Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಆತನಿಗೆ ಅನ್ಯ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಇತ್ತು. ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದ. ಇದರಿಂದ ಮನನೊಂದ ಆಕೆ ಪತಿಯನ್ನು ಹತ್ಯೆಗೈದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಮಹಿಳೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಎಸ್.ಜಿ. ಪಾಳ್ಯದ ನಿವಾಸಿ ಭಾಸ್ಕರ್ (42) ಕೊಲೆಯಾದ ವ್ಯಕ್ತಿ. ಆರೋಪಿ ಪತ್ನಿ ಶ್ರುತಿ (32) ಬಂಧಿತೆ ಎಂದು ತಿಳಿದುಬಂದಿದೆ. ವರ್ಷದ ಹಿಂದೆ ಶ್ರುತಿಯನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜೂ. 27ರಂದು ರಾತ್ರಿ ಬಾಸ್ಕರ್ ಮದ್ಯ ಸೇವಿಸಿ ಮನೆಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿತ್ತು. ಕೋಪದಲ್ಲಿ ಶ್ರುತಿ ಮುದ್ದೆಕೋಲಿ ನಿಂದ ತಲೆಗೆ ಹೊಡೆದಿದ್ದು, ನಂತರ ಮಲಗಿದ್ದ ಭಾಸ್ಕರ್ ಬೆಳಗಾಗುವಷ್ಟರಲ್ಲಿ ಮೃತಪಟ್ಟಿದ್ದ. ಸುದ್ದಿ ತಿಳಿದು ಎಸ್.ಜಿ. ಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ರಾತ್ರಿ ಮನೆಗೆ ಬಂದು ಮಲಗಿದ ಪತಿ ಸಾವನ್ನಪ್ಪಿದ್ದಾರೆಂದು ಪೊಲೀಸರ ಮುಂದೆ ಶ್ರುತಿ ಹೇಳಿಕೆ ನೀಡಿದ್ದಳು. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ…
ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ತಮಿಳು ಖ್ಯಾತ ನಟ ಕಮಲ್ ಹಾಸನ ಈ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾ ಲಯ ನಿರ್ಬಂಧಾಜ್ಞೆ ಹೊರಡಿಸಿದೆ. ಹೌದು ನಟ ಕಮಲ್ ಹಾಸನ್ ಅವರಿಗೆ ನಿರ್ಬಂಧ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ದಾವೆಯ ವಿಚಾರಣೆ ನಡೆಸಿದ ನಗರದ 31ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾ ಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ನಿರ್ಬಂಧಿಸ ಲಾಗಿದೆ. ಕಮಲ್ ಹಾಸನ್ ಅಥವಾ ಅವ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಅನ್ವಯವಾಗುತ್ತದೆ ಎಂದಿದೆ. ಅಲ್ಲದೆ, ದಾವೆ ಸಂಬಂಧ ಕಮಲ್ ಹಾಸನ್ಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ…
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲು ರಸ್ತೆಯಲ್ಲಿ ಪತ್ತೆಯಾದ ಗೋವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ನಾಯಕ ಶರಣ್ ಪಂಪ್ವೆಲ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಹೌದು ಶರಣ್ ಪಂಪ್ವೆಲ್ ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕುಂಜಾಲಿನ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ಮೂಲಭೂತವಾದಿಗಳ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದರ ವಿಡಿ ಯೋ ವಾಟ್ಸಪ್ನಲ್ಲಿ ಹರಿದಾಡಿತ್ತು. ಇದು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಪ್ರಚೋದನಕಾರಿ ಹೇಳಿಕೆ, ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತಿದೆ. ಈ ಪ್ರಕರಣದ ಪೊಲೀಸ್ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಅದಕ್ಕೆ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ, ಗೊಂದಲ ಉಂಟು ಮಾಡುವ ಸಾಧ್ಯತೆ ಇದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಸೂರು : ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ ಎಂದು ಬುಧವಾರ ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಿನ್ನೆ ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಅವರು ಮಾತ ನಾಡಿದರು. ಈ ವೇಳೆ, ಮುಖ್ಯಮಂತ್ರಿ ರೇಸ್ ನಿಂದ ಹೊರಬಿದ್ದಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಪ್ರಯತ್ನ ವಿಫಲವಾಗಬಹುದು. ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕು ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಈಗ ಯಾವ ಚರ್ಚೆಯೂ ಬೇಡ ಎಂದು ಹೇಳಿದರು. ರಾಜಕೀಯದ ಬಗ್ಗೆ ಈಗ ಏನನ್ನೂ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ದಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದಷ್ಟೇ ಹೇಳಿದರು. ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ…
ಮಂಗಳೂರು : ಕಳೆದ 2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು, ನಿನ್ನೆ ಕತಾರ್ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ…
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು. ಹೌದು ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು. ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ…
ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖರ ಕಾರಣ ತಿಳಿದುಕೊಳ್ಳಲು ಇತ್ತೀಚಿಗೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 10 ತಜ್ಞರ ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಇದೀಗ ವರದಿ ಸಲ್ಲಿಸಲಿದೆ. ಹೃದಯಾಘಾತದ ಸಾವು ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು,ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು ಕೋವಿಡ್ ಬಂದು ಹೋದವರಲ್ಲಿ ಕೊಂಚ ಹೃದಯ ಸಮಸ್ಯೆ ಇದೆ. ಜನರಲ್ಲಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ. ಕೋವಿಡ್ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಮಾಡಿದೆ. ವರದಿಯಲ್ಲಿ ಹಾರ್ಟ್ ಕಾರ್ಯಕ್ಷಮತೆ ಕಡಿಮೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ ಕೋವಿಡ್ ಬಂದು ಹೋದ ಮೂರು ವರ್ಷದ ಬಳಿಕ ಸಮಸ್ಯೆ ಆಗಿದೆ. ಕೋವಿಡ್ ಬಂದು ಹೋದವರಲ್ಲಿ ಹೃದಯ ಸಮಸ್ಯೆ ಕಾಣುತ್ತಿದೆ. ನಿದ್ರಾ ಹೀನತೆ, ಸುಸ್ತು, ಉಸಿರಾಟದ ಸಮಸ್ಯೆ ಹೆಚ್ಚಾದ ಬೊಜ್ಜು, ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆ ಉಲ್ಲೇಖನಾಗಿದೆ. ಇನ್ನು 15…
ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೇ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಅಲ್ಲದೇ ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಇನ್ನು ಹಾಸನದಲ್ಲಿ ಮತ್ತೋರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ರಾಜಮ್ಮ ಮೃತ ದುರ್ದೈವಿ. ಜೂನ್ 14ರಂದು…
ಚಿಕ್ಕಮಗಳೂರು : ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಬೆತ್ತಲೆಯಾಗಿ ಶರತ್ (33) ಇದೀಗ ಮೃತದೇಹ ಪತ್ತೆಯಾಗಿದೆ. ನೀಲಗಿರಿ ಪ್ಲಾಂಟೇಶನ್ ನಲ್ಲಿ ಫಾರೆಸ್ಟ್ ಗಾರ್ಡ್ ಶರತ್ ನನ್ನು ಇದೀಗ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫಾರೆಸ್ಟ್ ಗಾರ್ಡ್ ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೋ ನಿವಾಸಿಯಾಗಿದ್ದು ಶರತ್ ಗಾಗಿ 10 ದಿನಗಳಿಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಕುರಿತು ಪ್ರಕರಣ ಕೂಡ ದಾಖಲಾಗಿತ್ತು













