Author: kannadanewsnow05

ಬೆಂಗಳೂರು : ಕಳೆದ ಜನೆವರಿ 9 ರಂದು ಕರ್ನಾಟಕ ಸರ್ಕಾರದ ಮುಂದೆ ಶರಣಾಗಿದ್ದ ಮಾಜಿ ನಕ್ಸಲರನ್ನು ಇದೀಗ ಬೆಂಗಳೂರಿನ NIA ಕೋರ್ಟ್ ಖುಲಾಸೆಗೊಳಿಸಿದೆ. 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಾಜಿ ನಕ್ಸಲರನ್ನು ಇದೀಗ ಕೋರ್ಟ್ ಖುಲಾಸೆಗೊಳಿಸಿದೆ. ಮುಂಡಗರು ಲತಾ, ರವೀಂದ್ರ, ಸಾವಿತ್ರಿ ಮತ್ತು ಜ್ಯೋತಿಯನ್ನು ಇದೀಗ ಬೆಂಗಳೂರಿನ NIA ಕೋರ್ಟ್ ಖುಲಾಸೆಗೊಳಿಸಿದೆ. ಸಾಕ್ಷಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಇವರನ್ನು ಕೋರ್ಟ್ ಖುಲಾಸೆಗೊಳಿಸಿದೆ. ಇತ್ತೀಚಿಗೆ ಮಾಜಿ ನಕ್ಸಲರಾದಂತ ಮುಂಡಗಾರು ಲತಾ, ರವೀಂದ್ರ ಅಲಿಯಾಸ್ ಕೋಟೆಹೋಂಡ ರವಿ, ಸಾವಿತ್ರಿ ಅಲಿಯಾಸ್ ಉಷಾ, ವನಜಾಕ್ಷಿ ಅಲಿಯಾಸ್ ಜ್ಯೋತಿ ಅಲಿಯಾಸ್ ಕಲ್ಪನಾ NIA ಕೋರ್ಟ್ ಮುಂದೆ ಶರಣಾಗಿದ್ದರು. ಚಿಕ್ಕಮಂಗಳೂರು ತಣಿಕೋಡು ಅರಣ್ಯ ಚೆಕ್ಪೋಸ್ಟ್ ಧ್ವಂಸ ಪ್ರಕರಣ, ಲೇವಾದೇವಿದಾರ ಗಂಗಾಧರ ಶೆಟ್ಟಿ ಅಲಿಯಾಸ್ ಕಿರಣ್ ಶೆಟ್ಟಿ ಬೈಕ್ ಗೆ ಬೆಂಕಿ ಹಚ್ಚಿದ್ದ ಪ್ರಕರಣ, ಬುಕ್ಕಡಿಬೈಲುವಿನಲ್ಲಿ ಸಾರ್ವಜನಿಕ ಸಭೆ ನಡೆಸಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ 3…

Read More

ಬೆಂಗಳೂರು : ಮೆಟ್ರೋ ಟಿಕೆಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಇದೀಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ಶುಲ್ಕ ನಿಗದಿ ಪಡಿಸಿತ್ತು. ಬಿಎಂಆರ್‌ಸಿಎಲ್‌’ನ ಈ ನಡೆಯು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ BMRCL ಈ ಕುರಿತು ಸ್ಪಷ್ಟನೆ ನೀಡಿದೆ. ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆ ಉಚಿತವಾಗಿರುತ್ತದೆ. ಮೆಟ್ರೋ ಸ್ವೈಪ್ ಗೇಟ್ ಒಳಗಿನ ಶೌಚಾಲಯಗಳ ಬಳಕೆ ಉಚಿತವಾಗಿರುತ್ತದೆ. ಮುಂದೆಯೂ ಕೂಡ ಶೌಚಾಲಯ ಬಳಕೆ ಉಚಿತವಾಗಿರುತ್ತದೆ. ಮೆಟ್ರೋ ಸ್ವೈಪ್ ಗೇಟ್ ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರಲ್ಲದೆ ಬೇರೆ ಸಾರ್ವಜನಿಕರು ಸಹ ಬಳಸುತ್ತಾರೆ. ಅಂತಹ ಶೌಚಾಲಯಗಳು ಮಾತ್ರ ಶುಲ್ಕ ನಿಗದಿ ಮಾಡಲಾಗಿದೆ ಎಂದು ಶೌಚಾಲಯ ಬಳಕೆಗೆ ಶುಲ್ಕ ವಿಚಾರದ ಬಗ್ಗೆ ಇದೀಗ BMRCL ಸ್ಪಷ್ಟನೆ ನೀಡಿದೆ.

Read More

ಬೆಂಗಳೂರು : ಜಾತಿ ಸಮೀಕ್ಷೆ ಮಾಡದ ಪಾಲಿಕೆ ಅಧಿಕಾರಿಗಳಿಗೆ ಇದೀಗ ಚಾಟಿ ಬೀಸಲಾಗಿದ್ದು, ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಅಡಿಯಲ್ಲಿ ಐವರು ಅಧಿಕಾರಿಗಳು ಅಮಾನತು ಮಾಡಲಾಗಿದೆ. ಐವರನ್ನು ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಇದೀಗ ಆದೇಶ ಹೊರಡಿಸಿದ್ದಾರೆ. ಶ್ರೀಜೇಶ್, ವಿಜಯಕುಮಾರ್ ಶಿವರಾಜ್ ಹೆಚ್‍ಸಿ, ಮಹದೇವ್ ಹಾಗು ಶ್ರೀ ಶಂಕರ್ ಅಮಾನತುಗೊಂಡ ಅಧಿಕಾರಿಗಳು ಎಂದು ತಿಳಿದುಬಂದಿದೆ. ನಿತ್ಯ ಮನೆಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಮೊಬೈಲ್ ಲಾಗಿನ್ ಮಾಡದೆ ಸಿಬ್ಬಂದಿಗಳು ಕಳ್ಳಾಟ ನಡೆಸಿದ್ದಾರೆ. ಹಾಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರು ಇದೀಗ ಇವರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಂದ್ರಮ್ಮ ಅವರು ಬೇಲೂರು ತಾಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿನ ಕರುಣ್ ಎಂಬುವವರ ಕಾಫಿ ತೋಟದ 12 ಮಂದಿ ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದ್ದು, ಚಂದ್ರಮ್ಮ ಅವರು ಮೃತಪಟ್ಟಿದ್ದಾರೆ. 11 ಮಂದಿ ಕಾರ್ಮಿಕರು ಸ್ಥಳದಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

Read More

ಬೆಂಗಳೂರು : ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥಿರಪಿ ಘಟಕಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ವರ್ಚುಯಲ್ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಿಮೋಥೆರಪಿ ಘಟಕಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ. ಇಂದು ಮೈಸೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಡೇ ಕೇರ್ ಕಿಮೋಥರಪಿ ಘಟಕಗಳ ಲೋಕಾರ್ಪಣೆಗೊಳಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕರ್ನಾಟಕ ಆರೋಗ್ಯ ಇಲಾಖೆಯು, ಕ್ಯಾನ್ಸರ್ ರೋಗಿಗಳಿಗೆ ಗುಡ್​ನ್ಯೂಸ್ ನೀಡಿದೆ. ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ…

Read More

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ಬಳಿ ಕಳೆದ 2024 ಜನೆವರಿ 8 ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಗಳು ವಿಜಯೋತ್ಸವ ಮಾಡಿದ್ದು, ಜಾಮೀನು ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರು ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹಾನಗಲ್ ತಾಲ್ಲೂಕಿನ ಅಕ್ಕಿಆಲೂರ ಕಮಾಟಿಗೇರ ಓಣಿಯ ಸಮೀವುಲ್ಲಾ ಅಬ್ದುಲ್‌ವಾಹೀದ್ ಲಾಲಾನವರ (28), ಇಮಾಮನಗರದ ಮಹ್ಮದಸಾದಿಕ್ ಬಾಬುಸಾಬ ಅಗಸಿಮನಿ (30), ಹಳ್ಳೂರ ಓಣಿಯ ಶೋಹಿಬ ನಿಯಜಅಹ್ಮದ್ ಮುಲ್ಲಾ ಉರುಫ್ ಶೋಯಬ್ (20) ಹಾಗೂ ಇಸ್ಲಾಂಪುರ ಓಣಿಯ ರಿಯಾಜ್ ಅಬ್ದುಲ್‌ರಫೀಕ್ ಸಾವಿಕೇರಿ (32) ಎಂದು ತಿಳಿದುಬಂದಿದೆ. 2024ರ ಜನವರಿಯಲ್ಲಿ ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ 19 ಆರೋಪಿಗಳನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ 12 ಜನರಿಗೆ ಈ ಹಿಂದೆಯೇ ಜಾಮೀನು ಮಂಜೂರಾಗಿತ್ತು. ಬಾಕಿ ಉಳಿದ 7 ಜನರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದ 7 ಆರೋಪಿಗಳು, ಹಾವೇರಿಯಿಂದ ಅಕ್ಕಿಆಲೂರುವರೆಗೂ…

Read More

ತುಮಕೂರು : ಜಮೀನು ವಿಚಾರಕ್ಕೆ ಗಲಾಟೆ ನಡೆದು ಯುವಕನೊಬ್ಬ ಸ್ವಂತ ದೊಡ್ಡಪ್ಪನಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಲಕೊಪ್ಪದಲ್ಲಿ ಈ ಒಂದು ಬರ್ಬರ ಹತ್ಯೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರೀಂ (50) ಎಂದು ತಿಳಿದುಬಂದಿದ್ದು, ಕರೀಂನನ್ನು ಕೊಲೆಗೈದು ತಮ್ಮನ ಮಗ ಆಫ್ರಿದ್ (25) ಪರಾರಿಯಾಗಿದ್ದಾನೆ. ಜಮೀನು ವಿಚಾರವಾಗಿ ಜಗಳ ನಡೆದು ಈ ಒಂದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ ವೆಂಕಟ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಒಂದು ಕೊಲೆಯು ಸಿಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Read More

ಹರಿಯಾಣ : ಹರಿಯಾಣದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದರೆ. ನಿರ್ಮಾಣ ಹಂತದ ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಇಬ್ಬರು ಕಾರ್ಮಿಕ ಮಹಿಳೆಯರು ಇದೀಗ ಸಾವನಪ್ಪಿದ್ದಾರೆ. ಹೌದು ಈ ಒಂದು ಘೋರ ದುರಂತ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಉತ್ಖನನದ ಸಮಯದಲ್ಲಿ ಮಣ್ಣು ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ, ಅನೇಕ ಕಾರ್ಮಿಕರು ಕಂಬಗಳನ್ನು ಹಾಕಲು ನೆಲವನ್ನು ಅಗೆಯುತ್ತಿದ್ದರು. ಜೆಸಿಬಿ ಯಂತ್ರದ ಸಹಾಯದಿಂದ, ಒಂದು ಗಂಟೆಯ ಕಠಿಣ ಪರಿಶ್ರಮದ ನಂತರ ಎಲ್ಲಾ ಕಾರ್ಮಿಕರನ್ನು ಹೊರಗೆ ತರಲಾಯಿತು. ಇಂದು ನಿಲ್ದಾಣದಲ್ಲಿ ಅಗೆಯುವ ಸಮಯದಲ್ಲಿ, ಮಣ್ಣು ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದರು ಮತ್ತು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಐದಕ್ಕೂ ಹೆಚ್ಚು ಕಾರ್ಮಿಕರು ಕಂಬ ನಿರ್ಮಿಸಲು 20 ಅಡಿ ಆಳದ ಗುಂಡಿ ತೋಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇದ್ದಕ್ಕಿದ್ದಂತೆ ಮೇಲಿನಿಂದ ದೊಡ್ಡ ಪ್ರಮಾಣದ…

Read More

ಬೆಳಗಾವಿ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದ ಘಟನೆ ವರದಿಯಾಗಿದೆ. ಆಕೆಯ ಇಬ್ಬರು ಸಹಪಾಠಿಗಳು ಮತ್ತು ಅವರ ಸ್ನೇಹಿತರೊಬ್ಬರು ಮದ್ಯದ ಅಮಲಿನಲ್ಲಿ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ದೂರಿದ್ದಾಳೆ. ಮೇ 18ರಂದು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ರಾತ್ರಿ 10 ಗಂಟೆ ಸುಮಾರಿಗೆ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಪ್ಲಾನ್ ಹಾಕಿಕೊಂಡಿದ್ದರು. ಈ ವೇಳೆ ಆಕೆಯ ಮೇಲೆ ದಾಳಿ ನಡೆಸಲಾಗಿದೆ. ಅದಕ್ಕೂ ಮೊದಲು, ಆರೋಪಿಯು ವಿಶ್ರಾಂತಿ ನೀಡುವ ನೆಪದಲ್ಲಿ ಆಕೆಯನ್ನು ಫ್ಲಾಟ್‌ಗೆ ಕರೆದೊಯ್ದು, ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಆಕೆಗೆ ಮದ್ಯ ಕುಡಿಸಿದ್ದಾರೆ. ಕರ್ನಾಟಕದ ಬೆಳಗಾವಿ ಮೂಲದ ಸಂತ್ರಸ್ತೆ ನಂತರ ತನ್ನ ಪೋಷಕರಿಗೆ ಘಟನೆಯನ್ನು ವಿವರಿಸಿದಳು, ನಂತರ ಅವರು ವಿಶ್ರಂಬಾಗ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಇತರ ಆರೋಪಗಳಿಗಾಗಿ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಮಂಗಳೂರು : ಇತ್ತೀಚಿಗೆ ಮಂಗಳೂರಲ್ಲಿ ರೌಡಿ ಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಕೊಲೆಯಾಗಿತ್ತು. ಘಟನೆ ಮಾಸುವ ಮುನ್ನವೇ ಮಂಗಳೂರಲ್ಲಿ ಮತ್ತೊಂದು ಕೊಲೆಯಾಗಿದೆ. ಮದುವೆಯಾದ ಆರೇ ತಿಂಗಳಲ್ಲಿ ಪತ್ನಿ ತನ್ನನ್ನು ತೊರೆದು ತವರು ಮನೆ ಸೇರಿದ್ದಾಳೆ ಎಂಬ ಸಿಟ್ಟಿಗೆ ಪತಿಯು ಮದುವೆ ಮಾಡಿಸಿದ್ದ ದಲ್ಲಾಳಿಯನ್ನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ವಾಮಂಜೂರಿನ ಸುಲೇಮಾನ್ (50) ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಲೇಮಾನ್ ಅವರ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಮೃತ ಸುಲೇಮಾನ್​, ವಿವಾಹ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು. ಇವರು ಆರೋಪಿ ಮುಸ್ತಫಾ ಎಂಬಾತನಿಗೆ​​​ ಮಹಿಳೆಯೊಂದಿಗೆ ಸುಮಾರು 8 ತಿಂಗಳ ಹಿಂದೆ ವಿವಾಹ ಮಾಡಿಸಿದ್ದರು. ಆದರೆ, ವೈವಾಹಿಕ…

Read More