Subscribe to Updates
Get the latest creative news from FooBar about art, design and business.
Author: kannadanewsnow05
ಮಡಿಕೇರಿ : ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಗಲು ಯತ್ನಿಸಿದ್ದಾನೆ. ಈ ವೇಳೆ ಮಾಹಿತಿ ಪಡೆದ ಪೊಲೀಸರು ಸೀನಿಮಿಯ ರೀತಿಯಲ್ಲಿ ಅರೆಸ್ಟ್ ಮಾಡಿರುವ ಘಟನೆ ಮಡಿಕೇರಿ ಜಿಲ್ಲೆಯ ನಾಪೋಕ್ಲು ಸಮೀಪದ ಅಯ್ಯಂಗೆರಿ ಗ್ರಾಮದಲ್ಲಿ ನಡೆದಿದೆ. ಹೌದು ವೈಯಕ್ತಿಕ ವಿಷಯಕ್ಕೆ ಈ ಒಂದು ಹಲ್ಲೆ ನಡೆದಿದೆ ಎಂದು ಮೆಲ್ನೋಟಲ್ಲೆ ತಿಳಿದುಬಂದಿದೆ.ಹಲ್ಲೆ ನಡೆಸಿದ ಆರೋಪಿಯನ್ನು ಮಡಿಕೇರಿ ನಿವಾಸಿ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಆರೋಪಿ ಅಯ್ಯಂಗೇರಿ ಗ್ರಾಮದಲ್ಲಿದ್ದ ಅತ್ತೆ ಮನೆಗೆ ತೆರಳಿ, ಮನೆಯ ಮುಂಭಾಗದ ಬಾಗಿಲಿನ ಚಿಲಕ ಹಾಕಿ, ಹಿಂಬದಿ ಬಾಗಿಲನ್ನು ಒಡೆದು ಒಳ ನುಗ್ಗಿದ್ದಾನೆ. ಬಳಿಕ ಇಬ್ಬರು ಮಹಿಳೆಯರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ದಾಳಿಯಿಂದ ಆರೋಪಿಯ ಅತ್ತೆ ಐಸಮ್ಮ ಮತ್ತು ಸಂಬಂಧಿ ಕದೀಜ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೃತ್ಯ ಎಸಗಿ ಆರೋಪಿ ಆಟೋದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಮಾಹಿತಿ ತಿಳಿದ ನಾಪೋಕ್ಲು ಪೊಲೀಸರು ಬೆನ್ನಟ್ಟಿ ಹುದ್ದೂರು ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಈ…
ಕಲಬುರ್ಗಿ : ಇತ್ತೀಚಿಗೆ ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟು ತಿಂದು, ಕೋಮ ಸ್ಥಿತಿಗೆ ತಲುಪಿದ್ದ ಯುವತಿಯೊಬ್ಬಳು ಸಾವನಪ್ಪಿರುವ ಘಟನೆ ನಿನ್ನೆ ರಾಯಚೂರಿನಲ್ಲಿ ನಡೆದಿತ್ತು. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಒಂದೇ ದಿನ ಬೀದಿ ನಾಯಿ ದಾಳಿಯಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಬೀದಿ ನಾಯಿಗಳಿಂದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಹಾಗೂ ಪೋಷಕರು ಇದೀಗ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು : ವಕ್ಫ್ ಆಸ್ತಿ ಕಬ್ಬಳಿಕೆಯ ಬಗ್ಗೆ ಮೌನವಾಗಿರುವಂತೆ ಬಿವೈ ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷ ಒದ್ದಿದ್ದರು. ಹಲೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿವೈ ವಿಜಯೇಂದ್ರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು ಈ ಒಂದು ಆರೋಪಕ್ಕೆ ಇದೀಗ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದು, ಮುಡಾ ಕೇಸ್ ನಲ್ಲಿ ಹೈಕೋರ್ಟ್ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯ ನವರೇ, ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದೆಹಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ, ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹರಣ ಸೇರಿದಂತೆ ಹತ್ತು ಹಲವು ಭ್ರಷ್ಟಾಚಾರದ ಆರೋಪಗಳು ನಿಮ್ಮ ಹಾಗೂ…
ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ & ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಎರಡು ಇಲಾಖೆಗಳು ವಿಲೀನವಾಗುವ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎರಡು ಇಲಾಖೆಯ ಅಡಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು.…
ಬೆಂಗಳೂರು : ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಇಂದು ನಡೆದಿದ್ದು, ನಿನ್ನೇನೆ ಫಲಿತಾಂಶ ಕೂಡ ಪ್ರಕಟವಾಗಿದೆ. ಮತ್ತೊಮ್ಮೆ ಸಾರಾ ಗೋವಿಂದು ಬಳಕ್ಕೆ ಚುನಾವಣೆಯಲ್ಲಿ ಜಯ ದೊರಕಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ. ಇನ್ನೂ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿ ಕೆವಿ ವೆಂಕಟೇಶ್ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸಾರಾ ಗೋವಿಂದು ಬಳಗದವರಾಗಿದ್ದು, ಮತ್ತೊಮ್ಮೆ ಇದೇ ಬಳಗಕ್ಕೆ ವಾಣಿಜ್ಯ ಮಂಡಳಿಯ ಚುಕ್ಕಾಣಿ ದೊರೆತಿದೆ.ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅದರಲ್ಲಿ 24 ಮಂದಿ ಅವಿರೋಧವಾಗಿ ಆಗಿಬಿಟ್ಟಿದ್ದರು. ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,409 ಮತದಾರರಿದ್ದು ಇದರಲ್ಲಿ ಅತಿ ಹೆಚ್ಚು ಮತ ನಿರ್ಮಾಪಕ ವಲಯದಿಂದಲೇ ಇದೆ. ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಎಂ, ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯ ಸಫೈರ್ ವೆಂಕಟೇಶ್, ನಿರ್ಮಾಪಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ ಸಿ…
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್ವೆಲ್ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆಯಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.…
ಬೆಂಗಳೂರು : ಬೈಯಪ್ಪನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ತಿಪ್ಪಣ್ಣ (33) ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಅವರು ಪಾಳಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಮತ್ತು ಅವರ ಹೆಂಡತಿಯ ನಡುವೆ ಬಿಸಿಯಾದ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಇದು ಅವರನ್ನು ತೀವ್ರ ಕ್ರಮ ತೆಗೆದುಕೊಳ್ಳಲು ಕಾರಣವಾಯಿತು ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ತಿಪ್ಪಣ್ಣ ತಂದೆ ನೀಡಿದಂತ ದೂರನ್ನು ಆಧರಿಸಿ, ಅವರ ಪತ್ನಿ, ಮಾವ ಹಾಗೂ ಬಾಮೈದನ ವಿರುದ್ಧ ಜೀವ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಿಪ್ಪಣ್ಣ ಅವರು ಕನ್ನಡದಲ್ಲಿ ಬರೆದಿರುವ ಒಂದು ಪುಟದ ಡೆತ್ ನೋಟ್ ನಲ್ಲಿ ಪತ್ನಿ ಮತ್ತು ಮಾವನ ಮೇಲೆ ಚಿತ್ರಹಿಂಸೆ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ. ಡಿಸೆಂಬರ್ 12 ರಂದು ತನ್ನ ಮಾವ ತನಗೆ ಬೆದರಿಕೆ ಹಾಕಿದ್ದರು, ನಿಮ್ಮ ಮಗಳು ಶಾಂತಿಯಿಂದ ಬದುಕಲು ಸಾಯಬೇಕು ಅಥವಾ ಕೊಲ್ಲಬೇಕು…
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕು ಹಲವೆಡೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಇಂದು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 15.12.2024 ರ ಭಾನುವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.ಹೀಗಾಗಿ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 15.12.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-II ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಈ ಘಟನೆ ಶನಿವಾರ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು ಈ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಹೌದು ನಾವು ರೇಲ್ವೆ ಸ್ಟೇಷನ್, ಬಸ್ ಸ್ಟಾಂಡ್, ಸಿಗ್ನಲ್ ಬಳಿ ಸಾಮಾನ್ಯವಾಗಿ ಭಿಕ್ಷುಕರನ್ನು ನೋಡುತ್ತೇವೆ. ಆದರೆ ಇಲ್ಲೊಬ್ಬ ವಿಶೇಷ ಚೇತನ ವ್ಯಕ್ತಿ ಕ್ಯೂ ಆರ್ ಕೋಡ್ ನಿಂದ ಟಿಕೆಟ್ ಪಡೆದು ಮೆಟ್ರೋ ಟ್ರೈನ್ ಅಲ್ಲಿ ಭೀಕ್ಷಾಟನೆ ಮಾಡಿದ್ದಾನೆ. ಸ್ಕಲ್ ಕ್ಯಾಪ್ ಧರಿಸಿದ ವಿಕಲಚೇತನ ವ್ಯಕ್ತಿಯೊಬ್ಬ ರೈಲಿನೊಳಗೆ ಒಬ್ಬ ಪ್ರಯಾಣಿಕನಿಂದ ಇನ್ನೊಬ್ಬನಿಗೆ ಭಿಕ್ಷೆ ಬೇಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರೊಬ್ಬರು ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು ಇದೀಗ ವೈರಲ್ ಆಗಿದೆ. BMRCL ಮೂಲಗಳ ಪ್ರಕಾರ, ಇದು ಶನಿವಾರದ ಘಟನೆ ಎಂದು ಹೇಳಲಾಗಿದೆ. ಆದರೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ಇನ್ನೂ ನಡೆಯುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.ಈ ವ್ಯಕ್ತಿ ಎಲ್ಲಿ ಹತ್ತಿದ್ದಾನೆ ಎಂದು…
ಹಾವೇರಿ : ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ತಗುಲಿ ಪಟಾಕಿ ಸಿಡಿದ ಪರಿಣಾಮ, ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರಿನ ಮಾಲತೇಶ್ ನಗರದ ಮನೆಯಲ್ಲಿ ಒಂದು ಘಟನೆ ನಡೆದಿದೆ. ಪಟಾಕಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬೆಂಕಿಯಲ್ಲಿ ಷಣ್ಮುಖಪ್ಪ ದೇವಗಿರಿ (55)ಎನ್ನುವ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ ಎಂದು ಬಂದಿದೆ. ಗಣೇಶ ಹಬ್ಬ ಹಾಗೂ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡಿ ಉಳಿದಿದ್ದ ಪಟಾಕಿಯನ್ನು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದರು ಎನ್ನಲಾಗಿದೆ. ಪಟಾಕಿಗೆ ಲೈಸೆನ್ಸ್ ಪಡೆಯದೆ ಅಕ್ರಮವಾಗಿ ಸಂಗ್ರಹಿಸಿದ್ದರು ಎನ್ನಲಾಗಿದೆ. ಪಟಾಕಿ ಸಂಗ್ರಹಿಸಿ ಇಟ್ಟಿದ್ದ ಜಾಗದಲ್ಲಿ ಷಣ್ಮುಖಪ್ಪ ದೇವಗಿರಿ ಮಲಗಿದ್ದರು. ಈ ವೇಳೆ ಬೆಂಕಿ ತಗೊಳ್ಳಿ ಪಟಾಕಿ ಸಿಟಿದು ಷಣ್ಮುಖಪ್ಪ ಸ್ಥಳದಲ್ಲಿ ಸಾವನಪ್ಪಿದ್ದಾರೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














