Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿ ಬೋಸ್ ಎನ್ನುವವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ಅಧಿಕಾರಿ ತಮ್ಮ ಮೇಲಾದ ಹಲ್ಲೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಘಟನೆ ಕುರಿತಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಧಿಕಾರಿಯು ತಮ್ಮ ಪತ್ನಿಯೊಂದಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಗುಂಪೊಂದು ಹಲ್ಲೆ ಮಾಡಿದೆ ಎನ್ನಲಾಗಿದೆ. ಹಲ್ಲೆಗೊಳಾಗದ ಅಧಿಕಾರಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ತಮ್ಮ ಮೇಲೆ ಆದ ಹಲ್ಲೆ ಕುರಿತು ವಿವರಿಸಿ ಅಧಿಕಾರಿ ವಿಡಿಯೋ ಮಾಡಿದ್ದಾರೆ. ನಾವು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಡಿಆರ್‌ಡಿಒ ಕಾಲೋನಿಯಲ್ಲಿ ವಾಸವಾಗಿದ್ದು, ಕಾರಿನಲ್ಲಿ…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ವಿನಾಕಾರಣ ಹಾರ್ನ್ ಯಾಕೆ ಹೊಡಿತಿಯ ಎಂದು ಆಟೋ ಚಾಲಕನಿಗೆ ಕಾರು ಚಾಲಕ ಕೇಳಿದ್ದಕ್ಕೆ ಆಟೋ ಚಾಲಕ ಮಧ್ಯದ ಬೆರಳು ತೋರಿಸಿ ನಿಂದಿಸಿರುವ ಘಟನೆ ವರದಿಯಾಗಿದೆ. ಹೌದು ಹಾರ್ನ್ ಹೊಡೆದಿರುವ ಬಗ್ಗೆ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಅವಾಜ್ ಹಾಕಲಾಗಿದೆ. ಅಲ್ಲದೇ ಮಧ್ಯದ ಬೆರಳು ತೋರಿಸಿ ಆಟೋ ಚಾಲಕ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಎರಡು ದಿನಗಳ ಹಿಂದೆ ಜೆಪಿ ನಗರದ 8ನೇ ಹಂತದ ರಸ್ತೆಯಲ್ಲಿ ಘಟನೆ ನಡೆದಿದ್ದು, ಹಾರ್ನ್ ಮಾಡಿ ಆಟೋ ಚಾಲಕ ಕಿರಿಕಿರಿ ಉಂಟು ಮಾಡುತ್ತಿದ್ದ. ಯಾಕೆ ಸುಮ್ಮನೆ ಹಾರ್ನ್ ಮಾಡ್ತೀರಾ ಅಂತ ಕೇಳಿದ್ದಕ್ಕೆ ಆಟೋ ಚಾಲಕ ಕಿರಿಕ್ ಮಾಡಿದ್ದಾನೆ. ಅಲ್ಲದೆ ವಿಡಿಯೋ ಮಾಡಿದ್ದಕ್ಕೆ ಮಧ್ಯದ ಬೆರಳು ತೋರಿಸಿ ನಿಂದಿಸಿದ್ದಾನೆ. ಕೂಡಲೆ ಕಾರು ಚಾಲಕ ಹೊಯ್ಸಳ ಸಿಬ್ಬಂದಿಗಳಿಗೆ ಕರೆ ಮಾಡಿದ್ದಾನೆ. ಪೊಲೀಸರಿಗೆ ಹೆದರಿ ಆಟೋ ಸಮೇತ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಕೋಣನಕುಂಟೆ ಪೊಲೀಸ್…

Read More

ಬೆಳಗಾವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕಾಮುಕನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಅಪ್ರಾಪ್ತೆಯ ಮೇಲೆ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಮಹಾಂತೇಶ ಹಿಪ್ಪರಗಿಗೆ ಪೊಲೀಸರು ಕೈಗೆ ಕೋಳ ತೊಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಬಾಲಕಿ ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದಾಳೆ. ಬಳಿಕ ಐಗಳಿ ಪೊಲೀಸ್‌ರಿಗೆ ಅಪ್ರಾಪ್ತೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡ ಐಗಳಿ ಪೊಲೀಸರು,ಬಳಿಕ ಒದ್ದು ಜೈಲಿಗೆ ಅಟ್ಟಿದ್ದಾರೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ, ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್‍ಡಿ ಕುಮಾರಸ್ವಾಮಿ ಪರವಾಗಿ ವಕೀಲರು ಅರ್ಜಿ ಸಲ್ಲಿಸಿದ್ದರು. ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ಕಾರಣ ನೀಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಹೆಚ್‍ಡಿ ಕುಮಾರಸ್ವಾಮಿ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿದೆ. ಅಲ್ಲದೇ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ದಾಖಲೆ ಹಾಜರುಪಡಿಸಲು ಎಚ್ ಡಿ ಕುಮಾರಸ್ವಾಮಿ ಪರ ವಕೀಲರಿಗೆ ಸೂಚನೆ ನೀಡಿತು. ಪ್ರಕರಣ ಹಿನ್ನೆಲೆ? ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಮಹದೇವಸ್ವಾಮಿ…

Read More

ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದಿಂದ ಅದೆಷ್ಟೋ ಮಹಿಳೆಯರು ಈ ಹಣ ಸದುಪಯೋಗಪಡಿಸಿಕೊಂಡು ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಇದೀಗ ಹಾವೇರಿಯಲ್ಲಿ ಮಹಿಳೆಯರು ಅವರು ಗೃಹಲಕ್ಷ್ಮಿ ಯೋಜನೆ ಯಿಂದ ಬಂದಂತಹ ಹಣ ಕೂಡಿಟ್ಟು ಹಸು ಖರೀದಿಸಿದ್ದಾರೆ. ಹೌದು ಆಭರಣದ ಬದಲು ಗೃಹಿಣಿ ಹಸು ಖರೀದಿಸಿ ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕುಂದೂರು ಗ್ರಾಮದಲ್ಲಿ ವಿಶಾಲಾಕ್ಷಿ ಎನ್ನುವ ಮಹಿಳೆ ಇದೀಗ ಹಸು ಖರೀದಿಸಿದ್ದಾರೆ. ರಾಜ್ಯ ಸರ್ಕಾರ ನಮಗೆ ಊಟ ಕೊಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕುಟುಂಬ ನಿರ್ವಹಣೆ ಕೂಡ ಗೃಹಲಕ್ಷ್ಮಿ ಯೋಜನೆಯಿಂದ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹಲ್ಲೆಗೊಳಗಾದ ಅಧಿಕಾರಿ ತಮ್ಮ ಮೇಲಾದ ಹಲ್ಲೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಘಟನೆ ಕುರಿತಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಧಿಕಾರಿಯು ತಮ್ಮ ಪತ್ನಿಯೊಂದಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಗುಂಪೊಂದು ಹಲ್ಲೆ ಮಾಡಿದೆ ಎನ್ನಲಾಗಿದೆ. ಹಲ್ಲೆಗೊಳಾಗದ ಅಧಿಕಾರಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ತಮ್ಮ ಮೇಲೆ ಆದ ಹಲ್ಲೆ ಕುರಿತು ವಿವರಿಸಿ ಅಧಿಕಾರಿ ವಿಡಿಯೋ ಮಾಡಿದ್ದಾರೆ. ನಾವು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಡಿಆರ್‌ಡಿಒ ಕಾಲೋನಿಯಲ್ಲಿ ವಾಸವಾಗಿದ್ದು, ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೇವು. ಈ ವೇಳೆ ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬಂದ ಓರ್ವ ಬೈಕ್​…

Read More

ಬೆಂಗಳೂರು :ಆಸ್ತಿ ವಿಚಾರವಾಗಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಪತ್ನಿ ಪಲ್ಲವಿ ಅವರಿಂದ ಭೀಕರವಾಗಿ ಕೊಲೆಯಾಗಿದ್ದರು ಇದೀಗ ಇಂದು ಪಂಚಭೂತಗಳಲ್ಲಿ ಓಂ ಪ್ರಕಾಶ್ ಅವರು ಲೀನವಾದರು. ಹೌದು ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ದಲ್ಲಿ ಓಂ ಪ್ರಕಾಶ್ ಅಂತ್ಯಕ್ರಿಯೆ ನೆರವೇರಿತು. ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ಅವರಿಂದ ಓಂ ಪ್ರಕಾಶ್ ಅವರ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಪೊಲೀಸ್ ಗೌರವದೊಂದಿಗೆ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಕುಟುಂಬದವರು ಸ್ನೇಹಿತರು ಮತ್ತು ನಿವೃತ್ತ ಐಪಿಎಸ್ ಅಧಿಕಾರಿಗಳಾದ ಚಂದುಲಾಲ್, ಕಿಶೋರ ಚಂದ್ರ, ರಾಣಾ, ಗಾಂವ್ಕರ್, ಮುನಿಕೃಷ್ಣ, ಟಿ.ಜಯಪ್ರಕಾಶ್, ಎಂ ಎನ್ ರೆಡ್ಡಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತಿ ಇದ್ದರು. ಅಂತ್ಯಕ್ರಿಯೆಗೆ ಮುನ್ನ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಓಂ ಪ್ರಕಾಶ್ ಅವರಿಗೆ ಅಂತಿಮ…

Read More

ಬೆಂಗಳೂರು : ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ. ಓಂ ಪ್ರಕಾಶ್ ಪುತ್ರಿ ಕೃತಿಯ ಫಿಂಗರ್ ಪ್ರಿಂಟ್ ಪಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಗೂ ಆಕೆಯ ಫಿಂಗರ್ ಪ್ರಿಂಟ್ ಪಡೆಯಲು ಇದೀಗ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ. ಇದೀಗ ಬೆಂಗಳೂರಿನಲ್ಲಿ ನಿವೃತ್ತ ಡಿಜಿ ಮತ್ತು ಐಜಿಪಿ ಓಂ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭದ್ರಾ ಜಲಾಶಯದ ಹಿನ್ನೀರಿಗೆ ತೆರಳಿದ್ದ ಬಾಲಕ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಭದ್ರಾವತಿ ತಾಲೂಕಿನ ಬಿಆರ್‌ಪಿ ಜಲಾಶಯದಲ್ಲಿ ನಡೆದಿದೆ. ಆದರೆ ಬಾಲಕನನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದಾನೆ. ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ. ರಜೆ ಇದ್ದಿದ್ದರಿಂದ ಜಲಾಶಯವನ್ನು ವೀಕ್ಷಿಸಲು ಕುಟುಂಬದೊಂದಿಗೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.ಈ ವೇಳೆ ಬಾಲಕನವನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ಕೂಡ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಏಪ್ರಿಲ್ 16 ರಂದು ನಡೆದ ಸಿಇಟಿ ಪರೀಕ್ಷಾ ವೇಳೆ ಬೀದರ್ ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಬರೆಯುವ ವೇಳೆ ಪ್ರವೇಶ ದ್ವಾರದ ಬಳಿ ಅಭ್ಯರ್ಥಿಗಳಿಂದ ಜನಿವಾರ ತಿಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಇಟಿ ಬರೆಯುವ ವೇಳೆ ಅಭ್ಯರ್ಥಿಗಳ ಜನಿವಾರ ತೆಗೆಯದಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ವಿಚಾರವಾಗಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಯಾವ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More