Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ 5 ದಿನ ನಂದಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ವಾಹನ ದಟ್ಟಣೆಯನ್ನು ತಪ್ಪಿಸಲು ಹಾಗೂ ಸುಗಮ ಸಭೆಗೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 17 ರಿಂದ 19 ರವರೆಗೆ ಹೋಟೆಲ್ ಬುಕಿಂಗ್ಗಳನ್ನು ರದ್ದುಗೊಳಿಸಲಾಗಿದೆ. ಹೌದು 2025ನೇ ಸಾಲಿನ 13ನೇ ರಾಜ್ಯ ಸಚಿವ ಸಂಪುಟದ ಸಭೆ ಜೂನ್ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಭಾಗಿಯಾಗುತ್ತಾರೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆವರೆಗೂ ಸಾರ್ವಜನಿಕರು ನಂದಿ…
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ರನ್ಯಾರಾವ್ಗೆ ಮತ್ತೊಂದು ಶಾಕ್ ಎದುರಾಗಿದ್ದು ಈ ಒಂದು ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ ಆಗಿದ್ದಾರೆ. ಐಟಿ ಅಧಿಕಾರಿಗಳಿಗೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಲು ಅನುಮತಿ ನೀಡಿದೆ. ಹೌದು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರಮ್ಯ ರಾವ್ ಅರೆಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ವಿರುದ್ಧದ ಪ್ರಕರಣಕ್ಕೆ ಇದೀಗ ಐಟಿ ಇಲಾಖೆ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ತನಿಖೆಗೆ ಅನುಮತಿ ನೀಡಿದೆ. ಜೂನ್ 11ರಿಂದ 13 ರವರೆಗೆ ವಿಚಾರಣೆ ನಡೆಸಲು ಅನುಮತಿ ನೀಡಿದೆ ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್ ಅನುಮತಿಸಿದೆ.
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಈ ವರ್ಷವೇ ಕೆಲವು ಬದಲಾವಣೆ ಮಾಡುತ್ತೇವೆ. ಒಂದೂವರೆ ಎರಡು ತಿಂಗಳಲ್ಲಿ ಎಲ್ಲ ಗೊತ್ತಾಗಲಿದೆ. ಸರಕಾರಿ ಶಾಲೆಯಲ್ಲೇ 25 ಸಾವಿರ ಮಕ್ಕಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕೊಡುತ್ತಿದ್ದೇವೆ. ಆಸಕ್ತ ಎಲ್ಲ ವಿದ್ಯಾರ್ಥಿಗಳಿಗೂ ಸಿಇಟಿ ಮತ್ತು ನೀಟಿ ತರಬೇತಿ ಕೊಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಲೆ ಮಾಡಲಾಗಿದ್ದು, ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ. ಕಾಡುಗೋಡಿ ಠಾಣೆಯ ವ್ಯಾಪ್ತಿಯ ರೌಡಿಶೀಟರ್ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್, ಪುನೀತ್ ಅಲಿಯಾಸ್ ನೇಪಾಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇನ್ನು ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆತನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ವಿದ್ಯುತ್ ಕಂಬದ ಬಳಿ ಆಟ ಆಡುತ್ತಿರುವಾಗ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ 11 ವರ್ಷದ ಮಗು ಇದೀಗ ಬಲಿಯಾಗಿದೆ. ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ತನಿಷ್ಕ ಸಾವನಪ್ಪಿದ್ದಾಳೆ. ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಈ ಒಂದು ದುರಂತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಾರಾಯಣಘಟ್ಟ ಗ್ರಾಮದಲ್ಲಿ ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಇದೀಗ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಮಕ್ಕಳಿಲ್ಲದವರು ನಮಗೆ ಮಕ್ಕಳು ಇಲ್ಲ ಎಂದು ಕೊರಗುವವರನ್ನು ನೋಡಿದ್ದೇವೆ. ಆದರೆ ಮಕ್ಕಳು ಹುಟ್ಟಿದ ತಕ್ಷಣ ಮಕ್ಕಳೇ ಬೇಡ ಎಂದು ತಂದೆ ತಾಯಿಗಳು ಅದೆಷ್ಟೋ ಮಕ್ಕಳನ್ನು ಅನಾಥರನ್ನಾಗಿ ಮಾಡಿದ್ದಾರೆ. ಇದೀಗ ಕೋಲಾರದಲ್ಲಿ ಅಂತಹದ್ದೇ ಘಟನೆ ನಡೆದಿದ್ದು, ನವಜಾತಶವನ್ನು ಆಸ್ಪತ್ರೆಯಲ್ಲಿ ಪೋಷಕರು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಹೌದು ಪೋಷಕರು ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಪೋಷಕರು ನವಜಾತಶವನ್ನು ಬಿಟ್ಟು ಹೋಗಿದ್ದಾರೆ. ತಾಯಿ ಸತ್ತಿದ್ದಾಳೆ ತಂದೆ ಜೈಲಲಿದ್ದಾನೆ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದು, ಮೂರನೇ ವ್ಯಕ್ತಿ ಶಿಶುವನ್ನು ಆಸ್ಪತ್ರೆಗೆ ದಾಖಲು ಮಾಡಿ ಹೋಗಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ದೂರು ನೀಡಿದ್ದಾರೆ.
ಮೈಸೂರು : ಮೈಸೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಮೃತ ದೇಹ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಮನೆಯಲ್ಲಿ ಅಮ್ಮ ಮಗಳ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹದೇವಮ್ಮ (40) ಹಾಗೂ ಮಗಳು ಸುಪ್ರಿಯ (20) ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು, ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಕಳೆದ 22 ವರ್ಷಗಳ ಹಿಂದೆ ಜಯರಾಮ ಮತ್ತು ಮಹದೇವಮ್ಮ ವಿವಾಹವಾಗಿದ್ದರು. ಪದೇ ಪದೇ ಪತಿ ಜಯರಾಮು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ ಪತ್ನಿ ಮಹಾದೇವಮ್ಮ ಪತಿ ವಿರುದ್ಧ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಘಟನೆ ಕುರಿತಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…
ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನಪೋಡಿಯಲ್ಲಿ ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ವೇಳೆ ರವಿ ಎನ್ನುವವರ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಹುಲಿ ದಾಳಿಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿ ಆರ್ ಟಿ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ರಂಗಮ್ಮ (78) ಎನ್ನುವ ವೃದ್ಧೆಯೊಬ್ಬರು ಸಾವನಪ್ಪಿದ್ದಾರೆ. ಚಾಮರಾಜನಗರ ತಾಲೂಕಿನ ರಾಮಯ್ಯನಪೋಡಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನ ಪರಿಷತ್ ಆಯ್ಕೆ ಮಾಡುವಂತ ಸದಸ್ಯರುಗಳ ವಿಚಾರಕ್ಕೆ ಸಂಬಂಧಪಟ್ಟಂತೆ ದಿನೇಶ್ ಅಮೀನ್ ಮಟ್ಟು ವಿರುದ್ಧ ಇದೀಗ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ವಿಧಾನ ಪರಿಷತ್ತಿಗೆ ನೇಮಕ ಮಾಡಬಾರದು ಎಂದು ದೂರು ಸಲ್ಲಿಸಿದ್ದು ಈಗಾಗಲೇ ಪರಿಷತ್ತಿಗೆ ನಾಮನಿರ್ದೇಶನದ ಕುರಿತಂತೆ ದಲಿತ ಹಿಂದುಳಿದ ಅಲ್ಪಸಂಖ್ಯಾತರ ವೇದಿಕೆಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ ವೇದಿಕೆ ರಾಜ್ಯ ಅಧ್ಯಕ್ಷ ಜಿಎಂ ಗಾಡ್ಕರ್ ಅವರು ದೂರು ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ಇವರು ಅಕ್ರಮವಾಗಿ ಸೈಟ್ ಪಡೆದಿದ್ದಾರೆ. ಸೈಟ್ ಪಡೆಯಬೇಕಾದರೆ15 ವರ್ಷಾ ಅಲ್ಲಿ ನೆಲೆಸಿರಬೇಕು ಎಂದು ನಿಯಮವಿದೆ. ಆದರೆ ಅವರು ತುಮಕೂರಿನಲ್ಲಿ ಇದ್ದದ್ದು ಮೂರ್ನಾಲ್ಕು ವರ್ಷಗಳು ಮಾತ್ರ. ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಇದ್ದು 15 ವರ್ಷಗಳ ಕಾಲ ಇದ್ದೇನೆ ಎಂದು ಸುಳ್ಳು ಪ್ರಮಾಣ ಪತ್ರ ನೀಡಿ ಸೈಟ್ ಪಡೆದಿದ್ದಾರೆ. ಅಲ್ದೆ ಬೇನಾಮಿ ಕಂಪನಿ ಕುರಿತು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ರಮವಾಗಿ ದಿನೇಶ್ ಅಮೀನ್ ಮಟ್ಟು ಸೈಟ್ ಪಡೆದುಕೊಂಡಿದ್ದಾರೆ. ಬೇನಾಮಿಯಾಗಿ ಸರ್ಕಾರದಿಂದ ಹಣ ಪಡೆದುಕೊಂಡಿದ್ದಾರೆ ಎಂದು ಎರಡು ಪ್ರಮುಖವಾದ ಆರೋಪಗಳನ್ನು ಜಿಎಂ…
ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (muda) ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೇ ವಿಚಾರವಾಗಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಡಿ ಅವರು ಆಸ್ತಿ ಮುಟ್ಟುಗೊಲು ಹಾಕಿಕೊಳ್ಳಲಿ. ಆಸ್ತಿ ಮುಟ್ಟುಗೋಲು ಹಾಕಿಕೊಂಡರೆ ತೊಂದರೆ ಇಲ್ಲ. ಸೈಟ್ ಗಳನ್ನು ಬೇರೆಯವರಿಗೆ ಕೊಟ್ಟಿದ್ದರ ಕುರಿತು ಕ್ರಮ ಕೈಗೊಂಡಿದ್ದಾರೆ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಸಂಚಿತ ಮುಟ್ಟುಗೋಲು ಹಾಕಿಕೊಂಡಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರಿನ ಇಡಿ, 9/06/2025 ರಂದು ರೂ. 100 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.












