Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ವಿವಿಧ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಹೌದು ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸುವ ಸಿಎಂ ಸಿದ್ದರಾಮಯ್ಯ ಕೆಲವು ದಿನಗಳಿಂದ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದರು. ಎಡಗಾಲಿನ ಮಂಡಿನ ನೋವಿನ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಂದು ವಿವಿಧ ಇಲಾಖೆಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಹಾಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಪಡಿಸಲಾಗುತ್ತೆ.
ಮಡಿಕೇರಿ : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೆ ಮಡಿಕೇರಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧ ಮಾಡಲಾಗಿದ್ದು, ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧಿಸಿ ಮಡಿಕೇರಿಯ ನಗರ ಸಭೆ ಈ ಒಂದು ಆದೇಶ ಹೊರಡಿಸಿದೆ. ಕಲ್ಯಾಣ ಮಂಟಪ ಸಭೆ ಸಮಾರಂಭಗಳಲ್ಲೂ ನೀರಿನ ಬಾಟಲ್ ನಿಷೇಧಿಸಿದೆ. ಜಿಲ್ಲೆಯಲ್ಲಿ ಪ್ರವಾಸಿಗರಿಂದ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಖರೀದಿಸಿರುವ ನೀರಿನ ಬಾಟಲ್ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಸರ್ಕಾರಿ ಆದೇಶದಲ್ಲೇನಿದೆ? ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ…
ರಾಯಚೂರು : ರಾಜ್ಯದಲ್ಲಿ ಕಾಮಾಂಧರ ಅಟ್ಟಹಾಸ ಮಿತಿಮೀರುತ್ತಿದ್ದು ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.ಇದೀಗ ರಾಯಚೂರಲ್ಲಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ. ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಕಾಮುಕ ಶಿವನಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್ ಬಸ್ನಲ್ಲಿ ತೆರಳುತ್ತಿದ್ದ ಬಾಲಕಿ. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೊರಗಡೆ ಕರೆದೊಯ್ದ ವೇಳೆ ಆರೋಪಿ ಶಿವನಗೌಡ ಅತ್ಯಾಚಾರ…
ಕೊಪ್ಪಳ : ಕೊಪ್ಪಳದ ಆನೆಗುಂದಿ ತೂಗು ಸೇತುವೆ ಕಾಮಗಾರಿ ನಷ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಷ್ಟ ಪರಿಹಾರದಲ್ಲಿ ಕಾನೂನು ಸಂಘರ್ಷ ಎದುರಾಗಿದ್ದು, 6 ಕೋಟಿಯ ಕಾಮಗಾರಿಗೆ 5219 ಕೋಟಿ ಪರಿಹಾರಕ್ಕೆ ಕೋರ್ಟ್ ಇದೀಗ ಆದೇಶ ನೀಡಿದೆ. ಸರ್ಕಾರಕ್ಕೆ ಹೊರ ರಾಜ್ಯದ ಗುತ್ತಿಗೆದಾರ ಇದೀಗ ಸೆಡ್ಡು ಹೊಡೆದಿದ್ದಾನೆ. ಹೀಗಾಗಿ ಸರ್ಕಾರದ ಲೆಕ್ಕಪತ್ರ ಸಮಿತಿಯು ಗುತ್ತಿಗೆದಾರಣ ಅರ್ಜಿಯಲ್ಲಿ ಪರಿಹಾರದ ಮತ್ತ ನೋಡಿ ಶಾಕ್ ಆಗಿದೆ. ಹೌದು ಸರ್ಕಾರದ ವಿರುದ್ಧವೇ ಗುತ್ತಿಗೆದಾರ ಕಾನೂನು ಸಮರ ಹೂಡಿದ್ದು, ಪ್ರಕರಣ ಸಂಬಂಧ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. 5219 ಕೋಟಿ ಪರಿಹಾರ ಕೊಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಕಂಟ್ರಾಕ್ಟರ್ ವರಸೆಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಇದೀಗ ಕಂಗಾಲಾಗಿದೆ. ಆನೆಗುಂದಿ ತುಂಗಭದ್ರಾ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಸೇತುವೆ ನಿರ್ಮಾಣ ಮಾಡಲಾಗಿದೆ. ನವೆಂಬರ್ 1993ರಲ್ಲಿ ಈ ಒಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿತ್ತು.…
ಕೊಪ್ಪಳ : ಏಪ್ರಿಲ್ 1ರಿಂದ ತುಂಗಭದ್ರಾ ಡ್ಯಾಮ್ ನಿಂದ ಬೆಳೆಗೆ ನೀರು ಹರಿಸುವುದಿಲ್ಲ ಎಂದು ತುಂಗಭದ್ರಾ ನೀರಾವರಿ ನಿಗಮದ ಮುನಿರಾಬಾದ್ ವಲಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಮ್ ನಿಂದ ನೀರು ಹರಿಸುವುದಿಲ್ಲ. ರೈತರು ಭತ್ತ ನಾಟಿ ಮಾಡಿದರೆ ನೀರು ಸಿಗಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೀರಾವರಿ ಸಲಹಾ ಸಮಿತಿ ಸಭೆಯ ಪ್ರಕಾರ ಎರಡನೇ ಬೆಳೆಗೆ ನೀರು ಬಿಡಲಾಗುತ್ತದೆ. ಮಾರ್ಚ್ 31ರವರೆಗೆ ಪ್ರತಿದಿನ ಕಾಲುವಿಗೆ ನೀರುಹರಿಸಲಾಗುತ್ತದೆ. ಏಪ್ರಿಲ್ 1ರ ನಂತರ ಬೆಳೆಗೆ ನೀರು ಹರಿಸಲ್ಲ ಆದರೆ ಕುಡಿಯುವುದಕ್ಕೆ ಮಾತ್ರ ನೀರು ಬಳಕೆ ಮಾಡಬಹುದಾಗಿದೆ. ಹಾಗಾಗಿ ಭತ್ತದ ನಾಟಿ ಮಾಡದಂತೆ ಅಧಿಕಾರಿಗಳು ರೈತರಿಗೆ ಸೂಚನೆ ನೀಡಿದ್ದಾರೆ.ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ನಾಟಿ ನಡೆಯುತ್ತಿದ್ದು, ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಭತ್ತದ ನಾಟಿ ಆರಂಭವಾಗಿದೆ. ಹಾಗಾಗಿ ಅಧಿಕಾರಿಗಳು ಭತ್ತ ನಾಟಿ ಮಾಡಬೇಡಿ ಎಂದು ರೈತರಿಗೆ ಸೂಚಿಸಿದ್ದಾರೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಪಾತ್ರ ಇದೆ ಎಂದು ಇತ್ತೀಚಿಗೆ ಇಡಿ ಅಧಿಕಾರಿಗಳು ದಾಖಲೆಗಳಲ್ಲಿ ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ಮೈಸೂರು ನಗರಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಕೊಂಡ ಜನರಿಗೆ ಇದೀಗ ED ಬಿಗ್ ಶಾಕ್ ನೀಡಿದೆ. ಹೌದು ಮೈಸೂರಿನ ಉಪನಂದಾನಾಧಿಕಾರಿಗಳಿಗೆ ಇಡಿ ಅಧಿಕಾರಿಗಳು ಪತ್ರ ಬರೆದಿದ್ದು, ಮುಡಾದ ಸುಮಾರು 160 ಸೈಟ್ಗಳನ್ನು ಸೀಜ್ ಮಾಡುವಂತೆ ಪತ್ರ ಬರೆದಿದ್ದಾರೆ. ಮುಡಾದಲ್ಲಿ ಸೈಟ್ ಕೊಂಡವರು ಈಗಾಗಲೇ ಮನೆ ನಿರ್ಮಿಸುತ್ತಿದ್ದು, ಮನೆ ನಿರ್ಮಾಣದ ಖುಷಿಯಲ್ಲಿದ್ದವರಿಗೆ ಈಗ ನೋಟಿಸ್ ಸಂಕಷ್ಟ ತಂದೊಡ್ಡಿದೆ. ಸೈಟ್ಗಳನ್ನು ವಾಪಸ್ ನೀಡಲಾರದೆ ಮನೆ ಕಟ್ಟಲಾಗದೆ ಕಂಗಾಲಾಗಿದ್ದಾರೆ. 50:50 ಅನುಪಾತದಲ್ಲಿ ಸೈಟ್ ಪಡೆದು ಬಳಿಕ ಹಲವರಿಂದ ಮಾರಾಟ ಮಾಡಲಾಗಿತ್ತು. ಸೈಟ್ ಖರೀದಿ ಮಾಡಿ ಮನೆ ಕಟ್ಟಿ ಇದೀಗ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಪ್ಪಳ : ಕಳೆದ 2 ದಿನಗಳ ಹಿಂದೆ ಶಿವರಾಜ್ ತಂಗಡಿಗಿ ಶಾಲೆಯೊಂದರಲ್ಲಿ ತಪ್ಪಾಗಿ ಕನ್ನಡ ಬರೆದಿದ್ದ ವಿಚಾರವಾಗಿ, ಕನ್ನಡ ಬರೆಯಲು ಬರಲ್ಲ ಎಂಬ ವೈರಲ್ ಆದ ವಿಡಿಯೋ ವಿಚಾರವಾಗಿ ಶಿವರಾಜ್ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ನಾನು ಬಿಎಸ್ಸಿ ಪದವೀಧರ ಕನ್ನಡ ಬರೆಯಲು ಬಾರದಷ್ಟು ದಡ್ಡ ನಾನಲ್ಲ. ಪೂರ್ತಿ ಬರುವವರಿಗೆ ಕಾಯುವ ತಾಳ್ಮೆ ಇಲ್ಲದವರಿಂದ ವಿಡಿಯೋ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೂಳೆಕಲ್ ಎಂಬ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬೇರೆ ಏನೋ ಬರೆಯಲು ಮುಂದಾಗಿದ್ದೆ. ಆದರೆ ಅಲ್ಲಿದ್ದವರು ಶುಭವಾಗಲಿ ಅಂತ ಬರೆಯಲು ಹೇಳಿದ್ದರು ಆಗ ಭ ಅಕ್ಷರದಲ್ಲಿ ಸ್ವಲ್ಪ ತಪ್ಪಾಗಿತ್ತು. ಆದರೆ ಅಕ್ಷರ ಬರೆಯಲಾರದ ಸ್ಥಿತಿಯಲ್ಲಿ ನಾನಿಲ್ಲ. ನನ್ನ ಬಗ್ಗೆ ಮಾತನಾಡುವವರು ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ.ಎಂದು ಎಚ್ಚರಿಸದರು. ಕಳೆದ 12 ವರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ. ಯಾವತ್ತಾದರೂ ತಪ್ಪಾಗಿ ಕನ್ನಡ ಮಾತನಾಡಿದ್ದೀನಾ? ಕಳೆದ ಎರಡು ವರ್ಷ ಇಲಾಖೆ ಹೇಗಿದೆ ಅಂತ ನೋಡಿ ನನ್ನ…
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಬಿಗಿಪಟ್ಟು ಹಿಡಿದಿದ್ದು, ಬಿ.ವೈ ವಿಜೇಂದ್ರ ವಿರುದ್ಧ ಯತ್ನಾಳ್ ಬಣದ ಸಮರ ಇದೀಗ ಮುಂದುವರೆದಿದೆ. ಹಾಗಾಗಿ ಫೆಬ್ರವರಿ 10ರಂದು ನವದೆಹಲಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೈಕಮಾಂಡ್ ಬಳಿ ಲಿಂಗಾಯತ ಅಸ್ತ್ರ ಹೂಡಿದ ಯತ್ನಾಳ್, ತಟಸ್ಥ ಬಣದಲ್ಲಿ ಗುರುತಿಸಿಕೊಂಡಿದ್ದ ಸಂಸದ ಬಸವರಾಜ್ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ. ಬಿವೈ ವಿಜಯೇಂದ್ರ ವಿರುದ್ಧ ಹೋರಾಟಕ್ಕೆ ಕೈಜೋಡಿಸುವಂತೆ ಯತ್ನಾಳ್ ಬಣ ಮನವಿ ಮಾಡಿಕೊಂಡಿದ್ದಾರೆ. ಹಾಗಾಗಿ ಫೆಬ್ರುವರಿ 10 ರಂದು ನವದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸರ್ಕಾರಿ ನಿವಾಸದ ಪೂಜೆ ನೆಪದಲ್ಲಿ ಸಭೆಗೆ ಪ್ಲಾನ್ ಮಾಡಿಕೊಂಡಿದ್ದು, ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಫೆಬ್ರವರಿ 10ರಂದು ಈ ಒಂದು ಸಭೆ ನಡೆಯಲಿದೆ. ಈ ಮೂಲಕ ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಬಣ ಸಿಡಿದೆದ್ದಿದೆ.
ದಕ್ಷಿಣಕನ್ನಡ : ಭೂತ ಪ್ರೇತದ ಬಗ್ಗೆ ನಾವೆಲ್ಲ ಕಥೆಗಳಲ್ಲಿ ಕೇಳಿರುತ್ತೇವೆ. ಸಿನೆಮಾಗಳಲ್ಲಿ ನೋಡಿರುತ್ತೇವೆ. ಆದರೆ ದಕ್ಷಿಣ ಕನ್ನಡದಲ್ಲಿ ಕುಟುಂಬವೊಂದಕ್ಕೆ ಕಳೆದ 3 ತಿಂಗಳಿನಿಂದ ಪ್ರೇತ ಭಾದೆ ಕಾಡುತ್ತಿದೆ ಅಂತೇ. ಅಲ್ಲದೇ ಮೊಬೈಲ್ ನಲ್ಲಿ ವಿಚಿತ್ರ ಮುಖದ ವ್ಯಕ್ತಿಯ ಫೋಟೋ ಕೂಡ ಸೆರೆಹಿಡಿದಿದ್ದಾರೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ವಿಚಿತ್ರವಾದಂತ ಮುಖ ಸೆರೆಯಾಗಿದೆ. ಮೊಬೈಲ್ ನಲ್ಲಿ ವಿಚಿತ್ರವಾದ ಮುಖ ಗೋಚರವಾಗಿದೆ. ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಕುಟುಂಬಕ್ಕೆ ವಿಚಿತ್ರವಾದಂತಹ ಅನುಭವವಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಕುಟುಂಬಕ್ಕೆ ಪ್ರೇತ ಭಾದೆ ಕಾಡುತ್ತಿದೆಯಂತೆ. ಉಮೇಶ್ ಶೆಟ್ಟಿ ಮನೆ ಒಳಗೆ ಬಟ್ಟೆಗೆ ಆಗಾಗ ಬೆಂಕಿ ಬೀಳುತ್ತದಂತೆ. ಮನೆಯಲ್ಲಿರುವ ಪಾತ್ರೆಗಳು ಸೇರಿದಂತೆ ಎಲ್ಲ ವಸ್ತುಗಳು ಏಕಾಏಕಿ ಬೀಳುತ್ತಾವೇಯಂತೆ. ರಾತ್ರಿ ಹೊತ್ತು ನಿದ್ದೆ ಇಲ್ಲದೆ ಇಡೀ ಕುಟುಂಬ ಕಾಲ ಕಳೆಯುತ್ತಿದೆ. ಉಮೇಶ್ ಶೆಟ್ಟಿ ಪುತ್ರಿ ಮೊಬೈಲ್ ನಲ್ಲಿ ಈ ಒಂದು ವಿಲಕ್ಷಣ ಫೋಟೋವನ್ನು ಸೆರೆಹಿಡಿದಿದ್ದಾಳೆ. ಮನೆ ಒಳಗೆ ಯಾರೋ ಅತ್ತಿಂದಿತ್ತ ಓಡಾಡುತ್ತಿರುವ…
ತಮಿಳುನಾಡು : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಮಿಳುನಾಡಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಟಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಹೌದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.












