Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿ ಬರುವ ನವೆಂಬರ್ ಡಿಸೆಂಬರ್ ನಲ್ಲಿ ಸಿಎಂ ಹಾಗೂ ಕೆಪಿಸಿಸಿ ಸ್ಥಾನ ಬದಲಾವಣೆ ಆಗಲಿದೆ ಎಂದು ಕೆಲ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ ಎಂದು ಮತ್ತಿಕೆರೆ ಗ್ರಾಮದಲ್ಲಿ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿಕೆ ನೀಡಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮ ವಹಿಸಿದ್ದಾರೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು ಎಂದು ಹೈಕಮಾಂಡ್ ಅವರಿಗೆ ಮನವಿ ಮಾಡುತ್ತೇನೆ ಡಿಕೆ ಶಿವಕುಮಾರ್ ಅವರಿಗೂ ಒಂದು ಬಾರಿ ಅಧಿಕಾರ ನೀಡಬೇಕೆಂಬುದು ನನ್ನ ಅಭಿಪ್ರಾಯವಾಗಿದೆ. ಇನ್ನು ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತದೆ ಎಂದು ಕೆಲ ನಾಯಕರು ಹೇಳಿಕೆ ನೀಡಿರುವ ವಿಚಾರವಾಗಿ, ಈಗ ಮಾತನಾಡುತ್ತಿರುವ ಕೆಲ ಮಂತ್ರಿಗಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇದು ಚುನಾವಣೆಯಲ್ಲಿ ಸ್ಪರ್ಧಿಸುವವರ ಮೇಲೆ ಪರಿಣಾಮ…

Read More

ಹುಬ್ಬಳ್ಳಿ/ಧಾರವಾಡ : ಹುಬ್ಬಳ್ಳಿ, ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ನೂತನ ಮೇಯರ್ ಆಗಿ ಬಿಜೆಪಿಯ ಜ್ಯೋತಿ ಪಾಟೀಲ್ ಆಯ್ಕೆ ಆಗಿದ್ದಾರೆ. 47 ಮತಗಳನ್ನು ಪಡೆದು ಜ್ಯೋತಿ ಪಾಟೀಲ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ಸಿನ ಸುವರ್ಣ ಕಲಕುಂಟ್ಲಾ ವಿರುದ್ಧ ಜ್ಯೋತಿ ಪಾಟೀಲ್ಭರ್ಜರಿ ಜಯಗಳಿಸಿದ್ದಾರೆ. ಇನ್ನು ಉಪಮೇಯರಾಗಿ ಬಿಜೆಪಿಯ ಸಂತೋಷ ಚೌವ್ಹಾಣ್ ಆಯ್ಕೆಯಾಗಿದ್ದಾರೆ. ಸಂತೋಷ್ ಚೌವ್ಹಾಣ 47 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಶಂಭು ಸಾಲಮನಿ ವಿರುದ್ಧ ಸಂತೋಷ ಭರ್ಜರಿ ಜಯಗಳಿಸಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಕ್ತರ ಸಮ್ಮುಖದಲ್ಲಿ ಈ ಒಂದು ಚುನಾವಣೆ ನಡೆಯಿತು. ಕೈ ಎತ್ತುವ ಮೂಲಕ ಮೇಯರ್ ಮತ್ತು ಉಪಮೇಯರ್ ಆಯ್ಕೆ ನಡೆಯಿತು. ಕೇಂದ್ರ ಸಚಿವ ಪ್ರಹಲ್ಲಾ ಜೋಷಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ತೆಂಗಿನಕಾಯಿ ಹಾಗು ಪ್ರಸಾದ್ ಅಬ್ಬಯ್ಯ ಭಾಗಿಯಾಗಿದ್ದರು.

Read More

ಮಂಡ್ಯ : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಇಂದು ಸಿಎಂ ಸಿದ್ದರಾಮಯ್ಯ ಜೂನ್ ತಿಂಗಳಲ್ಲಿ ಕೆ ಆರ್ ಎಸ್ ಜಲಾಶಯ ಬರ್ತೀಯಾಗಿದ್ದಕ್ಕೆ ಬಾಗಿನ ಅರ್ಪಿಸುವ ಮೂಲಕ ಹೊಸ ದಾಖಲೆ ಬರೆದರು. ಹೌದು ಜೂನ್ 28ರ ಶನಿವಾರವೇ ಡ್ಯಾಂ ಭರ್ತಿಯಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು, ಇದೀಗ ಅಭಿಜಿನ್ ಮೂಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ಜರುಗಿತು. ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್‌ಎಸ್ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು KRS ಡ್ಯಾಂ ಗೆ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾದರು. ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ ಕೆಆರ್‌ಎಸ್ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಣೆಕಟ್ಟಿನ ಗೋಡೆಗಳಿಗೆ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳನ್ನು ವಿಷ ಹಾಕಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 3 ಆರೋಪಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹನೂರಿನ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಹೆಚ್ಚಿನ ವಿಚಾರಣೆಗೆ ಮೂರು ದಿನ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಮಲೆ ಮಹದೇಶ್ವರ ಬೆಟ್ಟ ವನ್ಯದಮದಲ್ಲಿ ಇತ್ತೀಚಿಗೆ ವಿಷ ಹಾಕಿ ಐದು ಹುಲಿಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಅರಣ್ಯ ಅಧಿಕಾರಿಗಳು ಆರೋಪಿಗಳಾದಂತಹ ಕೋನಪ್ಪ ಮಾದುರಾಜು ಹಾಗು ನಾಗರಾಜುನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು . ಈ ವೇಳೆ ಆರೋಗ್ಯಗಳು ಹೆಚ್ಚಿನ ವಿಚಾರಣೆಗಾಗಿ ಅರಣ್ಯ ಅಧಿಕಾರಿಗಳು ಮೂರು ದಿನ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

Read More

ಚಿತ್ರದುರ್ಗ : ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ್ ಹೇಳಿಕೆ ನೀಡಿದರು. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ ಎಂದರು. ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಡೋಂಟ್ ಕೇರ್ ಎನ್ನುತ್ತೇವೆ. ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರಿ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸುಬ್ರಮಣಿ (38)ಎಂದು ತಿಳಿದುಬಂದಿದೆ. ಇವರು ಜನ ಫೈನಾನ್ಸ್ ಬ್ಯಾಂಕ್ ನಲ್ಲಿ 5 ಲಕ್ಷ ಲೋನ್ ಪಡೆದಿದ್ದರು. ಕಳೆದ ಕೆಲವು ಕಂತುಗಳು ಡ್ಯೂ ಇದ್ದಿದ್ದರಿಂದ ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಜನ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕಿರುಕುಳ ಆರೋಪ ಮಾಡಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಸೆಲ್ಫಿ ವಿಡಿಯೋದಲ್ಲಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಅಧಿಕಾರಿಗಳೇ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಸುಬ್ರಮಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.…

Read More

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಅತ್ತ ವಿಪಕ್ಷದ ನಾಯಕ ಆರ್ ಅಶೋಕ ಕೂಡ ಸಿಎಂ ಬದಲಾಗಿದ್ದು, ಈ ಬಾರಿಯ ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ನೀಡಿದರು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಯಾವಾಗಲೂ ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಈ ಬಾರಿ ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ನಿಮಗೆ ಅನಿಸಿದೆ ಅಲ್ವಾ? ಅದೇ ಸತ್ಯ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಸಲ ಸೋತಿದ್ದಾರೆ ಹೇಳಿ? ಆಗ ಶ್ರೀರಾಮುಲುಗೆ ತಮ್ಮ ಭವಿಷ್ಯ ಗೊತ್ತಿರಲಿಲ್ಲವಾ? ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಭದ್ರಾವಗಿರುತ್ತೆ ಇನ್ನು ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ನಮ್ಮ ಸರ್ಕಾರ ಬಂಡೆ ರೀತಿ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಕಸದ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಸ ಹಾಕುವ ವಿಚಾರಕ್ಕೆ ವೃದ್ಧೆಯ ಜೊತೆಗೆ ಕೆಲವರು ಗಲಾಟೆ ಮಾಡಿದ್ದಾರೆ. ಈ ವೇಳೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಪಕ್ಕದ ಮನೆಯವರು ಥಳಿಸಿದ್ದಾರೆ. ಸಾಗರದ ಅನಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಳಿಕ ವೃದ್ಧೆ ಮೇಲೆ ಹಲ್ಲೆ ಮಾಡಿದ ಪ್ರೇಮಾ, ದರ್ಶನ್ ಮತ್ತು ಮಂಜುನಾಥ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Read More

ಬೆಂಗಳೂರು : ಹಾಸನದಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೆ ಒಟ್ಟು 22 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ ಯಾವ ಕಾರಣಕ್ಕಾಗಿ 22 ಜನ ಸಾವನ್ನಪ್ಪಿದ್ದಾರೆ? ಇದಕ್ಕೆ ಏನು ಕಾರಣ ಜೀವನ ಶೈಲಿಯ ಅಥವಾ ಆಹಾರವಾ ಏನು ಕಾರಣ ಎಂಬುವುದರ ಕುರಿತು ತಿಳಿಯಲು ಆರೋಗ್ಯ ಇಲಾಖೆಯು ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಜಯದೇವ ಸಂಸ್ಥೆಯ ಒಟ್ಟು 10 ಜನರ ಟೆಕ್ನಿಕಲ್ ಕಮಿಟಿ ರಚನೆ ಮಾಡಿ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೌದು ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಟೆಕ್ನಿಕಲ್ ಕಮಿಟಿ ರಚನೆ ಮಾಡಲಾಗಿದೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹರ್ಷ ಗುಪ್ತ ನೇತ್ರತ್ವದಲ್ಲಿ ಕಮಿಟಿ ರಚನೆಯಾಗಿದ್ದು ಹತ್ತು ಜನರ ತಜ್ಞರ ತಂಡ ರಚನೆ ಮಾಡುವಂತೆ ಸಂಜೆ ಒಳಗೆ ಕಮಿಟಿ ರಚಿಸಿ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು ಹಾಗೂ ಜಯದೇವ ಸಂಸ್ಥೆಯ ತಜ್ಞರು ಸೇರಿ 10 ಜನರ ತಂಡ ರಚನೆ ಮಾಡಿ ಎಂದು ಆರೋಗ್ಯ ಇಲಾಖೆ ಸೂಚನೆ…

Read More

ಹಾಸನ : ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು ಇಂದು ಬೆಳಿಗ್ಗೆ ಅಷ್ಟೇ ಹೃದಯಘಾತಕ್ಕೆ ಹಾಸನ ಜಿಲ್ಲೆಯ ಪ್ರತ್ಯೇಕ ತಾಲೂಕುಗಳಲ್ಲಿನ ಒಟ್ಟು ಮೂರು ಜನರು ಬಲಿಯಾಗಿದ್ದರು. ಇದೀಗ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಎನ್ನುವವರು ಸಾವನಪ್ಪಿದ್ದಾರೆ. ಚೆನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿರುವ ಅವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಆಗಲಿ ಅವರು ಸಾವನ್ನಪ್ಪಿದ್ದಾರೆ.ಈ ಮೂಲಕ ಹಾಸನದಲ್ಲಿ ಇದುವರೆಗೂ ಕಳೆದ 40 ದಿನಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ.

Read More