Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖರ ಕಾರಣ ತಿಳಿದುಕೊಳ್ಳಲು ಇತ್ತೀಚಿಗೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 10 ತಜ್ಞರ ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಇದೀಗ ವರದಿ ಸಲ್ಲಿಸಲಿದೆ. ಹೃದಯಾಘಾತದ ಸಾವು ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು,ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು ಕೋವಿಡ್ ಬಂದು ಹೋದವರಲ್ಲಿ ಕೊಂಚ ಹೃದಯ ಸಮಸ್ಯೆ ಇದೆ. ಜನರಲ್ಲಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ. ಕೋವಿಡ್ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಮಾಡಿದೆ. ವರದಿಯಲ್ಲಿ ಹಾರ್ಟ್ ಕಾರ್ಯಕ್ಷಮತೆ ಕಡಿಮೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ ಕೋವಿಡ್ ಬಂದು ಹೋದ ಮೂರು ವರ್ಷದ ಬಳಿಕ ಸಮಸ್ಯೆ ಆಗಿದೆ. ಕೋವಿಡ್ ಬಂದು ಹೋದವರಲ್ಲಿ ಹೃದಯ ಸಮಸ್ಯೆ ಕಾಣುತ್ತಿದೆ. ನಿದ್ರಾ ಹೀನತೆ, ಸುಸ್ತು, ಉಸಿರಾಟದ ಸಮಸ್ಯೆ ಹೆಚ್ಚಾದ ಬೊಜ್ಜು, ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆ ಉಲ್ಲೇಖನಾಗಿದೆ. ಇನ್ನು 15…
ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೇ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಅಲ್ಲದೇ ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಇನ್ನು ಹಾಸನದಲ್ಲಿ ಮತ್ತೋರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ರಾಜಮ್ಮ ಮೃತ ದುರ್ದೈವಿ. ಜೂನ್ 14ರಂದು…
ಚಿಕ್ಕಮಗಳೂರು : ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಬೆತ್ತಲೆಯಾಗಿ ಶರತ್ (33) ಇದೀಗ ಮೃತದೇಹ ಪತ್ತೆಯಾಗಿದೆ. ನೀಲಗಿರಿ ಪ್ಲಾಂಟೇಶನ್ ನಲ್ಲಿ ಫಾರೆಸ್ಟ್ ಗಾರ್ಡ್ ಶರತ್ ನನ್ನು ಇದೀಗ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫಾರೆಸ್ಟ್ ಗಾರ್ಡ್ ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೋ ನಿವಾಸಿಯಾಗಿದ್ದು ಶರತ್ ಗಾಗಿ 10 ದಿನಗಳಿಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಕುರಿತು ಪ್ರಕರಣ ಕೂಡ ದಾಖಲಾಗಿತ್ತು
ಮಂಡ್ಯ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಗಳು ದಿಂದದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲೂ ಕಳೆದ 43 ದಿನಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೂ 35 ಜನರು ಸಾವನ್ನಪ್ಪಿದ್ದರೆ. ಇದೀಗ ಮಂಡ್ಯದಲ್ಲಿ ಕೂಡ ಹೃದಯಾಘಾತಕ್ಕೆ ಮಹಿಳೆ ಬಲಿಯಾಗಿದ್ದಾರೆ. ಹೌದು ಪಾತ್ರೆ ತೊಳೆಯುತ್ತಿದ್ದಾಗಲೇ ಹೃದಯಘಾತದಿಂದ ಮಹಿಳೆಯ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಗ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಕುಸಿದು ಬಿದ್ದು ಶೀಲಾ (45) ಸಾವನಪ್ಪಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಈ ಒಂದು ಹೇಳಿಕೆಯಿಂದ ಎಂಎಲ್ಸಿ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪರ ವಕೀಲರಾದಂತಹ ವಕೀಲ ಸುಯೋಗ ಹೇರಳೆ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಅರ್ಜಿ ಸಲ್ಲಿಸಿದ್ದಾರೆ. ಜನರ ಪ್ರತಿಭಟನೆ ಮೂಲಕ ನಡೆಸಿ ಮನವಿ ಸಲ್ಲಿಕೆಗೆ ಮುಂದಾಗಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ವೇಳೆ ಲಭ್ಯ ಇರಲಿಲ್ಲ. ಸರ್ಕಾರಿ ಕೆಲಸದಲ್ಲಿ ಸದಾ ಬಿಸಿಯಾಗಿರುತ್ತಾರೆ. ಈ ಅರ್ಥದಲ್ಲಿ ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಆದರೂ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್ ನೀಡಿದೆ.ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಎಸ್ಪಿ ಕಚೇರಿಗೆ ಇಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಕೆ.ಎಸ್.ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆಂದು ಆರೋಪಿಸಿ ಶಿವಮೊಗ್ಗದ ವಕೀಲ ವಿನೋದ್ ಎಂಬವರು 2012ರಲ್ಲಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ಹೈಕೋರ್ಟ್, 2021ರಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು. ನಾಲ್ಕು ವರ್ಷಗಳ ಕಾಲ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸಿತ್ತು. 2025ರ ಏಪ್ರಿಲ್ 5 ರಂದು ಲೋಕಾಯುಕ್ತ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿತ್ತು. ಎಫ್ಐಆರ್ ದಾಖಲಿಸಿ 3 ತಿಂಗಳಲ್ಲಿ ವರದಿ…
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಗೆ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರಿಗೆ ನಾಲಿಗೆ ಉದ್ದವಾಗಿದೆ ಎಂದಷ್ಟೇ ಹೇಳಿದರು. ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎನ್ ರವಿ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಎನ್ ರವಿಕುಮಾರ್ ಗೆ ನಾಯಿಗೆ ಬಂದಿರೋ ಕಾಯಿಲೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಬೆಳಿಗ್ಗೆ ತ್ತಾನೆ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾಗಿದ್ದ ಇದೀಗ ಹಾಸನ ಜಿಲ್ಲೆಯಲ್ಲಿ ಮನೆಯಲ್ಲಿಯೇ ಕುಸಿದುಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ಹೃದಯಾಘಾತದಿಂದ ಸಾವನ್ನಪ್ಪಿರುವ ಒಟ್ಟು ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಹೌದು ಮನೆಯಲ್ಲಿಯೇ ಹೃದಯಾಘಾತವಾಗಿ ಮಹಿಳೆ ಸಾವನಪ್ಪಿದ್ದಾರೆ 55 ವರ್ಷದ ಬಿಎನ್ ವಿಮಲಾಗೆ ಹೃದಯ ಸ್ತಂಭನವಾಗಿದೆ. ಹಾಸನದ ದಾಸರ ಕೊಪ್ಪಲಿನಲ್ಲಿ ವಿಮಲಾ ದುರ್ಮರಣ ಹೊಂದಿದ್ದಾರೆ.ನಿನ್ನೆ ರಾತ್ರಿ ಮನೆಯಲ್ಲಿದ್ದಾಗಲೇ ಹೃದಯಘಾತವಾಗಿದೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಷ್ಟರಲ್ಲಾಗಲೇ ಬಿ ಎಂ ವಿಮಲಾ ಸಾವನ್ನಪ್ಪಿದ್ದಾರೆ. ಹಾಸನದ ದಾಸನ ಕೊಪ್ಪಲಿನಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ಬೆಂಗಳೂರಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದ್ದು ಹೃದಯಾಘಾತಕ್ಕೆ ರೈತ ಈಶ್ವರ (50) ಸಾವನ್ನಪ್ಪಿದ್ದಾರೆ. ಇವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾಗಿದ್ದು, ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರೈಲು ಇಳಿದು ಫ್ರೀಡಂ ಪಾರ್ಕ್ ಗೆ ತೆರಳುತ್ತಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿಯೇ ಈಶ್ವರ ಕುಸಿದು ಬಿದಿದ್ದಾರೆ. ಧರಣಿಯಲ್ಲಿ ಪಾಲ್ಗೊಳ್ಳುವ ತೆರಳುವಾಗ ರೈತ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಅಪೋಲೋ ಆಸ್ಪತ್ರೆಗೆ ಸಾಗಿಸುವಾಗಲೇ ಮಾರ್ಗ ಮಧ್ಯೆ ರೈತ ಸಾವನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಹೃದಯಘಾತದಿಂದ ಸಾವನ್ನಪ್ಪಿರುವ ಮಾಹಿತಿ ತಿಳಿದು ಬಂದಿದೆ.
ವಿಜಯನಗರ : ವಿಜಯನಗರದಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿಗೆ ಲಾರಿ ಒಂದು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಕೆಪಿಟಿಸಿಎಲ್ ಕಚೇರಿಯ ಮುಂದೆ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದಂತಹ ಲಾರಿ ಎಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.ಈ ಒಂದು ಅಪಘಾತದಲ್ಲಿ ಸ್ಥಳದಲ್ಲೇ ದಂಪತಿಗಳಿಬ್ಬರು ಸಾವನಪ್ಪಿದ್ದಾರೆ. ಚಾಲಕ ಮುತ್ತಪ್ಪ ಪೂಜಾರ್ (35) ಪತ್ನಿ ರೇಣುಕಾ (30) ಮೃತರು ಎಂದು ತಿಳಿದುಬಂದಿದೆ. ಇನ್ನು ಮಕ್ಕಳದಂತಹ ಅನುಶ್ರೀ (9) ರೂಪಶ್ರೀ (6) ಮತ್ತು ಖುಷಿ (4) ಗಂಭೀರವಾದ ಗಾಯಗಳಾಗಿವೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ಚಟ್ನಿಹಾಲು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೊಹರಂ ಹಬ್ಬದ ಪ್ರಯುಕ್ತ ಚಟ್ನಿಹಾಳು ಗ್ರಾಮಕ್ಕೆ ಹೊರಟಿದ್ದರು. ಅಪಘಾತ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಲಾರಿ ಸುಮಾರು ಅರ್ಧ…













