Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಮತ್ತು ಡೀಸೆಲ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಆರಂಭ ಮಾಡಿದೆ. ಇದರ ಬದನಲ್ಲೇ ನಿನ್ನೆ ಕೇಂದ್ರ ಸರ್ಕಾರ ಎಲ್ ಪಿ ಜಿ ಸಿಲಿಂಡರ್ ಗ್ಯಾಸ್ ಬೆಲೆ ರೂ.50 ಹಾಗೂ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕ ಹೆಚ್ಚಳ ಮಾಡಿದೆ. ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಾಕ್ರೋಶ ಯಾತ್ರೆ ಬಿಜೆಪಿ ಮುಂದುವರಿಸಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಜನರಿಗೆ ತಿಳಿಸಲಿ ಎಂದು ಟಾಂಗ್ ನೀಡಿದರು. ಈ ಕುರಿತು ಕೇಂದ್ರ ಸರ್ಕಾರದಿಂದಲೂ ಬೆಲೆ ಏರಿಕೆ ವಿಚಾರವಾಗಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಇದೀಗ ಆಕ್ರೋಶ ಹೊರ ಹಾಕಿದ್ದಾರೆ. ಈಗ ಬಿಜೆಪಿಯವರು ಬಹಳ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆಕ್ರೋಶದಲ್ಲಿ ಇವತ್ತೇ ಬೋರ್ಡ್ ಬದಲಾವಣೆ ಮಾಡಬೇಕು. ನನ್ನ ಫೋಟೋ ಸಿದ್ದರಾಮಯ್ಯ ಫೋಟೋ ತೆಗೆಯಬೇಕು ಎಂದು ಕಿಡಿ ಕಾರಿದರು. ಕೇಂದ್ರ ಸರ್ಕಾರ ಸಹ ಬೆಲೆ ಏರಿಕೆ…
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ, ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿದ್ದು, ನಿನ್ನೆ ಮೈಸೂರಲ್ಲಿ ಈ ಒಂದು ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದರು. ಇದೀಗ ಈ ಒಂದು ಜನಾಕ್ರೋಶ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮಂಡ್ಯದಲ್ಲಿ ಯಾತ್ರೆ ಆರಂಭವಾಗಲಿದೆ. ಹೌದು ಕಾಂಗ್ರೆಸ್ ಸರ್ಕಾರದ ವಿರುದ್ಧ ಎರಡನೇ ದಿನದ ಜನಕ್ರೋಶ ಯಾತ್ರೆ ಇಂದು ಆರಂಭವಾಗಲಿದೆ. ಇಂದು ಮಂಡ್ಯದಲ್ಲಿ ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿ, ಸಿಲ್ವರ್ ಜೂಬ್ಲಿ ಪಾರ್ಕ್ ವರೆಗೆ ಈ ಒಂದು ಜನಾಕ್ರೋಶ ಯಾತ್ರೆ ಸಾಗಲಿದೆ. ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಪಕ್ಷ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಹ ಇಂದು…
ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದರು. ಅಬ್ದುಲ್ ಅಜೀಜ್ ಕಾವೇರಿ ನೀರಾವರಿ ನಿಗಮದ ಕಾಮಗಾರಿಗಳ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿದ್ದು, 5 ಕಾಮಗಾರಿಗಳನ್ನು ಮಾಡಿದ್ದಾರೆ. ಅದರ ಬಾಬ್ತು ಬಿಲ್ 23 ಲಕ್ಷ ರೂ ಬಾಕಿ ಇದ್ದು, ಅದನ್ನು ನೀಡಲು ಶೇ.6 ಕಮಿಷನ್ ಆದ 1.45 ಲಕ್ಷ ರೂ ಹಣ ನೀಡುವಂತೆ ಕಾವೇರಿ ರಂಗನಾಥ್ ಮತ್ತು ಉಮಾ ಮಹೇಶ್ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಬಾಲಕಿಯರು ಇಬ್ಬರು ತೋಟದಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರುಪ್ಪಲ್ಲಿ ಗ್ರಾಮದಲ್ಲಿ ಈ ಒಂದು ಘೋರ ಘಟನೆ ನಡೆದಿದ್ದು ಮೃತ ಬಾಲಕಿಯರನ್ನು ರಾಧಮ್ಮ (17), ಸಾಹಿತಿ (14) ಎಂದು ತಿಳಿದುಬಂದಿದೆ. ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಪಟ್ಟ ಬಾಲಕಿಯರು ಕುರುಪ್ಪಲ್ಲಿ ಗ್ರಾಮದವರು. ರಾಧಮ್ಮ ಆದಿನಾರಾಯಣರೆಡ್ಡಿ ಎಂಬವರ ಪುತ್ರಿ. ಬಾಗೇಪಲ್ಲಿಯ ನ್ಯಾಷನಲ್ ಕಾಲೇಜ್ ಪಿಯುಸಿ ವಿದ್ಯಾರ್ಥಿನಿ. ಸಾಹಿತಿ ರಾಮಲಿಂಗ ರೆಡ್ಡಿ ಎಂಬವರ ಪುತ್ರಿ. ಇವರು ಆದರ್ಶ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಬೆಂಗಳೂರು : ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೇಳುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿಸಿರುವ ಅತ್ಯಾಚಾರ ಘಟನೆ 2021ರಲ್ಲಿ ನಡೆದಿದೆ. ಆದಾದ ನಾಲ್ಕೂವರೆ ವರ್ಷಗಳ ನಂತರ ದೂರು ದಾಖಲಿಸಲಾಗಿದೆ. ಅದಕ್ಕೆ ದೂರುದಾರೆ ಯಾವುದೆ ವಿವರಣೆ ನೀಡಿಲ್ಲ. ಹೀಗಿದ್ದರೂ ಅರ್ಜಿದಾರರು ಜೈಲಿನಲ್ಲಿ ಮುಂದುವರಿಯುವುದು ಹೇಗೆ? ಆದ್ದರಿಂದ ಪ್ರಜ್ವಲ್ಗೆ ಜಾಮೀನು ನೀಡಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತಡೆಯಾಜ್ಞೆ ಇದ್ದರೂ ಪ್ರಜ್ವಲ್ ರೇವಣ್ಣ ವಿರುದ್ಧ ನಂಬಲರ್ಹ ಸಾಕ್ಷಿಗಳಿವೆ. ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ…
ಬೆಂಗಳೂರು : ಕಳೆದ ಏಪ್ರಿಲ್ 2 ರಂದು ಬೆಸ್ಕಾಂನ ಸುಂಕದಟ್ಟೆ ಕದಟ್ಟೆ ವ್ಯಾಪ್ತಿಯಲ್ಲಿ ವಿದ್ಯುತ್ ವಿದ್ಯುತ್ ಪರಿವರ್ತಕ (ಟಿಸಿ ರಿಪೇರಿ ವೇಳೆ ವಿದ್ಯುತ್ ಸ್ಪರ್ಶದಿಂದ ತೀವ್ರ ಸುಟ್ಟ ಗಾಯಗಳಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಮ್ಯಾನ್ ಪ್ರಕಾಶ್ (45) ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಸುಂಕದಕಟ್ಟೆಯ ವಿಭಾಗದ ಬೈರವೇಶ್ವರ ಕೈಗಾರಿಕಾ ಪ್ರದೇಶದ ಬಳಿ ಅವಘಡ ನಡೆದಿತ್ತು. 848ನೇ ಸಂಖ್ಯೆಯ ವಿದ್ಯುತ್ ಪರಿವರ್ತಕ ದುರಸ್ತಿ ಮಾಡುವಾಗ ಶಾಕ್ ತಗುಲಿದ್ದು ಮೈ ಎಲ್ಲಾ ಗಂಭೀರ ಸುಟ್ಟ ಗಾಯಗಳಾಗಿತ್ತು. ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸೇಂಟ್ ಜಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ವಿಜಯಪುರ : ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತೆ ಎಂದು ಅಲಲ್ಲಿ ಈ ಮಾತು ಕೇಳಿ ಬರುತ್ತಿತ್ತು. ಆದರೆ ಯಾವಾಗ ಹೈಕಮಾಂಡ್ ನಾಯಕರು ರಾಜ್ಯದ ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟರೊ ಅವಾಗಿನಿಂದ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ನಿಂತು ಹೋಯ್ತು. ಇದೀಗ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಉತ್ತರ ಕರ್ನಾಟಕದ ಈ ನಾಯಕನಿಗೆ ಭವಿಷ್ಯದಲ್ಲಿ ಸಿಎಂ ಆಗುವ ಯೋಗ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ. ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ. ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ…
ಬೆಂಗಳೂರು : ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ (https://karres (https://karresults.nic.in) ವೀಕಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು.ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಪ್ರಮುಖವಾಗಿದ್ದು ಇದೀಗ ಈ ಒಂದು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ. ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ…













