Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಟಿಪ್ಪರ್ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭಾವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವನಗರ ಫ್ಲೈ ಓವರ್ ಬಳಿ ಈ ಒಂದು ದುರಂತ ನಡೆದಿದೆ. ಮೃತ BBMP ಪೌರ ಕಾರ್ಮಿಕ ಮಹಿಳೆಯನ್ನು ಸರೋಜಾ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ವಿಚಾರವಾಗಿ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರಿಗೆ ರಾಜ್ಯಪಾಲರು ಬಿಜೆಪಿ ಶಾಸಕರ ಅಮಾನತು ವಾಪಸ್ ತೆಗೆದುಕೊಳ್ಳುವ ಸಂಬಂಧ ಪತ್ರ ಬರೆದಿದ್ದಾರೆ. ಹೌದು ಶಾಸಕರ ಅಮಾನತು ವಾಪಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಸ್ಪೀಕರ್ಗೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ ಸಲ್ಲಿಸಿತ್ತು. ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತ್ತು. ಈಗ ಬಿಜೆಪಿ ನಿಯೋಗದ ಮನವಿಯ ಬೆನ್ನೆಲೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಂಡು ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಯುಟಿ ಖಾದರ್ ಹಾಗೂ ಎಚ್ ಕೆ ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಆದರೆ ಇದು AI ತಂತ್ರಜ್ಞಾನ ಬಳಸಿ ರಚಿಸಲಾದ ವಿಡಿಯೋ ಎನ್ನಲಾಗಿದೆ. ಹೌದು ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ʼನಮ್ಮ ಮೋದಿʼ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ರಾಜ್ಯದ ಮುಖ್ಯಮಂತ್ರಿಯೋರ್ವರ ಕೈಗೆ ಪಾಕಿಸ್ತಾನದ ಧ್ವಜ ಕೊಟ್ಟಿರುವಂತೆ AI ವೀಡಿಯೊ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರು ಖಂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ವಿಭಾಗಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿಯರನ್ನು ಚುಡಾಯಿಸಿದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಬನಶಂಕರಿ ನಿವಾಸಿಗಳಾದ ಮುಬಾರಕ್ ಹಾಗು ಹಫೀಫ್ ಆರೋಪಿಗಳು ಎಂದು ತಿಳಿದುಬಂದಿದ್ದು, ಏಪ್ರಿಲ್ 23 ರಂದು ಬೆಂಗಳೂರಿನ ಸಾರಕ್ಕಿ ಮಾರುಕಟ್ಟೆಯ ಬಳಿ ಈ ಒಂದು ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದು ಆಟೋ ಅಡ್ಡಗಟ್ಟಿ ಇಬ್ಬರೂ ಕಿಡಿಗೇಡಿಗಳು ಯುವತಿಯರನ್ನು ಚುಡಾಯಿಸಿದ್ದರು.ಅಲ್ಲದೇ ಯುವತಿಯರ ತಾಯಿಗೂ ಕೂಡ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆ ಕುರಿತಂತೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ಈ ಸಂಬಂಧ ದೂರು ನೀಡಿದ್ದರು. ಯುವತಿಯರ ತಾಯಿಯ ದೂರು ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಡಿಕೇರಿ : ಮಡಿಕೇರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63) ಮೃತಪಟ್ಟವರು ಎಂದು ತಿಳಿದುಬಂದಿದೆ.ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ.ಇದನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಕೆಇಬಿ ಇಂಜಿನಿಯರ್ ಸಿಬ್ಬಂದಿಗಳು ಭೇಟಿ ಪರಿಹಾರದ ಭರವಸೆ ನೀಡಿದ್ದಾರೆ.
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಬಿಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್ಕೌಂಟರ್ಗೆ ಬಲಿಯಾಗಿರುವ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ಮೃತದೇಹದ ಅಂತ್ಯ ಸಂಸ್ಕಾರ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ. ಹೌದು ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು, ಮೃತದೇಹ ದಹನ ಮಾಡದಂತೆ ಹಾಗೂ ಶವವನ್ನು ಸಂರಕ್ಷಿಸಿ ಇಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಯುಸಿ ಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾ ಗೀಯ ಪೀಠ ಈ ಆದೇಶ ಮಾಡಿತು. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಹಾಗೂ ಎನ್ಕೌಂಟರ್ಬಗ್ಗೆಯೂ ತನಿಖೆ ಆಗಬೇಕು ಎಂಬ ಅರ್ಜಿ ದಾರರ ಮನವಿ ಸೇರಿ ಇಡೀ ಪ್ರಕರಣದ ಬಗ್ಗೆ ಸಮಗ್ರ ಆದೇಶ ಹೊರಡಿಸಲಾ ಗುವುದು ಎಂದು ಹೇಳಿ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿತು. ಪ್ರಕರಣ…
ಬೆಂಗಳೂರು : ತಡರಾತ್ರಿ ಬೆಂಗಳೂರಿನ ಏರ್ಪೋರ್ಟ್ ಫ್ಲೈ ಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ 4 ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು ನಿಂದ ಏರ್ಪೋರ್ಟಿಗೆ ತೆರಳುವ ಮಾರ್ಗದಲ್ಲಿ ಈ ಒಂದು ಸರಣಿ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಡಿಕ್ಕಿಯಾಗಿ ಈ ಅಪರಾಧ ಸಂಭವಿಸಿದೆ.ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಿಂದ ಒಂದು ಮನಕಲಕುವ ವಿಡಿಯೋ ಹೊರಬಿದ್ದಿದ್ದು, ಕೆಳಗೆ ನಡೆಯುತ್ತಿರುವ ಮಾರಕ ಭಯೋತ್ಪಾದಕ ದಾಳಿಯ ಅರಿವಿಲ್ಲದೆ ಪ್ರವಾಸಿಗರೊಬ್ಬರು ಸುಂದರವಾದ ಭೂದೃಶ್ಯದಾದ್ಯಂತ ಶಾಂತವಾಗಿ ಜಿಪ್ಲೈನ್ನಲ್ಲಿ ಚಲಿಸುತ್ತಿರುವುದನ್ನು ತೋರಿಸುತ್ತಿದೆ. ಇದೀಗ ಜಿಪ್ ಲೈನ್ ಆಪರೇಟರ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಉಗ್ರರ ದಾಳಿ ನಡೆಸುತ್ತಿರುವ ದೃಶ್ಯ ಪ್ರವಾಸಿಗನೊಬ್ಬ ಜಿಪ್ ಲೈನ್ ನಲ್ಲಿ ತೆರಳುವ ವೇಳೆ ಸೆಲ್ಫಿ ವಿಡಿಯೋದಲ್ಲಿ ಸೆರೆಯಾಗಿತ್ತು. ಉಗ್ರರ ದಾಳಿಯ ಮತ್ತೊಂದು ಭಯಾನಕ ವಿಡಿಯೋ ನಿನ್ನೆ ವೈರಲ್ ಆಗಿತ್ತು. ರಿಷಿ ಭಟ್ ಎನ್ನುವವರು ಜಿಪ್ ಲೈನ್ ಆಡುವ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಪ್ರವಾಸಿಗರು ಕೆಳಗೆ ಕುಸಿದು ಬೀಳುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿರುವ ಎನ್ಐಎ ಅಧಿಕಾರಿಗಳು ಜಿಪ್ ಲೈನ್ ಆಪರೇಟರ್ ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಉಗ್ರರು ಗುಂಡಿನ ದಾಳಿ ನಡೆಸುವ ವೇಳೆ ರಿಷಿ ಭಟ್ ಜಿಪ್ ಲೈನ್ ಏರಿದ್ದರು. ಈ…
ಮೈಸೂರು: ಅಮೆರಿಕದಲ್ಲಿ ಮೈಸೂರಿನ ಉದ್ಯಮಿಯೊಬ್ಬ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಶ್ವೇತಾ, ಹಿರಿಯ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಅನಾಹುತ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೇಳೆ ಏಳು ವರ್ಷದ ಕಿರಿಯ ಪುತ್ರ ಮನೆಯಿಂದ ಹೊರಹೋಗಿದ್ದರಿಂದ ಎಂಬುದು ತಿಳಿದುಬಂದಿದೆ. ಬದುಕುಳಿದಿದ್ದಾನೆ. ಕಿಂಗ್ ಕೌಂಟಿ ಶೆರಿಫ್ ಕಚೇರಿ (KCSO) ಪ್ರಕಾರ, ಈ ಘಟನೆ ವಾಷಿಂಗ್ಟನ್ನ ನ್ಯೂಕ್ಯಾಸಲ್ನಲ್ಲಿರುವ ಟೌನ್ಹೋಮ್ನಲ್ಲಿ ಸಂಭವಿಸಿದೆ. 911 ಕರೆಯ ನಂತರ 129 ನೇ ಬೀದಿಯ 7,000 ಬ್ಲಾಕ್ಗೆ ಡೆಪ್ಯೂಟಿಗಳನ್ನು ಕರೆಯಲಾಯಿತು. ಮೊದಲು ಪ್ರತಿಕ್ರಿಯಿಸಿದವರು ನಿವಾಸದೊಳಗೆ ಮೂವರು ಮೃತಪಟ್ಟಿರುವುದನ್ನು ಕಂಡುಕೊಂಡರು.…
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಅಧಿವೇಶನದಲ್ಲಿ ‘ಹನಿ ಟ್ರ್ಯಾಪ್’ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ನಡೆದಿದೆ ಎನ್ನಲಾಗಿದ್ದು, ಬಳಿಕ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ CID ಗೆ ವಹಿಸಿತ್ತು. ಇದೀಗ CID ವಿಚಾರಣೆ ವೇಳೆ ನನ್ನ ಕೈ ಹಿಡಿದು ಹನಿಟ್ರ್ಯಾಪ್ ಗೆ ಯತ್ನಿಸಿದ್ದ ಯುವತಿಗೆ ಕಪಾಳಿಗೆ ಬಾರಿಸಿ ಕಳಿಸಿದ್ದೆ ಎಂದು ಹೇಳಿಕೆ ನೀಡಿದ್ದಾರೆ. 3 ದಿನಗಳ ಹಿಂದೆ ಬೆಂಗಳೂರಿನ ಜಯಮಹಲ್ ರಸ್ತೆಯ ಸಚಿವರ ಸರ್ಕಾರಿ ನಿವಾಸದಲ್ಲಿ ರಾಜಣ್ಣರನ್ನು ವಿಚಾರಣೆಗೊಳಪಡಿಸಿ ಸಿಐಡಿ ಹೇಳಿಕೆ ದಾಖಲಿಸಿದೆ. ಆದರೆ ಹನಿಟ್ರ್ಯಾಪ್ ಯತ್ನ ಕೃತ್ಯದ ಬಗ್ಗೆ ಖಚಿತ ವಾದ ಮಾಹಿತಿ ನೀಡದೆ ಸಚಿವರು ಅಸ್ಪಷ್ಟ ಹಾಗೂ ಗೊಂದಲ ಮಯ ವಿವರ ನೀಡಿದ್ದಾರೆ ಎನ್ನಲಾಗಿದೆ. ಎರಡು ಬಾರಿ ತಮ್ಮನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿತ್ತು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೆ ಯುವತಿ ಜತೆ ಗಡ್ಡಧಾರಿ ಯುವಕನೊಬ್ಬ ಬಂದಿದ್ದ. ಆದರೆ ಅವರಾರೂ ನನಗೆ ಪರಿಚಿತರಲ್ಲ, ನನ್ನ ಗೃಹ ಕಚೇರಿಯಲ್ಲಿ ಏಕಾಏಕಿ ಕೈ ಹಿಡಿದು ಎಳೆದು…












