Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿತ್ತು. ಈ ಒಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಹ ವಜಾ ಗೊಳಿಸಿತ್ತು. ಇದೀಗ ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಂತಿಮ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರೇ ಸಂತ್ರಸ್ತರಾಗಿದ್ದಾರೆ ಎಂದು ಉಲ್ಲೇಖಿಸಿದೆ. ಹೌದು ಎಂ ಮತ್ತು ಕುಟುಂಬದ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಂತಿಮ ವರದಿ ತಯಾರಿಸಿದ್ದು, ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್‌ಚಿಟ್‌ ಕೊಡುವ ಜೊತೆಗೆ ಸಿಎಂ ಕುಟುಂಬವೇ ಸಂತ್ರಸ್ತರು ಎಂದು ಲೋಕಾಯುಕ್ತ ಉಲ್ಲೇಖಿಸಿರುವುದಾಗಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೇ ಮುಡಾದ ಮಾಜಿ ಆಯುಕ್ತ ನಟೇಶ್ ಈ ಪ್ರಕರಣ ಪ್ರಮುಖ ಆರೋಪಿ ಎಂದು ಕೂಡ ಉಲ್ಲೆಖಿಸಿದೆ. ಮೈಸೂರಿನ ಕೆಸರೆಯಲ್ಲಿನ ತಮ್ಮ ಜಮೀನಿಗೆ ಬದಲಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ಸಿಎಂ ಕುಟುಂಬಕ್ಕೆ 14 ನಿವೇಶನಗಳನ್ನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ವಾದಂತಹ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿ ಚಲಿಸುತ್ತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನುಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿಯ ಮಧು ಜಂಕ್ಷನ್ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಕಾಂಕ್ರೀಟ್ ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದೆ ಡಿಕ್ಕಿ ರಬಸಕ್ಕೆ ಸ್ಥಳದಲ್ಲೇ ದಂಪತಿಗಳು ಉಸಿರು ಚೆಲ್ಲಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಮಧು ಜಂಕ್ಷನ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಮೃತ ದಂಪತಿಗಳನ್ನು ಆಸಿಫ್ ಅಹಮದ್ ಹಾಗೂ ಶಬಾನಾ ಬೇಗಂ ಎಂದು ತಿಳಿದುಬಂದಿದೆ. ಟ್ಯಾನರಿ ರಸ್ತೆಯಿಂದ ಬೈಕ್ ನಲ್ಲಿ ದಂಪತಿಗಳು ದರ್ಗಾಕೆ ತೆರಳುತ್ತಿದ್ದರು. ಈ ವೇಳೆ ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಬಂದು  ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕೂಡಲೇ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ…

Read More

ಗದಗ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಅನೇಕ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಕೆಲವರು ಆತ್ಮಹತ್ಯೆಗೆ ಕೂಡ ಯತ್ನಿಸಿರುವ ಘಟನೆಗಳು ವರದಿಯಾಗಿವೆ. ಇದೀಗ ಗದಗ ಮತ್ತು ಬೆಟಗೇರಿಯಲ್ಲಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದು, ಬಡ್ಡಿ ದಂಧೆಕೊರರ ಮನೆಯ ಮೇಲೆ ದಾಳಿ ಮಾಡಿ ನಗದು ಹಣ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಹೌದು ಗದಗ ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರಿಂದ ಧಿಡೀರ್ ದಾಳಿ ನಡೆದಿದ್ದು, ಬಡ್ಡಿ ದಂಧೆಕೋರರ ಮನೆಗಳಲ್ಲಿ ನಗದು, ಬಾಂಡ್ ಮತ್ತು ಖಾಲಿ ಚೆಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದೆ ವೇಳೆ ನಗರದ ಸಂಗಮೇಶ್ ದೊಡ್ಡಣ್ಣನವರ ಮನೆಯಲ್ಲಿ 26 ಲಕ್ಷ ರೂಪಾಯಿ ನಗದು, ಖಾಲಿಬಾಂಡ್ ಚೆಕ್ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ರವಿ ಗೌಡ ಮನೆಯಲ್ಲಿ ಚೆಕ್ಬಾಂಡ್ ಹಣ ಎಣಿಸುವ ಮಷೀನ್ ಪತ್ತೆಯಾಗಿದೆ. ಕೆಲವರು ನೋಂದಣಿ ಮಾಡಿಸಿ ಅವ್ಯವಹಾರ ನಡೆಸುತ್ತಿದ್ದರೆ, ಇನ್ನು ಕೆಲವರು ಅನಧಿಕೃತವಾಗಿ ಬಡ್ಡಿ ದಂಧೆ ನಡೆಸುತ್ತಿದ್ದಾರೆ. ಧಮ್ಕಿ ಮತ್ತು ಬೆದರಿಕೆ ಹಾಕಿ ಸಾಲ ನೀಡಿದ ಜನರಿಂದ…

Read More

ಬೆಂಗಳೂರು : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು ಇಂದು ಬಿಜೆಪಿ ರಾಜ್ಯೇಂದ್ರ ಆ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೇಳುತ್ತಿದ್ದರು ಆದರೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ದಿಢೀರ್ ಎಂದು ರದ್ದುಗೊಳಿಸಿ ದೆಹಲಿಗೆ ತೆರಳಿದ್ದಾರೆ. ಹೌದು ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಗೆ ಬಿವೈ ವಿಜಯೇಂದ್ರ ತೆರಳುತ್ತಿದ್ದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು ಈ ಒಂದು ಕಾರ್ಯಕ್ರಮಕ್ಕೆ ಬಿವೈ ವಿಜಯೇಂದ್ರ ತೆರಳುತ್ತಿದ್ದ ಸಂದರ್ಭದಲ್ಲಿ ದೆಹಲಿಯ ಹೈಕಮಾಂಡ್ ನಿಂದ ಬಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಬಿವೈ ವಿಜಯೇಂದ್ರ ವಾಪಸ್ ಮರಳಿದ್ದಾರೆ. ಬೆಂಗಳೂರಿನ ನೆಲಮಂಗಲದಿಂದಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವೀಜೇಂದ್ರ ವಾಪಸ್ ಆಗಿದ್ದಾರೆ. ಹೈಕಮಾಂಡ್ ಭೇಟಿಗಾಗಿ ಕೂಡಲೇ ದಿಢೀರ್ ಎಂದು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Read More

ಕಲಬುರ್ಗಿ : ಸಿಗ್ನಲ್ ದಾಟುವಾಗ ಎಲೆಕ್ಟ್ರಿಕ್ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಕಲಬುರ್ಗಿ ನಗರದ ಹೊರವಲಯದ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ನಗರದ ನೂರಾನಿ ಮೊಹಲ್ಲಾದ ನಿವಾಸಿ ಅಬ್ದುಲ್ ನಬಿ (65) ಎಂದು ತಿಳಿದುಬಂದಿದೆ.ಕಟಲರಿ ವ್ಯಾಪಾರಿಯಾಗಿದ್ದು, ಇವರು ಅಂಗಡಿಯ ಸಾಮಾನುಗಳನ್ನು ತೆಗೆದುಕೊಂಡು ಹಾಗರಗಾ ಕ್ರಾಸ್ ನಲ್ಲಿ ಸಿಗ್ನಲ್ ದಾಟುವಾಗ ಅಪಘಾತ ಸಂಭವಿಸಿದೆ.ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಚಲಿಸುತ್ತಿದ್ದ ಕಾರು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ನಡು ರಸ್ತೆಯಲ್ಲೆ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದಾವರ ಎಂಬಲ್ಲಿ ನಡೆದಿದೆ. ಹೌದು ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿ ಈ ಒಂದು ಘಟನೆ ನಡೆದಿದೆ.ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿರುವ ಹಿನ್ನೆಲೆಯಲ್ಲಿ ಸಂಚಾರದ ದಟ್ಟಣೆ ಉಂಟಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಗೊಲ್ಲರಟ್ಟಿ ರವಿ ಎಂಬವರಿಗೆ ಸೇರಿದ ಕಾರು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.ಕಾರಿನಲ್ಲಿ ನೆಲಮಂಗಲಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಕಾರಿನಲ್ಲಿದ್ದ ಕುಟುಂಬಸ್ಥರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ಕೊಪ್ಪಳ : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಅಂಗನವಾಡಿ ಕಾರ್ಯಕರ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ ಎಂದು ಬಂದಿದ್ದು, ಮಂಜುಳಾ ಗಂಗಾವತಿ ಪಟ್ಟಣದ ಅಗಡಿ ಸಂಗಣ್ಣ ಕ್ಯಾಂಪ್ ನಿವಾಸಿ ಎಂದು ತಿಳಿದುಬಂದಿದೆ. ಮಂಜುಳಾ ವಿವಿಧ ಬ್ಯಾಂಕ್, ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿಯಾಗಿ ಮಂಜುಳಾ ಸಾಲ ಪಡೆದುಕೊಂಡಿದ್ದರು. ಸುಮಾರು 3 ಲಕ್ಷ ಸಾಲ ಮಾಡಿದ್ದಾರೆ. ಸಾಲಗಾರರ ಕಿರುಕುಳದಿಂದ ಬೆಸೆದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ಕುರಿತು ಗಂಗಾವತಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಇತ್ತೀಚಿಗೆ ಪತ್ನಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಇಡೀ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ತುಮಕೂರಿನಲ್ಲಿ ಪತ್ನಿಯ ಕಾಟಕ್ಕೆ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮದ ನಂಜೇಗೌಡ ಎಂಬುವನೇ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ. ಈತ ಹೆಂಡತಿ ಲಾವಣ್ಯಳಿಂದ ಬಹಳಷ್ಟು ಕಿರುಕುಳ ಅನುಭವಿಸಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೂಲತಃ ಅರಸಾಪುರದ ಗ್ರಾಮದ ನಿವಾಸಿಯಾಗಿರುವ ನಂಜೇಗೌಡ, ಸ್ವಗ್ರಾಮಕ್ಕೆ ತೆರಳದಂತೆ ಪತ್ನಿ ತಡೆಯುತ್ತಿದ್ದಳು. ಅಲ್ಲದೇ ತಂದೆ ತಾಯಿಯ ಜೊತೆ ಬಿಡದೆ ಗಂಡನನ್ನ ಪದೇ ಪದೇ ತಡೆಯುತ್ತಿದ್ದ ಹೆಂಡತಿಯ ಕಿರುಕುಳ ತಾಳಲಾರದೆ ನಂಜೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ದಾವಣಗೆರೆ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಕರುಡು ಸಿದ್ಧಪಡಿಸಿದ್ದು, ಇತ್ತೀಚಿಗೆ ರಾಜ್ಯಪಾಲರಿಗೆ ಅದನ್ನು ಕಳಿಸಲಾಗಿತ್ತು ಆದರೆ ರಾಜ್ಯಪಾಲರು ಅದನ್ನು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ರಾಜಪ್ಪರಿಗೆ ತಪ್ಪು ಗ್ರಹಿಕೆ ಆಗಿರಬಹುದು ಎಂದು ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸುಗ್ರೀವಾಜ್ಞೆಯ ಪ್ರಸ್ತಾಪವನ್ನು ಒಪ್ಪಿಲ್ಲ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಗೆ ತಪ್ಪು ಗ್ರಹಿಕೆ ಆಗಿರಬಹುದು.ಆಕ್ಷೇಪ ವ್ಯಕ್ತಪಡಿಸಿದ್ದನ್ನು ಸರಿಪಡಿಸಿ ಮತ್ತೆ ಮಂಡಿಸುತ್ತೇವೆ. ಸುಗ್ರೀವಾಜ್ಞೆ ಬಗ್ಗೆ ಅಧಿಕಾರಿಗಳೇ ಫೀಡ್ ಬ್ಯಾಕ್ ಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಅಧಿಕಾರಿಗಳೇ ಫೀಡ್ ಬ್ಯಾಕ್ ಕೊಟ್ಟಿದ್ದು ನೋಡಿದ್ದೇನೆ ಆ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶಕ್ಕೆ ತಲೆಬಾಗುತ್ತೇನೆ. ದೆಹಲಿಯಲ್ಲಿ ಬಿಜೆಪಿಗೆ ಗೆಲುವಾಗಿದೆ. ಆಪ್ ಮತ್ತು ನಾವು ಸೋತಿದ್ದೇವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಬಗ್ಗೆ ವಿಶ್ಲೇಷಣೆ ಆಗಿದೆ. ದೆಹಲಿ ಚುನಾವಣೆಯ ಕುರಿತು ವಿಶ್ಲೇಷಣೆ ಆಗಬೇಕಿದೆ. ಚುನಾವಣೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಯಲ್ಲಿ ಈ ಒಂದು ಘೋರವಾದ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನ ಬೊಮ್ಮನಹಳ್ಳಿಯ ದೀಪು (20) ಹಾಗೂ ಯೋಗೀಶ್ವರನ್ (20) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಹೆಬ್ಬಗೋಡಿ ಬಳಿಯ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಓದುತ್ತಿದ್ದರು. ಸ್ನೇಹಿತರ ಜೊತೆ ಬನ್ನೇರುಘಟ್ಟಕ್ಕೆ ದೀಪು ಮತ್ತು ಯೋಗೇಶ್ವರನ್ ತೆರಳಿದ್ದರು. ಮೊದಲು ಸುವರ್ಣಮುಖಿ ಕಲ್ಯಾಣಿಗೆ ಯೋಗೀಶ್ವರನ್ ಇಳಿದಿದ್ದಾನೆ ನೀರಿನಲ್ಲಿ ಮುಳುಗುತ್ತಿದ್ದ ಯೋಗೀಶ್ವರನ್ ನೆರವಿಗೆ ಆತನ ಸ್ನೇಹಿತ ದೀಪು ಕಲ್ಯಾಣಿಯಲ್ಲಿ ಮುಳುಗಿ ಇಬ್ಬರು ಸ್ನೇಹಿತರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ದೀಪು ಮತ್ತು ಯೋಗೀಶ್ವರನ್ ಶವಗಳನ್ನು ಹೊರ ತೆಗೆದಿದ್ದಾರೆ. ಘಟನೆ ಕುರಿತಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More