. ಚೆನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಗಣೇಶ ಮೇ 12 ರಂದು ಪತ್ನಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಅತ್ತೆ ಶಾಂತಾ ಜೊತೆ ಪರಾರಿಯಾಗಿದ್ದಾನೆ. ಮಹಿಳೆ ಶಾಂತ ಜೊತೆಗೆ ಗಣೇಶ್ ಪರಾರಿಯಾಗಿದ್ದಾನೆ. 25 ವರ್ಷದ ಯುವಕನಾಗಿರುವ ಗಣೇಶ ಹೆಂಡತಿಯ ಮಲತಾಯಿಯ ಜೊತೆ ಪರಾರಿಯಾಗಿದ್ದಾನೆ. ಗಣೇಶ್ ಪತ್ನಿ ಹೇಮಾಳ ಮಲತಾಯಿ ಆಗಿರುವ ಶಾಂತ ಮುದ್ದೇನಹಳ್ಳಿ ನಿವಾಸಿಯಾಗಿದ್ದಾರೆ. ಇನ್ನು ಯುವಕ…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಮೀಣ್ಯಂ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಹುಲಿಗಳಿಗೆ ವಿಷ ಪ್ರಾಶನ ಮಾಡಿರುವುದು ಪತ್ತೆಯಾಗಿದೆ. ಹಸುಗಳಿಗೆ ವಿಷ ಪ್ರಾಶನ ಮಾಡಿದ್ದು ಬಳಿಕ ಅದನ್ನು ತಿಂದ ಹುಲಿಗಳು ಸಾವನ್ನಪ್ಪಿವೆ ಎಂದು ಉಪ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು. ವಿಷ ಪ್ರಾಶನದಿಂದಲೇ ಐದು ಹುಲಿಗಳು ಮೃತಪಟ್ಟಿವೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಈ ಕುರಿತು ಹೇಳಿಕೆ ನೀಡಿದ್ದು, ಮರಣೋತ್ತರ ಪರೀಕ್ಷೆ ವೇಳೆ ಹುಲಿ ದೇಹದಲ್ಲಿ ವಿಷ ಪತ್ತೆಯಾಗಿದೆ. ಹಸುವಿನ ದೇಹದ ಮೇಲು ವಿಷದ ಅಂಶ ಕಂಡು ಬಂದಿದೆ ಹುಲಿ ಬೇಟೆಯಾಡಿದ ನಂತರ ವಿಷ ಹಾಕಿರುವ ಸಾಧ್ಯತೆ ಇದೆ. ಹುಲಿಗಳು ನಾಡಿಗೆ ಬಂದಿಲ್ಲ, ಹಸುಗಳೆ ಕಾಡಿಗೆ ಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು.
ವಿಜಯಪುರ : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಕಾಲಿ ಇಲ್ಲ ಎಂದು ವಿಜಯಪುರ ನಗರದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಪಕ್ಷದ ಅಧ್ಯಕ್ಷರ ಬದಲಾವಣೆ ವಿಚಾರ ಹಾಗು ಸಚಿವ ಸಂಪುಟ ರಚನೆ ವಿಚಾರ ಇದೆಲ್ಲವೂ ಹೈಕಮಾಂಡ್ ಅವರಿಗೆ ಬಿಟ್ಟಿದ್ದು ಈ ವಿಚಾರಗಳು ಇಕ್ಬಾಲ್ ಕೈನಲ್ಲೂ ಇಲ್ಲ ನನ್ನ ಕೈನಲ್ಲೂ ಇಲ್ಲ ಎಂದು ಶಾಸಕ ಇಕ್ಬಾಲ್ ಹೇಳಿಗೆಗೆ ಸಚಿವ ಎಂಬಿ ಪಾಟೀಲ್ ಅವರು ತಿರುಗೇಟು ನೀಡಿದರು. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ.ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ಎಂದು ಕೇಳಿಲ್ಲ. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡಿದರೆ ನೋಡೋಣ ಎಂದು ವಿಜಯಪುರ ನಗರದಲ್ಲಿ ಕೈಗಾರಿಕಾ…
ಬೆಂಗಳೂರು : ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎನ್.ರಾಜಣ್ಣ ಮಾತು ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಜಣ್ಣ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೆ ವಿಚಾವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡಿದರು. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು. ಸಚಿವ ಕೆ.ಎನ್.ರಾಜಣ್ಣ ಗುರುವಾರ ವಿಧಾನಸೌಧದಲ್ಲಿ ಮಾತನಾಡುತ್ತಾ, ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗಲಿದೆ. ಇದು ಪಕ್ಷದ ವಿಚಾರದಲ್ಲಿಯೋ, ಸರ್ಕಾರದ ವಿಚಾರದಲ್ಲಿಯೋ ಕಾದು ನೋಡಿ. ಕಾಂಗ್ರೆಸ್ನಲ್ಲಿ ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013-2018ರಲ್ಲಿ ಪವರ್ ಸೆಂಟರ್ ಒಂದೇ ಇದ್ದದ್ದು. ಈಗ ಎರಡ್ಮೂರು ಎಷ್ಟು ಬೇಕಿದ್ದರೂ ಹೇಳಿಕೊಳ್ಳಬಹುದು. ಪವರ್ ಸೆಂಟರ್ ಜಾಸ್ತಿ ಇದ್ದಾಗ ಜಂಜಾಟವೂ ಜಾಸ್ತಿ ಆಗುತ್ತದೆ ಎಂದು ಹೇಳಿಕೆ…
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರೂ ಯುವಕರು ಭೀಮಾ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರು ಬಳಿ ಈ ದುರ್ಘಟನೆ ಸಂಭವಿಸಿದೆ. ಸಿದ್ದಪ್ಪಾ (20) ರಾಮು (18) ಯುವಕರು ಭೀಮಾನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಬೆಳಿಗ್ಗೆ ಜಾನುವಾರುಗಳನ್ನು ಮೇಯಿಸಲು ಇಬ್ಬರು ಯುವಕರು ತೆರಳಿದ್ದಾರೆ. ಯುವಕರು ನೀರು ಪಾಲಾದ ಬಗ್ಗೆ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ತಕ್ಷಣ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಡಗೆರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ದ್ವೇಷ-ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಜಿ.ಪರಮೇಶ್ವರ್ ಸೂಚನೆ.
ಬೆಂಗಳೂರು : ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಸಮಾವೇಶದಲ್ಲಿ, ಪೊಲೀಸ್ ಪ್ರಗತಿ ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು. ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇದೇ ಕಾರಣದಿಂದ ಆ ಭಾಗದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದಾರೆ. ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು. ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ…
ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ…
ಬೆಂಗಳೂರು : ಸಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು ಇದೀಗ ಅವರ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದ್ದು, ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಈ ಕ್ರಾಂತಿಯ ಕುರಿತು ಕೆ.ಎನ್ ರಾಜಣ್ಣ ಅವರಿಗೆ ಕೇಳಬೇಕು ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಏನು ಬದಲಾವಣೆ ಅಂತ ರಾಜಣ್ಣ ಅವರನ್ನೇ ಕೇಳಬೇಕು. ರಾಜ್ಯ ರಾಜಕಾರಣದಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ. ಸೆಪ್ಟೆಂಬರ್ ನಲ್ಲಿ ಕ್ರಾಂತಿಯ ಬಗ್ಗೆ ಸಚಿವ ರಾಜಣ್ಣ ಅವರಿಗೆ ಕೇಳಬೇಕು ಮುಖ್ಯಮಂತ್ರಿ ಬದಲಾವಣೆ ನಾವೇ ಮಾಡಬೇಕು ಅಲ್ವಾ? ನಾವು ವೋಟರ್ ಇದೆ ಸಿದ್ದರಾಮಯ್ಯಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ. ಸಿಎಂ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ…
ಬೆಂಗಳೂರು : ಸೆಪ್ಟಂಬರ್ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ. ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಯಾವ ಪವರ್ ಸೆಂಟರ್ ನೋ ಇಲ್ಲ ಯಾವುದೇ ಕ್ರಾಂತಿ ಸಹ ಆಗಲ್ಲ. ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯುವ ಬಗ್ಗೆ ಕೆ.ಎನ್.ರಾಜಣ್ಣಗೆ ಮಾಹಿತಿ ಇರಬೇಕು. ಇಲ್ಲದಿದ್ದರೆ ಹಾಗೆ ಹೇಳುತ್ತಿರಲಿಲ್ಲಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದರು. ಸಿಎಂ ಗ್ರಿಪ್ ಕಳೆದುಕೊಂಡಿದ್ದಾರೆಂಬ ಆರೋಪ ವಿಚಾರವಾಗಿ ಮಾತನಾಡಿ, ಸಿಎಂ ಯಾವುದೇ ಗ್ರಿಪ್ ಕಳೆದುಕೊಂಡಿಲ್ಲ. ಸಿಎಂ ಈಗ ಆಡಳಿತ ನಡೆಸ್ತಾ ಇಲ್ವಾ?. ಸಣ್ಣಪುಟ್ಟ ವಿಚಾರಗಳಿರುತ್ತವೆ, ಬಗೆಹರಿಸುತ್ತಾರೆ. ಬಿಜೆಪಿಯವರು ಹಿಂದೆಯೂ ಟೀಕೆ…
ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬಳಿ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ. ಹುಲಿಮರಿಗಳು ಯಾವ ಕಾರಣಕ್ಕೆ ಸತ್ತಿರುವುದು ಇನ್ನೂ ಮಾಹಿತಿ ಇಲ್ಲ. ತನಿಖಾ ವರದಿಯ ಬಂದ ಮೇಲೆ ಆ ಕುರಿತು ಚರ್ಚೆ ಮಾಡೋಣ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಮುಂಬರುವ ಸೆಪ್ಟೆಂಬರ್ ನಲ್ಲಿ ಬದಲಾವಣೆಯ ಬಗ್ಗೆ ಸಚಿವ ರಾಜಣ್ಣ ಹೇಳಿಕೆಯ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರೋದು ಕ್ರಾಂತಿಯೋ ಅಥವಾ ಇನ್ಯಾವುದೋ ಗೊತ್ತಿಲ್ಲ. ಅದನ್ನು ಸಚಿವ ಕೆ.ಎನ್ ರಾಜಣ್ಣ ಅಥವಾ ಅವರ ಆಪ್ತ ಸಿಎಂ ಸಿದ್ದರಾಮಯ್ಯ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ನನಗೆ ಹೇಗೆ ಗೊತ್ತಾಗುತ್ತೆ? ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.














