Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಕೇರಳದ ಕೊಳಚೆ ತ್ಯಾಜ್ಯವನ್ನು ಮಂಗಳೂರಿನಲ್ಲಿ ಡಂಪ್ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮಂಗಳೂರಿನ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿದ್ದು ಕೇರಳದ ಎರಡು ತ್ಯಾಜ್ಯ ಟ್ಯಾಂಕರ್ ಗಳಿಗೆ 10000 ದಂಡ ವಿಧಿಸಿದ್ದು ಅಲ್ಲದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಕೂಡ ದಾಖಲಿಸಿದ್ದಾರೆ. ಕೇರಳ ಭಾಗದಿಂದ ತಲಪಾಡಿ ಗೇಟ್ ಮೂಲಕ ತ್ಯಾಜ್ಯ ವಾಹನಗಳು ಆಗಮಿಸುತ್ತಿದ್ದು, ತಲಪಾಡಿ ಮತ್ತಿತರ ಗಡಿ ಭಾಗಗಳ ಮೂಲಕ ತ್ಯಾಜ್ಯಗಳನ್ನು ತುಂಬಿಕೊಂಡು ವಾಹನಗಳು ಎಂಟ್ರಿ ಪಡೆಯುತ್ತಿವೆ ಕೇರಳದ ತ್ಯಾಜ್ಯ ನಿರ್ವಹತು ತಂದಿದ್ದ ಸಿವಿಲ್ ಟ್ಯಾಂಕರ್ ಗಳು. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕೊಳಚೆ ತ್ಯಾಜ್ಯ ಸ್ಥಳಾಂತರ ನಡೆಯುತ್ತಿದೆ.ಕೊಳಚೆ ತ್ಯಾಜ್ಯ ತಂದು ಖಾಸಗಿ ಟ್ಯಾಂಕರ್ ಗಳು ಸುರಿಯುತ್ತಿವೆ. ಕೇರಳದಿಂದ ತ್ಯಾಜ್ಯ ತಂದು ಸುರಿಯುವ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಕೇರಳದ ಕೊಳಚೆ ತ್ಯಾಜ್ಯ ತಂದು ಮ್ಯಾನ್ ಹೋಲ್ ಮತ್ತು ನದಿಗಳು ಚರಂಡಿ ಕಾಲುವೆಗೆ ತ್ಯಾಜ್ಯದ ನೀರು ಸುರಿದು ಹೋಗುತ್ತಿದ್ದಾರೆ.…
ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಇದೀಗ ಈ ಒಂದು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತ ಆರೋಪಿಗಳನ್ನ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿತ್ತು. ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಇನ್ನು ಫೆಬ್ರವರಿ 19 ರಂದು ವಿಜಯಪುರ ಕೋರ್ಟ್ಗೆ ಹಾಜರಾಗಿ, ಪ್ರಮುಖ…
ಬೆಂಗಳೂರು : ರಾಜ್ಯದಲ್ಲಿ ಕಳೆದ ಬಿಜೆಪಿ ಅವಧಿಯಲ್ಲಿ 10 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿತ್ತು. ಇದೀಗ ಈ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ ಕುರಿತು ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯ ಆರ್ಥಿಕ ಸ್ಥಿತಿಗತಿಯ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿತ್ತು. ಬೀದರ್ ವಿಶ್ವವಿದ್ಯಾಲಯವನ್ನು ಹೊರತುಪಡಿಸಿ ಉಳಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಇದೀಗ ಸಂಪುಟ ಉಪಸಮಿತಿ ತೀರ್ಮಾನ ಕೈಗೊಂಡಿದೆ. ಹಾಸನ ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಹಾಗೂ ನೃಪತುಂಗ ವಿಶ್ವವಿದ್ಯಾಲಯ ಗೆ ಬೀಗ ಹಾಕುವ ಕುರಿತು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. 150 ಸಂಯೋಜಿತ ಕಾಲೇಜುಗಳನ್ನು ಬೀದರ್ ವಿಶ್ವವಿದ್ಯಾಲಯ ಹೊಂದಿದೆ. ಅಲ್ಲದೆ ಬೀದರ್ ವಿಶ್ವವಿದ್ಯಾಲಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಹೊರತುಪಡಿಸಿ ಬಹುತೇಕ ವಿಶ್ವವಿದ್ಯಾಲಯಗಳಿಗೆ ಬೀಗ ಜಡಿಯುವ ಸಾಧ್ಯತೆ ಇದೆ. ಕುಲಪತಿಗೆ ವಾಹನ ಕರುಣಿಸಲು ಹಣಕಾಸಿನ ಕೊರತೆ ಇದೆ.ಹೊಸ…
ರಾಮನಗರ : ರಾಮನಗರದಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆ ಬಾಲಕನ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತ ಬಾಲಕನನ್ನು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಚಿರಂತ್ ತಂದೆ ಸುರೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಸುರೇಶ್ ಅವರು ಮಗನನ್ನು ಅಜ್ಜಿ ಮನೆಗೆ ಬಿಡಲು ಬೈಕ್ನಲ್ಲಿ ಹೋಗ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಾಲಕ ಚಿರಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುರೇಶ್ಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸುರೇಶ್ ದಯಾನಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೊನೆಗೂ ಸಿದ್ಧಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ತನಿಖಾ ವರದಿಯಲ್ಲಿ 550 ಪುಟಗಳನ್ನು 5 ಭಾಗವಾಗಿ ವಿಂಗಡನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ದೇವರಾಜುಗೆ ಹೇಗೆ ಜಮೀನು ನೀಡಲಾಯಿತು. ಜಮೀನಿನ ಡಿನೋಟಿಫಿಕೇಶನ್ ಹೇಗೆ ಆಯಿತು, ಭೂ ಪರಿವರ್ತನೆ ಹೇಗೆ ಆಯಿತು ಎನ್ನುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಸಿಎಂ ಪತ್ನಿ ಪಾರ್ವತಿಗೆ ಜಮೀನು ನೀಡಿರುವ ಕುರಿತು ಸಿಎಂ ಹಾಗೂ ಕುಟುಂಬದ ಬಗ್ಗೆ ಇರುವ ದಾಖಲೆಗಳು ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಾಹಿತಿ ಸಂಗ್ರಹವಾಗಿದೆ. ವಿಚಾರಣೆ ಮಾಡಿ ಲೋಕಾಯುಕ್ತ ಪೊಲೀಸರು ಇದೀಗ ಮಾಹಿತಿಗಳನ್ನು ಕಲೆಹಾಕಿದ್ದಾರೆ. ಮುಡಾದ ಮಾಜಿ ಆಯುಕ್ತ, ಮಾಜಿ ತಹಸೀಲ್ದಾರ್ ಹಾಗೂ ಅಧಿಕಾರಿಗಳ ಹೇಳಿಕೆಗಳನ್ನು ಕೂಡ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ಹೇಳಿಕೆ ಸೇರಿ ಎಲ್ಲವನ್ನು ಒಳಗೊಂಡಿರುವ ವರದಿ ಸಿದ್ದಪಡಿಸಿಕೊಂಡಿದ್ದಾರೆ. ಮುಡಾದಲ್ಲಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಪರಿಹಾರವನ್ನು ನೀಡಿಲ್ಲ ಎನ್ನುವುದರ ಬಗ್ಗೆ ವರದಿಯಲ್ಲಿ…
ಉತ್ತರಪ್ರದೇಶ : ಎಲ್ಲರೂ ಮದುವೆ ಸಂಭ್ರಮದಲ್ಲಿ ಇರುವಾಗಲೇ ಮದುವೆ ಚೌಟ್ರಿಗೇ ಏಕಾಏಕಿ ಚಿರತೆಯೊಂದು ನುಗ್ಗಿದೆ. ಇದರಿಂದ ಸಹಜವಾಗಿ ಭೀತಿಗೆ ಒಳಗಾಗಿದ್ದ ಮದುವೆ ಬಂದಿದ್ದ ಜನ ಚಿರತೆಯನ್ನು ಕಂಡು ಹೌಹಾರಿದ್ದಾರೆ. ಈ ಒಂದು ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ. ಹೌದು ಮದುವೆ ಮನೆಗೆ ಏಕಾಏಕಿ ಚಿರತೆ ನುಗ್ಗಿದರೆ ಯಾರಿಗೆ ತಾನೇ ಭಯ ಆಗಲ್ಲ? ಮದುವೆ ಚೌಟ್ರಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜೀವ ಭಯದಿಂದ ಜನರು ಮದುವೆ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಜನರಿಗೆ ಚಿರತೆ ದಾಳಿ ಭೀತಿ ತಂದಿದೆ. ಕೂಡಲೇ ಅರಣ್ಯ ಇಲಾಖೆ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮಧುಮಗಳನ್ನು ಸಂಬಂಧಿಕರು ಸುರಕ್ಷಿತವಾಗಿ ಕರೆದುಕೊಂಡು ಹೋಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿದೆ. ದಾಳಿ ಸಂದರ್ಭದಲ್ಲಿ ಚಿರತೆ ಗನ್ ಕಸಿದುಕೊಂಡಿದೆ ಕೊನೆಗೂ ಅರಣ್ಯ ಇರಲ್ಲ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿದಿದ್ದಾರೆ.
ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಆಗಿದ್ದು, ಭೂ ಕುಸಿತದಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದೆ. ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಭೂ ಕುಸಿತದಿಂದ ಗುಡ್ಡ ಕುಸಿದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಗುಡ್ಡ ಕುಸಿತ ಪರಿಣಾಮ ತೋಟದಲ್ಲಿ ದೊಡ್ಡ ದೊಡ್ಡ ಪ್ರಮಾಣದ ಬಂಡೆಕಲ್ಲು ಮಣ್ಣು ಬಿದ್ದಿವೆ. ಕಳೆದ ಎರಡು ತಿಂಗಳ ಹಿಂದೆ ಇದೇ ಭಾಗದ ಸುತ್ತಲೂ ಭೂಮಿ ಕಂಪಿಸಿತ್ತು. ಘಟನಾ ಸ್ಥಳಕ್ಕೆ ತಜ್ಞರ ತಂಡ ಭೇಟಿ ನೀಡಿ ಭೂಕಂಪನ ಬಗ್ಗೆ ದೃಢೀಕರಿಸಿದ್ದರು. ಈ ಹಿಂದೆ ಯಲ್ಲಾಪುರ ಭಾಗದ ಕಳಚಿಯಲ್ಲಿ ಕೂಡ ಭೂಮಿ ಕುಸಿದಿತ್ತು. ಜಿಎಸ್ಐ ತಜ್ಞರ ವರದಿ ಪ್ರಕಾರ ಜಿಲ್ಲೆಯಲ್ಲಿ 439 ಭೂಕುಸಿತ ವಲಯಗಳಿವೆ ಎಂದು ತಿಳಿದುಬಂದಿದೆ. ಮಳೆ ನಿಂತರು ಕೂಡ ಭೂ ಕುಸಿತ ನಿಲ್ಲುತ್ತಿಲ್ಲ ಎಂದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.
ನವದೆಹಲಿ : RCB ತಂಡಕ್ಕೆ ಯಂಗ್ ಸ್ಟರ್ ರಜತ್ ಪಾಟೀದಾರ್ ಅವರನ್ನು ನೂತನ ನಾಯಕನಾಗಿ ಇದೀಗ ಫ್ರಾಂಚೈಸಿ ಆಯ್ಕೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ಆಯ್ಕೆ ಪ್ರಕ್ರಿಯೆಯಲ್ಲಿ ವಿರಾಟ್ ಕೊಹ್ಲಿ ಅವರ ಹೆಸರು ಕೂಡ ಮುಂಚೂಣಿಯಲ್ಲಿತ್ತು. ಇದೀಗ ರಜತ್ ಪಟ್ಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಡೂ ಪ್ಲೇಸಿಸ್ ರಿಂದ ತರವಾಗಿದ ಸ್ಥಾನಕ್ಕೆ ರಜತ್ ಪಾಟೀದಾರ್ ಅವರು ನೇಮಕವಾಗಿದ್ದಾರೆ.ಆರ್ ಸಿ ಬಿ ತಂಡದ ನೂತನ ಕ್ಯಾಪ್ಟನ್ ಆಗಿ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಆರ್ ಸಿ ಬಿ ತಂಡವನ್ನು ರಜತ ಪಾಟೀದಾರ್ ಮುನ್ನಡೆಸಲಿದ್ದಾರೆ. ನೂತನ ಕ್ಯಾಪ್ಟನ್ ಆಗಿ ರಜತ್ ಪಾಟೀಲ್ ನೇಮಕವಾಗಿದ್ದು ಅಭಿಮಾನಿಗಳಿಗೆ ಸಂತಸ ತಂದಿದೆ. ತಂಡದ ಭವಿಷ್ಯ, ಹಿತದೃಷ್ಟಿಯಿಂದಾಗಿ ರಜತ್ ಪಾಟೀದಾರ್ ಅವರಿಗೆ ನಾಯಕ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಬಹುನಿರೀಕ್ಷಿತ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೂ ಮುಂಚಿವಾಗಿ ಆರ್ಸಿಬಿ…
ಬೆಂಗಳೂರು : ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ರಣಧೀಪ್ ಸಿಂಗ್ ಸುರ್ಜೆವಾಲಾ ಬದಲಾವಣೆ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸುರ್ಜೆವಾಲ ಕೂಡ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮನವಿ ಮಾಡಿದ್ದರು. ಹರಿಯಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಸುರ್ಜೆವಾಲ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಜ್ಯದ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು ಸುರ್ಜೆವಾಲ ಸ್ಥಾನಕ್ಕೆ ಛತ್ತಿಸ್ಗಡ್ ಮಾಜಿ ಮುಖ್ಯಮಂತ್ರಿ ರೂಪೇಶ್ ಬಘೇಲ್ ನೇಮಕ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು : ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ.ದೇವರಾಜ ಅರಸು ಅವರು 7 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ 7 ವರ್ಷಗಳಲ್ಲ 10 ವರ್ಷ ಸಿಎಂ ಆಗಿರುತ್ತಾರೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ಬಾರಿಯೂ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಇನ್ನು ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ ಬಿ ಪಾಟೀಲ್ ಮೆಟ್ರೋ ಜೊತೆಗೆ ನಾವು ಕೂಡ ಸಹಭಾಗಿತ್ವ ಹೊಂದಿದ್ದೇವೆ. ಮೆಟ್ರೋ ಪ್ರಯಾಣದರ ಇಳಿಸಿದರೆ ಸಾಮಾನ್ಯ ಜನರಿಗೆ ಅನುಕೂಲ ಆಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಬಿಎಂಆರ್ಸಿಎಲ್ ಎಂಡಿ…














