Author: kannadanewsnow05

ಬೆಂಗಳೂರು : ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ವರ್ಷ 2000 ಹೊಸ ಬಸ್ ಖರೀದಿ ಮಾಡಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಸಕ್ತ ವರ್ಷ 2,000 ಬಸ್‌ಗಳನ್ನು ಖರೀದಿಸಿ ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ತಲಾ 700 ಬಸ್‌ಗಳನ್ನು ನೀಡಲಾಗುವುದು. ಉಳಿದ ಬಸ್‌ಗಳು ಕೆಎಸ್‌ಆರ್‌ಟಿಸಿಗೆ ಸೇರಲಿವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1915331899838583248?t=iq-i7P8KiedsUggkkZ7rbw&s=19

Read More

ಬೆಂಗಳೂರು : ಇತ್ತೀಚಿಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಲವು ವಿಧೇಯಕ ಮಂಡನೆ ಮಾಡಿತ್ತು. ಬಳಿಕ ರಾಜ್ಯಪಾಲರು ಅನೇಕ ವಿಧೇಯಕಕ್ಕೆ ಅಂಕಿತ ಹಾಕದೆ ವಾಪಾಸ್ ಕಳಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದು ಇದೀಗ ರಾಜ್ಯಪಾಲರು ಈ ಒಂದು ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ನಿರ್ಮಾಣಕ್ಕಾಗಿ ಮಂಡಿಸಲಾಗಿರುವ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲ ಥಾವರ್​​​ ಚಂದ್​​​​​​ ಗೆಹ್ಲೋಟ್​ ಅವರು ಇಂದು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿತ್ತು. ಆ ವಿಧೇಯಕಕ್ಕೆ ಅಂಕಿತ ಹಾಕದೇ ಕಳೆದ ತಿಂಗಳು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಗ್ರೇಟರ್ ಬೆಂಗಳೂರು ವಿಧೇಯಕದಲ್ಲಿನ ಅಂಶಗಳು ಜಾರಿಯಾದರೆ, ಬೆಂಗಳೂರು ಒಡೆದುಹೋಗುತ್ತದೆ. ಪರಭಾಷಿಕರಿಗೆ ಹೆಚ್ಚಿನ ಆದ್ಯತೆ ಸಿಗುತ್ತದೆ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವ ವಿಪಕ್ಷದ ಸದಸ್ಯರು ಇದನ್ನು ವಿರೋಧಿಸುತ್ತಲೇ ಬಂದಿದ್ದಾರೆ.

Read More

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಮದ್ಯಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೇಮಹದೇಶ್ವರ ಬೆಟ್ಟದಲ್ಲಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… *ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. *ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. *ಹಿಂದಿನ‌ ಸಭೆಯ ನಿರ್ಣಯದಂತೆ…

Read More

ರಾಯಚೂರು : ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾ ಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಕ್ಕೆ ಮಠದಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೌದು ಇಂದು ಪರಿಹಾರ ಘೋಷಿಸಿ ಪಹಲ್ಗಾಮ್ ದಾಳಿಯ ಕುರಿತು ಮಾತನಾಡಿದ ಶ್ರೀಗಳು ನಮ್ಮ ಮಹಿಳೆಯರನ್ನ ರಕ್ಷಣೆ ಮಾಡಬೇಕು. ನಮ್ಮ ಧರ್ಮ, ದೇವಸ್ಥಾನ, ಮಠಮಾನ್ಯ ಶ್ರದ್ಧಾಕೇಂದ್ರಗಳನ್ನ ರಕ್ಷಣೆ ಮಾಡಬೇಕು. ನಿದ್ರಾವಸ್ಥೆಯಿಂದ ಎಚ್ಚೆತ್ತು ಮೇಲ್ಬರಬೇಕು. ಕಾಶ್ಮೀರದಲ್ಲಿ ನಡೆದ ಘಟನೆ ಎಲ್ಲಾದರೂ ನಡೆಯಬಹುದು. ಯಾರೂ ಎಚ್ಚರ ತಪ್ಪಿ ಇರಬಾರದು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು. ನಾವೆಲ್ಲಾ ಭಾರತೀಯರು ಶಾಂತಿ ಪ್ರಿಯರು. ನಮ್ಮ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಸಮುದಾಯದವರು ಒಂದೇ ತಾಯಿ ಮಕ್ಕಳು. ನಾವೆಲ್ಲರೂ ಒಂದೇ ನಮ್ಮಲ್ಲಿ ಬೇಧ ಭಾವನೆ ಇಲ್ಲ. ಆದರೆ ಬೇರೆ ದೇಶದವರು, ಉಗ್ರರು ಬಂದು ನಮ್ಮಲ್ಲಿ ಒಡೆದಾಳುವ ನೀತಿ…

Read More

ಬೆಂಗಳೂರು : ಕ್ರಿಮಿನಲ್‌ ಹಿನ್ನೆಲೆ ಉಳ್ಳವರು ಆಗಿದ್ದರೆ ಅಥವಾ ಕ್ರಿಮಿನಲ್ ಅಪರಾಧ ಆರೋಪವನ್ನು ಹೊತ್ತಿರುವವರು ಸರ್ಕಾರಿ ನೌಕರಿಗೆ ಅಡ್ಡಿಯಾದರೆ, ಸರ್ಕಾರಿ ಸೇವೆಯಿಂದ ತೆಗೆಯಲು ಅಡ್ಡಿ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ (ಎಸ್‌ಡಿಎ) ಸೇವೆ ಸಲ್ಲಿಸಿ, ಶಿಕ್ಷೆಗೊಳಗಾಗಿದ್ದ ನಂಜೇಗೌಡ ಎಂಬವರನ್ನು ಸೇವೆಯಿಂದ ವಜಾಗೊಳಿಸಿರುವ ಸರ್ಕಾರದ ಕ್ರಮವನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ್‌ ಅವರಿದ್ದ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಪ್ರಕರಣದ ಹಿನ್ನೆಲೆ? ಅರ್ಜಿದಾರ ನಂಜೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ಎಸ್‌ಡಿಎ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2001ರಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು. ಪ್ರಕರಣ ಸಂಬಂಧ 2011ರಲ್ಲಿ ಮಾಗಡಿಯ ವಿಚಾರಣಾ ನ್ಯಾಯಾಲಯ ಆರೋಪಿಗೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಈ ಆದೇಶದ ಅನ್ವಯ 2023ರ ನವೆಂಬರ್‌…

Read More

ನವದೆಹಲಿ : ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಭಾರತ ತಕ್ಕ ಉತ್ತರ ನೀಡಲು ಸಜ್ಜಾಗಿದ್ದು, ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಈಗಾಗಲೇ ಕೇಂದ್ರ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದರ ಬೆನ್ನಲ್ಲೆ, ಇದೀಗ ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಇದೀಗ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಚರ್ಚೆಯಾಗಲಿದೆ.

Read More

ನವದೆಹಲಿ : ಆಕಸ್ಮಿಕವಾಗಿ ಅಂತರಾಷ್ಟ್ರೀಯ ಗಡಿ ದಾಟಿದ ಬಿಎಸ್ಎಫ್ ಯೋಧನನ್ನು ಇದೀಗ ಪಾಕಿಸ್ತಾನ ರೇಂಜರ್ ಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಗೊತ್ತಿಲ್ಲದೆ ಬಿಎಸ್ಎಫ್ ಯೋಧನೊಬ್ಬ ಗಡಿ ದಾಟಿದ್ದಾನೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ದಾಟಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾನ್‌ಸ್ಟೆಬಲ್ ಒಬ್ಬರನ್ನು ಪಾಕಿಸ್ತಾನಿ ರೇಂಜರ್‌ಗಳು ಬುಧವಾರ ಬಂಧಿಸಿದ್ದಾರೆ. ಶೂನ್ಯ ರೇಖೆಯ ಬಳಿಯ ಜನನಿಬಿಡ ಪ್ರದೇಶದಲ್ಲಿ ಬೆಳೆ ಕೊಯ್ದು ಮಾಡುತ್ತಿದ್ದ ಭಾರತೀಯ ರೈತರನ್ನು ಮೇಲ್ವಿಚಾರಣೆ ಮಾಡುವ ನಿಯಮಿತ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಬಿಎಸ್‌ಎಫ್‌ನ 182 ನೇ ಬೆಟಾಲಿಯನ್‌ಗೆ ಸೇರಿದ ಕಾನ್‌ಸ್ಟೆಬಲ್ ಪಿಕೆ ಸಿಂಗ್ ಆ ಸಮಯದಲ್ಲಿ ತಮ್ಮ ಸಮವಸ್ತ್ರದಲ್ಲಿ ತಮ್ಮ ಸರ್ವಿಸ್ ರೈಫಲ್ ಅನ್ನು ಹಿಡಿದಿದ್ದರು. ಗಡಿ ಬೇಲಿ ಮತ್ತು ಶೂನ್ಯ ರೇಖೆಯ ನಡುವೆ ಇರುವ ಹೊಲಗಳಿಗೆ ಪ್ರವೇಶ ದ್ವಾರವಾದ ಗೇಟ್ ಸಂಖ್ಯೆ 208/1 ಬಳಿ ಅವರು ರೈತರೊಂದಿಗೆ ಹೋಗುತ್ತಿದ್ದರು. ತೀವ್ರ ಶಾಖದಿಂದಾಗಿ, ಅವರು ಗಡಿಯನ್ನು ದಾಟಿ ಮರದ…

Read More

ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಬಳಿಕ ಬೆಂಗಳೂರು ಮೂಲದ ಭರತ್ ಭೂಷಣ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಿತು. ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಭರತ್ ಭೂಷಣ ಅವರ ಅಂತ್ಯಕ್ರಿಯೆ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ರಾಮಲಿಂಗರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದಂತ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಜನರು ಉಗ್ರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Read More

ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದರು. ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಅಂತ್ಯಕ್ರಿಯೆ ನೆರವೇರಿತು. ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯ ವಿಧಿ ವಿಧಾನ ನಡೆದು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಬಳಿಕ ಪುತ್ರ ಅಭಿಜನ್ ತಂದೆಯ ಮೃತ ದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದ. ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ಶಾಸಕರು ಮುಖಂಡರು ಗಣ್ಯ ವ್ಯಕ್ತಿಗಳು ಹಾಗೂ ಮೃತ ಮಂಜುನಾಥ್ ಕುಟುಂಬಸ್ಥರು ಸಂಬಂಧಿಕರು ಸ್ನೇಹಿತರು ಎಲ್ಲರೂ ಉಪಸ್ಥಿತರಿದ್ದರು. ಅಂತಿಮ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿತ್ತು. ತೆರೆದ ವಾಹನದಲ್ಲಿ ಮಂಜುನಾಥ್ ಮೃತದೆಹದ ಮೆರವಣಿಗೆ ನಡೆಯಿತು. ಮಂಜುನಾಥ್…

Read More

ಶಿವಮೊಗ್ಗ : ನಾನು ದೂರದಲ್ಲಿ ಕೂತಿದ್ದೆ. ಅಪ್ಪ ಅಮ್ಮ ನಂಗೆ ಏನೋ ತರೋಕೆ ಹೋದ್ರು. ನನ್ನನ್ನು ಅಲ್ಲೇ ಕೂರೋಕೆ ಹೇಳಿ ಹೋದ್ರು. ಮತ್ತೇ ಅಪ್ಪ ಅಮ್ಮನ ಜೊತೆ ನನ್ನ ಕರ್ಕೊಂಡು ಬರೋಕೆ ಹೇಳಿದ್ರು. ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು. ಇದು ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಗ್ರ ಭೀಕರ ಗುಂಡಿನ ದಾಳಿಯಲ್ಲಿ ಬಲಿಯಾದ ಶಿವಮೊಗ್ಗದ ಮಂಜುನಾಥ್ ಅವರ ಪುತ್ರ ಅಭಿಜನ್ ಹೇಳಿದ ಮಾತುಗಳು.ನಮ್ಮ ಅಪ್ಪಾ ಅಲ್ಲಿ ಸತ್ರು ಅಂತಾ ಗೊತ್ತಾಗಿತ್ತು. ನಮ್ಮನ್ನೂ ಸಾಯಿಸಬೇಕಿತ್ತು ನಮ್ಮನ್ನು ಯಾಕೆ ಬಿಟ್ರಿ. ಅಪ್ಪನ್ನ ಸಾಯಿಸಿದ್ರಲ್ಲಾ ನಮ್ಮನ್ನು ಸಾಯಿಸಿ ಅಂತಾ ನಮ್ಮಮ್ಮ ಹೇಳಿದ್ದರು. ನಾನೂ ಉಗ್ರರ ಹತ್ರ ಹೋಗಿ ಕುತ್ತೇ ನಮ್ಮ ಅಪ್ಪನ್ನ ಸಾಯಿಸಿದ್ದಲ್ಲಾ ನಮ್ಮನ್ನು ಕೊಲ್ಲು ಅಂತಾ…

Read More