Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಪತಿ ಪತ್ನಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಇಬ್ಬರ ಮಧ್ಯ ಗಲಾಟೆ ತರಕಕ್ಕೆರಿ ಸಿಟ್ಟಿಗೆದ್ದ ಪತಿ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಳದ ಬಯಲು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾದೇವಿ (28) ಎಂದು ತಿಳಿದುಬಂದಿದೆ. ಕೊಲೆ ಪಾತಕಿಯನ್ನು ಪತಿ ಭದ್ರ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ದಂಪತಿಗಳಿಬ್ಬರ ನಡುವೆ ಕೌಟುಂಬಿಕ ಕಲಹ ತಾರಕಕೇರಿದ್ದು, ಪತಿ ಚಾಕುವಿನಿಂದ ಇರಿದ ಪರಿಣಾಮ ಪತ್ನಿ ಮಾದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ, ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಂದು ಜಾರಿ ನಿರ್ದೇಶನಲಯ (ED) ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದರು. ಆದರೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಗಂಭೀರವಾದ ಆರೋಪ ಮಾಡಿದ್ದು,ನಟಿ ರನ್ಯಾರಾವ್ ಗೋಲ್ಡ್ ಸ್ಮಲಿಂಗ್ ಪ್ರಕರಣಕ್ಕೂ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿಗೂ ನಂಟಿದೆ ಎಂದು ಆರೋಪಿಸಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಹಿಂದೆ ರನ್ಯಾ ರಾವ್ ಕೇಸ್ ಲಿಂಕ್ ಇದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂಬ ಗಂಭೀರ ಆರೋಪ ಮಾಡಿದರು. ಮೊದಲು ಇಡಿ ದಾಳಿ ಮುಗಿದು ತನಿಖೆ ನಡೆಯಲಿದೆ. ತನಿಖೆ…
ಮೈಸೂರು : ಮೈಸೂರಿನಲ್ಲಿ ಯುವತಿಯ ಮೃತದೇಹ ಮತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಇದೀಗ ಯುವತಿಯ ಸಂಬಂಧಿ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯ ಸೋದರ ಮಾವನ ಮಗ ವೆಂಕಟೇಶ್ ಈ ಕುರಿತು ಗಂಭೀರವಾದ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಶವ ನೋಡಿದಾಗ ಕೊಲೆ ಆಗಿರಬಹುದು ಎಂದು ತಿಳಿದಿದ್ದೆವು. ಆದರೆ ಮೃತದೇಹದ ಮೇಲೆ ಪ್ಯಾಂಟ್ ಉಲ್ಟಾ ಹಾಕಲಾಗಿತ್ತು. ಅಂದರೆ ಅತ್ಯಾಚಾರದ ನಂತರ ಕೊಲೆ ಮಾಡಿ ಬಟ್ಟೆ ತೊಡಿಸಿರಬಹುದು. ಕಳೆದ ಮೂರು ವರ್ಷಗಳಿಂದ ಡೇಕೇರ್ ಸೆಂಟರ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ನಿನ್ನೆ ಕೆ.ಆರ್ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಯುವತಿ ಡೇಕೇರ್ ನಿಂದ ತೆರಳಿದ್ದಳು. ಆಸ್ಪತ್ರೆಗೆ ಹೊರಡುವ ಮುನ್ನ ತಂದೆಗೆ ಯುವತಿ ಕರೆ ಮಾಡಿದ್ದಾಳೆ. ಮಳೆ ಬರುತ್ತಿದೆ ಆಟೋದಲ್ಲಿ ಹೋಗುವಂತೆ ತಂದೆ ತಿಳಿಸಿದ್ದರು. ಆದರೆ ಬೆಳಿಗ್ಗೆ ಕುತ್ತಿಗೆಗೆ ವೇಲ್ನಿಂದ ಬಿಗಿದು ಹತ್ಯೆ ಮಾಡಿದ್ದಾರೆ. ಇದನ್ನೆಲ್ಲಾ ನೋಡಿದರೆ ಯಾರೋ ಅತ್ಯಾಚಾರ ಎಸಗಿ ಯುವತಿಯನ್ನು ಕೊಲೆ ಮಾಡಿದ್ದಾರೆ. ಬಡವರ ಹೆಣ್ಣುಮಕ್ಕಳಿಗೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕೊಲೆ, ದರೋಡೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಹಳಿ ಬಳಿ ಸೂಟ್ಕೇಸ್ ಅಲ್ಲಿ ಬಾಲಕಿಯ ರುಂಡ ಮತ್ತು ಮುಂಡ ಬೇರ್ಪಡಿಸಿರುವ ಮೃತದೇಹ ಪತ್ತೆಯಾಗಿದೆ. ಹೌದು ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ, ಮುಚ್ಚಿದ ನೀಲಿ ಸೂಟ್ ಕೇಸ್ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೇ ಹಳಿ ಬಳಿ ನಡೆದಿದೆ. ಬಾಲಕಿಗೆ ಸುಮಾರು ಒಂಬತ್ತು ವರ್ಷ ವಯಸ್ಸಾಗಿದೆ ಎಂದು ತಿಳಿದು ಬಂದಿದೆ. ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ ತಿಳಿದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬಯ್ಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ತಿರುವನಂತಪುರ : ಪ್ರಪಂಚದಲ್ಲಿ ಮಕ್ಕಳು ಕೆಟ್ಟವರಾಗಿರುತ್ತಾರೆ ಹೊರತು ಯಾವುದೇ ತಂದೆ-ತಾಯಿ ಕೆಟ್ಟವರಾಗಿರುವುದಿಲ್ಲ. ಇದಿಗ ತಿರುವನಂತಪುರದಲ್ಲಿ ಘೋರವಾದ ಘಟನೆ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಮಗ, ತನ್ನ ತಾಯಿಯನ್ನು ತುಳಿದು ಕೊಂದಿದ್ದಾನೆ. ಈ ಘಟನೆ ತಿರುವನಂತಪುರದ ತೆಕ್ಕಡದಲ್ಲಿ ನಡೆದಿದೆ. ಮೃತರನ್ನು ತೆಕ್ಕಡ ಮೂಲದ 85 ವರ್ಷದ ಓಮನಾ ಎಂದು ಗುರುತಿಸಲಾಗಿದೆ. ಈಕೆ ಮಗ ಮಣಿಕಂದನ್ ನೆ ತಾಯಿಯನ್ನು ಕುಡಿದ ಅಮಲಿನಲ್ಲಿ ತುಳಿದು ಕೊಂದಿದ್ದಾನೆ. ನಿನ್ನೆ ರಾತ್ರಿ ರಂದು 10.30 ರ ಸುಮಾರಿಗೆ ಮಣಿಕಂದನ್ ಮದ್ಯದ ಅಮಲಿನಲ್ಲಿದ್ದನು. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತನ್ನ ತಾಯಿಯನ್ನು ಒದ್ದಿದ್ದಾನೆ. ಮಗನಿಂದ ಥಳಿತಕ್ಕೊಳಗಾದ ಓಮನಾಳನ್ನು ಸ್ಥಳೀಯರು ತಕ್ಷಣ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದರು. ಮಣಿಕಂದನ್ ಹೊಡೆದ ಪರಿಣಾಮ ಓಮನ ಮೂಳೆಗಳು ಮುರಿದಿವೆ ಎಂದು ವೈದ್ಯರು ತಿಳಿಸಿದ್ದಾರೆ.ಸದ್ಯ ವಟ್ಟಪ್ಪರ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್…
ಬೆಂಗಳೂರು : ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾಗುತ್ತದೆ. ಆದರೆ ಇದೀಗ ಮೇ 24ರವರೆಗೆ ಕೇರಳ ಕರ್ನಾಟಕ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡದೆ. ಹೌದು ಮುಂಚಿತವಾಗಿ ಮೇ 24ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗಲಿದೆ.
ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಸಿಂಗಾಪುರ ಮತ್ತು ಹಾಂಗ್ಕಾಂಗ್ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ…
ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು ಈ ನೆಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋಷಣೆ ಮಾಡಿದೆ ಹಾಗಾಗಿ ನಾಳೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿನ್ನೆ ಬೆಂಗಳೂರಿನಲ್ಲಿ ಮಹಾಮಳೆಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಬಿಟಿಎಂ ಲೇಔಟ್ ನಲ್ಲಿ ಅಪಾರ್ಟ್ಮೆಂಟ್ ಬೇಸ್ಮೆಂಟ್ ನಲ್ಲಿದ್ದ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನಪ್ಪಿದ್ದಾರೆ. ಹಾಗಾಗಿ ಇಂದು ಬಿಟಿಎಂ ಲೇಔಟ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಮಧುವನ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ನೀರು ಹೊರ ಹಾಕಲು ಯತ್ನಿಸುವಾಗ ವಿದ್ಯುತ್ ಶಾಕ್ ನಿಂದ ನಿನ್ನೆ ಇಬ್ಬರು ಸಾವನಪ್ಪಿದ್ದರು. ಮನಮೋಹನ್ ಕಾಮತ್ ಹಾಗೂ 9 ವರ್ಷದ ಬಾಲಕ ದಿನೇಶ್ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದರು. ಮೃತಪಟ್ಟ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸಾಂತ್ವನ ಹೇಳಿದ್ದಾರೆ. ಮನಮೋಹನ್ ಕಾಮತ್ ಕುಟುಂಬಕ್ಕೆ 5 ಲಕ್ಷ ರೂಪಾಯಿ…














