Subscribe to Updates
Get the latest creative news from FooBar about art, design and business.
Author: kannadanewsnow05
ಕೋಲಾರ : ಸೀಜ್ ಮಾಡಿದ ಬೈಕ್ ಬಿಡಲು PSI 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಇದೀಗ ಪಿಎಸ್ಐನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸದ್ದಾರೆ. ಬೂದಿಕೋಟೆ ಪಿಎಸ್ಐ ಸುನಿಲ್ ಕುಮಾರನ್ನು ಈಗ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆಯಲ್ಲಿ ಮಧ್ಯವರ್ತಿಗಳಿಂದ 10,000 ಲಂಚ ಪಡೆದ ಆರೋಪ ಪಿಎಸ್ಐ ಸುನಿಲ್ ಕುಮಾರ್ ಮೇಲೆ ಬಂದಿದೆ. ಬೂದಿಕೋಟೆ ಪೊಲೀಸ್ ಠಾಣೆ ಬಾಗಿಲು ಹಾಕಿ ಇದೀಗ ಲೋಕಾಯುಕ್ತ ಪೊಲೀಸರು ಪಿಎಸ್ಐ ಸುನಿಲ್ ಕುಮಾರ್ ವಿಚಾರಣೆ ನಡೆಯುತ್ತಿದೆ.
ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಿ ಫಿಲಂ ಚೇಂಬರ್ ನಿರ್ಧಾರ ಕೈಗೊಂಡಿತು ಈ ಕುರಿತು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸೋನು ನಿಗಮ್ ಅವರನ್ನು ಕನ್ನಡಿಗರ ಕ್ಷಮೆ ಕೇಳುವವರೆಗೂ ಬ್ಯಾನ್ ಮಾಡಲಾಗಿದೆ ಎಂದು ತಿಳಿಸಿದರು. ತನ್ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಿರುವ ವಿಚಾರ ತಿಳಿದರೂ ಸಹ ಸೋನು ನಿಗಮ್ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಕನ್ನಡದಿಂದ ಸಹಕಾರ ಬೆನ್ನಲ್ಲೇ ಸೋನು ನಿಗಮ್ ನಾನು ಹಿಂದಿ ಸೇರಿದಂತೆ ಇತರ ಭಾಷೆಗಳ ಹಾಡುಗಳಿಗಿಂತಲೂ ಕೂಡ ಕನ್ನಡ ಹಾಡುಗಳನ್ನು ಅತಿ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿನ ವಿಡಿಯೋಗಳು ಸಾಕ್ಷಿ ಎಂದಿದ್ದಾರೆ. ಕರ್ನಾಟಕದಲ್ಲಿನ ಕಾರ್ಯಕ್ರಮಕ್ಕಾಗಿ ತಯಾರಿ ನಡೆಸಿರುತ್ತೇನೆ. ಒಂದು ಗಂಟೆಗೂ ಹೆಚ್ಚು ಕಾಲ ತಯಾರಿಯನ್ನು ನಡೆಸಿರುತ್ತೇನೆ. ಅಂದು ನಾನು ಮೊದಲ ಹಾಡು ಹಾಡಿದ ತಕ್ಷಣ ಪ್ರಚೋದಿಸಿದರು. ನಾನು ಅವರಿಗೆ ತುಂಬಾ ಶಾಂತವಾಗಿ ಪ್ರೀತಿಯಿಂದ ಹೇಳಿದೆ. ಕಾರ್ಯಕ್ರಮ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ತನ್ನ ಕಣ್ಣೆದುರೇ ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದ ಮಾವನನ್ನು ಅಳಿಯೊನೊಬ್ಬ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ತಂದೆ ಕೊಲೆ ಪ್ರತೀಕಾರಕ್ಕೆ ಮಾವನ ಬರ್ಬರ ಹತ್ಯೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಾವ ಸಿರಾಜ್ (32) ಎನ್ನುವ ವ್ಯಕ್ತಿಯನ್ನು ಅಳಿಯ ಫಹಾದ್ ಹತ್ಯೆಗೈದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಕೊಲೆ ನಡೆದಿದೆ. ಆರೋಪಿ ಚಿಕ್ಕವನಿದ್ದಾಗ ಆತನ ತಂದೆಯನ್ನು ಸಿರಾಜ್ ಕೊಲೆ ಮಾಡಿದ್ದ. ಕಣ್ಣೆದುರೇ ಆತನ ತಂದೆಯನ್ನು ಸಿರಾಜ್ ಕೊಚ್ಚಿ ಕೊಲೆ ಮಾಡಿದ್ದ. ಇದೀಗ 16 ವರ್ಷಗಳ ಸೇಡಿಗಾಗಿ ಮಾವ ಸಿರಾಜ್ ನನ್ನು ಫಹಾದ್ ಹತ್ಯೆಗೈದಿದ್ದಾನೆ. ತಂದೆ ಅನ್ಸರ್ ಪಾಷಾ ನನ್ನು ಸಿರಾಜ್ 16 ವರ್ಷಗಳ ಹಿಂದೆ ಕೊಲೆ ಮಾಡಿದ್ದ. ಅನ್ವರ್ ಪಾಷಾ ಹತ್ಯೆ ಪ್ರಕರಣದಲ್ಲಿ ಸಿರಾಜ್ 10 ವರ್ಷ ಜೈಲಿನಲ್ಲಿ ಇದ್ದ ಸದ್ಯ ಕೊಲೆಯಾದ ಸಿರಾಜ್ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದ. ನಿನ್ನೆ ರಾತ್ರಿ ನಡು ರಸ್ತೆಯಲ್ಲಿಯೇ…
ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ತಕ್ಷಣ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಟ ಉಪೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಅವರು ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದು ಓವರ್ ಆಸಿಡಿಟಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಇದೀಗ ಉಪೇಂದ್ರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಉಪೇಂದ್ರ ಅವರು ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಪಂಜಾಬ್ : ಪಹಲ್ಗಾಂ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ತಾನ ಪ್ರಜೆಗಳಿಗೆ ಭಾರತ ಬಿಟ್ಟು ತೊಲಗಿ ಎಂದು ಆದೇಶ ನೀಡಿತ್ತು. ಬಳಿಕ ಪಾಕಿಸ್ತಾನ್ ಪ್ರಜೆಗಳು ಭಾರತ ಬಿಟ್ಟು ತೊಲಗಿದ್ದರು. ಇದೀಗ ಪಂಜಾಬ್ ನಲ್ಲಿ ಬಿಎಸ್ಎಫ್ ಯೋಧರು ಪಾಕಿಸ್ತಾನ ಪ್ರಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಪಂಜಾಬ್ ನ ಗುರುದಾಸ್ಪುರದಲ್ಲಿ ಪಾಕಿಸ್ತಾನ ಪ್ರಜೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಬಳಿಕ ಬಿಎಸ್ಎಫ್ ಯೋಧರು ಪಾಕಿಸ್ತಾನ ಪ್ರಜೆಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವೇಳೆ ಪಾಕಿಸ್ತಾನ ಪ್ರಜೆ ಬಳಿ ಇದ್ದ ಕರೆನ್ಸಿ ಮತ್ತು ಐಡಿ ಕಾರ್ಡ್ ಅನ್ನು ಜಪ್ತಿ ಮಾಡಲಾಗಿದೆ.
ಮಂಡ್ಯ : ಕಾರ್ಯಕ್ರಮ ಒಂದರಲ್ಲಿ ಕನ್ನಡ ಹಾಡು ಹಾಡಿ ಎಂದಿದ್ದಕ್ಕೆ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಹೋಲಿಸಿ ಕನ್ನಡಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಸೋನು ನಿಗಮ್ ವಿರುದ್ಧ ಈ ಹಿಂದೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಇದೀಗ ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯದಲ್ಲಿ ಕೂಡ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದೆ. ಹೌದು ಮಂಡ್ಯದಲ್ಲೂ ಇದೀಗ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ASP ಗೆ ಕನ್ನಡ ಸೇನೆ ಕಾರ್ಯಕರ್ತರು ದೂರು ನೀಡಿದ್ದಾರೆ. ಗಾಯಕ ಸೋನು ನಿಗಮ್ ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ತಕ್ಷಣ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಟ ಉಪೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಅವರು ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದು ಓವರ್ ಆಸಿಡಿಟಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅದು ಬಿಟ್ರೆ ಇನ್ನು ಯಾವುದೇ ಗಂಭೀರವಾದ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ.
ಕೋಲಾರ : ನಿನ್ನೆ ತಾನೇ ಯಾದಗಿರಿಯಲ್ಲಿ ನೀರು ಕುಡಿಯಲು ಹೊಂಡಕ್ಕೆ ತೆರಳಿದ ಮೂವರು ಬಾಲಕರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿದ್ದು, ಇದೀಗ ಕೋಲಾರದಲ್ಲಿ ಕೂಡ 10 ವರ್ಷದ ಬಾಲಕಿಯೋರ್ವಳು ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಮೀನಾಕ್ಷಿ (10) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕಿಯಾಗಿದ್ದು, ತೋಟದಲ್ಲಿ ಆಟವಾಡುತ್ತಿದ್ದ ಮಗು ಪಕ್ಕದ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸುಹಾಸ್ ಶೆಟ್ಟಿ ಓರ್ವ ರೌಡಿ ಶೀಟರ್. ಈ ವ್ಯಕ್ತಿ ಈ ಹಿಂದೆ ಓರ್ವ ಹಿಂದೂ ಹಾಗೂ ಓರ್ವ ಮುಸ್ಲಿಮ್ ಯುವಕನನ್ನು ಕೊಲೆ ಮಾಡಿದ್ದಾನೆ ಎಂದು ಅವರು ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ರೌಡಿ ಶೀಟರ್, ಒಬ್ಬ ಹಿಂದೂ ಹಾಗೂ ಓರ್ವ ಮುಸ್ಲಿಮ್ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ. ಇದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಹಿಂದೂ ಕಾರ್ಯಕರ್ತ ಅಂದ್ರೆ ಏನರ್ಥ? ಹಿಂದೂ ಎನ್ನುವುದು ಸಂಘಟನೆ ಅಲ್ಲ ಹಿಂದೂ ಒಂದು ಧರ್ಮ. ಹಿಂದೂ ಪರ ಸಂಘಟನೆ ಎಂದು ಹೇಳಿ. ನಾನೂ ಹಿಂದೂವೇ, ಸುಹಾಸ್ ನನ್ನ ಕಾರ್ಯಕರ್ತನಾ? ಎಂದು ಪ್ರಶ್ನಿಸಿದರು. ರೌಡಿ ಶೀಟರ್ ಕ್ರಿಮಿನಲ್ ಎಲಿಮೆಂಟ್ಸ್ ಗಳು ಕೆಲ ಹಿಂದೂ ಸಂಘಟನೆಗಳನ್ನು ಸೇರಿಕೊಂಡಿದ್ದಾರೆ. ದಂಧೆ ಮಾಡಲು ಬೆಟ್ಟಿಂಗ್ ಮಾಫಿಯಾ ಸ್ಯಾಂಡ್ ಮಾಫಿಯಾ ಮಟ್ಕಾ ದಂಧೆ ನಡೆಸಲು ಸಂಘಟನೆ ಸೇರಿಕೊಂಡಿದ್ದಾರೆ. ಧರ್ಮದ ಹೆಸರು ದುರುಪಯೋಗ ಮಾಡಿಕೊಂಡು…
ಬೆಂಗಳೂರು : ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದೆ ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬ್ರಾಹ್ಮಣ ಸಭಾ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಈ ಕುರಿತು ಮಾಹಿತಿ ನೀಡಿದರು. ಜನಿವಾರ ತೆಗೆದಿದ್ದರಿಂದ ಧಾರ್ಮಿಕ ಹೀಗೆ ಧಕ್ಕೆಯಾಗಿದೆ. ಅಧಿಕಾರಿಗಳು ಎಲ್ಲ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಜನಿವಾರ ಒತ್ತಗಿಸುತ್ತಿದ್ದಾರೆ. ಇದರಿಂದ ಬ್ರಾಹ್ಮಣ ಧಾರ್ಮಿಕ ಆಚರಣೆಗೆ ತಕ್ಕಂತೆ ಆಗಿದೆ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಅವರು ಹೇಳಿಕೆ ನೀಡಿದರು.












