Author: kannadanewsnow05

ಬೆಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಸ್ಪಷ್ಟ ದೂರು ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್​​ಗೆ ರಿಲೀಫ್ ಸಿಕ್ಕಿದೆ. ಹೌದು ಈ ಕುರಿತು ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ವಿಚಾರಣೆ ಮಾಡಿದ್ದು, ಅಸ್ಪಷ್ಟ ದೂರು, ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಆ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ. ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ರೆಫ್ರಿಜರೇಟರ್ ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂರು ಯುವತಿಯರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರೆಫ್ರಿಜರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಮನೆ ಬೆಂಕಿಗೆ ಅಹುತಿಯಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಕಿಗೆ ಆಹುತಿಯಾದ ಮನೆಯಲ್ಲಿ ಮೂವರು ಯುವತಿಯರು ಇದ್ದರು. ಎರಡು ವರ್ಷದ ಹಿಂದೆ ಸೆಕೆಂಡ್ ಹ್ಯಾಂಡ್ ರೆಫ್ರಿಜಿರೇಟರ್ ಅನ್ನು ಖರೀದಿಸಿದ್ದರು.ರೆಫ್ರಿಜರೇಟರ್ ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಯತ್ನಿಸಿದರು ಕೂಡ ನಂದಿಸಲು ಸಾಧ್ಯವಾಗಿರಲಿಲ್ಲ. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಲಿಂಡರ್ ಗೆ ಬೆಂಕಿ ತಗುಲದಿದ್ದರಿಂದ ಭಾರಿ ಅನಾಹುತ ಒಂದು…

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಪಾಪಿಗಳು ಅತ್ಯಾಚಾರ ಎಸಿಗಿದ್ದ ಘಟನೆ ನಡೆದಿತ್ತು ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಗದಗದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಿ ಆರೋಪಿ ಸುಲೇಮಾನ್​ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ ಅಲ್ತಾಫ್ ಎನ್ನುವಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಸುಲೇಮಾನ್ ಎನ್ನುವವ ಬಾಲಕಿಯನ್ನು ಕರೆದು ಅತ್ಯಾಚಾರ ಎಸಿಗಿದ್ದಾನೆ ಈ ವೇಳೆ ಆತನ ಜೊತೆಗೆ ಇದ್ದ ಅಲ್ತಾಫ್ ಎಂಬ ಇನ್ನೊಬ್ಬ ಆರೋಪಿ ಅತ್ಯಾಚಾರ ಎಸಗುವ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ.ಇನ್ನು ಈ ಘಟನೆ ಬಾಲಕಿ ಪಾಲಕರಿಗೆ ತಡವಾಗಿ ಗೋತ್ತಾಗಿದ್ದು, ಈ ಸಂಬಂಧ ಇಂದು(ಫೆಬ್ರವರಿ 03) ನರೇಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು, ಅತ್ಯಾಚಾರಿ ಆರೋಪಿ ಸುಲೇಮಾನ್ ಹಾಗೂ…

Read More

ಬೆಂಗಳೂರು : ಬೆಂಗಳೂರಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಗಳೂರಿನ ಲಾಲ್ ಬಾಗ್ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ. ರಸ್ತೆಯ ಮೇಲೆ ಹೊತ್ತಿ ಉರಿದ ಕಾರು ಈ ವೇಳೆ ಕಾರಿನ ಪಕ್ಕದಲ್ಲಿದ್ದ ನಿಂತಿದ್ದ ಬೈಕ್ ಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದೆ. ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ತುಮಕೂರು : ರಾಜ್ಯದಲ್ಲಿ ನಿರಂತರವಾಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆಗಳು ನಡೆಯುತ್ತಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲಿ ಸುಗ್ರೀವಾಜ್ಞೆ ಜಾರಿಗೆ ತರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ ಸಹ ಆತ್ಮಹತ್ಯೆ ಪ್ರಕರಣಗಳು ನಿಲ್ಲುತ್ತಿಲ್ಲ ಇದೀಗ ಕೈ ಸಾಲದಿಂದ ಹೆದರಿ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಪಾಂಡುರಂಗಯ್ಯ (38) ಮೃತದೇಹ ಪತ್ತೆಯಾಗಿದೆ.ಶನಿವಾರ ಸಂಬಂಧಿಕರ ಮನೆಗೆ ಹೋಗುವುದಾಗಿ ಪಾಂಡುರಂಗಯ್ಯ ಹೆಂಡತಿಗೆ ಹೇಳಿ ಮನೆ ಬಿಟ್ಟಿದ್ದ. ಮೇಲ್ನೋಟಕ್ಕೆ ಕೈಸಲ ಹೆಚ್ಚಾಗಿ ಕೆರೆಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ ಸಂಭವಿಸಿದ್ದು, ಇದೀಗ ವಿಸಿ ನಾಲಿಗೆ ಬಿದ್ದಿದ್ದ ಇಂಡಿಕಾ ಕಾರಿನಲ್ಲಿ ಇನ್ನಿಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 15 ಅಡಿ ಆಳದಲ್ಲಿ ಸಿಲುಕಿದ್ದ ಕಾರಣ ಇದೀಗ ಕ್ರೇನ್ ಮೂಲಕ ಕಾರನ್ನು ಮೇಲೆ ಎತ್ತಲಾಗಿದೆ. ಹೌದು ವಿ.ಸಿ ನಾಲಿಯಲ್ಲಿ ಬಿದ್ದಿದ್ದ ಕಾರಿನಲ್ಲಿ ಇಬ್ಬರು ಶವಗಳು ಪತ್ತೆಯಾಗಿವೆ. ಕ್ರೇನ್ ಮೂಲಕ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರನ್ನು ಮೇಲೆ ಎತ್ತಿದ್ದಾರೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ಬಿಸಿ ನಾಲಿಗೆ ಕಾರು ಬಿದ್ದಿತ್ತು ವಿಸಿನಾಲಿಗೆ ಬಿದ್ದಿದ್ದ ಕಾರಿನಲ್ಲಿ ಸದ್ಯ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಘಟನೆಯಲ್ಲಿ ಕಾರಿನ ಮಾಲೀಕ ಫಯಾಜ್ (40) ಸಾವನ್ನಪ್ಪಿದ್ದಾರೆ. ನಯಾಜ್ ಎಂಬುವರನ್ನು ರಕ್ಷಿಸಲಾಗಿದ್ದು, ಅಸ್ಲಂಪಾಷಾ ಮತ್ತು ಪೀರ್ಖಾನ್ ಸೇರಿದಂತೆ ಇಬ್ಬರು ನಾಪತ್ತೆಯಾಗಿದ್ದರು. ವಿಗ ಇವರು ಇಬ್ಬರ ಮೃತ ದೇಹಗಳನ್ನು ಕಾರಿನಿಂದ ಹೊರ ತೆಗೆಯಲಾಗಿದೆ.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಮಧ್ಯೆ ಅವರ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು ಬೇನಾಮಿ ಆಸ್ತಿ ಖರೀದಿಸಿದ ಆರೋಪದಲ್ಲಿ ಸ್ನೇಹಮಯಿ ಕೃಷ್ಣ ಅವರು ಈಗ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಖರೀದಿಸಿದ ಆರೋಪದ ಅಡಿ ದೂರು ಸಲ್ಲಿಕೆ ಆಗಿದೆ. ಮೈಸೂರು ಲೋಕಾಯುಕ್ತ ಕಚೇರಿಗೆ ಸ್ನೇಹಮಯಿ ಕೃಷ್ಣ ಅವರಿಂದ ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಖರೀದಿಸಿರುವ ಆರೋಪ ಕೇಳಿ ಬಂದಿದೆ ಮೈಸೂರು ತಾಲೂಕಿನ ಆಲನಹಳ್ಳಿ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ವೆ ನಂಬರ್ 113/4 ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. 1983ರ ಡಿಸೆಂಬರ್ 15 ರಂದು ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದ ಹನುಮಗೌಡ, ಹನುಮಯ್ಯ, ಕರಿಯಪ್ಪ ಮತ್ತು ಕೇತಮ್ಮ ಅವರಿಂದ ಭೂಮಿ ಖರೀದಿಸಿಲಾಗಿತ್ತು. ಭೂಮಿ ಖರೀದಿಸಿದ್ದ…

Read More

ಚಾಮರಾಜನಗರ : ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ಆನಂದ್ ಹಾಗೂ ಶುಭಮಾನಸ ದಂಪತಿಯ ಮಗು ಪ್ರಖ್ಯಾತ ಎನ್ನುವ 6 ತಿಂಗಳ ಗಂಡು ಮಗು ಸಾವನಪ್ಪಿದ್ದಾನೆ. ಕಿವಿ ಚುಚ್ಚಿಸಲು PHC ಗೆ ಪೋಷಕರು ಮಗುವನ್ನು ಕರೆದುಕೊಂಡು ಹೋಗಿದ್ದರು. ಬೊಮ್ಮಲಾಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ಈ ವೇಳೆ ಮಗುವಿಗೆ ಅನಸ್ತೇಷಿಯ ನೀಡಿದ್ದರಿಂದ ಅನೆಸ್ತೇಶಿಯ ನೀಡಿದ ಬಳಿಕ ಪ್ರಖ್ಯಾತ್ ಪ್ರಜ್ಞೆ ತಪ್ಪಿದ್ದಾನೆ. ಮಗುವಿಗೆ ಅನಾಸ್ತೇಶಿಯ ಕೊಟ್ಟ ಬಳಿಕ ಪಿಟ್ಸ್ ಸಹ ಬಂದಿತ್ತು.ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಪ್ರಖ್ಯಾತ ಸಾವನಪ್ಪಿದ್ದಾನೆ. ಪಿಎಚ್‌ಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಧಿಕಾರಿ ಡಾ. ಆಲಂಪಾಷಾ ಹೇಳಿಕೆ ನೀಡಿದ್ದಾರೆ.

Read More

ಬೀದರ್ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಶೀಘ್ರ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ, ಇದರ ಮಧ್ಯ ಇದೀಗ ಬೀದರ್ ನಲ್ಲಿ ತಾಯಿ ಮಾಡಿ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ರಾಮಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಗಣೇಶ್ (25) ಎನ್ನುವ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಚಿಟಗುಪ್ಪ SBI ಬ್ಯಾಂಕ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದ ಗಣೇಶ್ ತಾಯಿ,  ಹೇಗೆ ತೀರಿಸುವುದು ಅಂತ ನಿತ್ಯವೂ ತಾಯಿ ಕೊರಗುತ್ತಿದ್ದರು. ತಾಯಿ ನೋವನ್ನು ನೋಡಲಾಗದೆ ಗಣೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಬಂಧ ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ತುಮಕೂರಲ್ಲಿ ಘೋರವಾದ ಘಟನೆ ನಡೆದಿದ್ದು, ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹಳಿಗೆ ರೈಲು ಸಿಲುಕಿ ಸಾವನ್ನಪ್ಪಿದ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಯುವಕ ಪುಷ್ಪುಲ್ ಟ್ರೈನ್‌ಗೆ ಬಂದಿದ್ದ. ಈ ವೇಳೆ ರೈಲು ನಿಲ್ಲುವ ಮೊದಲು ಇಳಿಯಲು ಹೋಗಿ ಬ್ಯಾಗ್ ರೈಲಿನ ಹ್ಯಾಂಡಲ್‌ಗೆ ಸಿಲುಕಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ರೈಲ್ವೆ ನಿಯಮದ ಪ್ರಕಾರ ಯಾರು ಮುಟ್ಟುವಂತಿಲ್ಲ ಹಾಗಾಗಿ ಸಾರ್ವಜನಿಕರು ಸಹ ಯಾರು ಯುವಕನಿಗೆ ಸಹಾಯ ಮಾಡಲಿಲ್ಲ.ಈ ವೇಳೆ ಯುವಕ ತಮ್ಮವರಿಗೆ ಕರೆ ಮಾಡಲು ಫೋನ್ ಹುಡುಕಾಡುತ್ತಿದ್ದ. ಆದರೆ 25 ನಿಮಿಷ ಕಳೆದರೂ ಗಾಯಾಳುವನ್ನು ಆಸ್ಪತ್ರೆ ಸಾಗಿಸದೆ, ಪೊಲೀಸರು ವಿಳಾಸ ಪತ್ತೆ ಮಾಡಲು ಕಾಲಹರಣ ಮಾಡಿದ್ದಾರೆ.ಕೊನೆಗೆ ಪೊಲೀಸರು ಸ್ಥಳಕ್ಕೆ ಬಾರದೆ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

Read More