Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಗೃಹ ಸಚಿವರಾದ ಡಾ.‌ ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಸಮಾವೇಶದಲ್ಲಿ, ಪೊಲೀಸ್ ಪ್ರಗತಿ ಪರಿಶೀಲನೆ‌ ವೇಳೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು. ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇದೇ ಕಾರಣದಿಂದ ಆ ಭಾಗದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದಾರೆ. ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು. ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ…

Read More

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ…

Read More

ಬೆಂಗಳೂರು : ಸಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು ಇದೀಗ ಅವರ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದ್ದು, ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಈ ಕ್ರಾಂತಿಯ ಕುರಿತು ಕೆ.ಎನ್ ರಾಜಣ್ಣ ಅವರಿಗೆ ಕೇಳಬೇಕು ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಏನು ಬದಲಾವಣೆ ಅಂತ ರಾಜಣ್ಣ ಅವರನ್ನೇ ಕೇಳಬೇಕು. ರಾಜ್ಯ ರಾಜಕಾರಣದಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ. ಸೆಪ್ಟೆಂಬರ್ ನಲ್ಲಿ ಕ್ರಾಂತಿಯ ಬಗ್ಗೆ ಸಚಿವ ರಾಜಣ್ಣ ಅವರಿಗೆ ಕೇಳಬೇಕು ಮುಖ್ಯಮಂತ್ರಿ ಬದಲಾವಣೆ ನಾವೇ ಮಾಡಬೇಕು ಅಲ್ವಾ? ನಾವು ವೋಟರ್ ಇದೆ ಸಿದ್ದರಾಮಯ್ಯಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ. ಸಿಎಂ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ…

Read More

ಬೆಂಗಳೂರು : ಸೆಪ್ಟಂಬರ್​ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ.‌ ಸೆಪ್ಟೆಂಬರ್​ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಯಾವ ಪವರ್ ಸೆಂಟರ್ ನೋ ಇಲ್ಲ ಯಾವುದೇ ಕ್ರಾಂತಿ ಸಹ ಆಗಲ್ಲ. ಸೆಪ್ಟೆಂಬರ್​ನಲ್ಲಿ ಕ್ರಾಂತಿ ನಡೆಯುವ ಬಗ್ಗೆ ಕೆ.ಎನ್.ರಾಜಣ್ಣಗೆ ಮಾಹಿತಿ ಇರಬೇಕು. ಇಲ್ಲದಿದ್ದರೆ ಹಾಗೆ ಹೇಳುತ್ತಿರಲಿಲ್ಲಎಂದು ಗೃಹ ಸಚಿವ ಜಿ. ಪರಮೇಶ್ವರ್​ ಪ್ರತಿಕ್ರಿಯಿಸಿದರು. ಸಿಎಂ ಗ್ರಿಪ್​ ಕಳೆದುಕೊಂಡಿದ್ದಾರೆಂಬ ಆರೋಪ ವಿಚಾರವಾಗಿ ಮಾತನಾಡಿ, ಸಿಎಂ ಯಾವುದೇ ಗ್ರಿಪ್ ಕಳೆದುಕೊಂಡಿಲ್ಲ. ಸಿಎಂ ಈಗ ಆಡಳಿತ ನಡೆಸ್ತಾ ಇಲ್ವಾ?. ಸಣ್ಣಪುಟ್ಟ ವಿಚಾರಗಳಿರುತ್ತವೆ, ಬಗೆಹರಿಸುತ್ತಾರೆ. ಬಿಜೆಪಿಯವರು ಹಿಂದೆಯೂ ಟೀಕೆ…

Read More

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬಳಿ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ. ಹುಲಿಮರಿಗಳು ಯಾವ ಕಾರಣಕ್ಕೆ ಸತ್ತಿರುವುದು ಇನ್ನೂ ಮಾಹಿತಿ ಇಲ್ಲ. ತನಿಖಾ ವರದಿಯ ಬಂದ ಮೇಲೆ ಆ ಕುರಿತು ಚರ್ಚೆ ಮಾಡೋಣ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಮುಂಬರುವ ಸೆಪ್ಟೆಂಬರ್ ನಲ್ಲಿ ಬದಲಾವಣೆಯ ಬಗ್ಗೆ ಸಚಿವ ರಾಜಣ್ಣ ಹೇಳಿಕೆಯ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರೋದು ಕ್ರಾಂತಿಯೋ ಅಥವಾ ಇನ್ಯಾವುದೋ ಗೊತ್ತಿಲ್ಲ. ಅದನ್ನು ಸಚಿವ ಕೆ.ಎನ್ ರಾಜಣ್ಣ ಅಥವಾ ಅವರ ಆಪ್ತ ಸಿಎಂ ಸಿದ್ದರಾಮಯ್ಯ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ನನಗೆ ಹೇಗೆ ಗೊತ್ತಾಗುತ್ತೆ? ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

Read More

ಬೆಂಗಳೂರು : KRS ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ವಿಚಾರವಾಗಿ ಕಾವೇರಿ ಆರತಿಗೆ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ಇದೀಗ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ ಡ್ಯಾಮ್ ಸುರಕ್ಷತಾ ಸಮಿತಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೌದು ಡ್ಯಾಮ್ ಬಳಿ 120 ಅಡಿಯಾ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಕಾಮಗಾರಿ ಯಂತ್ರಗಳನ್ನು ಉಪಯೋಗಿಸಿರುವ ಫೋಟೋಗಳನ್ನು ಹೈಕೋರ್ಟಿಗೆ ಸಲ್ಲಿಸಲಾಗಿದೆ. ಅರ್ಜಿದಾರರ ಪರ ವಕೀಲ ಎಂ ಶಿವಪ್ರಕಾಶ್ ಅವರು ಕೋರ್ಟಿಗೆ ಸಲ್ಲಿಸಿದ್ದಾರೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ ಮನೋರಂಜನ ಪಾರ್ಕ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರ ವಾದ ಮಂಡಿಸಿದೆ. ಕಾಮಗಾರಿಗೆ ಅಗೆಯುವುದರಿಂದ ಡ್ಯಾಮ್ ಗೆ ಹಾನಿ ಆಗುವುದಿಲ್ಲವೇ? ಡ್ಯಾಮ್ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ…

Read More

ಚಾಮರಾಜನಗರ : ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವನ್ನಪ್ಪಿವೆ ಎಂದು ಮಲೆ ಮಹದೇಶ್ವರ ವನ್ಯಧಾಮದಲ್ಲಿ ಸಿಸಿಎಫ್ ಹಿರಲಾಲ್ ಹೇಳಿಕೆ ನೀಡಿದ್ದಾರೆ. ಹೌದು ಹಸುವಿಗೆ ಯಾರು ವಿಷಪ್ರಾಶನ ಮಾಡಿದ್ದಾರೆ. ವಿಷ ಪ್ರಾಶನ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಯಾರೇ ಮಾಡಿದರು ಸ್ಥಳೀಯರು ಮಾಹಿತಿ ನೀಡಿ. ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಆಗುತ್ತದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಇರಲಾಲ್ ಹೇಳಿಕೆ ನೀಡಿದ್ದಾರೆ. ಹುಲಿಗಳ ಪೋಸ್ಟ್ ಮಾಟಂ ಎಲ್ಲ ಮಾಡಿದ್ದೇವೆ ಕೆಲವು ಸ್ಯಾಂಪಲ್ಸ್ ಗಳನ್ನು ಪ್ರೊಸೆಸ್ ಪ್ರಕಾರ ಸಂಗ್ರಹ ಮಾಡಲಾಗಿದೆ. ಉಳಿದ ವರದಿಯನ್ನು ಬಂದ ನಂತರ ತಿಳಿಸಲಾಗುತ್ತದೆ ಎಂದು ತಿಳಿಸಿದರು. ಐದು ಹುಲಿಗಳ ಮರಣೋತ್ತರ ಪರೀಕ್ಷೆ ಇದೀಗ ಮುಕ್ತಾಯ ಆಗಿದ್ದು ನಿನ್ನೆ ತಾಯಿ ಹುಲಿ ಮರಣೋತ್ತರ ಪರೀಕ್ಷೆ ಆಗಿತ್ತು ಇಂದು ನಾಲ್ಕು ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ಆಗಿದ್ದು ಹುಲಿಗಳ ದೇಹದ ಪ್ರಮುಖ ಅಂಗಾಂಗ ಸಂಗ್ರಹ ಮಾಡಿಕೊಂಡು ಮೂರು ರೀತಿಯಲ್ಲಿ…

Read More

ಬೆಂಗಳೂರು : ಅಗಸ್ಟ್ ಮತ್ತು ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ. ಇದೀಗ ತಣ್ಣಗೆ ಬದಲಾವಣೆ ಗಾಳಿ ಬೀಸಲಾರಂಭಿಸಿದ್ದು, ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ನಿನ್ನೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಡಿಸೆಂಬರ್ ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಚಿಂತನೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನವೆಂಬರ್ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಸರ್ಕಾರ ರಚನೆಯಾಗಿ 30 ತಿಂಗಳು ಭರ್ತಿಯಾಗಲಿದೆ. ಹಾಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಪೂರ್ಣಮಟ್ಟದ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ಪುನಾರಚನೆ ಸಿದ್ಧತೆಯನ್ನು ಹೈಕೋರ್ಟ್ ಈಗಾಗಲೇ ಆರಂಭಿಸಿದೆ.ಕಾಂಗ್ರೆಸ್ ಪಕ್ಷದ ಮುಂದಿನ ನಾಯಕತ್ವಕ್ಕಾಗಿ ಅಳೆದು ತೂಗಿ…

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಿಲ್ಲ ಏಕೆಂದರೆ ಕಳೆದ ಒಂದು ತಿಂಗಳಲ್ಲಿ ಇದುವರೆಗೂ ಹೃದಯಘಾತದಿಂದ 14 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಕಾರು ಚಾಲಕ ಮಂಜುನಾಥ್ (51) ಇದೀಗ ಸಾವನ್ನಪ್ಪಿದ್ದಾರೆ. ಹೌದು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿಯಾಗಿರುವ ಮಂಜುನಾಥ್ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಖಾಸಗಿ ವೈದ್ಯರ ಕಾರು ಚಾಲಕನಾಗಿದ್ದ ಮಂಜುನಾಥ್ ಬುಧವಾರ ತಡರಾತ್ರಿ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದರು. ಇಸಿಜಿ ಮಾಡಿ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾರೆ. ಆದರೆ ವೈದ್ಯರು ಬರುವಷ್ಟರಲ್ಲಿ ಮಂಜುನಾಥ್ ಸಾವನಪ್ಪಿದ್ದಾರೆ. ಮಂಜುನಾಥ್ ಮೂಲತಹಃ ಆಲೂರು ತಾಲೂಕಿನ ಬಾವಿ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದರು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೃದಯಘಾತಕ್ಕೆ 15 ಜನರು ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

Read More

ಶಿವಮೊಗ್ಗ : ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರ ಚಿಕಿತ್ಸೆಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಅಶ್ವಿನ್ ಅನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ನನ್ನು ಮಹಿಳಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಕೇಸ್ ನಲ್ಲಿ ಡಾ. ಅಶ್ವಿನ್ ಅರೆಸ್ಟ್ ಆಗಿದ್ದಾರೆ.ಲೈಂಗಿಕ ಕಿರುಕುಳ ಪ್ರಕರಣ ಸಿಮ್ಸ್ ಕಾಲೇಜಿನಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಜೂನ್ 20ರಂದು ಶಿವಮೊಗ್ಗದ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಕುರಿತಂತೆ ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಅಲ್ಲದೆ ಕಾಲೇಜು ವಿದ್ಯಾರ್ಥಿಗಳು ಎರಡು ದಿನ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದರು. ಸಂಘ ಸಂಸ್ಥೆಗಳು ಆರೋಪಿಯ ಬಂದನಕ್ಕೆ ಗಡುಗು ಸಹ ನೀಡಿದ್ದವು ಇದೀಗ ಬೆಂಗಳೂರಿನಲ್ಲಿ ಇಂದು ಡಾ. ಅಶ್ವಿನ್ ಅನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Read More