Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಾಮರಾಜನಗರ : ಇತ್ತೀಚಿಗೆ ಅಷ್ಟೇ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳಿಗೆ ವಿಷ ಉಣಿಸಿ ಕೊಂದಿರುವ ಪ್ರಕರಣ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದ್ದು, ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಸಮೀಪ ಕೋತಿಗಳ ಮಾರಣಹೋಮ ನಡೆಸಿದ ಘಟನೆ ನಡೆದಿದೆ. ಹೌದು ಕಂದೇಗಾಲ – ಕೊಡಸೋಗೆ ರಸ್ತೆಯಲ್ಲಿ ಎರಡು ಚೀಲಗಳಲ್ಲಿ ಕೋತಿಗಳ ಮೃತದೇಹಗಳನ್ನು ಕಟ್ಟಿಟ್ಟು ಬಿಸಾಡಿ ಹೋಗಿದ್ದಾರೆ. ದಾರಿಹೋಕರು ಚೀಲವನ್ನು ಬಿಚ್ಚಿ ನೋಡಿದ ವೇಳೆ 20ಕ್ಕೂ ಅಧಿಕ ಕೋತಿಗಳ ಕಳೇಬರಗಳು ಪತ್ತೆಯಾಗಿವೆ.ಮೇಲ್ನೋಟಕ್ಕೆ ವಿಷಪ್ರಾಶನ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶವು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ. ಮಾಹಿತಿ ತಿಳಿದು ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವರದಿ ಬಂದ ನಂತರವಷ್ಟೇ ಕೋತಿಗಳ ಸಾವಿಗೆ ಏನು ಕಾರಣ ಎನ್ನುವುದು ತಿಳಿದುಬರಲಿದೆ.
ಬೆಂಗಳೂರು : ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದು, ಬೃಹತ್ ಕೈಗಾರಿಕೆ ಸಚಿವ MB ಪಾಟೀಲರಿಗೆ ಮುಖ್ಯಮಂತ್ರಿ ಆಗೋ ಯೋಗ ಇದೆ ಎಂದು ಹೇಳಿಕೆ ಭಾರಿ ಸುದ್ದಿಯಾಗಿದೆ. ಈ ಕುರಿತು ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂದರ್ಭದಲ್ಲಿ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದರು. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಈ ಹೇಳಿಕೆ ವೈರಲ್ ಆಗಿದೆ. ಎಂಬಿ ಪಾಟೀಲ್ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ. ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ. ಈಗಾಗಲೇ ಸಿಎಂ ರೇಸ್ನಲ್ಲಿ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರಿದ್ದು, ಈ ಪೈಕಿ MB ಪಾಟೀಲಲ್ ಗೆ ಮುಖ್ಯಮಂತ್ರಿ ಪಟ್ಟ…
ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಎದೆ ನೋವು ಎಂದು ಆಸ್ಪತ್ರೆ ಬಂದವನಿಗೆ ಹೃದಯಸ್ತಂಭನವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಆಸ್ಪತ್ರೆಯ ಬೆಡ್ ಮೇಲೆ ಹೃದಯಸ್ತಂಭನದಿಂದ ಬ್ರೈನ್ ಡೆಡ್ ಆಗಿ ವ್ಯಕ್ತಿ ಸಾವನಪ್ಪಿದ್ದಾರೆ. ಮೃತರನ್ನು ಹೊಸಕೋಟೆಯ ಕೋನಪ್ಪ (52) ಎಂದು ತಿಳಿದುಬಂದಿದೆ. ಬ್ರೈನ್ ಡೆಡ್ ಆಗಿ ಸಾವನ್ನಪ್ಪಿರುವ ವ್ಯಕ್ತಿಯನ್ನು ತಿಳಿದು ಬಂದಿದೆ ಆಸ್ಪತ್ರೆಗೆ ಕೊನಪ್ಪ ಎದೆ ನೋವು ಎಂದು ಬಂದಿದ್ದರು ಚಿಕಿತ್ಸೆಗಂದು ಅದೇನೋ ಅಂತ ನಡೆದುಕೊಂಡೆ ಕೊನಪ್ಪ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಈ ವೇಳೆ ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ, ಅವರಿಗೆ ಹೃದಯ ಸ್ತಂಭನವಾಗಿದೆ. ತಕ್ಷಣ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ ರವಾನಿಸುವಾಗ ಬ್ರೈನ್ ಆಗಿ ಕೊನಪ್ಪ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದ್ದು ದುಬಾರಿ ದುನಿಯಾದಲ್ಲಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಸದ್ಯದಲ್ಲೇ ಆಟೋ ಮೀಟರ್ ದರ ಏರಿಕೆ ಆಗೋದು ಫಿಕ್ಸ್ ಎಂದು ತಿಳಿದು ಬಂದಿದು, ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಸಿಎಂ ಮತ್ತು ಸಾರಿಗೆ ಸಚಿವರ ಒಪ್ಪಿಗೆಗೆ ಆರ್ಟಿಎ ಕಾಯುತ್ತಿದೆ. ಆದೇಶಕ್ಕಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಾಯುತ್ತಿದೆ ಎಂದು ತಿಳಿದುಬಂದಿದೆ. ಹೌದು ಆಟೋ ಮೀಟರ್ ಮಿನಿಮಮ್ ದರ 36 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ 36. ಮಿನಿಮಮ್ ಚಾರ್ಜ್ ಮೂವತ್ತರಿಂದ ಮೂವತ್ತಾರು ರೂಪಾಯಿ ಏರಿಕೆ ಫಿಕ್ಸ್ ಎಂದು ತಿಳಿದು ಬಂದಿದೆ 18 ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ 15 ರೂಪಾಯಿ ಇದ್ದ ಚಾರ್ಜ್ 18 ರೂಪಾಯಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಸಲು ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಟೋ…
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರಿಗೆ ಹಣದಾಸೆ ತೋರಿಸಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ವಂಚನೆ ಜಾಲಕ್ಕೆ ಪೂರೈಸುತ್ತಿದ್ದ ನಾಲ್ವರು ಕಿಡಿಗೇಡಿಗಳನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧುತ ಆರೋಪಿಗಳಿಂದ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಛತ್ರದ ಹೊಸಹಳ್ಳಿ ಗ್ರಾಮದ ಎನ್.ಲಕ್ಷ್ಮೀಶ್ ಅಲಿಯಾಸ್ ರಾಜೇಶ್, ಕನಕಪುರ ರಸ್ತೆಯ ತಾತಗುಣಿಯ ಅಗರದ ನಿವಾಸಿ ಪ್ರಕಾಶ್, ಜೆ.ಪಿ.ನಗರ 7ನೇ ಹಂತದ ಸಂತೃಪ್ತಿ ನಗರದ ಸುನೀಲ್ ಕುಮಾರ್ ಹಾಗೂ ರಾಮನಗರದ ಅರ್ಚಕರಹಳ್ಳಿಯ ಪುಟ್ಟಸ್ವಾಮಯ್ಯ ಎಂದು ತಿಳಿದುಬಂದಿದೆ.ಆರೋಪಿಗಳಿಂದ 1 ಲ್ಯಾಪ್ಟಾಪ್, 4 ವಿವಿಧ ಕಂಪನಿಯ ಮೊಬೈಲ್ಗಳು ಹಾಗೂ ವಿವಿಧ ಬ್ಯಾಂಕ್ನ ಚೆಕ್ ಪುಸ್ತಕಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೇಗೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ಸ್ನ ಬಳಿ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದೀಗ ಈ ಒಂದು ಅಸ್ತಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಪುರುಷನ ಅಸ್ತಿ ಪಂಜರವಾಗಿದೆ ಎಂದು ತಿಳಿದುಬಂದಿದೆ. ಹೌದು ಜೂನ್ 20 ರಂದು ಕಾರ್ಮಿಕರು ಶೌಚಗುಂಡಿ ಸ್ವಚ್ಛ ಮಾಡುವಾಗ ಮೂಳೆಗಳು ಮತ್ತು ತಲೆಬುರುಡೆ ಸಿಕ್ಕಿವೆ. ಇದು ಮನುಷ್ಯನ ಅಸ್ಥಿಪಂಜರವೋ ಅಥವಾ ಪ್ರಾಣಿಯದೋ ಎಂದು ತಿಳಿಯಲು ಪೊಲೀಸರು ಎಫ್ಎಸ್ಎಲ್ ಲ್ಯಾಬ್ಗೆ ಕಳುಹಿಸಿದ್ದರು. ಇದೀಗ ಇಂಗು ಗುಂಡಿಯಲ್ಲಿ ಪತ್ತೆಯಾಗಿರುವುದು ಪುರುಷನ ಅಸ್ತಿಪಂಜರ ಎಂದು ತಿಳಿದುಬಂದಿದೆ. ಸುಮಾರು 153 ಸೆಂಟಿಮೀಟರ್ ಉದ್ದವುಳ್ಳ 30 ರಿಂದ 35 ವರ್ಷದ ವ್ಯಕ್ತಿ ಅಸ್ತಿ ಪಂಜರ ಪತ್ತೆಯಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಕೊಲೆ ಶಂಕೆ ಇಲ್ಲ ಎಂದು ವರದಿ ಬಂದಿದೆ. ಅಷ್ಟೇ ಅಲ್ಲದೇ ಪಂಜರದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ವ್ಯಕ್ತಿ ಆಯತಪ್ಪಿ ಇಂಗು ಗುಂಡಿಗೆ ಬಿದ್ದು…
ಬೆಂಗಳೂರು : ರಾಜ್ಯದಲ್ಲಿ ಹೃದಯಘಾತದಿಂದ ಸಾವನ್ನುಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಇಂದು ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಹಾಸನದಲ್ಲಿ ಇಬ್ಬರು, ಬಳಿಕ ಶಿವಮೊಗ್ಗ, ದಕ್ಷಿಣ ಕನ್ನಡ, ತುಮಕೂರು, ಹಾಗು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಆರು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮದುವೆಯಾದ ಎರಡೇ ತಿಂಗಳಿಗೆ ಯುವಕ ಸಾವು! ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ. ಸಂಜಯ್ ಕಳೆದ ಎರಡು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಇದೀಗ ಇವರ ಸಾವಿನಿಂದ ಸಂಜೆ ಕುಟುಂಬಸ್ಥರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಒಂದುವರೆ ತಿಂಗಳ ಬಾಣಂತಿ ಬಲಿ! ಇನ್ನು ಇದೆ ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಆಗುತ್ತಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾ. ಈ ಪ್ರಕರಣ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಹಾಸನದಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೂ ಒಟ್ಟು 25 ಜನರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಇದಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ಈಗಾಗಲೇ ತಜ್ಞರ ಸಮಿತಿ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಸಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ನಿನ್ನೆ ರಾಜ್ಯಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿದ್ದು, ರಾಜ್ಯದ ಹಲವು ಕಾಂಗ್ರೆಸ್ ಶಾಸಕರ ಕುಂದುಕೊರತೆಗಳನ್ನು ತಿಳಿದುಕೊಳ್ಳಲು ಆಗಮಿಸಿದ್ದಾರೆ. ಇದರ ಮಧ್ಯ ಬಿಆರ್ ಪಾಟೀಲ್ ಅವರ ಮಾತನಾಡಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಸಿದ್ದರಾಮಯ್ಯ ಅದೃಷ್ಟವಂತ ಅದಕ್ಕೆ ಸಿಎಂ ಆದ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿ ಆರ್ ಪಾಟೀಲ್ ಅವರು ಸಿದ್ದರಾಮಯ್ಯ ಅದೃಷ್ಟವಂತ ಅದಕ್ಕೆ ಸಿಎಂ ಆದ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೌದು ನಾನು ಅದೃಷ್ಟವಂತ ಹಾಗಾಗಿಯೇ ಸಿಎಂ ಆಗಿದ್ದೇನೆ ಎಂದು ಬಿಆರ್ ಪಾಟೀಲ್ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಮತ್ತು ಬಿ ಆರ್ ಪಾಟೀಲ್ ಒಟ್ಟಿಗೆ ಎಂಎಲ್ಎ ಆಗಿದ್ವಿ.ಅದಕ್ಕಾಗಿ ಬಿ.ಆರ್ ಪಾಟೀಲ್ ಹೇಳಿರಬಹುದು ನಾನು ಏನು ಆಗಿಲ್ಲ ಎಂಬ ಬಿ ಆರ್ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಅದಕ್ಕೆ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಈ ಅಭಿಪ್ರಾಯ ಸಂಗ್ರಹಕ್ಕೆ ನಾವು ಮುಂದಾಗಿಲ್ಲ ಶಾಸಕರು ಬಹಿರಂಗವಾಗಿ ಕೆಲವರು ಮಾತನಾಡಿದ್ದಾರೆ ಪಕ್ಷದ ಚೌಕಟ್ಟಿದೆ ಅಲ್ಲೇ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು ಕೆಲಸ ಮಾಡಿದ್ದಾರೆಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಕಮಿಟಿ, ಅಸೆಂಬ್ಲಿ ಕಮಿಟಿಯ ಸಂಘಟನೆ ಹೇಗಿದೆ ಎಂಬುದಾಗಿಯೂ ವಿವರ ಪಡೆಯುತ್ತಿದ್ದೇನೆ. ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಮುಂಚೂಣಿ ಘಟಕಗಳ ಕಾರ್ಯದ ಬಗ್ಗೆಯೂ ಮಾಹಿತಿ ಪಡೆಯುತ್ತಿದ್ದೇನೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಕೂಲತೆ ಬಗ್ಗೆ ಮಾಹಿತಿ, ಜನರ ಬದುಕು ಹೇಗೆ ಬದಲಾಯಿಸುತ್ತಿದೆ ಎಂಬ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.














