Author: kannadanewsnow05

ಧಾರವಾಡ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಇದೀಗ ಪ್ರಕಟಿಸಿದ್ದು, ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ. ವಿಚಾರಣೆ ಆರಂಭದ ವೇಳೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧದ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಲು ನಕಾರ ವ್ಯಕ್ತಪಡಿಸಿದ್ದು, ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ. ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್‌ ಮತ್ತು ಪೊಲೀಸ್‌ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು…

Read More

ಧಾರವಾಡ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ ಹೀಗಾಗಿ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಇದೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಒಂದು ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ. ಆರೋಪ ಪಟ್ಟಿ ರದ್ದುಪಡಿಸಲು…

Read More

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಒಂದು ವೇಳೆ ನೀವೇನಾದರೂ ಮುಂಜಾನೆ ಎದ್ದ ತಕ್ಷಣ ಈ ಚಿಕ್ಕ ಮಂತ್ರವನ್ನು 21 ಬಾರಿ ಹೇಳಿದರೆ ದಶದಿಕ್ಕುಗಳಿಂದ ಧನ ಸಂಪತ್ತಿನ ಆಗಮನ ಆಗುವುದರ ಜೊತೆಗೆ ಇಲ್ಲಿ ನಾವು ನಿಮಗೆ ಇದರ ಗುಪ್ತವಾದ ಪ್ರಯೋಗದ ಬಗ್ಗೆ ಕೂಡ ತಿಳಿಸಿಕೊಡುತ್ತೇವೆ ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಅಂತ ಕರೆಯುತ್ತಾರೆ ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಒಳ್ಳೆಯ ವಿಷಯಗಳನ್ನು ನೋಡಿದರೆ ಒಳ್ಳೆಯ ವಿಷಯಗಳನ್ನು ಕೇಳಿದರೆ ಒಳ್ಳೆಯ ವಿಷಯಗಳ ಬಗ್ಗೆ ಮಾತನಾಡಿದರೆ ಇವುಗಳ ಪ್ರಭಾವ ನಿಮ್ಮ ಮೇಲೆ ದಿನವಿಡಿ ಇರುತ್ತದೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ…

Read More

ಧಾರವಾಡ : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ತೀರ್ಪು ಪ್ರಕಟಿಸಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು CBI ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ CBI ತನಿಖೆಗೆ ಕೊಡುತ್ತಾ ಎಂದು ಕಾದು ನೋಡಬೇಕಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು…

Read More

ಬೆಂಗಳೂರು : ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಮೈಸೂರಿಂದ ಬೆಂಗಳೂರಿಗೆ ಬರುವ ವಾಹನಗಳು ಎಕ್ಸಿಟ್ ಆಗುತ್ತಿದ್ದಕ್ಕೆ ಇದೀಗ ಬ್ರೇಕ್ ಹಾಕಲಾಗಿದೆ. ಹೌದು ಬಿಡದಿಯಿಂದ ಮುಂದೆ ಬಂದು ವಾಹನಗಳು ಎಕ್ಸಿಟ್ ಆಗ್ತಿದ್ದಕ್ಕೆ ಬ್ರೇಕ್ ಹಾಕಲಾಗಿದೆ. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು ವಾಹನ ಸವಾರರು ಟೋಲ್ ತಪ್ಪಿಸುತ್ತಿದ್ದರು. ಶೇಷಗಿರಿ ಹಳ್ಳಿ ಬಳಿ ಟೋಲ್ ಕಟ್ಟದೆ ವಾಹನಗಳು ಬೆಂಗಳೂರು ತಲುಪುತ್ತಿದ್ದವು. ಇದೀಗ ಟೋಲ್ ತಪ್ಪಿಸುವ ವಾಹನ ಗಳಿಗೆ ಹೆದ್ದಾರಿ ಪ್ರಾಧಿಕಾರ ಬ್ರೇಕ್ ಹಾಕಿದೆ. ಬಿಡದಿ ಬಳಿ ಎಕ್ಸಿಟ್ ರೋಡ್ ಬಂದ್ ಮಾಡಿದ್ದು ಎಂಟ್ರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಇದೀಗ ಆಕ್ರೋಶ ಹೊರಹಾಕಿದ್ದಾರೆ. ಎಕ್ಸಿಟ್ ರೋಡ್ ಬಂದ್ ಬಗ್ಗೆ ಸೂಚನಾ ಫಲಕ ಅಳವಡಿಸಿಲ್ಲ ಎಂದು ಕಿಡಿ ಕಾರಿದ್ದಾರೆ.

Read More

ವಿಜಯಪುರ : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುತ್ತದೆ ಎಂದು ನಿರ್ಧರಿಸಿದ್ದರು ಕೂಡ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಟ್ಟಹಾಸ ಮುಂದುವರೆದಿದೆ, ಇದೀಗ ಮೈಕ್ರೋ ಫೈನಾನ್ಸ್ ಬಂಧಿಗಳ ಕಿರುಕುಳಕ್ಕೆ ಬೇಸತ್ತು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಮೈಕ್ರೋ ಫೈನಾನ್ಸ್ ಅವರ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದಲ್ಲಿ ಈ ಒಂದು ಆತ್ಮಹತ್ಯೆ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ರೈತ ಬಸನಗೌಡ ಬಿರಾದರ್ (52) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು L&T ಇಂದ 1.10 ಲಕ್ಷ, ನವಚೇತನ ಫೈನಾನ್ಸ್ ನಿಂದ 1 ಲಕ್ಷ, ESF ಫೈನಾನ್ಸ್ ನಲ್ಲಿ 75 ಸಾವಿರ, ಚೈತನ್ಯ ಫೈನಾನ್ಸ್ ನಲ್ಲಿ 1ಲಕ್ಷ, RBL ಫೈನಾನ್ಸಿನಿಂದ 1ಲಕ್ಷ, ಸುಗಮ ಫೈನಾನ್ಸ್ ನಲ್ಲಿ 50 ಸಾವಿರ ಹಾಗೂ ಧರ್ಮಸ್ಥಳ ಸಂಘದಲ್ಲಿ…

Read More

ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ತೀರ್ಪು ಪ್ರಕಟವಾಗಲಿದೆ. ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಮುಡಾ ಹಗರಣ CBI ತನಿಖೆಗೆ ವಹಿಸುವ ವಿಸ್ವಾಸವಿದೆ ಎಂದು ತಿಳಿಸಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಸಿಬಿಐಗೆ ವಹಿಸಿ ತೀರ್ಪು ನೀಡುವ ವಿಶ್ವಾಸವಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸರಿಯಾಗಿ ವಿಚಾರಣೆ ಸಹ ಮಾಡಿಲ್ಲ. ಸಿದ್ದರಾಮಯ್ಯ ಹೇಳಿದ ಸಮಯಕ್ಕೆ ವಿಚಾರಣೆ ಮುಗಿಸಿದ್ದಾರೆ ಎಂದು ಅವರು ತಿಳಿಸಿದರು. ಕೇಸ್ ನಲ್ಲಿ ಯಾರನ್ನು ಸಹ ವಶಕ್ಕೆ ಪಡೆದಿಲ್ಲ ಮತ್ತು ಬಂಧಿಸಿಲ್ಲ. ಇದೆಲ್ಲಾ ಪರಿಗಣಿಸಿ ಸಿಬಿಐಗೆ ವಹಿಸಲಿದೆ ಅನ್ನುವ ವಿಶ್ವಾಸವಿದೆ. ವ್ಯತಿರಿಕ್ತವಾಗಿ ತೀರ್ಪು ಬಂದರೆ ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮಾಡುತ್ತೇನೆ. ಲೋಕಾಯುಕ್ತ ಅಧಿಕಾರಿಗಳ ವಿರುದ್ಧವು ಕಾನೂನು ಹೋರಾಟ ಮುಂದುವರಿಸಲಾಗುತ್ತದೆ ಎಂದು ತಿಳಿಸಿದರು. ಇಂದು ತೀರ್ಪು ಪ್ರಕಟ ಮುಡಾ ಪ್ರಕರಣದಲ್ಲಿ…

Read More

ಕಲಬುರ್ಗಿ : ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರು ಕೊಲೆಯಾಗುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಘಟನೆಯಲ್ಲಿ ಪತ್ನಿಯೊಬ್ಬಳು ಪರಸ್ತ್ರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತಿಯ ಕಾಲನ್ನು ಮುರಿಸಿರುವ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದೆ. ಹೌದು ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಉಮಾದೇವಿ ಎನ್ನುವವರು ತಮ್ಮ ಪತಿ ವೆಂಕಟೇಶ್ ಅವರ ಕಾಲನ್ನು ಮುರಿಸಿರುವ ಘಟನೆ ಕಲಬುರ್ಗಿ ನಗರದ ಅತ್ತರ ಕಾಂಪೌಂಡ್ ಬಳಿ ಈ ಒಂದು ಘಟನೆ ನಡೆದಿದೆ. ಪರಸ್ತ್ರೀ ಜೊತೇ ಸಲುಗೆಯಿಂದ ಇದ್ದಾ ಪತಿ ವೆಂಕಟೇಶ್ ವೆಂಕಟೇಶ್ ನಡೆಯಿಂದ ಪತ್ನಿ ಉಮಾದೇವಿ ಕೋಪಗೊಂಡಿದ್ದರು. ದಂಪತಿಗಳ ಮಧ್ಯ ಹಲವು ಬಾರಿ ಜಗಳವಾದರೂ ಕೂಡ ಪತಿ ವೆಂಕಟೇಶ್ ಪರಸ್ತ್ರೀ ಸ್ನೇಹವನ್ನು ಬಿಟ್ಟಿರಲಿಲ್ಲ. ಹೀಗಾಗಿ ಪತ್ನಿ ಉಮಾದೇವಿ ಸುಪಾರಿ ನಡಿ ಪತಿಯ ಎರಡು ಕಾಲುಗಳನ್ನು ಮುರಿಸಿದ್ದಾರೆ. ಎರಡು ಕಾಲು ಮುರಿದರೆ ಗಂಡ ಮನೆಯಲ್ಲಿ ಇರುತ್ತಾನೆ ಎಂದು ಉಹಾದೇವಿ ಸುಪಾರಿ ನೀಡಿ ಈ ಕೃತ್ಯ ಎಸಗಿದ್ದಾರೆ. 5 ಲಕ್ಷ ರೂಪಾಯಿಗೆ ಸುಪಾರಿ ನೀಡಿ ಎರಡು…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ಮಾವಿನಕೆರೆ ಎಂಬ ಗ್ರಾಮದಲ್ಲಿ ನಿನ್ನೆ ಕಾಡುಕೋಣ ದಾಳಿಗೆ ರೈತ ರಘುಪತಿ ಎನ್ನುವವರು ಸಾವನ್ನಪ್ಪಿದ್ದರು. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪಟ್ಟಣದ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಅಲ್ಲದೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಕಳಸ ವ್ಯಾಪಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರಿಂದ ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ರೈತ ಸಂಘ, ಸರ್ವಪಕ್ಷಗಳಿಂದ ಕಳಸ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 4 ರ ವರೆಗೂ ಕಳಸ ಪಟ್ಟಣ ಬಂದ್ ಗೆ ಸಂಘಟನೆಗಳು ಕರೆ ನೀಡಿವೆ. ಕಾಡುಕೋಣ ದಾಳಿಯಿಂದ ರೈತ ರಘುಪತಿ ಮೃತಪಟ್ಟಿದ್ದರು. ಮಾವಿನಕೆರೆ ಗ್ರಾಮದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿಯಾಗಿದ್ದರು.ಹಾಗಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ರೈತರು…

Read More

ಬೆಂಗಳೂರು : ಗೂಗಲ್ ಮ್ಯಾಪ್ ಬಳಸಿ ಇತ್ತೀಚಿಗೆ ಅದೆಷ್ಟು ಅಪಘಾತಗಳು ಸಂಭವಿಸುತ್ತಿದ್ದು ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು, ವೈದ್ಯರೊಬ್ಬರು ಗೂಗಲ್ ಮ್ಯಾಪ್ ನಲ್ಲಿ ಮಗ್ನರಾಗಿ ವೇಗವಾಗಿ ಕಾರು ಚಾಲನೆ ಮಾಡುತ್ತ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ವೈದ್ಯನನ್ನು ಹೈದ್ರಾಬಾದ್ ಮೂಲದ ಅಮರ್ ಪ್ರಸಾದ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಗಲ್‌ ಮ್ಯಾಪ್‌ ಮಗ್ನನಾಗಿದ್ದ ಕಾರು ಚಾಲಕ ವೇಗವಾಗಿ ಹೋಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿ ವೈದ್ಯ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಹೈದ್ರಾಬಾದ್‌ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಅನ್ನೋ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಬೇಕು ಎಂದು ಕಾರು ಏರಿದ್ದಾರೆ . ಬೆಳಗಿನಜಾವ 2 ಗಂಟೆಗೆ…

Read More