Author: kannadanewsnow05

ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೆರೆಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯ ಚಿಕ್ಕಂಶಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದ ಕೆರೆಗೆ ಈಜೋದಕ್ಕೆ ಮಾಲತೇಶ್ ಕುರುಬರ(19) ಹಾಗೂ ಬಸವರಾಜ್(38) ತೆರಳಿದ್ದರು.ಇಬ್ಬರು ಕೆರೆಯ ಕೆಸಲಿನಲ್ಲಿ ಸಿಲುಕಿಕೊಂಡು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಮಾಲತೇಶ್ ಕುರುಬರ ಶವವನ್ನು ಹೊರ ತೆಗೆದಿದ್ದಾರೆ. ಬಸವರಾಜ್ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ರಾಜ್ಯದಲ್ಲಿ ಇಂದು ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು 8 ಜನರು ಬಲಿಯಾಗಿರುವ ಘಟನೆ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ. ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ.…

Read More

ನವದೆಹಲಿ : ಆಪರೇಷನ್ ಸಿಂದೂರ್ ಮೂಲಕ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ವಿಚಾರವಾಗಿ ಇಂದು ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಇನ್ಮುಂದೆ ಪಾಕಿಸ್ತಾನದ ಗುಂಡುಗಳಿಗೆ ನಾವು ಸಹ ಗುಂಡುಗಳಿಂದಲೇ ಉತ್ತರಿಸುತ್ತೇವೆ ಎಂದು ರಣಧೀರ ಜೈಸ್ವಾಲ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದರು. ಆಪರೇಷನ್ ಸಿಂಧೂರದಿಂದ ಪಾಕಿಸ್ತಾನಕ್ಕೆ ಸಾಕಷ್ಟು ಹಾನಿಯಾಗಿದೆ. ಪಾಕಿಸ್ತಾನದ ಗುಂಡುಗಳಿಗೆ ನಾವು ಗುಂಡುಗಳಿಂದಲೇ ಉತ್ತರಿಸುತ್ತೇವೆ ಪಾಕಿಸ್ತಾನ ದಾಳಿ ನಿಲ್ಲಿಸಿದರೆ ಭಾರತ ಕೂಡ ದಾಳಿ ನಿಲ್ಲಿಸಲಿದೆ. ಪಾಕಿಸ್ತಾನ ಇದನ್ನು ಬೇಗ ಅರ್ಥ ಮಾಡಿಕೊಂಡಷ್ಟು ಅದಕ್ಕೆ ಒಳ್ಳೆಯದು. ಸೋಲಿನ ಬಳಿಕ ಗೆಲುವಿನ ಡ್ರಮ್ ಬಾರಿಸುವುದು ಹಳೆ ಮನೋಭಾವ ಎಂದರು. ಸೋಲಿನ ಬಳಿಕವೂ ಪಾಕಿಸ್ತಾನ ಸಂಭ್ರಮಾಚರಣೆ ಮಾಡುತ್ತಿದೆ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಭಯೋತ್ಪಾದನೆಯನ್ನು ಭಾರತ ಸಹಿಸಿಕೊಳ್ಳುವುದಿಲ್ಲ. ಪಾಕಿಸ್ತಾನದ ಉಗ್ರರು ಬಹಳ ಬಿಟ್ಟರೆ ಭಾರತ ತಕ್ಕ ಪಾಠ ಕಲಿಸಲಿದೆ ಎಂದು ದೆಹಲಿಯಲ್ಲಿ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ ಜೈಸ್ವಾಲ್ ಹೇಳಿಕೆ ನೀಡಿದರು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ…

Read More

ಬಾಗಲಕೋಟೆ : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದು, ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ಮೂಲಕ ದಾಳಿ ಮಾಡಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇದೇ ವಿಚಾರವಾಗಿ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? ಎಂದು ಪ್ರಶ್ನಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮೋದಿಯವರು ಬರೀ ಭಾಷಣ ಮಾಡಿದರೆ ನಡೆಯಲ್ಲ, ಕದನ ವಿರಾಮದ ಬಗ್ಗೆ ಉತ್ತರ ನೀಡಬೇಕು.ಪಾಕಿಸ್ತಾನಕ್ಕೆ ಯಾವ ಪಾಠ ಕಲಿಸಲು ಹೊರಟಿದ್ದೇವೆ. ಅದನ್ನು ಕಲಿಸಿದ್ವಾ? ನಾಲ್ಕೈದು ದಿನ ಯುದ್ಧ ಮಾಡಿ ಬಿಟ್ಟರೆ, ಇದು ಸರಿಯಾ? ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? ಅಮೆರಿಕ ಹೇಳಿದೆ ಎಂದು ಕದನ ವಿರಾಮ ಘೋಷಣೆ ಮಾಡಿದ್ರಾ? ಅಮೆರಿಕ ನಮ್ಮ ಆಂತರಿಕ ವಿಷಯಗಳ ಬಗ್ಗೆ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ಬಗ್ಗೆ ಏನು ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಆಪರೇಷನ್ ಸಿಂಧೂರ’…

Read More

ಹಾವೇರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾ ರವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವನಪ್ಪಿರುವ ಘಟನೆ ನಡೆದಿತ್ತು. ಇದೀಗ ಹಾವೇರಿ ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Read More

ಧಾರವಾಡ : ಬೇಸಿಗೆ ಶುರುವಾದರೆ ಸಾಕು ಮಾವಿನ ಹಣ್ಣಿನದೇ ದರ್ಬಾರ್, ಇತ್ತೀಚಿನ ದಿನಗಳಲ್ಲಿ ಅಂತೂ ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ಮಹಾನಗರಗಳಲ್ಲಿ ಮಾವಿನ ಹಣ್ಣಿನಿಂದ ತರ ತರದಲ್ಲಿ ಖಾದ್ಯಗಳನ್ನು ತಯಾರಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ 1 ಬಾಕ್ಸ್ ಮಾವಿನ ಹಣ್ಣಿಗೆ 300, 350 ಅಥವಾ 400 ರೂ. ಇರುತ್ತದೆ. ಆದರೆ ಇಲ್ಲೊಂದು ಮಾವಿನ ಹಣ್ಣಿನ ಕೆಜಿಗೆ ಬರೋಬ್ಬರಿ 2.7 ಲಕ್ಷ ರೂ. ಆಗಿದ್ದು, 1 ಮಾವಿನ ಹಣ್ಣಿಗೆ 10 ಸಾವಿರ ರೂ. ಬೆಲೆಯಿದೆ. ಹೌದು ಈ ಮಾವಿನ ಹಣ್ಣಿನ ಹೆಸರು ಮಿಯಾ ಜಾಕಿ, ಇದು ಜಪಾನ್ ದೇಶದ ಮಾವಿನ ಹಣ್ಣಿನತಳಿಯಾಗಿದೆ. ಈ ಹಣ್ಣನ್ನು ಧಾರವಾಡದ ರೈತ ಪ್ರಮೋದ ಗಾಂವಕರ ಕಲಕೇರಿಯ ತಮ್ಮ ತೋಟದಲ್ಲಿ ಬೆಳೆದಿದ್ದಾರೆ. ಪ್ರತಿವರ್ಷ ಏಳೆಂಟು ಹಣ್ಣು ಬಿಡುತ್ತಿದ್ದ ಮಿಯಾ ಜಾಕಿ ಮರಗಳು, ಈ ವರ್ಷ 25-26 ಹಣ್ಣುಗಳನ್ನು ಬಿಟ್ಟಿವೆ. ಧಾರವಾಡದಲ್ಲಿ ನಡೆದ ಮಾವಿನ ಮೇಳದಲ್ಲೂ ಈ ಮಿಯಾ ಜಾಕಿ ಮಾವಿನ ಹಣ್ಣು ಎಲ್ಲರ ಗಮನ ಸೆಳೆಯಿತು. ಮಾವಿನ ಮೇಳದಲ್ಲಿ ಮಿಯಾ ಜಾಕಿ…

Read More

ಉತ್ತರಕನ್ನಡ : ಆಸ್ತಿ ಗಾಗಿ ನಾಲ್ವರನ್ನು ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ಪ ಮಗನಿಗೆ ಇದೀಗ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಅಪ್ಪನಿಗೆ ಜೀವಾವಧಿ ಮತ್ತು ಮಗನಿಗೆ ಗಲ್ಲು ಶಿಕ್ಷೆ ವಿಧಿಸಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಕರಣ ಹಿನ್ನೆಲೆ? 2013 ಫೆಬ್ರವರಿ 24ರಂದು ಹಾಡುಹಳ್ಳಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ಸೊಸೆಯಾದ ವಿದ್ಯಾ ಭಟ್ ತಂದೆ ಶ್ರೀಧರ್, ಹಾಗೂ ವಿದ್ಯಾ ಭಟ್ ತಮ್ಮನಾದ ಜನಾರ್ಧನ ಭಟ್ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ್ದರು. ವಿದ್ಯಾ ಭಟ್ ಳ ಅತ್ತೆ, ಮಾವ, ಮೈದುನ ಹಾಗೂ ಮೈದುನನ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದರು. ಅನಾರೋಗ್ಯದಿಂದ ಪತಿ ಮೃತಪಟ್ಟ ಬಳಿಕ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕೊಟ್ಟಿದ್ದಕ್ಕೆ ಸೊಸೆ ವಿದ್ಯಾ ಭಟ್ ತಕರಾರು ತೆಗೆದಿದ್ದಾರೆ. ವಿದ್ಯಾ ಭಟ್ ಕಲಹದ ಹಿಂದೆ ತಂದೆ ಮತ್ತು ಆಕೆಯ ತಮ್ಮನ ಬೆಂಬಲವಿತ್ತು. ಶಂಭೋ ಭಟ್, ಮಹಾದೇವಿ…

Read More

ಬಳ್ಳಾರಿ : ಬಳ್ಳಾರಿಯಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ವಾಹನಗಳ ತಪಾಸಣೆ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲಾ ಸಶಸ್ತ್ರ ಮೀಸಲು ಪಡೆ (DRA) ಪೇದೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮದ ಟೋಲ್‌ಗೇಟ್ ಬಳಿ ಇಂದು ಸಂಭವಿಸಿದೆ. ಮೃತ ಕಾನ್ಸ್ಟೇಬಲ್ ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ ರಾಮಪ್ಪ ಪೂಜಾರಿ (33) ಎಂದು ತಿಳಿದುಬಂದಿದೆ.ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಪ್ಪ ಪೂಜಾರಿ ಅವರನ್ನು ಹೆಬ್ಬಾಳು ಟೋಲ್‌ಗೇಟ್ ಬಳಿ ಲೈನ್‌ಡಿಸಿಪ್ಲಿನ್ ಡ್ಯೂಟಿಗೆ ನಿಯೋಜಿಸಲಾಗಿತ್ತು. ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಬರುತ್ತಿದ್ದ ಲಾರಿ ಎದುರಿಗೆ ನಿಲ್ಲಿಸಲು ಸೂಚನೆ ನೀಡಿದರು.ಆದರೆ, ಚಾಲಕ ಲಾರಿ ನಿಲ್ಲಿಸದೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಪೂಜಾರಿ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾದ ಲಾರಿ ಚಾಲಕನಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಲಾರಿಯ ಸಂಖ್ಯೆ ಮತ್ತು ಚಾಲಕನ ಗುರುತನ್ನು…

Read More

ಉತ್ತರಪ್ರದೇಶ : ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸ್ವಲ್ಪ ಮೊದಲು ಚೆನ್ನಾಗಿ ಓಡಾಡಿಕೊಂಡಿದ್ದವರು ಹಠಾತ್ತನೆ ಹೃದಯಾಘಾತಕ್ಕೆ ಬಲಿಯಾಗುತ್ತಾರೆ. ಅಂತಹದ್ದೇ ಘಟನೆ ಇದೀಗ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್ ನ ಕತ್ ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಚ್ ಪೇಡಾ ಪ್ರದೇಶವೊಂದರಲ್ಲಿ ವ್ಯಕ್ತಿಯೊಬ್ಬ ಬೈಕ್‌ ಓಡಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಸಿಟಿವಿ ದೃಶ್ಯದಲ್ಲಿ 22 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಪ್ರಯಾಣಿಸುತ್ತಿರಬೇಕಾದರೆ ಹಠಾತ್ತನೆ ಹೃದಯಾಘಾತವಾಗಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾನೆ. ಕೂಡಲೇ ಅಲ್ಲಿನ ಸ್ಥಳೀಯರು ಆತನ ಸಹಾಯಕ್ಕೆ ಮುಂದಾಗಿ ಸಿಪಿಆರ್‌ ನೀಡಿದ್ಧಾರೆ. ಜೊತೆಗೆ ಆಸ್ಪತ್ರೆಗೂ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಪರಿಶೀಲಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. https://twitter.com/priyarajputlive/status/1914916166213963787?t=-yjszDayrk71uV4pCCY-vg&s=19

Read More