Subscribe to Updates
Get the latest creative news from FooBar about art, design and business.
Author: kannadanewsnow05
ಇರಾನ್ : ದಕ್ಷಿಣ ಇರಾನ್ನ ಬಂದರ್ ಅಬ್ಬಾಸ್ನ ಶಾಹಿದ್ ರಾಜೀ ಬಂದರಿನಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದ್ದು, 4 ಜನ ಸಾವನ್ನಪ್ಪಿದ್ದು, 500 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಘಟನೆ ಬೆನ್ನಲ್ಲೇ ಇರಾನ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ. ಒಮಾನ್ ನಲ್ಲಿ ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಮೂರನೇ ಸುತ್ತಿನ ಪರಮಾಣು ಮಾತುಕತೆಗಳು ಪ್ರಾರಂಭವಾದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ.ಆದರೆ ಅಧಿಕಾರಿಗಳು ಇನ್ನೂ ನಿಖರವಾದ ಕಾರಣವನ್ನು ನಿರ್ಧರಿಸಿಲ್ಲ. ಆದಾಗ್ಯೂ, ನಗರದ ರಾಜೈ ಬಂದರಿನಲ್ಲಿ ಕಂಟೇನರ್ ಗಳಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೆರುಸಲೇಂ ಪೋಸ್ಟ್ ಪ್ರಕಾರ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ನೌಕಾ ನೆಲೆಯ ಬಳಿ ಸ್ಫೋಟ ಸಂಭವಿಸಿದೆ. ಆದರೆ, ಸ್ಫೋಟದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ನಿರಾಕರಿಸಿದೆ.ಸ್ಫೋಟದ ನಂತರ ಕಪ್ಪು ಹೊಗೆ ಆವರಿಸಿರುವುದನ್ನು ಸಾಮಾಜಿಕ ಮಾಧ್ಯಮ ವೀಡಿಯೊಗಳು ತೋರಿಸಿವೆ. ಇತರ ವೀಡಿಯೊಗಳಲ್ಲಿ ಕಟ್ಟಡಗಳು…
ಬೆಂಗಳೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳುವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ…
ಜಮ್ಮು ಕಾಶ್ಮೀರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಕಳೆದ ಎಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದರು. ಈ ಒಂದು ಘಟನೆ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಸಿಂಧು ನದಿ ಜಲ ಒಪ್ಪಂದ ರದ್ದುಗೊಳಿಸಿದ್ದು, ಈ ಒಂದು ಕ್ರಮವನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ವಿಚಾರವಾಗಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಸಹ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸಿಎಂ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದರು.
ನವದೆಹಲಿ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಬಾಕಿ ಪ್ರಕರಣಗಳನ್ನು ಘೋಷಿಸುವುದು ಕಡ್ಡಾಯ ಎಂಬ ಹಿಮಾಚಲಪ್ರದೇಶ ಹೈಕೋರ್ಟ್ನ ಆದೇಶವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಮಂಡಿ ಜಿಲ್ಲೆಯ ಪಂಗ್ನಾ ಗ್ರಾಮ ಪಂಚಾಯ್ತಿಯ ಪ್ರಧಾನ್ ಆಗಿದ್ದ ಬಸಂತ್ ಲಾಲ್ ಅರ್ಜಿಯನ್ನು ನ್ಯಾ.ಸೂರ್ಯ ಕಾಂತ್ ಮತ್ತು ನ್ಯಾ. ಕೋಟೀಶ್ವರ ಸಿಂಗ್ ಅವರಿದ್ದ ಪೀಠವು ವಜಾಗೊಳಿಸಿದೆ. ಈ ಮೂಲಕ ಪಂಚಾಯ್ತಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಘೋಷಿಸುವುದು ಕಡ್ಡಾಯ ಎಂಬ ಹಿಮಾಚಲಪ್ರದೇಶ ಹೈಕೋರ್ಟ್ನ ಆದೇಶವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ನ ಆದೇಶದ ವಿರುದ್ಧ ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಯಾವುದೇ ಪೂರಕ ಮಾಹಿತಿಯನ್ನು ನೀಡಲು ವಿಫಲರಾಗಿದ್ದಾರೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗವು ರಚಿಸಿರುವ ಮಾರ್ಗಸೂಚಿ ಸರಿಯಾಗಿದ್ದು, ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹೀಗಾಗಿ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳನ್ನು ಕಡ್ಡಾಯವಾಗಿ ಘೋಷಿಸಬೇಕು ಎಂದು ಸುಪ್ರೀಂ…
ಮೈಸೂರು : ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡಿರುವ ಎಲ್ಲಾ ಐದು ಗ್ಯಾರಂಟಿಗಳನ್ನು ಮುಂದುವರಿಸಲಾಗುತ್ತದೆ ಎಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಸುಳ್ಳು ಹೇಳುವುದನ್ನು ಬಿಡಬೇಕು. ನಾವು ಪಾಪರ್ ಆಗಿದ್ದರೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡುತ್ತಿರಲಿಲ್ಲ. ಒಂದೇ ಕ್ಷೇತ್ರದಲ್ಲಿ 480 ಕೋಟಿ ಅಭಿವೃದ್ಧಿ ಯೋಜನೆ ಮಾಡಲಾಗುತ್ತಿತ್ತಾ? ಎಂದು ಪ್ರಶ್ನಿಸಿದರು. ಇದನ್ನು ಜನ ಅರ್ಥಮಾಡಿಕೊಳ್ಳಬೇಕು. ನಾವು ನುಡಿದಂತೆ ನಡೆದವರು. ನಾವು ಅಭಿವೃದ್ಧಿಗೂ ಹಣ ಕೊಡುತ್ತೇವೆ ಅಲ್ಲದೇ ನಾವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಿಗೂ ಕೂಡ ಹಣ ಕೊಡುತ್ತೇವೆ. ರಾಜ್ಯದಲ್ಲಿ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಬೆಂಗಳೂರು : ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಐಶ್ವರ್ಯ ಗೌಡ, ಮಾಜಿ ಸಚಿವ ವಿನಯ್ ಕುಲಕರ್ಣಿ, ಹಾಗೂ ಶಿಲ್ಪಾಗೌಡ ನಿವಾಸ ಸೇರಿದಂತೆ 14 ಕಡೆ ಇತ್ತೀಚಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದ ಐಶ್ವರ್ಯ ಗೌಡ. PMLA ಕಾಯ್ದೆಯ ಅಡಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಹಣ ವರ್ಗಾವಣೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದ ಕಾರಣ ಬೆಂಗಳೂರಿನ ಇಡಿ, ಐಶ್ವರ್ಯ ಗೌಡ ಅವರನ್ನು 24.04.2025 ರಂದು ಪಿಎಂಎಲ್ಎ, 2002 ರ ಅಡಿಯಲ್ಲಿ ಬಂಧಿಸಿದೆ. ಬಂಧನದ ನಂತರ, ಅವರನ್ನು ಗೌರವಾನ್ವಿತ ವಿಶೇಷ ನ್ಯಾಯಾಲಯದ (ಪಿಎಂಎಲ್ಎ) ಮುಂದೆ ಹಾಜರುಪಡಿಸಲಾಯಿತು. ಮತ್ತು ಗೌರವಾನ್ವಿತ ನ್ಯಾಯಾಲಯವು ಆರೋಪಿಯ ಇಡಿ ಕಸ್ಟಡಿಗೆ ನೀಡಲು ಅದೇಶಿಸಿತು. ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ಐಶ್ವರ್ಯ ಗೌಡ ಮತ್ತು ಅವರ ಸಹಚರರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಇಡಿ 24.04.2025 ಮತ್ತು 25.04.2025 ರಂದು…
ಬೆಂಗಳೂರು : ನನಗೆ ಜೀವ ಬೆದರಿಕೆ ನನಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ್ಯ ಮಹೇಶ್ ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆ ಒದಗಿಸಿ ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕ ನಿರ್ದೇಶನ ನೀಡಿದೆ. ಕಳೆದ ವರ್ಷ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿದ ಗಳಿಗೆಯಿಂದ ನನಗೆ ಜೀವ ಬೆದರಿಕೆಯ ಆಡಿಯೊ-ವಿಡಿಯೊ ಕರೆಗಳು ಬರುತ್ತಿವೆ. ಇದರಿಂದ ನನ್ನ ಜೀವಕ್ಕೆ ಅಪಾಯವಿದ್ದು, 24×7 ಭದ್ರತೆ ಒದಗಿಸುವ ಗನ್ಮೆನ್ ಜೊತೆಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮಹೇಶ್ ಜೋಶಿ ಕೋರಿದ್ದಾರೆ. ಜೋಶಿ ಪರ ಪದಾಂಕಿತ ಹಿರಿಯ ವಕೀಲ ಎಸ್.ಬಸವರಾಜು ವಾದ ಮಂಡಿಸಿದ್ದರು. ಈ ವೇಳೆ ವಿಚಾರಣೆ ವೇಳೆ, ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ಒದಗಿಸಿ ಎಂದು ಪ್ರಾಸಿಕ್ಯೂಷನ್…
ಚಾಮರಾಜನಗರ : ಚಾಮರಾಜನಗರದಲ್ಲಿ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಕೋವಿಡ್ ಸಂದರ್ಭದಲ್ಲಿನ ಕೆಲವು ಸಂತ್ರಸ್ತರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ಇದೀಗ ವರದಿಯಾಗಿದೆ. ಕಳೆದ 2021ರ ಮೇ 2 ರಂದು ಚಾಮರಾಜನಗರದಲ್ಲಿ ಈ ಘಟನೆ ನಡೆದಿದ್ದು, ಕೋವಿಡ್ ವೇಳೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಸಾವನ್ನಪ್ಪಿದರು.ಇದೀಗ ದುರಂತದ ಮೃತರ ಸಂತ್ರಸ್ತ ಕುಟುಂಬಗಳು ರಾಜ್ಯದ ಕಾಂಗ್ರೆಸ್ ಸರಕಾರ ನೀಡಿದ್ದ ಸರಕಾರಿ ನೌಕರಿ ಮತ್ತು ಪರಿಹಾರದ ಭರವಸೆ ಈಡೇರದಿರುವುದರಿಂದ ಕುಟುಂಬಗಳು ಆಕ್ರೋಶ ವ್ಯಕ್ತಪಡಿಸಿವೆ. ಹೌದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತ್ರಸ್ತ ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಈ ಭರವಸೆ ಈಡೇರದೆ ಇರೋದ್ರಿಂದ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ರು. ಅಲ್ಲದೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಬಸವಣ್ಣನವರ ಪ್ರತಿಮೆ ಅಣಾವರಣಕ್ಕೆ…
ಉತ್ತರಕನ್ನಡ : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಇದೀಗ ಭಾರತೀಯ ಭದ್ರತಾ ಪಡೆ ಸೈನಿಕರು ಪ್ರತಿಕಾರ ತೀರಿಸಿಕೊಳ್ಳಲು ಉಗ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಹೊಡೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಇದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾನೆಲೆಯಲ್ಲಿ ಯುದ್ಧ ಹಡಗುಗಳು ಸಿದ್ಧವಾಗಿದ್ದು, ನೌಕಾದಳದ ಸಿಬ್ಬಂದಿಗಳ ರಜೆಯನ್ನು ಸಹ ಇದೀಗ ಮೋಟಕುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು ಕಾರವಾರ ಕದಂಬ ನೌಕಾನೆಲೆಯಲ್ಲಿ ನೌಕೆಗಳು ಯುದ್ಧಕ್ಕೆ ಸಿದ್ಧವಾಗಿವೆ. ಭಾರತದ ಗಡಿಗೆ ನಿಯೋಜಿಸಲು ಹಡಗುಗಳು ಮತ್ತು ಸಬ್ ಮೆರೀನುಗಳು ಸಿದ್ಧವಾಗಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕ ನೆಲೆಯಲ್ಲಿ ಐಎನ್ಎಸ್ ವಿಕ್ರಾಂತ್, ಐಎನ್ಎಸ್ ವಿಶಾಖಪಟ್ಟಣಂ, ಸಬ್ ಮೇರಿನಗಳಾದ ಕಾಂಡೇರಿ ಕರಂಜೆ ಸಿದ್ಧವಾಗಿದೆ. ಕೇವಲ ಕಮಾಂಡರ್ ಸೂಚನೆಗಾಗಿ ಯುದ್ಧ ನೌಕೆಗಳು ಇದೀಗ ಕಾಯುತ್ತಿವೆ. ಸೂಚನೆ ಬಂದ್ರೆ ಸಾಕು ಹಡಗುಗಳು ಗಡಿಯತ್ತ ತೆರಳಲಿವೆ. ಹಡಗನ್ನು ಸಿಬ್ಬಂದಿಗಳು ಯುದ್ಧಕ್ಕೆ ಸಿದ್ಧಪಡಿಸುತ್ತಿವೆ. ಮೇ ಮೊದಲ ವಾರ ಕೊಚ್ಚಿಯಿಂದ ಯುದ್ಧ ಹಡಗುಗಳು ಗಡಿಯತ್ತ ತೆರಳಲಿವೆ. ಕದಂಬ ನೌಕ ನೆಲೆಯಲ್ಲಿ ಐ ಎನ್ ಎಸ್…
ಬೆಂಗಳೂರು : ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಮೂಲಕ ಸೈಬರ್ ವಂಚಕರು ಅನೇಕರನ್ನು ಮೋಸದ ಚಾಲಕ್ಕೆ ಸಿಲುಕಿಸಿ ಲಕ್ಷಾಂತರ ಕೋಟ್ಯಾಂತರ ರೂಪಾಯಿ ಕೊಳೆ ಹೊಡೆದಿದ್ದಾರೆ ಇದೀಗ ಬೆಂಗಳೂರಿನಲ್ಲಿ ಸಹ ಓರ್ವ ಯುವತಿ ಅರೆಸ್ಟ್ ಆಗುವ ಮೂಲಕ 84 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾಳೆ. ಹೌದು ವಂಚನೆಗೆ ಒಳಗಾದ ಯುವತಿಯನ್ನು ಗರುಡುಚಾರಪಾಳ್ಯ ನಿವಾಸಿ ಕೊಂಡೂರು ಶ್ರೀಮತಿ ಎಂದು ತಿಳಿದುಬಂದಿದೆ. ವಂಚಕ ಆರ್ಬಿಐ ಅಧಿಕಾರಿ ಸೋಗಿನಲ್ಲಿ ಯುವತಿಗೆ ವಾಟ್ಸ್ಆಯಪ್ನಲ್ಲಿ ವಿಡಿಯೋ ಕರೆ ಮಾಡಿದ ಅಪರಿಚಿತ ವ್ಯಕ್ತಿ, ‘ನಿಮ್ಮ ಬ್ಯಾಂಕ್ ಖಾತೆ ಫ್ರೀಜ್ ಆಗಿದೆ’ ಎಂದು ಡಿಜಿಟಲ್ ಆರೆಸ್ಟ್ ಮಾಡಿ 84.56 ಲಕ್ಷ ರೂ. ಸುಲಿಗೆ ಮಾಡಿದ್ದಾನೆ. ಕಳೆದ ಡಿ.13ರಂದು ಶ್ರೀಮತಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ಆರ್ಬಿಐ ಅಧಿಕಾರಿ ಎಂದು ಪರಿಚಯ ಮಾಡಿಕೊಂಡು ‘ನಿಮ್ಮ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ನಿಮ್ಮ ಮೊಬೈಲ್ ನಂಬರ್ ಬಳಸಿಕೊಂಡು ಎಸ್ಬಿಐ ಕ್ರೆಡಿಟ್ ಕಾರ್ಡ್ನ್ನು ಉಪಯೋಗಿಸಿಕೊಂಡು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಆದರಿಂದ ಮುಂಬೈ ಪೊಲೀಸರೊಂದಿಗೆ ಮಾತನಾಡಿ ಎಂದು ನಂಬರ್ ಕೊಟ್ಟಿದ್ದ. ಆ…











