Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 202-26ನೇ ಸಾಲಿನ ದಾಖಲೆಯ 16ನೇ ಬಜೆಟ್ ಮಂಡಿಸಿದರು. ಈ ಒಂದು ಬಜೆಟ್ ಮಂಡನೆ ವಿಷಯದ ಕುರಿತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಇನ್ನು ಮೂರು ವರ್ಷ ಸಿಎಂ ಆಗಿರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಯುತ್ತಾರೆ ಎಂದು ಹೇಳಿಲ್ಲ. ಕೆಲವರು ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಇನ್ನು ಮೂರು ವರ್ಷ ಇರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟಿ ರನ್ಯಾರಾವ್ ದುಬೈ ನಿಂದ ಬೆಂಗಳೂರಿಗೆ 14 ಕೆಜಿ ಚಿನ್ನ ಅಕ್ರಮವಾಗಿ ಸಾಗಿಸಿದ್ದರು. ಇದೀಗ ಮತ್ತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ 3 ಕೆಜಿ 995 ಗ್ರಾಂ ಚಿನ್ನ ಸಾಗಿಸಿದ್ದು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು 3 ಕೋಟಿ 44 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 995 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆm ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ದುಬೈ ನಿಂದ ಪ್ರಯಾಣಿಕನೊಬ್ಬ ಬೆಂಗಳೂರಿಗೆ ಆಗಮಿಸಿದ್ದ ಶರ್ಟ್ ನ ಒಳಭಾಗದಲ್ಲಿ ಚಿನ್ನ ಅಡವಿಟ್ಟುಕೊಂಡು ಪ್ರಯಾಣಿಕ ಬಂದಿದ್ದ. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : 2015ರಲ್ಲಿ ಮಾಜಿ ಸಚಿವ ಆನಂದ ಸಿಂಗ್ ವಿರುದ್ಧ ದಾಖಲಾಗಿದ್ದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧ, ಇದೀಗ ಮಾಜಿ ಸಚಿವ ಆನಂದ್ ಸಿಂಗ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಾಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಆನಂದ್ ಸಿಂಗ್ ಹಾಗು ಗೋವಾ ಸಚಿವ ರೋಹನ್ ಕೌಂಟೇಗು ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಅದಿರು ಸಾಗಣೆ ಪ್ರಕರಣದ ಆರೋಪಿಯಾಗಿದ್ದ ರೋಹನ್ ಕೌಂಟೆ ಅವರಿಗೂ ಕೂಡ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಹಿನ್ನೆಲೆ? 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್ಪುರದ ಬಳಿ SVK ಫ್ಲಾಟ್ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದಡಿ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಕ್ರಮ ಗಣಿಗಾರಿಕೆ…
ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇದೀಗ ರದ್ದುಗೊಳಿಸಿ ಚೆಲುವರಾಜು ಸಲ್ಲಿಸಿದ್ದ ಅರ್ಜಿ ರದ್ದುಪಡಿಸಲು ಹೈ ಕೋರ್ಟ್ ನಿರಾಕರಿಸಿದೆ. ಪ್ರಕರಣ ಹಿನ್ನೆಲೆ? ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕಳೆದ ಸೆಪ್ಟೆಂಬರ್ 24 2024 ರಂದು ಅರೆಸ್ಟ್ ಮಾಡಲಾಗಿತ್ತು. ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದರು. 2025-26ನೇ ಸಾಲಿನ ಬಜೆಟ್ ಮಂಡನೆ ಕುರಿತು ಇಂದು ಬೆಂಗಳೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.ಸಾಲ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕರು ಹೇಳಿಕೆಗೆ ಆರ್. ಅಶೋಕ್ ಹಣಕಾಸಿನ ಜವಾಬ್ದಾರಿ & ಬಜೆಟ್ ನಿರ್ವಹಣಾ ಕಾಯ್ದೆಯ ಬಗ್ಗೆ ಓದಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 4,09,549 ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗಿದೆ. 38,166 ಕೋಟಿ ರೂಪಾಯಿ ಹೆಚ್ಚಾಗಿದೆ. ಇದೊಂದು ಪೂರ್ಣಪ್ರಮಾಣದ ಬಜೆಟ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಬೆಳವಣಿಗೆ ಇದರ ಶೇಕಡ 10.3ರಷ್ಟು ಹೆಚ್ಚಾಗಿದೆ ಈ ಬಾರಿ 2,92, 476 ಕೋಟಿ ರಾಜಸ್ವ ಸಂಗ್ರಹವಾಗಿದೆ. ರಾಜಸ್ವ 3,11,738 ಕೋಟಿ ರೂಪಾಯಿ ಆಗಿದೆ. ಸಾಲ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕರು ಹೇಳುತ್ತಾರೆ. ಜೆಎಸ್ಡಿಪಿ ಶೇಕಡ 25ರೊಳಗೆ ಸಾಲದ ಪ್ರಮಾಣ ಇರಬೇಕು ಆರ್ಥಿಕವಾಗಿ ಶೇ. 25 ರಷ್ಟು…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಿತ್ತು. ಈ ಒಂದು ಸಮನ್ಸ್ ಅನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೌದು ಈ ಒಂದು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿತ್ತು. ಈ ಒಂದು ಸಮನ್ಸ್ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠವು ಇಡಿ ನೀಡಿದ ಸಮನ್ಸ್ ರದ್ದುಗೊಳಿಸಿ ಆದೇಶ ನೀಡಿದ್ದು, ಈ ಮೂಲಕ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ…
ಆಂಧ್ರಪ್ರದೇಶ : ತನ್ನ ಅನಾರೋಗ್ಯ ಕಾರಣ ಹಿನ್ನೆಲೆಯಲ್ಲಿ, ನೋವು ಸಹಿಸಲಾಗದೆ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಕೊನವಾನಿಪಲೆಂ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಟುನಿ ಚೈತನ್ಯ ಕಾಲೇಜಿನ ವಿದ್ಯಾರ್ಥಿನಿ ಜಯಪ್ರಿಯ (17) ಎಂದು ತಿಳಿದುಬಂದಿದೆ. ಬುಧವಾರ ಇಂಗ್ಲಿಷ್ ಪರೀಕ್ಷೆ ಬರೆದು ಮನೆಗೆ ಮರಳಿದಳು. ಅಂದಿನಿಂದ ಆಕೆ ಆಲಸ್ಯದಿಂದ ಮನೆಯಲ್ಲೇ ಇದ್ದಳು. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಆಕೆಯ ಪಾಲಕರು ಗುರುವಾರ ಮಧ್ಯಾಹ್ನ ಕಾರ್ಯಕ್ರಮವೊಂದಕ್ಕೆ ತೆರಳಿದರು. ಇತ್ತ ಯಾರೂ ಇಲ್ಲದಿರುವುದನ್ನು ನೋಡಿ ಜಯಪ್ರಿಯ ಡೆತ್ನೋಟ್ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾಳೆ. ಹುಡುಗಿಯ ಸಾವು ಕುಟುಂಬ ಸದಸ್ಯರನ್ನು ದುಃಖದ ಸಾಗರದಲ್ಲಿ ಮುಳುಗಿಸಿದೆ. ಹುಡುಗಿಯ ಸಾವಿನ ಸುದ್ದಿ ಕೇಳಿ ಗ್ರಾಮದ ಎಲ್ಲರೂ ದುಃಖ ವ್ಯಕ್ತಪಡಿಸಿದ್ದಾರೆ. ಅಧ್ಯಯನದ ಒತ್ತಡ ಮತ್ತು ಸಣ್ಣ ಅನಾರೋಗ್ಯವು ಹುಡುಗಿಯ ಜೀವವನ್ನು ಬಲಿ ತೆಗೆದುಕೊಂಡಿತು ಎಂದು ಪಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಡೆತ್ ನೋಟ್ ಅಲ್ಲಿ…
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು. ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು.ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ. ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು. ಬಜೆಟ್ನಲ್ಲಿ ಸಮಾಧಾನಕರ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ ಸಿದ್ದರಾಮಯ್ಯನನವರೇ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು. ನಾಳೆ ಗ್ರ್ಯಾಚುಯಿಟಿ ವಿತರಣೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ…
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ ವಿದೇಶಿ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪ್ರವಾಸಿತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ಹೋಗುವ ರಸ್ತೆ ಮಧ್ಯದಲ್ಲಿನ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಈ ಘಟನೆ ನಡೆದಿದೆ. ಗಿಟಾರ್ ಬಾರಿಸುತ್ತಾ ಕುಳಿತಿದ್ದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಹಲ್ಲೆಯಾಗಿದೆ. ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ದಾಳಿ ಮಾಡಿರುವ ಕೆಲ ಸ್ಥಳೀಯ ಯುವಕರು, ಗುಂಪಿನಲ್ಲಿದ್ದ ಪುರುಷರನ್ನು ಕಾಲುವೆಗೆ ದೂಡಿ, ಒಬ್ಬ ವಿದೇಶಿ ಮತ್ತು ಒಬ್ಬ ಸ್ಥಳೀಯ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕಾಲುವೆಗೆ ಬಿದ್ದಿದ್ದ ಒಬ್ಬ ಸ್ವದೇಶಿ ಯುವಕ ನಾಪತ್ತೆಯಾಗಿದ್ದು, ಇನ್ನುಳಿದವರಿಗೆ ಗಾಯಗಳಾಗಿವೆ. ಅಮೆರಿಕ ಮೂಲದ ಡೇನಿಯಲ್, ಇಸ್ರೇಲ್ನ ಸೀಮಾ, ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಹಾರ್ಟ್…












