Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಡೆದಿದೆ. ಮಾತ್ರೆ ಸೇವಿಸಿ ಕುಂಬಳಗೋಡು ಮೂಲದ ಮಂಜುನಾಥ್ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಜೂನ್ 13 ರಂದು ಮಂಜುನಾಥ್ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆಯ ಬಳಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಯುವಕನ ಆತ್ಮಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ನಂಬಿಸಿ ನನಗೆ ಮೋಸ ಮಾಡಿದ್ದಾಳೆ ಹಾಗಾಗಿ ಬೇರೊಬ್ಬನ ಜೊತೆಗೆ ಸಂಬಂಧ ಇದೆ ಎಂದು ಯುವಕ ಆರೋಪಿಸಿದ್ದಾನೆ. ಮಾತ್ರೆ ಸೇವಿಸಿದ ಮಂಜುನಾಥನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೆ ಯುವಕ ಮಂಜುನಾಥ್ ಸಾವನಪ್ಪಿದ್ದಾನೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಇದೀಗ…
ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ನದಿ ಹಳ್ಳಕೊಳ್ಳಲು ತುಂಬಿ ಹರಿಯುತ್ತಿವೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಒಟ್ಟು 9 ಜನರು ಜಲ ಸಮಾಧಿ ಆಗಿದ್ದದ್ದಾರೆ. ಇದರ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಫಾಲ್ಸ್ ನೋಡಲು ಬಂದಿದ್ದ ಯುವಕ ಕಾಲು ಜಾರಿ ಹಳ್ಳಕ್ಕೆ ಬಿದ್ದು ನಿರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತಕ್ಕೆ ಸ್ನೇಹಿತ ವಾಸುದೇವ್ ಜೊತೆ ಪವನ್ ನಿನ್ನೆ ಸಂಜೆ ತೆರಳಿದ್ದಾನೆ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ಇದೀಗ ಮಾಜಿ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಿದ್ದಾರೆ.ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಕೆ ಸುರೇಶ್ ಅವರು, ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಹಲವರಿಗೆ ವಂಚನೆ ಮಾಡಿದ್ದಾರೆ, ಧ್ವನಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ವಿಚಾರಣೆಗು ಮುನ್ನ ವಕೀಲರ ಮೂಲಕ ಮಾಹಿತಿ ಪಡೆದು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ. ಪ್ರಕರಣಕ್ಕೆ ಸಂಬಂಧವಿಲ್ಲದೆ ನನಗೆ ನೋಟಿಸ್ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾರೋ ಒಬ್ಬ ಮಹಿಳೆ ಮೌಖಿಕವಾಗಿ ನನ್ನ ಸಹೋದರಿ ಅಂತ ಹೇಳಿ ವಂಚನೆ ಮಾಡಿದ್ದಾರೆ. ಈ ವಿಚಾರವಾಗಿ ನಾನೇ ಪೊಲೀಸ್ ಕಮಿಷನರ್ ಗೆ ದೂರು ಸಹ ನೀಡಿದ್ದೆ. ಅವರು ಮಾಡಿದ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ವಿಧವಾದ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಅಂತ ಎರಡು ಮೂರು ಬಾರಿ ಭೇಟಿಯಾಗಿದ್ದಾರೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ…
ಕಲಬುರ್ಗಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದು ಮನೆಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಇದೀಗ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟೀಕಾರ್ ಹೊಸ ಬಾಂಬ್ ಸಿಡಿಸಿದ್ದು, ಈ ಒಂದು ಪ್ರಕರಣದಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಹೊಸ ಬಾಂಬ್ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಯೋಜನೆಯ ಮನೆ ಹಂಚಿಕೆಯಲ್ಲಿ 10 ಕೋಟಿ ಅವ್ಯವಹಾರವಾಗಿದ್ದು, ಇದಕ್ಕೆಲ್ಲ ಅಫಜಲಪುರ ತಾಲ್ಲೂಕಿನ ಬಳುಂಡಗಿ ಗ್ರಾಮ ಸರ್ಕಾರಿ ನೌಕರನೊಬ್ಬ ಕಿಂಗ್ಪಿನ್ ಆಗಿದ್ದಾನೆ. ಈತ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸಚಿವ ಜಮೀರ್ ಅಹ್ಮದ್ರ ಆಪ್ತ ಎಂದು ಹೇಳಿಕೊಂಡು, ಹಣದ ವ್ಯವಹಾರ ಮಾಡುತ್ತಿದ್ದಾರೆ.ಆತನನ್ನು ಬಂಧಿಸಿ, ತನಿಖೆ ನಡೆಸಿದರೆ ಸತ್ಯ ಹೊರಬೀಳಲಿದೆ ಎಂದು ಆರೋಪಿಸಿದರು. ಲೋಕೋಪಯೋಗಿ ಮತ್ತು ಕೆಆರ್ ಐಡಿಎಲ್ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿದೆ. ಗುತ್ತಿಗೆದಾರರು ಶಾಸಕರ ಸುಪುತ್ರ ಅರುಣಕುಮಾರ ಪಾಟೀಲ್ ಅವರಿಗೆ ಕಮಿಷನ್ ಕೊಡದಿದ್ದರೆ ಕಾಮಗಾರಿ…
ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ಕೆಲವೇ ಕ್ಷಣಗಳಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಲಿದ್ದಾರೆ.ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಕೆ ಸುರೇಶ್ ಅವರು, ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಹಲವರಿಗೆ ವಂಚನೆ ಮಾಡಿದ್ದಾರೆ, ಧ್ವನಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ವಿಚಾರಣೆಗು ಮುನ್ನ ವಕೀಲರ ಮೂಲಕ ಮಾಹಿತಿ ಪಡೆದು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ. ಪ್ರಕರಣಕ್ಕೆ ಸಂಬಂಧವಿಲ್ಲದೆ ನನಗೆ ನೋಟಿಸ್ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾರೋ ಒಬ್ಬ ಮಹಿಳೆ ಮೌಖಿಕವಾಗಿ ನನ್ನ ಸಹೋದರಿ ಅಂತ ಹೇಳಿ ವಂಚನೆ ಮಾಡಿದ್ದಾರೆ. Iವಿಚಾರವಾಗಿ ನಾನೇ ಪೊಲೀಸ್ ಕಮಿಷನರ್ ಗೆ ದೂರು ಸಹ ನೀಡಿದ್ದೆ. ಅವರು ಮಾಡಿದ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ವಿಧವಾದ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಅಂತ ಎರಡು ಮೂರು ಬಾರಿ ಭೇಟಿಯಾಗಿದ್ದಾರೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ…
BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ನಶೆಯಲ್ಲಿ ಮೈಕ್ ಸೆಟ್ ಬಾಕ್ಸ್ ನಿಂದ ತಲೆಗೆ ಹೊಡೆದು, ಭಿಕ್ಷುಕನ ಹತ್ಯೆ!
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಮೈಕ್ ಸೆಟ್ ಬಾಕ್ಸ್ ನಿಂದ ಹೊಡೆದು ಬಿಕ್ಷುಕನನ್ನು ಕೊಲೆ ಮಾಡಲಾಗಿದೆ.ಬಿಹಾರ ಮೂಲದ ವಿಕಲಚೇತನ ಮಿತೇಶ್ (36) ಎನ್ನುವ ವ್ಯಕ್ತಿಯನ್ನು ರಾಜೇಶ್ ಹತ್ಯೆಗೈದಿದ್ದಾನೆ. ಹತ್ಯೆಯಾದ ಮಿತೇಶ್ ಹಾಗು ಕೊಲೆ ಆರೋಪಿ ರಾಜೇಶ್ ಕುಮಾರ್ ಇಬ್ಬರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಒಂದೇ ಬಾಡಿಗೆ ಮನೆಯಲ್ಲಿ ಮೀತೇಶ್ ಮತ್ತು ರಾಜೇಶ್ ವಾಸವಿದ್ದರು. ಇಬ್ಬರು ವಿಶೇಷ ಚೇತನರಾಗಿದ್ದು, ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ನಿನ್ನೆ ಮದ್ಯ ಸೇವಿಸಿ ಬಂದು ರಾಜೇಶ್ ತಾಯಿಗೆ ಮಿತೇಶ್ ಬೈದಿದ್ದ. ಇದರಿಂದ ಕೋಪಗೊಂಡು ರಾಜೇಶ್ ಮಿತೇಶ್ ತಲೆಗೆ ಹೊಡೆದಿದ್ದಾನೆ. ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮಿತೇಶ ಸಾವನಪ್ಪಿದ್ದಾನೆ, ಆರೋಪಿ ರಾಜೇಶ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆಳಂದ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಸರ್ಕಾರದ ಭ್ರಷ್ಟಾಚಾರ ಹೊರಬಂದಿದೆ. ಬಡವರಿಗೆ ಹಂಚುವ ಮನೆಗಳಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಬಿ.ಆರ್ ಪಾಟೀಲ್ ಅಧಿಕೃತ ಹೇಳಿಕೆಯನ್ನು ಆಧಾರವಾಗಿ ಪರಿಗಣಿಸಿ. ಕೇವಲ ಒಂದು ಇಲಾಖೆ ಅಥವಾ ನಿರ್ದಿಷ್ಟ ಅಧಿಕಾರಿಗಳ ವೈಫಲ್ಯವಲ್ಲ ಇದು ಸರ್ಕಾರದ ಆಡಳಿತಾತ್ಮಕ ವೈಫಲ್ಯ. ಹಾಗಾಗಿ ಈ ಒಂದು ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಎಂದು ದಿನೇಶ್ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ ಎಂದು ಬಿ.ಆರ್ ಪಾಟೀಲ್ ಹೇಳಿಕೆ ಆಡಿಯೋ ಸಮೇತ ದಿನೇಶ್ ಕಲಹಳ್ಳಿ ರಾಜಪಾಲರಿಗೆ ದೂರು ನೀಡಿದ್ದಾರೆ. ಸಂಬಂಧಪಟ್ಟ…
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಟಕ್ಕಿ ಒಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ, ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ತಿಳಿದುಬಂದಿದೆ. ಸಾಫ್ಟ್ವೇರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್ಕೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಮಾಜಿ ಸಂಸದ ಅಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚೆನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಕೋರ್ಟ್ ಐಶ್ವರ್ಯ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದೇ ದಿವಸ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಇಡಿ ನೋಟಿಸ್ ಜಾರಿ ಮಾಡಿತ್ತು. ಹೌದು ಇತ್ತೀಚಿಗೆ ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಡಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಕಳೆದ ಜೂನ್ 19ರಂದೆ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ಹಾಜರಾಗಿಲ್ಲ. ಹಾಗಾಗಿ ಇಂದು ಇಡಿ ವಿಚಾರಣೆಗೆ ಅವರು ಹಾಜರಾಗಲಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಮಂಡ್ಯ : ನಿನ್ನೆ ತಾನೆ ಚಿತ್ರದುರ್ಗದಲ್ಲಿ 82 ವರ್ಷದ ವೃದ್ಧನನ್ನು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸ್ವಂತ ಮಕ್ಕಳೇ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದ್ದು ಮಗನೊಬ್ಬ ತನ್ನ ಮಾನಸಿಕ ಅಸ್ವಸ್ಥಳಾದ ಹೆತ್ತ ತಾಯಿಯನ್ನೆ ಬೀದಿಗೆ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಹೌದು ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವೃದ್ಧೆಯನ್ನು…














